Homeಕರ್ನಾಟಕಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’...

ಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ ಆಕ್ರೋಶ

- Advertisement -
- Advertisement -

ಬ್ರಾಹ್ಮಣ್ಯದ ಶಕ್ತಿಗಳು ಇಡೀ ಶೂದ್ರ ಶಕ್ತಿಯನ್ನು ಬಳಸಿಕೊಂಡು ಶೂದ್ರರ ವಿರುದ್ಧವೆ ಬಾಣ ಪ್ರಯೋಗಿಸುತ್ತಿದೆ ಎಂದು ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ಯ ಪರವಾಗಿ ಕಥೆಗಾರ-ಅನುವಾದಕ ಎಸ್. ಗಂಗಾದರಯ್ಯ ಅವರು ಬುಧವಾರ ಹೇಳಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ಬೆಂಬಲಿತ ಸಂಘಟನೆಗಳ ಮೂಲಕ ನಡೆಯುತ್ತಿರುವ ಕೋಮುವಿಭಜನೆಯನ್ನು ಅವರು ವಿರೋಧಿಸಿದ್ದಾರೆ.

ಹಿರಿಯ ಸಾಹಿತಿ ನಟರಾಜ್‌ ಬೂದಾಳು, ಜಿ.ವಿ. ಆನಂದಮೂರ್ತಿ, ಕೆ. ದೊರೈರಾಜ್, ಎಸ್. ಗಂಗಾದರಯ್ಯ, ಡಾ. ಬಸವರಾಜ್, ನಟರಾಜ್ ಹೊನ್ನಾವಳ್ಳಿ, ಉಜ್ಜಜ್ಜಿ ರಾಜಣ್ಣ, ಕೊಟ್ಟ ಶಂಕರ್‌, ಮನುಚಕ್ರವರ್ತಿ ಸೇರಿದಂತೆ ತುಮಕೂರಿನ ಹಲವು ಕಲಾವಿದರು ಮತ್ತು ಲೇಖಕರು ಸೇರಿ ‘ಕರ್ನಾಟಕ ಶೂದ್ರ ಶಕ್ತಿ’ ವೇದಿಕೆಯನ್ನು ಕಟ್ಟಿಕೊಂಡಿದ್ದು, ಕೋಮುವಾದಿ ಸಂಘಟನೆಗಳನ್ನು ಬಿಟ್ಟು, ಎಲ್ಲಾ ಸಂಘಟನೆಗಳನ್ನು ಜೊತೆಗೆ ಸೇರಿಸಿ ಕೋಮು ಸಾಮರಸ್ಯಕ್ಕಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ವೇದಿಕೆಯ ಪರವಾಗಿ ಮಾತನಾಡಿದ ಕಥೆಗಾರ-ಅನುವಾದಕ ಎಸ್. ಗಂಗಾದರಯ್ಯ ಅವರು, “ಕೆಲವೇ ಶೇಕಡ ಇರುವ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ಮಂದಿ ಇಡೀ ಶೂದ್ರ ಶಕ್ತಿಯನ್ನು ಬಳಸಿಕೊಂಡು ಯಾರು ಏನು ತಿನ್ನಬೇಕು, ಏನು ತಿನ್ನಬಾರದು ಎಂದು ಶೂದ್ರರ ವಿರುದ್ಧವೆ ಬಾಣ ತಿರುಗಿಸುತ್ತಿದ್ದಾರೆ. ಹೀಗಾಗಿ ನಾವು ಇಡೀ ಶೂದ್ರ ಜನಾಂಗದ ಎಲ್ಲಾ ಜನರಲ್ಲೂ, ‘ನೋಡ್ರಪ್ಪ…ನಿಮ್ಮ ವಿರುದ್ಧವೆ, ನಿಮ್ಮನ್ನು ಎತ್ತಿಕಟ್ಟಿ, ನಿಮ್ಮ ಕೈಯ್ಯಲ್ಲೇ ಈ ಕೆಲಸ ಮಾಡಿಸುತ್ತಿದ್ದಾರೆ’ ಎಂದು ಎಚ್ಚರ ಮೂಡಿಸಿ, ಪರ್ಯಾಯವಾಗಿ ಆಲೋಚನೆ ಮಾಡಲು ಬೇಕಾಗಿ ಈ ವೇದಿಕೆಯನ್ನು ಹುಟ್ಟು ಹಾಕಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ಸಧ್ಯಕ್ಕೆ ತುಮಕೂರಿನ ಎಲ್ಲಾ ತಾಲೂಕುಗಳನ್ನು ಕೇಂದ್ರವಾಗಿಟ್ಟುಕೊಂಡು ವೇದಿಕೆಯನ್ನು ಹುಟ್ಟು ಹಾಕಿದ್ದು, ಮುಂದಿನ ದಿನಗಳಲ್ಲಿ ಇದನ್ನು ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸುವ ಕೆಲಸವನ್ನು ಮಾಡಲಿದ್ದೇವೆ ಎಂದು ಗಂಗಾದರಯ್ಯ ಅವರು ಹೇಳಿದ್ದಾರೆ.

ಬಿಜೆಪಿ ಬೆಂಬಲಿತ ವ್ಯಕ್ತಿಗಳು ಮುಸ್ಲಿಮರ ಮಾಂಸದ ಅಂಗಡಿಯನ್ನು ಬಹಿಷ್ಕರಿಸುವಂತೆ ನೀಡಿದ ಕರೆಯನ್ನು ವಿರೋಧಿಸಿರುವ ಅವರು, “ಇವರೊಂದಿಗೆ ಕೊಂಡುಕೊಳ್ಳಿ; ಇವರಿಂದ ಕೊಂಡುಕೊಳ್ಳಬೇಡಿ. ಇದನ್ನು ತಿನ್ನಿ; ಇದನ್ನು ತಿನ್ನಬೇಡಿ ಎಂದು ಹೇಳುತ್ತಿದ್ದಾರೆ. ಇವುಗಳೆಲ್ಲಾ ತಿನ್ನದೆ ಇರುವವರು, ತಿನ್ನುವವರ ಮೇಲೆ ನಡೆಸುತ್ತಿರುವ ಪ್ರಹಾರ. ಇದನ್ನು ಹೇಳಲು ಅವರಿಗೇನು ಹಕ್ಕಿದೆ? ನಮಗೆ ಬೇಕಾದುದನ್ನು ನಾವು ಮಾಡಿಕೊಳ್ಳುತ್ತೇವೆ. ಮಾಂಸ ಬೇಕಾದವರು ಅವರಿಗೆ ಬೇಕಾದ ಕಡೆ ಖರೀದಿಸಿ ತಿನ್ನುತ್ತಾರೆ” ಎಂದು ಅವರು ಹೇಳಿದ್ದಾರೆ.

“ಶೂದ್ರರನ್ನು ತಮ್ಮ ಗಾಳಗಳಾಗಿ ಉಪಯೋಗಿಸಿಕೊಂಡು ಅವರ ಮೂಲಕ ತಮ್ಮ ರಾಜಕೀಯ ಬೇಳೆಗಳನ್ನು ಬೇಯಿಸುತ್ತಿದ್ದಾರೆ. ಹೀಗಾಗಿ ಶೂದ್ರ ಸಮುದಾಯ ಇದರ ವಿರುದ್ಧ ಎಚ್ಚೆತ್ತುಕೊಳ್ಳಬೇಕು. ಇಲ್ಲವೆಂದರೆ ಪರಿಸ್ಥಿತಿ ಬೇರೆ ರೀತಿಯಲ್ಲಿ ವಿಕೋಪಕ್ಕೆ ಹೋಗುತ್ತದೆ” ಎಂದು ಗಂಗಾದರಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ

“ರೈತರೊಂದಿಗೆ ಹೋಗಿ ಮುಸ್ಲಿಮರಿಗೆ ಮಾವಿನಕಾಯಿ, ಹುಣಸೆ ಮಾರಬೇಡಿ ಎಂದು ಕೋಮು ಬೀಜ ಬಿತ್ತಲಾಗುತ್ತಿದೆ. ಇವರ ಕೋಮು ದ್ವೇಷದಿಂದಾಗಿ ಇಡೀ ಹಳ್ಳಿಯ ಆರ್ಥಿಕ ಪರಿಸ್ಥಿತಿಯ ಮೇಲೆ ಹೊಡೆತಗಳು ಬೀಳುತ್ತಿವೆ, ರೈತ ಸಂಸ್ಕೃತಿಯ ಮೇಲೆ ಪ್ರಹಾರ ಮಾಡಲಾಗುತ್ತಿದೆ ಹಾಗೂ ರೈತರಿಗೆ ಅವಮಾನ ಮಾಡಲಾಗುತ್ತಿದೆ ಎಂದು ರೈತ ಸಮುದಾಯವನ್ನು ಎಚ್ಚರಿಸುತ್ತೇವೆ” ಎಂದು ಗಂಗಾದರಯ್ಯ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ವೇದಿಕೆಯ ಪರವಾಗಿ ಮಾತನಾಡಿದ ರಂಗಕರ್ಮಿ ನಟರಾಜ್ ಹೊನ್ನವಳ್ಳಿ ಅವರು ಮಾತನಾಡಿ, “ಕೋಮುದ್ವೇಷಗಳನ್ನು ಹರಡಿ ನಮ್ಮ ಮಾರುಕಟ್ಟೆಗಳನ್ನು ವಶಪಡಿಸಲು ಹುನ್ನಾರ ನಡೆಸುತ್ತಿದ್ದಾರೆ. ನಾವು ಹಸಿದವರು, ಕಾರ್ಮಿಕರು ಮತ್ತು ಇತರ ಕೆಲಸ ಮಾಡುವವರು ಹಿಂದೂ ಧರ್ಮದಲ್ಲಿ ಗುರುತಿಸಿಕೊಂಡಿದ್ದೇವೆ. ಆದರೆ ನಮ್ಮ ಹೆಸರಿನಲ್ಲಿ ರಾಜಕಾರಣ, ದೊಂಬಿ, ಗಲಾಟೆ ಮಾಡುವುದಕ್ಕೆ ಅವಕಾಶ ಕೊಡಬಾರದು. ಬಡವರು ನಾವೆಲ್ಲಾ ಒಗ್ಗಟ್ಟಿನಲ್ಲಿ ಇರಬೇಕಾಗಿದೆ. ಇದು ನಮ್ಮ ವೇದಿಕೆಯ ಮುಖ್ಯ ಉದ್ದೇಶ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮತ್ತೆ ಮತೀಯ ಗೂಂಡಾಗಿರಿ: ಭಿನ್ನ ಧರ್ಮದ ಜೋಡಿಗೆ ಕಿರುಕುಳ, ಹಲ್ಲೆ ಆರೋಪ

“ಕಲಾವಿದರಾದ ನಾವು ಬೀದಿಯಿಂದಲೇ ಬಂದಿರುವುದರಿಂದ, ಇಂತಹ ವಿಷಮ ಪರಿಸ್ಥಿತಿಯಲ್ಲಿ ನಾವು ಮತ್ತೇ ಬೀದಿಗೆ ಹೋಗಿ ಕೆಲಸ ಮಾಡಬೇಕಾಗಿದೆ. ಈ ಹೊತ್ತಿನಲ್ಲಿ ನಾವು ಮೌನವಾಗಿ ಇರಬಾರದು. ಮೌನವಾಗಿ ಇದ್ದಷ್ಟು ಪರಿಸ್ಥಿತಿ ಇನ್ನೂ ಹದಗೆಡುತ್ತದೆ. ಅದಾಗಿಯೆ ಸರಿಯಾಗುತ್ತದೆ ಎಂದು ನಾವು ಅಂದುಕೊಳ್ಳುವುದು ತಪ್ಪು. ಧರ್ಮ ಮತ್ತು ರಾಜಕಾರಣದ ಅಪವಿತ್ರ ಮೈತ್ರಿಯಿಂದ ಪರಿಸ್ಥಿತಿ ಹೀಗಾಗುತ್ತಿದೆ ಎಂದು ನಾವು ತಿಳಿದುಕೊಳ್ಳಬೇಕು. ಹಾಗೂ ನಾವು ಜನರ ಭಾಷೆಗಳನ್ನು ಮಾತನಾಡಬೇಕು ಎಂದು ವೇದಿಕೆಯಲ್ಲಿ ನಾವು ತೀರ್ಮಾನಿಸಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಿದ್ದೇವೆ” ಎಂದು ಹೇಳಿದ್ದಾರೆ.

“ಈ ಹಿಂದೆ ರಾಜ್ಯದಲ್ಲಿ ರೈತ ಸಂಘ ಮತ್ತು ದಲಿತ ಸಂಘಟನೆ ಗಟ್ಟಿಯಾಗಿದ್ದಾಗ ಕೋಮುದ್ವೇಷ ಹರಡುವ ಈ ರೀತಿಯ ಚಟುವಟಿಕೆಗಳು ನಡೆಯುತ್ತಿರಲಿಲ್ಲ. ಈಗ ಅವುಗಳು ನಿಷ್ಕ್ರಿಯವಾಗಿ ಇರುವುದರಿಂದ, ನಾವು ಶೂದ್ರರು ಶೂದ್ರ ವೇದಿಕೆಯನ್ನು ಕಟ್ಟಿ, ಅದರಲ್ಲಿ ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸಿ, ನಾವು ಕೆಲಸ ಮಾಡಲಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಹಳ್ಳಿಗಳಲ್ಲಿ ಒಂದು ಆರ್ಥಿಕತೆಯಿದೆ. ಈ ಆರ್ಥಿಕತೆಯನ್ನು ಬಿಜೆಪಿ ಬೆಂಬಲಿತ ಸಂಘಟನೆಗಳು ಹಾಳುಮಾಡುತ್ತಿರುವುದರಿಂದ ರೈತರು, ಬಡವರು, ಬಡ ಮುಸ್ಲಿಮರ ವೃತ್ತಿಗಳಿಗೆ ತೊಂದರೆಯಾಗುತ್ತದೆ. ಈಗಾಗಲೇ ನಿರುದ್ಯೋಗ ಸೃಷ್ಟಿಯಾಗಿದೆ, ಈಗ ಇನ್ನಷ್ಟು ದೊಡ್ಡ ಹಂತದಲ್ಲಿ ನಿರುದ್ಯೋಗ ಸೃಷ್ಟಿಯಾಗುವ ವಾತಾವರಣವನ್ನು ಸಂಘಪರಿವಾರ ಸೃಷ್ಟಿಮಾಡುತ್ತಿದೆ. ಹೀಗಾಗಿ ‘ಅನ್ನ’ ಬೆಳೆಯುವವರು ಹಾಗೂ ‘ಅನ್ನ’ ಹಂಚುವವರು ಸಾಧ್ಯವಾದಷ್ಟು ಒಂದಾಗಬೇಕು ಎಂಬ ಆಶಯದೊಂದಿಗೆ ವೇದಿಕೆಯ ಮೂಲಕ ಕೆಲಸ ಮಾಡಲಿದ್ದೇವೆ” ಎಂದು ನಟರಾಜ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...