Homeಮುಖಪುಟವಿದೇಶದಿಂದ ತುಮಕೂರಿಗೆ ಆಗಮನ: 37 ಮಂದಿಯ ಮೇಲೆ ತೀವ್ರ ನಿಗಾ

ವಿದೇಶದಿಂದ ತುಮಕೂರಿಗೆ ಆಗಮನ: 37 ಮಂದಿಯ ಮೇಲೆ ತೀವ್ರ ನಿಗಾ

ಭಾರತದಲ್ಲಿ ಮಾತ್ರ ಇದುವರೆಗೂ ಮೂವರು ಬಲಿಯಾಗಿದ್ದು 13ಕ್ಕೂ ಹೆಚ್ಚು ಜನ ಚೇತರಿಸಿಕೊಂಡಿದ್ದಾರೆ.

- Advertisement -
- Advertisement -

ವಿದೇಶದಿಂದ ತುಮಕೂರು ನಗರಕ್ಕೆ ಬಂದಿರುವವರ ಮೇಲೆ ಆರೋಗ್ಯ ಇಲಾಖೆ ತೀವ್ರ ನಿಗಾವಹಿಸಿದೆ. ಕೊರೊನ ಸೋಂಕು ವ್ಯಾಪಕವಾಗಿ ಹರಡಿರುವ ದೇಶಗಳಿಂದ ನಗರಕ್ಕೆ ಬಂದಿರುವುದೇ ಇದಕ್ಕೆ ಕಾರಣ. ಕೊರೋನ ವೈರಸ್ ಪಾಸಿಟಿವ್ ಇರುವ ರೋಗಿಗಳು ಈವರೆಗೂ ಪತ್ತೆಯಾಗಿಲ್ಲ. ಆದರೂ ಅವರನ್ನು ಪ್ರತ್ಯೇಕ ಕೋಣೆಗಳಲ್ಲಿರುವಂತೆ ಎಚ್ಚರಿಕೆ ವಹಿಸಲಾಗಿದೆ ಮತ್ತು ಪರೀಕ್ಷೆ ನಡೆಸಲಾಗುತ್ತಿದೆ.

ಸೌದಿ ಅರೇಬಿಯಾ, ಬ್ಯಾಂಕಾಕ್, ವರ್ಜೇನಿಯಾ, ಅಮೆರಿಕಾ, ಇಂಡೋನೇಶಿಯಾದ ಬಾಲಿ, ಮಲೇಶಿಯಾ, ಒಮನ್, ಜರ್ಮನಿ, ದುಬೈ, ಮೆಕ್ಕಾ ಮದೀನಾ, ಚೀನಾ, ಇಟಲಿ, ಅಮೆರಿಕಾ ಸಂಯುಕ್ತ ಸಂಸ್ಥಾನ, ಕುವೈಟ್, ನೇಪಾಳ್, ಥೈಲ್ಯಾಂಡ್ ಸೇರಿದಂತೆ ವಿವಿಧ ದೇಶಗಳಿಂದ ತುಮಕೂರು ನಗರಕ್ಕೆ ಬಂದಿದ್ದಾರೆ. ವಿದೇಶದಿಂದ ಬಂದಿರುವವರಲ್ಲಿ ದುಬೈ, ಸೌದಿ ಅರೇಬಿಯದಿಂದ ಬಂದಿರುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ತುಮಕೂರಿನ ಮುಸ್ಲಿಂ ಬಾಹುಳ್ಯ ಹೆಚ್ಚಾಗಿರುವ ಪ್ರದೇಶಗಳಲ್ಲಿ ಹೆಚ್ಚಿನ ನಿಗಾ ಇಡಲಾಗಿದೆ.

ಸೌದಿಅರೇಬಿಯಾ-9, ದುಬೈ-6 ಅಮೆರಿಕಾ-4, ಇಂಡೋನೇಶಿಯಾ-3, ಇಟಲಿ-3, ಚೀನಾ, ನೇಪಾಳ್, ಮೆಕ್ಕ ಜರ್ಮನಿ ತಲಾ ಒಬ್ಬೊಬ್ಬರು ತುಮಕೂರಿಗೆ ಬಂದಿದ್ದಾರೆ. ಇವರೆಲ್ಲರೂ ಕ್ಯಾತ್ಸಂದ್ರ, ಸೋಮೇಶ್ವರಪುರಂ, ಕೆ.ಆರ್.ಬಡಾವಣೆ, ನಜರಾಬಾದ್, ಸದಾಶಿವನಗರ, ಚಿಕ್ಕಪೇಟೆ, ಸಪ್ತಗಿರಿ ಬಡಾವಣೆ, ಸಂತೇಪೇಟೆ, ಕುರಿ ಪಾಳ್ಯ- ಹೀಗೆ ಎಲ್ಲೆಡೆ ವಾಸವಿದ್ದು ಅವರ ಮೇಲೆ ನಿಗಾ ಇಡಲು ವೈದ್ಯರನ್ನು ನೇಮಕ ಮಾಡಲಾಗಿದೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವೀರಭದ್ರಯ್ಯ, ವಿದೇಶಗಳಿಂದ ಬಂದವರನ್ನು ಅವರ ಮನೆಯಲ್ಲೇ ಪ್ರತ್ಯೇಕ ಕೊಠಡಿಯಲ್ಲಿಟ್ಟು ನಿಗಾ ಇಡಲಾಗಿದೆ. ಕೊರೊನ ವೈರಸ್ ಹರಡಿರುವ ಯಾವುದೇ ಪ್ರಕರಣ ಇದುವರೆಗೆ ಪತ್ತೆಯಾಗಿಲ್ಲ. ಜಿಲ್ಲಾಸ್ಪತ್ರೆಯಲ್ಲಿ ಕೊರೋನ ರೋಗಿಗಳಿಗೆ ಪ್ರತ್ಯೇಕ ಕೊಠಡಿ ಸಜ್ಜುಗೊಳಿಸಿದ್ದು ಅವರನ್ನು ನೋಡಿಕೊಳ್ಳಲು 10 ಹಾಸಿಗೆಗಳನ್ನು ಇಡಲಾಗಿದೆ ಎಂದರು.

ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚು ಜನ ಸೇರುವ ಹೋಟೆಲ್ ಬಂದ್ ಮಾಡುವಂತೆ ಅದೇಶಿಸಿದ್ದರೂ ಎಲ್ಲಾ ಹೋಟೆಲ್‌ಗಳ ಬಾಗಿಲು ತೆಗೆದು ವ್ಯಾಪಾರ ನಡೆಸುತ್ತಿವೆ. ಸಭೆ ಸಮಾರಂಭಗಳು, ಸಿನಿಮಾ ಹಾಲ್‌ಗಳ ಮೇಲೆ ನಿರ್ಬಂಧ ಹೇರಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಆದರೆ ಅಂತರಸನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಮತ್ತು ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನೂರಾರು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ. ಬೀದಿಬದಿ ವ್ಯಾಪಾರಿಗಳ ಮೇಲೆ ಕಟ್ಟು ನಿಟ್ಟಿನ ನಿರ್ಬಂಧ ವಿಧಿಸಲಾಗಿದೆ. ರಾತ್ರಿ ಬೀದಿಬದಿಯಲ್ಲಿ ತಿಂಡಿತಿನಿಸುಗಳನ್ನು ಮಾರುವವರಿಗೆ ಪಾಲಿಕೆಯ ಅದೇಶ ಕೂಲಿ ಹುಟ್ಟದಂತೆ ಮಾಡಿದೆ.

ಇಟಲಿ, ಚೀನ ಅಮೇರಿಕಾ ಮೊದಲಾದ ಕಡೆ ಕೊರೋನಾ ವೈರಸ್ ವ್ಯಾಪಕವಾಗಿ ಹರಡಿದ್ದು ತೀವ್ರ ಪ್ರಾಣ ಹಾನಿ ಮಾಡಿದೆ. ಆದರೆ ಭಾರತದಲ್ಲಿ ಮಾತ್ರ ಇದುವರೆಗೂ ಮೂವರು ಬಲಿಯಾಗಿದ್ದು 13ಕ್ಕೂ ಹೆಚ್ಚು ಜನ ಚೇತರಿಸಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...