Homeಕರ್ನಾಟಕಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’...

ಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ ಆಕ್ರೋಶ

- Advertisement -
- Advertisement -

ಬ್ರಾಹ್ಮಣ್ಯದ ಶಕ್ತಿಗಳು ಇಡೀ ಶೂದ್ರ ಶಕ್ತಿಯನ್ನು ಬಳಸಿಕೊಂಡು ಶೂದ್ರರ ವಿರುದ್ಧವೆ ಬಾಣ ಪ್ರಯೋಗಿಸುತ್ತಿದೆ ಎಂದು ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ಯ ಪರವಾಗಿ ಕಥೆಗಾರ-ಅನುವಾದಕ ಎಸ್. ಗಂಗಾದರಯ್ಯ ಅವರು ಬುಧವಾರ ಹೇಳಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ಬೆಂಬಲಿತ ಸಂಘಟನೆಗಳ ಮೂಲಕ ನಡೆಯುತ್ತಿರುವ ಕೋಮುವಿಭಜನೆಯನ್ನು ಅವರು ವಿರೋಧಿಸಿದ್ದಾರೆ.

ಹಿರಿಯ ಸಾಹಿತಿ ನಟರಾಜ್‌ ಬೂದಾಳು, ಜಿ.ವಿ. ಆನಂದಮೂರ್ತಿ, ಕೆ. ದೊರೈರಾಜ್, ಎಸ್. ಗಂಗಾದರಯ್ಯ, ಡಾ. ಬಸವರಾಜ್, ನಟರಾಜ್ ಹೊನ್ನಾವಳ್ಳಿ, ಉಜ್ಜಜ್ಜಿ ರಾಜಣ್ಣ, ಕೊಟ್ಟ ಶಂಕರ್‌, ಮನುಚಕ್ರವರ್ತಿ ಸೇರಿದಂತೆ ತುಮಕೂರಿನ ಹಲವು ಕಲಾವಿದರು ಮತ್ತು ಲೇಖಕರು ಸೇರಿ ‘ಕರ್ನಾಟಕ ಶೂದ್ರ ಶಕ್ತಿ’ ವೇದಿಕೆಯನ್ನು ಕಟ್ಟಿಕೊಂಡಿದ್ದು, ಕೋಮುವಾದಿ ಸಂಘಟನೆಗಳನ್ನು ಬಿಟ್ಟು, ಎಲ್ಲಾ ಸಂಘಟನೆಗಳನ್ನು ಜೊತೆಗೆ ಸೇರಿಸಿ ಕೋಮು ಸಾಮರಸ್ಯಕ್ಕಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ವೇದಿಕೆಯ ಪರವಾಗಿ ಮಾತನಾಡಿದ ಕಥೆಗಾರ-ಅನುವಾದಕ ಎಸ್. ಗಂಗಾದರಯ್ಯ ಅವರು, “ಕೆಲವೇ ಶೇಕಡ ಇರುವ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ಮಂದಿ ಇಡೀ ಶೂದ್ರ ಶಕ್ತಿಯನ್ನು ಬಳಸಿಕೊಂಡು ಯಾರು ಏನು ತಿನ್ನಬೇಕು, ಏನು ತಿನ್ನಬಾರದು ಎಂದು ಶೂದ್ರರ ವಿರುದ್ಧವೆ ಬಾಣ ತಿರುಗಿಸುತ್ತಿದ್ದಾರೆ. ಹೀಗಾಗಿ ನಾವು ಇಡೀ ಶೂದ್ರ ಜನಾಂಗದ ಎಲ್ಲಾ ಜನರಲ್ಲೂ, ‘ನೋಡ್ರಪ್ಪ…ನಿಮ್ಮ ವಿರುದ್ಧವೆ, ನಿಮ್ಮನ್ನು ಎತ್ತಿಕಟ್ಟಿ, ನಿಮ್ಮ ಕೈಯ್ಯಲ್ಲೇ ಈ ಕೆಲಸ ಮಾಡಿಸುತ್ತಿದ್ದಾರೆ’ ಎಂದು ಎಚ್ಚರ ಮೂಡಿಸಿ, ಪರ್ಯಾಯವಾಗಿ ಆಲೋಚನೆ ಮಾಡಲು ಬೇಕಾಗಿ ಈ ವೇದಿಕೆಯನ್ನು ಹುಟ್ಟು ಹಾಕಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ಸಧ್ಯಕ್ಕೆ ತುಮಕೂರಿನ ಎಲ್ಲಾ ತಾಲೂಕುಗಳನ್ನು ಕೇಂದ್ರವಾಗಿಟ್ಟುಕೊಂಡು ವೇದಿಕೆಯನ್ನು ಹುಟ್ಟು ಹಾಕಿದ್ದು, ಮುಂದಿನ ದಿನಗಳಲ್ಲಿ ಇದನ್ನು ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸುವ ಕೆಲಸವನ್ನು ಮಾಡಲಿದ್ದೇವೆ ಎಂದು ಗಂಗಾದರಯ್ಯ ಅವರು ಹೇಳಿದ್ದಾರೆ.

ಬಿಜೆಪಿ ಬೆಂಬಲಿತ ವ್ಯಕ್ತಿಗಳು ಮುಸ್ಲಿಮರ ಮಾಂಸದ ಅಂಗಡಿಯನ್ನು ಬಹಿಷ್ಕರಿಸುವಂತೆ ನೀಡಿದ ಕರೆಯನ್ನು ವಿರೋಧಿಸಿರುವ ಅವರು, “ಇವರೊಂದಿಗೆ ಕೊಂಡುಕೊಳ್ಳಿ; ಇವರಿಂದ ಕೊಂಡುಕೊಳ್ಳಬೇಡಿ. ಇದನ್ನು ತಿನ್ನಿ; ಇದನ್ನು ತಿನ್ನಬೇಡಿ ಎಂದು ಹೇಳುತ್ತಿದ್ದಾರೆ. ಇವುಗಳೆಲ್ಲಾ ತಿನ್ನದೆ ಇರುವವರು, ತಿನ್ನುವವರ ಮೇಲೆ ನಡೆಸುತ್ತಿರುವ ಪ್ರಹಾರ. ಇದನ್ನು ಹೇಳಲು ಅವರಿಗೇನು ಹಕ್ಕಿದೆ? ನಮಗೆ ಬೇಕಾದುದನ್ನು ನಾವು ಮಾಡಿಕೊಳ್ಳುತ್ತೇವೆ. ಮಾಂಸ ಬೇಕಾದವರು ಅವರಿಗೆ ಬೇಕಾದ ಕಡೆ ಖರೀದಿಸಿ ತಿನ್ನುತ್ತಾರೆ” ಎಂದು ಅವರು ಹೇಳಿದ್ದಾರೆ.

“ಶೂದ್ರರನ್ನು ತಮ್ಮ ಗಾಳಗಳಾಗಿ ಉಪಯೋಗಿಸಿಕೊಂಡು ಅವರ ಮೂಲಕ ತಮ್ಮ ರಾಜಕೀಯ ಬೇಳೆಗಳನ್ನು ಬೇಯಿಸುತ್ತಿದ್ದಾರೆ. ಹೀಗಾಗಿ ಶೂದ್ರ ಸಮುದಾಯ ಇದರ ವಿರುದ್ಧ ಎಚ್ಚೆತ್ತುಕೊಳ್ಳಬೇಕು. ಇಲ್ಲವೆಂದರೆ ಪರಿಸ್ಥಿತಿ ಬೇರೆ ರೀತಿಯಲ್ಲಿ ವಿಕೋಪಕ್ಕೆ ಹೋಗುತ್ತದೆ” ಎಂದು ಗಂಗಾದರಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ

“ರೈತರೊಂದಿಗೆ ಹೋಗಿ ಮುಸ್ಲಿಮರಿಗೆ ಮಾವಿನಕಾಯಿ, ಹುಣಸೆ ಮಾರಬೇಡಿ ಎಂದು ಕೋಮು ಬೀಜ ಬಿತ್ತಲಾಗುತ್ತಿದೆ. ಇವರ ಕೋಮು ದ್ವೇಷದಿಂದಾಗಿ ಇಡೀ ಹಳ್ಳಿಯ ಆರ್ಥಿಕ ಪರಿಸ್ಥಿತಿಯ ಮೇಲೆ ಹೊಡೆತಗಳು ಬೀಳುತ್ತಿವೆ, ರೈತ ಸಂಸ್ಕೃತಿಯ ಮೇಲೆ ಪ್ರಹಾರ ಮಾಡಲಾಗುತ್ತಿದೆ ಹಾಗೂ ರೈತರಿಗೆ ಅವಮಾನ ಮಾಡಲಾಗುತ್ತಿದೆ ಎಂದು ರೈತ ಸಮುದಾಯವನ್ನು ಎಚ್ಚರಿಸುತ್ತೇವೆ” ಎಂದು ಗಂಗಾದರಯ್ಯ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ವೇದಿಕೆಯ ಪರವಾಗಿ ಮಾತನಾಡಿದ ರಂಗಕರ್ಮಿ ನಟರಾಜ್ ಹೊನ್ನವಳ್ಳಿ ಅವರು ಮಾತನಾಡಿ, “ಕೋಮುದ್ವೇಷಗಳನ್ನು ಹರಡಿ ನಮ್ಮ ಮಾರುಕಟ್ಟೆಗಳನ್ನು ವಶಪಡಿಸಲು ಹುನ್ನಾರ ನಡೆಸುತ್ತಿದ್ದಾರೆ. ನಾವು ಹಸಿದವರು, ಕಾರ್ಮಿಕರು ಮತ್ತು ಇತರ ಕೆಲಸ ಮಾಡುವವರು ಹಿಂದೂ ಧರ್ಮದಲ್ಲಿ ಗುರುತಿಸಿಕೊಂಡಿದ್ದೇವೆ. ಆದರೆ ನಮ್ಮ ಹೆಸರಿನಲ್ಲಿ ರಾಜಕಾರಣ, ದೊಂಬಿ, ಗಲಾಟೆ ಮಾಡುವುದಕ್ಕೆ ಅವಕಾಶ ಕೊಡಬಾರದು. ಬಡವರು ನಾವೆಲ್ಲಾ ಒಗ್ಗಟ್ಟಿನಲ್ಲಿ ಇರಬೇಕಾಗಿದೆ. ಇದು ನಮ್ಮ ವೇದಿಕೆಯ ಮುಖ್ಯ ಉದ್ದೇಶ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮತ್ತೆ ಮತೀಯ ಗೂಂಡಾಗಿರಿ: ಭಿನ್ನ ಧರ್ಮದ ಜೋಡಿಗೆ ಕಿರುಕುಳ, ಹಲ್ಲೆ ಆರೋಪ

“ಕಲಾವಿದರಾದ ನಾವು ಬೀದಿಯಿಂದಲೇ ಬಂದಿರುವುದರಿಂದ, ಇಂತಹ ವಿಷಮ ಪರಿಸ್ಥಿತಿಯಲ್ಲಿ ನಾವು ಮತ್ತೇ ಬೀದಿಗೆ ಹೋಗಿ ಕೆಲಸ ಮಾಡಬೇಕಾಗಿದೆ. ಈ ಹೊತ್ತಿನಲ್ಲಿ ನಾವು ಮೌನವಾಗಿ ಇರಬಾರದು. ಮೌನವಾಗಿ ಇದ್ದಷ್ಟು ಪರಿಸ್ಥಿತಿ ಇನ್ನೂ ಹದಗೆಡುತ್ತದೆ. ಅದಾಗಿಯೆ ಸರಿಯಾಗುತ್ತದೆ ಎಂದು ನಾವು ಅಂದುಕೊಳ್ಳುವುದು ತಪ್ಪು. ಧರ್ಮ ಮತ್ತು ರಾಜಕಾರಣದ ಅಪವಿತ್ರ ಮೈತ್ರಿಯಿಂದ ಪರಿಸ್ಥಿತಿ ಹೀಗಾಗುತ್ತಿದೆ ಎಂದು ನಾವು ತಿಳಿದುಕೊಳ್ಳಬೇಕು. ಹಾಗೂ ನಾವು ಜನರ ಭಾಷೆಗಳನ್ನು ಮಾತನಾಡಬೇಕು ಎಂದು ವೇದಿಕೆಯಲ್ಲಿ ನಾವು ತೀರ್ಮಾನಿಸಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಿದ್ದೇವೆ” ಎಂದು ಹೇಳಿದ್ದಾರೆ.

“ಈ ಹಿಂದೆ ರಾಜ್ಯದಲ್ಲಿ ರೈತ ಸಂಘ ಮತ್ತು ದಲಿತ ಸಂಘಟನೆ ಗಟ್ಟಿಯಾಗಿದ್ದಾಗ ಕೋಮುದ್ವೇಷ ಹರಡುವ ಈ ರೀತಿಯ ಚಟುವಟಿಕೆಗಳು ನಡೆಯುತ್ತಿರಲಿಲ್ಲ. ಈಗ ಅವುಗಳು ನಿಷ್ಕ್ರಿಯವಾಗಿ ಇರುವುದರಿಂದ, ನಾವು ಶೂದ್ರರು ಶೂದ್ರ ವೇದಿಕೆಯನ್ನು ಕಟ್ಟಿ, ಅದರಲ್ಲಿ ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸಿ, ನಾವು ಕೆಲಸ ಮಾಡಲಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಹಳ್ಳಿಗಳಲ್ಲಿ ಒಂದು ಆರ್ಥಿಕತೆಯಿದೆ. ಈ ಆರ್ಥಿಕತೆಯನ್ನು ಬಿಜೆಪಿ ಬೆಂಬಲಿತ ಸಂಘಟನೆಗಳು ಹಾಳುಮಾಡುತ್ತಿರುವುದರಿಂದ ರೈತರು, ಬಡವರು, ಬಡ ಮುಸ್ಲಿಮರ ವೃತ್ತಿಗಳಿಗೆ ತೊಂದರೆಯಾಗುತ್ತದೆ. ಈಗಾಗಲೇ ನಿರುದ್ಯೋಗ ಸೃಷ್ಟಿಯಾಗಿದೆ, ಈಗ ಇನ್ನಷ್ಟು ದೊಡ್ಡ ಹಂತದಲ್ಲಿ ನಿರುದ್ಯೋಗ ಸೃಷ್ಟಿಯಾಗುವ ವಾತಾವರಣವನ್ನು ಸಂಘಪರಿವಾರ ಸೃಷ್ಟಿಮಾಡುತ್ತಿದೆ. ಹೀಗಾಗಿ ‘ಅನ್ನ’ ಬೆಳೆಯುವವರು ಹಾಗೂ ‘ಅನ್ನ’ ಹಂಚುವವರು ಸಾಧ್ಯವಾದಷ್ಟು ಒಂದಾಗಬೇಕು ಎಂಬ ಆಶಯದೊಂದಿಗೆ ವೇದಿಕೆಯ ಮೂಲಕ ಕೆಲಸ ಮಾಡಲಿದ್ದೇವೆ” ಎಂದು ನಟರಾಜ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...