Homeಮುಖಪುಟವಿದೇಶದಿಂದ ತುಮಕೂರಿಗೆ ಆಗಮನ: 37 ಮಂದಿಯ ಮೇಲೆ ತೀವ್ರ ನಿಗಾ

ವಿದೇಶದಿಂದ ತುಮಕೂರಿಗೆ ಆಗಮನ: 37 ಮಂದಿಯ ಮೇಲೆ ತೀವ್ರ ನಿಗಾ

ಭಾರತದಲ್ಲಿ ಮಾತ್ರ ಇದುವರೆಗೂ ಮೂವರು ಬಲಿಯಾಗಿದ್ದು 13ಕ್ಕೂ ಹೆಚ್ಚು ಜನ ಚೇತರಿಸಿಕೊಂಡಿದ್ದಾರೆ.

- Advertisement -
- Advertisement -

ವಿದೇಶದಿಂದ ತುಮಕೂರು ನಗರಕ್ಕೆ ಬಂದಿರುವವರ ಮೇಲೆ ಆರೋಗ್ಯ ಇಲಾಖೆ ತೀವ್ರ ನಿಗಾವಹಿಸಿದೆ. ಕೊರೊನ ಸೋಂಕು ವ್ಯಾಪಕವಾಗಿ ಹರಡಿರುವ ದೇಶಗಳಿಂದ ನಗರಕ್ಕೆ ಬಂದಿರುವುದೇ ಇದಕ್ಕೆ ಕಾರಣ. ಕೊರೋನ ವೈರಸ್ ಪಾಸಿಟಿವ್ ಇರುವ ರೋಗಿಗಳು ಈವರೆಗೂ ಪತ್ತೆಯಾಗಿಲ್ಲ. ಆದರೂ ಅವರನ್ನು ಪ್ರತ್ಯೇಕ ಕೋಣೆಗಳಲ್ಲಿರುವಂತೆ ಎಚ್ಚರಿಕೆ ವಹಿಸಲಾಗಿದೆ ಮತ್ತು ಪರೀಕ್ಷೆ ನಡೆಸಲಾಗುತ್ತಿದೆ.

ಸೌದಿ ಅರೇಬಿಯಾ, ಬ್ಯಾಂಕಾಕ್, ವರ್ಜೇನಿಯಾ, ಅಮೆರಿಕಾ, ಇಂಡೋನೇಶಿಯಾದ ಬಾಲಿ, ಮಲೇಶಿಯಾ, ಒಮನ್, ಜರ್ಮನಿ, ದುಬೈ, ಮೆಕ್ಕಾ ಮದೀನಾ, ಚೀನಾ, ಇಟಲಿ, ಅಮೆರಿಕಾ ಸಂಯುಕ್ತ ಸಂಸ್ಥಾನ, ಕುವೈಟ್, ನೇಪಾಳ್, ಥೈಲ್ಯಾಂಡ್ ಸೇರಿದಂತೆ ವಿವಿಧ ದೇಶಗಳಿಂದ ತುಮಕೂರು ನಗರಕ್ಕೆ ಬಂದಿದ್ದಾರೆ. ವಿದೇಶದಿಂದ ಬಂದಿರುವವರಲ್ಲಿ ದುಬೈ, ಸೌದಿ ಅರೇಬಿಯದಿಂದ ಬಂದಿರುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ತುಮಕೂರಿನ ಮುಸ್ಲಿಂ ಬಾಹುಳ್ಯ ಹೆಚ್ಚಾಗಿರುವ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ಇಡಲಾಗಿದೆ.

ಸೌದಿಅರೇಬಿಯಾ-9, ದುಬೈ-6 ಅಮೆರಿಕಾ-4, ಇಂಡೋನೇಶಿಯಾ-3, ಇಟಲಿ-3, ಚೀನಾ, ನೇಪಾಳ್, ಮೆಕ್ಕ ಜರ್ಮನಿ ತಲಾ ಒಬ್ಬೊಬ್ಬರು ತುಮಕೂರಿಗೆ ಬಂದಿದ್ದಾರೆ. ಇವರೆಲ್ಲರೂ ಕ್ಯಾತ್ಸಂದ್ರ, ಸೋಮೇಶ್ವರಪುರಂ, ಕೆ.ಆರ್.ಬಡಾವಣೆ, ನಜರಾಬಾದ್, ಸದಾಶಿವನಗರ, ಚಿಕ್ಕಪೇಟೆ, ಸಪ್ತಗಿರಿ ಬಡಾವಣೆ, ಸಂತೇಪೇಟೆ, ಕುರಿ ಪಾಳ್ಯ- ಹೀಗೆ ಎಲ್ಲೆಡೆ ವಾಸವಿದ್ದು ಅವರ ಮೇಲೆ ನಿಗಾ ಇಡಲು ವೈದ್ಯರನ್ನು ನೇಮಕ ಮಾಡಲಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ವಿದೇಶಗಳಿಂದ ಬಂದವರನ್ನು ಅವರ ಮನೆಯಲ್ಲೇ ಪ್ರತ್ಯೇಕ ಕೊಠಡಿಯಲ್ಲಿಟ್ಟು ನಿಗಾ ಇಡಲಾಗಿದೆ. ಕೊರೊನ ವೈರಸ್ ಹರಡಿರುವ ಯಾವುದೇ ಪ್ರಕರಣ ಇದುವರೆಗೆ ಪತ್ತೆಯಾಗಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಕೊರೋನ ರೋಗಿಗಳಿಗೆ ಪ್ರತ್ಯೇಕ ಕೊಠಡಿ ಸಜ್ಜುಗೊಳಿಸಿದ್ದು ಅವರನ್ನು ನೋಡಿಕೊಳ್ಳಲು 10 ಹಾಸಿಗೆಗಳನ್ನು ಇಡಲಾಗಿದೆ ಎಂದರು.

ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚು ಜನ ಸೇರುವ ಹೋಟೆಲ್ ಬಂದ್ ಮಾಡುವಂತೆ ಅದೇಶಿಸಿದ್ದರೂ ಎಲ್ಲಾ ಹೋಟೆಲ್‌ಗಳ ಬಾಗಿಲು ತೆಗೆದು ವ್ಯಾಪಾರ ನಡೆಸುತ್ತಿವೆ. ಸಭೆ ಸಮಾರಂಭಗಳು, ಸಿನಿಮಾ ಹಾಲ್‌ಗಳ ಮೇಲೆ ನಿರ್ಬಂಧ ಹೇರಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಅಂತರಸನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಮತ್ತು ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನೂರಾರು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಬೀದಿಬದಿ ವ್ಯಾಪಾರಿಗಳ ಮೇಲೆ ಕಟ್ಟು ನಿಟ್ಟಿನ ನಿರ್ಬಂಧ ವಿಧಿಸಲಾಗಿದೆ. ರಾತ್ರಿ ಬೀದಿಬದಿಯಲ್ಲಿ ತಿಂಡಿತಿನಿಸುಗಳನ್ನು ಮಾರುವವರಿಗೆ ಪಾಲಿಕೆಯ ಅದೇಶ ಕೂಲಿ ಹುಟ್ಟದಂತೆ ಮಾಡಿದೆ.

ಇಟಲಿ, ಚೀನ ಅಮೇರಿಕಾ ಮೊದಲಾದ ಕಡೆ ಕೊರೋನಾ ವೈರಸ್ ವ್ಯಾಪಕವಾಗಿ ಹರಡಿದ್ದು ತೀವ್ರ ಪ್ರಾಣ ಹಾನಿ ಮಾಡಿದೆ. ಆದರೆ ಭಾರತದಲ್ಲಿ ಮಾತ್ರ ಇದುವರೆಗೂ ಮೂವರು ಬಲಿಯಾಗಿದ್ದು 13ಕ್ಕೂ ಹೆಚ್ಚು ಜನ ಚೇತರಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...