Homeಕರ್ನಾಟಕಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’...

ಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ ಆಕ್ರೋಶ

- Advertisement -
- Advertisement -

ಬ್ರಾಹ್ಮಣ್ಯದ ಶಕ್ತಿಗಳು ಇಡೀ ಶೂದ್ರ ಶಕ್ತಿಯನ್ನು ಬಳಸಿಕೊಂಡು ಶೂದ್ರರ ವಿರುದ್ಧವೆ ಬಾಣ ಪ್ರಯೋಗಿಸುತ್ತಿದೆ ಎಂದು ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ಯ ಪರವಾಗಿ ಕಥೆಗಾರ-ಅನುವಾದಕ ಎಸ್. ಗಂಗಾದರಯ್ಯ ಅವರು ಬುಧವಾರ ಹೇಳಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ಬೆಂಬಲಿತ ಸಂಘಟನೆಗಳ ಮೂಲಕ ನಡೆಯುತ್ತಿರುವ ಕೋಮುವಿಭಜನೆಯನ್ನು ಅವರು ವಿರೋಧಿಸಿದ್ದಾರೆ.

ಹಿರಿಯ ಸಾಹಿತಿ ನಟರಾಜ್‌ ಬೂದಾಳು, ಜಿ.ವಿ. ಆನಂದಮೂರ್ತಿ, ಕೆ. ದೊರೈರಾಜ್, ಎಸ್. ಗಂಗಾದರಯ್ಯ, ಡಾ. ಬಸವರಾಜ್, ನಟರಾಜ್ ಹೊನ್ನಾವಳ್ಳಿ, ಉಜ್ಜಜ್ಜಿ ರಾಜಣ್ಣ, ಕೊಟ್ಟ ಶಂಕರ್‌, ಮನುಚಕ್ರವರ್ತಿ ಸೇರಿದಂತೆ ತುಮಕೂರಿನ ಹಲವು ಕಲಾವಿದರು ಮತ್ತು ಲೇಖಕರು ಸೇರಿ ‘ಕರ್ನಾಟಕ ಶೂದ್ರ ಶಕ್ತಿ’ ವೇದಿಕೆಯನ್ನು ಕಟ್ಟಿಕೊಂಡಿದ್ದು, ಕೋಮುವಾದಿ ಸಂಘಟನೆಗಳನ್ನು ಬಿಟ್ಟು, ಎಲ್ಲಾ ಸಂಘಟನೆಗಳನ್ನು ಜೊತೆಗೆ ಸೇರಿಸಿ ಕೋಮು ಸಾಮರಸ್ಯಕ್ಕಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ವೇದಿಕೆಯ ಪರವಾಗಿ ಮಾತನಾಡಿದ ಕಥೆಗಾರ-ಅನುವಾದಕ ಎಸ್. ಗಂಗಾದರಯ್ಯ ಅವರು, “ಕೆಲವೇ ಶೇಕಡ ಇರುವ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ಮಂದಿ ಇಡೀ ಶೂದ್ರ ಶಕ್ತಿಯನ್ನು ಬಳಸಿಕೊಂಡು ಯಾರು ಏನು ತಿನ್ನಬೇಕು, ಏನು ತಿನ್ನಬಾರದು ಎಂದು ಶೂದ್ರರ ವಿರುದ್ಧವೆ ಬಾಣ ತಿರುಗಿಸುತ್ತಿದ್ದಾರೆ. ಹೀಗಾಗಿ ನಾವು ಇಡೀ ಶೂದ್ರ ಜನಾಂಗದ ಎಲ್ಲಾ ಜನರಲ್ಲೂ, ‘ನೋಡ್ರಪ್ಪ…ನಿಮ್ಮ ವಿರುದ್ಧವೆ, ನಿಮ್ಮನ್ನು ಎತ್ತಿಕಟ್ಟಿ, ನಿಮ್ಮ ಕೈಯ್ಯಲ್ಲೇ ಈ ಕೆಲಸ ಮಾಡಿಸುತ್ತಿದ್ದಾರೆ’ ಎಂದು ಎಚ್ಚರ ಮೂಡಿಸಿ, ಪರ್ಯಾಯವಾಗಿ ಆಲೋಚನೆ ಮಾಡಲು ಬೇಕಾಗಿ ಈ ವೇದಿಕೆಯನ್ನು ಹುಟ್ಟು ಹಾಕಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ಸಧ್ಯಕ್ಕೆ ತುಮಕೂರಿನ ಎಲ್ಲಾ ತಾಲೂಕುಗಳನ್ನು ಕೇಂದ್ರವಾಗಿಟ್ಟುಕೊಂಡು ವೇದಿಕೆಯನ್ನು ಹುಟ್ಟು ಹಾಕಿದ್ದು, ಮುಂದಿನ ದಿನಗಳಲ್ಲಿ ಇದನ್ನು ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸುವ ಕೆಲಸವನ್ನು ಮಾಡಲಿದ್ದೇವೆ ಎಂದು ಗಂಗಾದರಯ್ಯ ಅವರು ಹೇಳಿದ್ದಾರೆ.

ಬಿಜೆಪಿ ಬೆಂಬಲಿತ ವ್ಯಕ್ತಿಗಳು ಮುಸ್ಲಿಮರ ಮಾಂಸದ ಅಂಗಡಿಯನ್ನು ಬಹಿಷ್ಕರಿಸುವಂತೆ ನೀಡಿದ ಕರೆಯನ್ನು ವಿರೋಧಿಸಿರುವ ಅವರು, “ಇವರೊಂದಿಗೆ ಕೊಂಡುಕೊಳ್ಳಿ; ಇವರಿಂದ ಕೊಂಡುಕೊಳ್ಳಬೇಡಿ. ಇದನ್ನು ತಿನ್ನಿ; ಇದನ್ನು ತಿನ್ನಬೇಡಿ ಎಂದು ಹೇಳುತ್ತಿದ್ದಾರೆ. ಇವುಗಳೆಲ್ಲಾ ತಿನ್ನದೆ ಇರುವವರು, ತಿನ್ನುವವರ ಮೇಲೆ ನಡೆಸುತ್ತಿರುವ ಪ್ರಹಾರ. ಇದನ್ನು ಹೇಳಲು ಅವರಿಗೇನು ಹಕ್ಕಿದೆ? ನಮಗೆ ಬೇಕಾದುದನ್ನು ನಾವು ಮಾಡಿಕೊಳ್ಳುತ್ತೇವೆ. ಮಾಂಸ ಬೇಕಾದವರು ಅವರಿಗೆ ಬೇಕಾದ ಕಡೆ ಖರೀದಿಸಿ ತಿನ್ನುತ್ತಾರೆ” ಎಂದು ಅವರು ಹೇಳಿದ್ದಾರೆ.

“ಶೂದ್ರರನ್ನು ತಮ್ಮ ಗಾಳಗಳಾಗಿ ಉಪಯೋಗಿಸಿಕೊಂಡು ಅವರ ಮೂಲಕ ತಮ್ಮ ರಾಜಕೀಯ ಬೇಳೆಗಳನ್ನು ಬೇಯಿಸುತ್ತಿದ್ದಾರೆ. ಹೀಗಾಗಿ ಶೂದ್ರ ಸಮುದಾಯ ಇದರ ವಿರುದ್ಧ ಎಚ್ಚೆತ್ತುಕೊಳ್ಳಬೇಕು. ಇಲ್ಲವೆಂದರೆ ಪರಿಸ್ಥಿತಿ ಬೇರೆ ರೀತಿಯಲ್ಲಿ ವಿಕೋಪಕ್ಕೆ ಹೋಗುತ್ತದೆ” ಎಂದು ಗಂಗಾದರಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ

“ರೈತರೊಂದಿಗೆ ಹೋಗಿ ಮುಸ್ಲಿಮರಿಗೆ ಮಾವಿನಕಾಯಿ, ಹುಣಸೆ ಮಾರಬೇಡಿ ಎಂದು ಕೋಮು ಬೀಜ ಬಿತ್ತಲಾಗುತ್ತಿದೆ. ಇವರ ಕೋಮು ದ್ವೇಷದಿಂದಾಗಿ ಇಡೀ ಹಳ್ಳಿಯ ಆರ್ಥಿಕ ಪರಿಸ್ಥಿತಿಯ ಮೇಲೆ ಹೊಡೆತಗಳು ಬೀಳುತ್ತಿವೆ, ರೈತ ಸಂಸ್ಕೃತಿಯ ಮೇಲೆ ಪ್ರಹಾರ ಮಾಡಲಾಗುತ್ತಿದೆ ಹಾಗೂ ರೈತರಿಗೆ ಅವಮಾನ ಮಾಡಲಾಗುತ್ತಿದೆ ಎಂದು ರೈತ ಸಮುದಾಯವನ್ನು ಎಚ್ಚರಿಸುತ್ತೇವೆ” ಎಂದು ಗಂಗಾದರಯ್ಯ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ವೇದಿಕೆಯ ಪರವಾಗಿ ಮಾತನಾಡಿದ ರಂಗಕರ್ಮಿ ನಟರಾಜ್ ಹೊನ್ನವಳ್ಳಿ ಅವರು ಮಾತನಾಡಿ, “ಕೋಮುದ್ವೇಷಗಳನ್ನು ಹರಡಿ ನಮ್ಮ ಮಾರುಕಟ್ಟೆಗಳನ್ನು ವಶಪಡಿಸಲು ಹುನ್ನಾರ ನಡೆಸುತ್ತಿದ್ದಾರೆ. ನಾವು ಹಸಿದವರು, ಕಾರ್ಮಿಕರು ಮತ್ತು ಇತರ ಕೆಲಸ ಮಾಡುವವರು ಹಿಂದೂ ಧರ್ಮದಲ್ಲಿ ಗುರುತಿಸಿಕೊಂಡಿದ್ದೇವೆ. ಆದರೆ ನಮ್ಮ ಹೆಸರಿನಲ್ಲಿ ರಾಜಕಾರಣ, ದೊಂಬಿ, ಗಲಾಟೆ ಮಾಡುವುದಕ್ಕೆ ಅವಕಾಶ ಕೊಡಬಾರದು. ಬಡವರು ನಾವೆಲ್ಲಾ ಒಗ್ಗಟ್ಟಿನಲ್ಲಿ ಇರಬೇಕಾಗಿದೆ. ಇದು ನಮ್ಮ ವೇದಿಕೆಯ ಮುಖ್ಯ ಉದ್ದೇಶ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮತ್ತೆ ಮತೀಯ ಗೂಂಡಾಗಿರಿ: ಭಿನ್ನ ಧರ್ಮದ ಜೋಡಿಗೆ ಕಿರುಕುಳ, ಹಲ್ಲೆ ಆರೋಪ

“ಕಲಾವಿದರಾದ ನಾವು ಬೀದಿಯಿಂದಲೇ ಬಂದಿರುವುದರಿಂದ, ಇಂತಹ ವಿಷಮ ಪರಿಸ್ಥಿತಿಯಲ್ಲಿ ನಾವು ಮತ್ತೇ ಬೀದಿಗೆ ಹೋಗಿ ಕೆಲಸ ಮಾಡಬೇಕಾಗಿದೆ. ಈ ಹೊತ್ತಿನಲ್ಲಿ ನಾವು ಮೌನವಾಗಿ ಇರಬಾರದು. ಮೌನವಾಗಿ ಇದ್ದಷ್ಟು ಪರಿಸ್ಥಿತಿ ಇನ್ನೂ ಹದಗೆಡುತ್ತದೆ. ಅದಾಗಿಯೆ ಸರಿಯಾಗುತ್ತದೆ ಎಂದು ನಾವು ಅಂದುಕೊಳ್ಳುವುದು ತಪ್ಪು. ಧರ್ಮ ಮತ್ತು ರಾಜಕಾರಣದ ಅಪವಿತ್ರ ಮೈತ್ರಿಯಿಂದ ಪರಿಸ್ಥಿತಿ ಹೀಗಾಗುತ್ತಿದೆ ಎಂದು ನಾವು ತಿಳಿದುಕೊಳ್ಳಬೇಕು. ಹಾಗೂ ನಾವು ಜನರ ಭಾಷೆಗಳನ್ನು ಮಾತನಾಡಬೇಕು ಎಂದು ವೇದಿಕೆಯಲ್ಲಿ ನಾವು ತೀರ್ಮಾನಿಸಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಿದ್ದೇವೆ” ಎಂದು ಹೇಳಿದ್ದಾರೆ.

“ಈ ಹಿಂದೆ ರಾಜ್ಯದಲ್ಲಿ ರೈತ ಸಂಘ ಮತ್ತು ದಲಿತ ಸಂಘಟನೆ ಗಟ್ಟಿಯಾಗಿದ್ದಾಗ ಕೋಮುದ್ವೇಷ ಹರಡುವ ಈ ರೀತಿಯ ಚಟುವಟಿಕೆಗಳು ನಡೆಯುತ್ತಿರಲಿಲ್ಲ. ಈಗ ಅವುಗಳು ನಿಷ್ಕ್ರಿಯವಾಗಿ ಇರುವುದರಿಂದ, ನಾವು ಶೂದ್ರರು ಶೂದ್ರ ವೇದಿಕೆಯನ್ನು ಕಟ್ಟಿ, ಅದರಲ್ಲಿ ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸಿ, ನಾವು ಕೆಲಸ ಮಾಡಲಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಹಳ್ಳಿಗಳಲ್ಲಿ ಒಂದು ಆರ್ಥಿಕತೆಯಿದೆ. ಈ ಆರ್ಥಿಕತೆಯನ್ನು ಬಿಜೆಪಿ ಬೆಂಬಲಿತ ಸಂಘಟನೆಗಳು ಹಾಳುಮಾಡುತ್ತಿರುವುದರಿಂದ ರೈತರು, ಬಡವರು, ಬಡ ಮುಸ್ಲಿಮರ ವೃತ್ತಿಗಳಿಗೆ ತೊಂದರೆಯಾಗುತ್ತದೆ. ಈಗಾಗಲೇ ನಿರುದ್ಯೋಗ ಸೃಷ್ಟಿಯಾಗಿದೆ, ಈಗ ಇನ್ನಷ್ಟು ದೊಡ್ಡ ಹಂತದಲ್ಲಿ ನಿರುದ್ಯೋಗ ಸೃಷ್ಟಿಯಾಗುವ ವಾತಾವರಣವನ್ನು ಸಂಘಪರಿವಾರ ಸೃಷ್ಟಿಮಾಡುತ್ತಿದೆ. ಹೀಗಾಗಿ ‘ಅನ್ನ’ ಬೆಳೆಯುವವರು ಹಾಗೂ ‘ಅನ್ನ’ ಹಂಚುವವರು ಸಾಧ್ಯವಾದಷ್ಟು ಒಂದಾಗಬೇಕು ಎಂಬ ಆಶಯದೊಂದಿಗೆ ವೇದಿಕೆಯ ಮೂಲಕ ಕೆಲಸ ಮಾಡಲಿದ್ದೇವೆ” ಎಂದು ನಟರಾಜ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...