Homeಮುಖಪುಟವಿದೇಶದಿಂದ ತುಮಕೂರಿಗೆ ಆಗಮನ: 37 ಮಂದಿಯ ಮೇಲೆ ತೀವ್ರ ನಿಗಾ

ವಿದೇಶದಿಂದ ತುಮಕೂರಿಗೆ ಆಗಮನ: 37 ಮಂದಿಯ ಮೇಲೆ ತೀವ್ರ ನಿಗಾ

ಭಾರತದಲ್ಲಿ ಮಾತ್ರ ಇದುವರೆಗೂ ಮೂವರು ಬಲಿಯಾಗಿದ್ದು 13ಕ್ಕೂ ಹೆಚ್ಚು ಜನ ಚೇತರಿಸಿಕೊಂಡಿದ್ದಾರೆ.

- Advertisement -
- Advertisement -

ವಿದೇಶದಿಂದ ತುಮಕೂರು ನಗರಕ್ಕೆ ಬಂದಿರುವವರ ಮೇಲೆ ಆರೋಗ್ಯ ಇಲಾಖೆ ತೀವ್ರ ನಿಗಾವಹಿಸಿದೆ. ಕೊರೊನ ಸೋಂಕು ವ್ಯಾಪಕವಾಗಿ ಹರಡಿರುವ ದೇಶಗಳಿಂದ ನಗರಕ್ಕೆ ಬಂದಿರುವುದೇ ಇದಕ್ಕೆ ಕಾರಣ. ಕೊರೋನ ವೈರಸ್ ಪಾಸಿಟಿವ್ ಇರುವ ರೋಗಿಗಳು ಈವರೆಗೂ ಪತ್ತೆಯಾಗಿಲ್ಲ. ಆದರೂ ಅವರನ್ನು ಪ್ರತ್ಯೇಕ ಕೋಣೆಗಳಲ್ಲಿರುವಂತೆ ಎಚ್ಚರಿಕೆ ವಹಿಸಲಾಗಿದೆ ಮತ್ತು ಪರೀಕ್ಷೆ ನಡೆಸಲಾಗುತ್ತಿದೆ.

ಸೌದಿ ಅರೇಬಿಯಾ, ಬ್ಯಾಂಕಾಕ್, ವರ್ಜೇನಿಯಾ, ಅಮೆರಿಕಾ, ಇಂಡೋನೇಶಿಯಾದ ಬಾಲಿ, ಮಲೇಶಿಯಾ, ಒಮನ್, ಜರ್ಮನಿ, ದುಬೈ, ಮೆಕ್ಕಾ ಮದೀನಾ, ಚೀನಾ, ಇಟಲಿ, ಅಮೆರಿಕಾ ಸಂಯುಕ್ತ ಸಂಸ್ಥಾನ, ಕುವೈಟ್, ನೇಪಾಳ್, ಥೈಲ್ಯಾಂಡ್ ಸೇರಿದಂತೆ ವಿವಿಧ ದೇಶಗಳಿಂದ ತುಮಕೂರು ನಗರಕ್ಕೆ ಬಂದಿದ್ದಾರೆ. ವಿದೇಶದಿಂದ ಬಂದಿರುವವರಲ್ಲಿ ದುಬೈ, ಸೌದಿ ಅರೇಬಿಯದಿಂದ ಬಂದಿರುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ತುಮಕೂರಿನ ಮುಸ್ಲಿಂ ಬಾಹುಳ್ಯ ಹೆಚ್ಚಾಗಿರುವ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ಇಡಲಾಗಿದೆ.

ಸೌದಿಅರೇಬಿಯಾ-9, ದುಬೈ-6 ಅಮೆರಿಕಾ-4, ಇಂಡೋನೇಶಿಯಾ-3, ಇಟಲಿ-3, ಚೀನಾ, ನೇಪಾಳ್, ಮೆಕ್ಕ ಜರ್ಮನಿ ತಲಾ ಒಬ್ಬೊಬ್ಬರು ತುಮಕೂರಿಗೆ ಬಂದಿದ್ದಾರೆ. ಇವರೆಲ್ಲರೂ ಕ್ಯಾತ್ಸಂದ್ರ, ಸೋಮೇಶ್ವರಪುರಂ, ಕೆ.ಆರ್.ಬಡಾವಣೆ, ನಜರಾಬಾದ್, ಸದಾಶಿವನಗರ, ಚಿಕ್ಕಪೇಟೆ, ಸಪ್ತಗಿರಿ ಬಡಾವಣೆ, ಸಂತೇಪೇಟೆ, ಕುರಿ ಪಾಳ್ಯ- ಹೀಗೆ ಎಲ್ಲೆಡೆ ವಾಸವಿದ್ದು ಅವರ ಮೇಲೆ ನಿಗಾ ಇಡಲು ವೈದ್ಯರನ್ನು ನೇಮಕ ಮಾಡಲಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ವಿದೇಶಗಳಿಂದ ಬಂದವರನ್ನು ಅವರ ಮನೆಯಲ್ಲೇ ಪ್ರತ್ಯೇಕ ಕೊಠಡಿಯಲ್ಲಿಟ್ಟು ನಿಗಾ ಇಡಲಾಗಿದೆ. ಕೊರೊನ ವೈರಸ್ ಹರಡಿರುವ ಯಾವುದೇ ಪ್ರಕರಣ ಇದುವರೆಗೆ ಪತ್ತೆಯಾಗಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಕೊರೋನ ರೋಗಿಗಳಿಗೆ ಪ್ರತ್ಯೇಕ ಕೊಠಡಿ ಸಜ್ಜುಗೊಳಿಸಿದ್ದು ಅವರನ್ನು ನೋಡಿಕೊಳ್ಳಲು 10 ಹಾಸಿಗೆಗಳನ್ನು ಇಡಲಾಗಿದೆ ಎಂದರು.

ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚು ಜನ ಸೇರುವ ಹೋಟೆಲ್ ಬಂದ್ ಮಾಡುವಂತೆ ಅದೇಶಿಸಿದ್ದರೂ ಎಲ್ಲಾ ಹೋಟೆಲ್‌ಗಳ ಬಾಗಿಲು ತೆಗೆದು ವ್ಯಾಪಾರ ನಡೆಸುತ್ತಿವೆ. ಸಭೆ ಸಮಾರಂಭಗಳು, ಸಿನಿಮಾ ಹಾಲ್‌ಗಳ ಮೇಲೆ ನಿರ್ಬಂಧ ಹೇರಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಅಂತರಸನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಮತ್ತು ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನೂರಾರು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಬೀದಿಬದಿ ವ್ಯಾಪಾರಿಗಳ ಮೇಲೆ ಕಟ್ಟು ನಿಟ್ಟಿನ ನಿರ್ಬಂಧ ವಿಧಿಸಲಾಗಿದೆ. ರಾತ್ರಿ ಬೀದಿಬದಿಯಲ್ಲಿ ತಿಂಡಿತಿನಿಸುಗಳನ್ನು ಮಾರುವವರಿಗೆ ಪಾಲಿಕೆಯ ಅದೇಶ ಕೂಲಿ ಹುಟ್ಟದಂತೆ ಮಾಡಿದೆ.

ಇಟಲಿ, ಚೀನ ಅಮೇರಿಕಾ ಮೊದಲಾದ ಕಡೆ ಕೊರೋನಾ ವೈರಸ್ ವ್ಯಾಪಕವಾಗಿ ಹರಡಿದ್ದು ತೀವ್ರ ಪ್ರಾಣ ಹಾನಿ ಮಾಡಿದೆ. ಆದರೆ ಭಾರತದಲ್ಲಿ ಮಾತ್ರ ಇದುವರೆಗೂ ಮೂವರು ಬಲಿಯಾಗಿದ್ದು 13ಕ್ಕೂ ಹೆಚ್ಚು ಜನ ಚೇತರಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....