Homeಮುಖಪುಟವಿದೇಶಿ ವಿವಿಗಳ ಆಗಮನ: ತಜ್ಞರ ವಿರೋಧ ಏಕೆ?

ವಿದೇಶಿ ವಿವಿಗಳ ಆಗಮನ: ತಜ್ಞರ ವಿರೋಧ ಏಕೆ?

- Advertisement -
- Advertisement -

ದೇಶದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ (UGC) ಮಾನದಂಡಗಳನ್ನು ರೂಪಿಸಿದೆ. ಇತ್ತ ತಮಿಳುನಾಡಿನ ಶಿಕ್ಷಣ ತಜ್ಞರು, ಇತರ ಖಾಸಗಿ ವಿಶ್ವವಿದ್ಯಾಲಯಗಳು ಮತ್ತು ವಿದೇಶಿ ಘಟಕಗಳಿಗೆ ಹೋಲಿಸಿದರೆ ಶೈಕ್ಷಣಿಕ ಸಂಸ್ಥೆಗಳಲ್ಲಿನ ಮೂಲಭೂತ ಸೌಕರ್ಯಗಳ ಬಗ್ಗೆ ವ್ಯಕ್ತಪಡಿಸಿದ್ದಾರೆ.

ಯುಜಿಸಿ ನಿಗದಿಪಡಿಸಿರುವ ಮಾನದಂಡಗಳಿಗೆ ಈ ವಿದೇಶಿ ವಿಶ್ವವಿದ್ಯಾನಿಲಯಗಳು ಶುಲ್ಕ ರಚನೆ, ಪರೀಕ್ಷೆಯ ನಮೂನೆಗಳು ಮತ್ತು ಕೋರ್ಸ್ ರಚನೆ ಸೇರಿದಂತೆ ಇನ್ನಿತರ ವಿಚಾರಗಳಲ್ಲಿ ಬದ್ಧವಾಗಿವೆಯೇ ಎಂಬುದು ಶಿಕ್ಷಣತಜ್ಞರು ಎತ್ತಿದ ಪ್ರಮುಖ ಕಾಳಜಿಯಾಗಿದೆ. ಇನ್ನು ಶುಲ್ಕ ರಚನೆ, ಪ್ರವೇಶ ಪ್ರಕ್ರಿಯೆಗಳು ಮತ್ತು ಕೋರ್ಸ್ ರಚನೆಯನ್ನು ನಿರ್ಧರಿಸಲು ವಿದೇಶಿ ವಿಶ್ವವಿದ್ಯಾಲಯಗಳಿಗೆ ಸ್ವಾಯತ್ತತೆಯನ್ನು ನೀಡಲಾಗುವುದು ಎಂದು ಯುಜಿಸಿ ಕರಡು ಹೇಳುತ್ತದೆ.

ವಿದೇಶಿ ವಿಶ್ವವಿದ್ಯಾಲಯಗಳು ಮೂಲಸೌಕರ್ಯಗಳನ್ನು ಸುಧಾರಿಸುವ ಮತ್ತು ಗುಣಮಟ್ಟದ ಶಿಕ್ಷಣವನ್ನು ನೀಡುವ ಬದಲು ಹಣ ಗಳಿಸುವ ಅಜೆಂಡಾದೊಂದಿಗೆ ಭಾರತದಲ್ಲಿ ಕ್ಯಾಂಪಸ್‌ಗಳನ್ನು ಸ್ಥಾಪಿಸುತ್ತವೆ. ಆ ಲಾಭವನ್ನು ತಮ್ಮ ದೇಶಗಳಿಗೆ ಹಿಂದಿರುಗಿಸುತ್ತವೆ. ಇದು ಭಾರತದಲ್ಲಿ ಗುಣಮಟ್ಟದ ಉನ್ನತ ಶಿಕ್ಷಣಕ್ಕೆ ಒಳ್ಳೆಯದಲ್ಲ ಎಂದು ಶಿಕ್ಷಣ ತಜ್ಞರು ಹೇಳುತ್ತಾರೆ.

ಇನ್ನು ಈ ಬಗ್ಗೆ ಅಣ್ಣಾ ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಡಾ.ಇ.ಬಾಲಗುರುಸ್ವಾಮಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದು, “ಯುಜಿಸಿಯ ಈ ಕ್ರಮವು ಇನ್ನು ಕೆಲವು ವರ್ಷಗಳ ನಂತರ ದೇಶದ ಉನ್ನತ ಶಿಕ್ಷಣದ ಮೇಲೆ ಪರಿಣಾಮ ಬೀರಲಿದೆ. ಭಾರತದ ಗಣ್ಯ ವಿಶ್ವವಿದ್ಯಾನಿಲಯಗಳು ಸಹ ಜಾಗತಿಕವಾಗಿ ಟಾಪ್ 200 ರಲ್ಲಿವೆ. ಹಾಗಾಗಿ ವಿದೇಶಿ ವಿವಿಗಳಿಗೆ ರೆಡ್ ಕಾರ್ಪೆಟ್ ಸ್ವಾಗತ ನೀಡುವ ಬದಲಿಗೆ ಭಾರತೀಯ ವಿಶ್ವವಿದ್ಯಾಲಯಗಳ ಗುಣಮಟ್ಟವನ್ನು ಸುಧಾರಿಸುವತ್ತ ಗಮಣಹರಿಸುವುದು ಓಳ್ಳೆಯದು ಎಂದು ಅವರು ಹೇಳಿದರು.

ಈ ವಿದೇಶಿ ವಿಶ್ವವಿದ್ಯಾನಿಲಯಗಳ ಮೇಲೆ ನಿಯಂತ್ರಣದ ಕೊರತೆ ಉಂಟಾಗುತ್ತದೆ. ಅದೇ ರೀತಿ ಅವರು ಹೇಗೆ ಕೋರ್ಸ್ ರಚನೆ ಮಾಡುತ್ತಾರೆ ಎನ್ನುವ ಗೊಂದಲ ಹಾಗೂ ವಿದೇಶಿ ಪದವಿ ನೀಡುವ ನೆಪದಲ್ಲಿ ಅವರು ಅತಿಯಾದ ಶುಲ್ಕವನ್ನು ವಿಧಿಸುತ್ತಾರೆ ಎನ್ನುವುದು ಇಲ್ಲಿಯ ಶಿಕ್ಷಣತಜ್ಞರ ಪ್ರಮುಖ ಆತಂಕವಾಗಿದೆ.

ಮಧುರೈ ಮೂಲದ ಚಿಂತಕರ ಚಾವಡಿ ಸಾಮಾಜಿಕ-ಆರ್ಥಿಕ ಅಭಿವೃದ್ಧಿ ಪ್ರತಿಷ್ಠಾನದ ನಿರ್ದೇಶಕ ಡಾ.ಜಿ.ಪದ್ಮನಾಭನ್ ಈ ವಿಚಾರವಾಗಿ ಮಾತನಾಡಿ, “ಈ ವಿದೇಶಿ ಶಿಕ್ಷಣ  ಸಂಸ್ಥೆಗಳಿಗೆ ಅವರ ಇಚ್ಛೆಯಂತೆ ವಿಶ್ವವಿದ್ಯಾಲಯ ತೆರೆಯಲು ಅವಕಾಶ ನೀಡಬಾರದು. ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಹಣ ಮತ್ತು ಗುಣಮಟ್ಟದಿಂದ ತೊಂದರೆ ಅನುಭವಿಸಬಾರದು. ವಿದೇಶಿ ವಿಶ್ವವಿದ್ಯಾನಿಲಯಗಳು ಅತಿಯಾದ ಶುಲ್ಕ ವಿಧಿಸಲು ಅವಕಾಶ ನೀಡಬಾರದು ಎಂದು ಹೇಳಿದ್ದಾರೆ.

ಈ ವಿಚಾರವಾಗಿ ಸಂಶೋಧನಾ ವಿದ್ಯಾರ್ಥಿ ಶಶಾಂಕ ಅವರು ನಾನುಗೌರಿ.ಕಾಂ ಪ್ರತಿನಿಧಿಯೊಂದಿಗೆ ಆಭಿಪ್ರಾಯ ಹಂಚಿಕೊಂಡಿದ್ದು, “ವಿದೇಶಿ ವಿಶ್ವವಿದ್ಯಾಲಯಗಳು ದೇಶದಲ್ಲಿ ಸ್ಥಾಪನೆಯಾದರೆ, ಬಡ ಹಾಗೂ ಮದ್ಯಮ ವರ್ಗದ ವಿದ್ಯಾರ್ಥಿಗಳಿಗೆ ಅಲ್ಲಿ ಅವಕಾಶವೇ ಸಿಗಲ್ಲ. ಏಕೆಂದರೆ ವೆಚ್ಚ ಭರಿಸುವ ಶಕ್ತಿ ಇರದ ಕಾರಣ ಅಲ್ಲಿಯೂ ಕೂಡ ಹಣವಂತರ ಮಕ್ಕಳಿಗೆ ಹೆಚ್ಚಿನ ಅವಕಾಶ ಸಿಗುತ್ತದೆ. ಇದರಿಂದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯ ಆಗುತ್ತದೆ. ಇನ್ನು ನಮ್ಮ ದೇಶದಲ್ಲಿ ಶೈಕ್ಷಣಿಕೆ ಕ್ಷೇತ್ರದಿಂದ ಬರುವಂತಹ ಹಣವನ್ನು ಮರಳಿ ಶಿಕ್ಷಣಕ್ಕೆ ಬಳಕೆ ಮಾಡಬೇಕು ಎನ್ನುವ ನಿಯಮ ಇದೆ. ಆದರೆ ಇದೀಗ ವಿದೇಶಿ ವಿವಿ ಗಳು ಇಲ್ಲಿ ಕೇವಲ ಲಾಭಕ್ಕೊಸ್ಕರ ಬಂದು ವಿಪರೀತ ಶುಲ್ಕ ಪಡೆದು ವಿದೇಶದಲ್ಲಿರುವ ತಮ್ಮ ಮಾತೃ ಸಂಸ್ಥೆಗೆ ನೀಡುತ್ತವೆ. ಇದರಿಂದ ನಮ್ಮ ದೇಶಕ್ಕೆ ಯಾವುದೇ ಲಾಭವಿಲ್ಲ. ಇಲ್ಲಿಯ ಉನ್ನತ ಶಿಕ್ಷಣಕ್ಕೆ ಸರ್ಕಾರ ಅನುದಾನ ನೀಡುವಲ್ಲಿ ಹಿಂದೆ ಬಿದ್ದಿದೆ. ಸ್ವದೇಶಿಯ ಸಂಸ್ಥೆಗಳಿಗೆ ಹೆಚ್ಚಿನ ಅವಕಾಶ ನೀಡುವ ಬದಲಿಗೆ ವಿದೇಶಿಗರಿಗೆ ಅವಕಾಶ ನೀಡುವುದರಲ್ಲಿ ಯಾವುದೇ ಅರ್ಥ ಇಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಸಮಾನ ಶಿಕ್ಷಣದ ಹೋರಾಟಗಾರರು ಹಾಗೂ ಚಿಂತಕರಾದ ಶ್ರೀಪಾದ ಭಟ್ ಈ ವಿಚಾರವಾಗಿ ನಮ್ಮ ಪ್ರತಿನಿಧಿಯೊಂದಿಗೆ ಮಾತನಾಡಿ, “ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯ ಅವಶ್ಯಕತೆ ಇದೆ. ಆದರೆ ಈಗಿನ ನೂತನ ಶಿಕ್ಷಣ ನೀತಿ ಸಂವಿಧಾನದ ಆಶಯಗಳಿಗೆ ವಿರುದ್ಧವಿದೆ. ಇನ್ನು ಈ ವಿದೇಶಿ ವಿವಿಗಳನ್ನು ದೇಶಕ್ಕೆ ತರುತ್ತೇವೆ ಎಂದು ಹೇಳುವುದು ಸರಿಯಲ್ಲ. ವಿದೇಶಿ ವಿವಿಗಳು ಬೇರೆ ದೇಶಗಳನ್ನು ಬಿಟ್ಟು, ನಮ್ಮ ದೇಶಕ್ಕೆ ಬರಲು ಒಪ್ಪಿರೊದಕ್ಕೆ ಕಾರಣ ಏನು? ಇವರು ನೀಡುವ ರಿಯಾಯತಿಗಳು ಅಲ್ಲವೇ? ಅದೇ ರಿಯಾಯತಿ ಮತ್ತು ಸವಲತ್ತುಗಳನ್ನು ದೇಶದಲ್ಲಿರುವ ಸರ್ಕಾರಿ ವಿವಿಗಳಿಗೆ ನೀಡಬಹುದಲ್ಲವೇ? ಇನ್ನು ಈ ವಿದೇಶಿ ಶಿಕ್ಷಣ ಸಂಸ್ಥೆಗಳಿಂದ ಯಾರಿಗೆ ಲಾಭ ಇದೆ? ಅವರ ಶಿಕ್ಷಣದ ಶೈಲಿ ಭಾರತೀಯ ವಿದ್ಯಾರ್ಥಿಗಳಿಗೆ ಎಷ್ಟು ಅನಕೂಲ ಆಗಲಿದೆ? ದಲಿತ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೀಸಲಾತಿ ಸಿಗುತ್ತದೆಯೇ? ಆ ವಿವಿ ಗಳಲ್ಲಿ ಇಲ್ಲಿಯ ಪ್ರಾಧ್ಯಾಪಕರಿಗೆ ಅವಕಾಶ ನೀಡಲಾಗುತ್ತದೆ? ಒಂದು ವೇಳೆ ಅವಕಾಶವಿದ್ದು, ಇಲ್ಲಿಯ ಪ್ರಧ್ಯಾಪಕರು ಹೆಚ್ಚಿನ ಸಂಬಳದ ಕಾರಣಕ್ಕೆ ಆ ವಿವಿ ಗೆ ಹೋದರೆ ಇಲ್ಲಿಯ ಸರ್ಕಾರಿ ವಿವಿಗಳ ಗತಿ ಏನು?” ಎಂದು ಪ್ರಶ್ನೆಗಳ ಸುರಿಮಳೆಗೈದು ವಿದೇಶಿ ವಿವಿಗಳ ಆಗಮನವನ್ನು ವಿರೋಧಿಸಿದರು.

“ವಿದೇಶಿ ವಿವಿಗಳಿಗೆ ಅವಕಾಶ ನೀಡುವ ಜವಾಬ್ಧಾರಿನ್ನು ಯುಜಿಸಿ ವಹಿಸುವುದು ಸರಿಯಲ್ಲ. ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಯಾಗಬೇಕಿತ್ತು. ದೇಶಕ್ಕೆ ಅದರಿಂದ ಎಷ್ಟು ಅನುಕೂಲ ಹಾಗೂ ಅನಾನುಕೂಲತೆ ಬಗ್ಗೆ ಚರ್ಚೆಯಾಗಬೇಕಿತ್ತು. ದೇಶದ ಭದ್ರತೆಯೂ ಅಷ್ಟೇ ಮುಖ್ಯ. ಹಾಗೆಯೆ ಇಲ್ಲಿಯ ಶಿಕ್ಷಣ ವ್ಯವಸ್ಥೆಯ ಮೇಲೆ ಹೇರಿರುವ ನಿಯಮಗಳನ್ನೇ ಅವುಗಳ ಮೇಲೆ ಹೇರಲು ಸಾಧ್ಯವಿದೆಯೇ.. ಇಲ್ಲ. ಹಾಗಾಗಿ ಇದು ದೇಶಕ್ಕೂ, ಇಲ್ಲಿಯ ವಿದ್ಯಾಥಿಗಳಿಗೂ ಮಾರಕವಾಗುವಂತಹದ್ದು” ಎಂದು ಅವರು ಅಸಮಾಧಾನ ಹೊರಹಾಕಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...