Homeಕರ್ನಾಟಕಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’...

ಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ ಆಕ್ರೋಶ

- Advertisement -
- Advertisement -

ಬ್ರಾಹ್ಮಣ್ಯದ ಶಕ್ತಿಗಳು ಇಡೀ ಶೂದ್ರ ಶಕ್ತಿಯನ್ನು ಬಳಸಿಕೊಂಡು ಶೂದ್ರರ ವಿರುದ್ಧವೆ ಬಾಣ ಪ್ರಯೋಗಿಸುತ್ತಿದೆ ಎಂದು ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ಯ ಪರವಾಗಿ ಕಥೆಗಾರ-ಅನುವಾದಕ ಎಸ್. ಗಂಗಾದರಯ್ಯ ಅವರು ಬುಧವಾರ ಹೇಳಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ಬೆಂಬಲಿತ ಸಂಘಟನೆಗಳ ಮೂಲಕ ನಡೆಯುತ್ತಿರುವ ಕೋಮುವಿಭಜನೆಯನ್ನು ಅವರು ವಿರೋಧಿಸಿದ್ದಾರೆ.

ಹಿರಿಯ ಸಾಹಿತಿ ನಟರಾಜ್‌ ಬೂದಾಳು, ಜಿ.ವಿ. ಆನಂದಮೂರ್ತಿ, ಕೆ. ದೊರೈರಾಜ್, ಎಸ್. ಗಂಗಾದರಯ್ಯ, ಡಾ. ಬಸವರಾಜ್, ನಟರಾಜ್ ಹೊನ್ನಾವಳ್ಳಿ, ಉಜ್ಜಜ್ಜಿ ರಾಜಣ್ಣ, ಕೊಟ್ಟ ಶಂಕರ್‌, ಮನುಚಕ್ರವರ್ತಿ ಸೇರಿದಂತೆ ತುಮಕೂರಿನ ಹಲವು ಕಲಾವಿದರು ಮತ್ತು ಲೇಖಕರು ಸೇರಿ ‘ಕರ್ನಾಟಕ ಶೂದ್ರ ಶಕ್ತಿ’ ವೇದಿಕೆಯನ್ನು ಕಟ್ಟಿಕೊಂಡಿದ್ದು, ಕೋಮುವಾದಿ ಸಂಘಟನೆಗಳನ್ನು ಬಿಟ್ಟು, ಎಲ್ಲಾ ಸಂಘಟನೆಗಳನ್ನು ಜೊತೆಗೆ ಸೇರಿಸಿ ಕೋಮು ಸಾಮರಸ್ಯಕ್ಕಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ವೇದಿಕೆಯ ಪರವಾಗಿ ಮಾತನಾಡಿದ ಕಥೆಗಾರ-ಅನುವಾದಕ ಎಸ್. ಗಂಗಾದರಯ್ಯ ಅವರು, “ಕೆಲವೇ ಶೇಕಡ ಇರುವ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ಮಂದಿ ಇಡೀ ಶೂದ್ರ ಶಕ್ತಿಯನ್ನು ಬಳಸಿಕೊಂಡು ಯಾರು ಏನು ತಿನ್ನಬೇಕು, ಏನು ತಿನ್ನಬಾರದು ಎಂದು ಶೂದ್ರರ ವಿರುದ್ಧವೆ ಬಾಣ ತಿರುಗಿಸುತ್ತಿದ್ದಾರೆ. ಹೀಗಾಗಿ ನಾವು ಇಡೀ ಶೂದ್ರ ಜನಾಂಗದ ಎಲ್ಲಾ ಜನರಲ್ಲೂ, ‘ನೋಡ್ರಪ್ಪ…ನಿಮ್ಮ ವಿರುದ್ಧವೆ, ನಿಮ್ಮನ್ನು ಎತ್ತಿಕಟ್ಟಿ, ನಿಮ್ಮ ಕೈಯ್ಯಲ್ಲೇ ಈ ಕೆಲಸ ಮಾಡಿಸುತ್ತಿದ್ದಾರೆ’ ಎಂದು ಎಚ್ಚರ ಮೂಡಿಸಿ, ಪರ್ಯಾಯವಾಗಿ ಆಲೋಚನೆ ಮಾಡಲು ಬೇಕಾಗಿ ಈ ವೇದಿಕೆಯನ್ನು ಹುಟ್ಟು ಹಾಕಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ಸಧ್ಯಕ್ಕೆ ತುಮಕೂರಿನ ಎಲ್ಲಾ ತಾಲೂಕುಗಳನ್ನು ಕೇಂದ್ರವಾಗಿಟ್ಟುಕೊಂಡು ವೇದಿಕೆಯನ್ನು ಹುಟ್ಟು ಹಾಕಿದ್ದು, ಮುಂದಿನ ದಿನಗಳಲ್ಲಿ ಇದನ್ನು ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸುವ ಕೆಲಸವನ್ನು ಮಾಡಲಿದ್ದೇವೆ ಎಂದು ಗಂಗಾದರಯ್ಯ ಅವರು ಹೇಳಿದ್ದಾರೆ.

ಬಿಜೆಪಿ ಬೆಂಬಲಿತ ವ್ಯಕ್ತಿಗಳು ಮುಸ್ಲಿಮರ ಮಾಂಸದ ಅಂಗಡಿಯನ್ನು ಬಹಿಷ್ಕರಿಸುವಂತೆ ನೀಡಿದ ಕರೆಯನ್ನು ವಿರೋಧಿಸಿರುವ ಅವರು, “ಇವರೊಂದಿಗೆ ಕೊಂಡುಕೊಳ್ಳಿ; ಇವರಿಂದ ಕೊಂಡುಕೊಳ್ಳಬೇಡಿ. ಇದನ್ನು ತಿನ್ನಿ; ಇದನ್ನು ತಿನ್ನಬೇಡಿ ಎಂದು ಹೇಳುತ್ತಿದ್ದಾರೆ. ಇವುಗಳೆಲ್ಲಾ ತಿನ್ನದೆ ಇರುವವರು, ತಿನ್ನುವವರ ಮೇಲೆ ನಡೆಸುತ್ತಿರುವ ಪ್ರಹಾರ. ಇದನ್ನು ಹೇಳಲು ಅವರಿಗೇನು ಹಕ್ಕಿದೆ? ನಮಗೆ ಬೇಕಾದುದನ್ನು ನಾವು ಮಾಡಿಕೊಳ್ಳುತ್ತೇವೆ. ಮಾಂಸ ಬೇಕಾದವರು ಅವರಿಗೆ ಬೇಕಾದ ಕಡೆ ಖರೀದಿಸಿ ತಿನ್ನುತ್ತಾರೆ” ಎಂದು ಅವರು ಹೇಳಿದ್ದಾರೆ.

“ಶೂದ್ರರನ್ನು ತಮ್ಮ ಗಾಳಗಳಾಗಿ ಉಪಯೋಗಿಸಿಕೊಂಡು ಅವರ ಮೂಲಕ ತಮ್ಮ ರಾಜಕೀಯ ಬೇಳೆಗಳನ್ನು ಬೇಯಿಸುತ್ತಿದ್ದಾರೆ. ಹೀಗಾಗಿ ಶೂದ್ರ ಸಮುದಾಯ ಇದರ ವಿರುದ್ಧ ಎಚ್ಚೆತ್ತುಕೊಳ್ಳಬೇಕು. ಇಲ್ಲವೆಂದರೆ ಪರಿಸ್ಥಿತಿ ಬೇರೆ ರೀತಿಯಲ್ಲಿ ವಿಕೋಪಕ್ಕೆ ಹೋಗುತ್ತದೆ” ಎಂದು ಗಂಗಾದರಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ

“ರೈತರೊಂದಿಗೆ ಹೋಗಿ ಮುಸ್ಲಿಮರಿಗೆ ಮಾವಿನಕಾಯಿ, ಹುಣಸೆ ಮಾರಬೇಡಿ ಎಂದು ಕೋಮು ಬೀಜ ಬಿತ್ತಲಾಗುತ್ತಿದೆ. ಇವರ ಕೋಮು ದ್ವೇಷದಿಂದಾಗಿ ಇಡೀ ಹಳ್ಳಿಯ ಆರ್ಥಿಕ ಪರಿಸ್ಥಿತಿಯ ಮೇಲೆ ಹೊಡೆತಗಳು ಬೀಳುತ್ತಿವೆ, ರೈತ ಸಂಸ್ಕೃತಿಯ ಮೇಲೆ ಪ್ರಹಾರ ಮಾಡಲಾಗುತ್ತಿದೆ ಹಾಗೂ ರೈತರಿಗೆ ಅವಮಾನ ಮಾಡಲಾಗುತ್ತಿದೆ ಎಂದು ರೈತ ಸಮುದಾಯವನ್ನು ಎಚ್ಚರಿಸುತ್ತೇವೆ” ಎಂದು ಗಂಗಾದರಯ್ಯ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ವೇದಿಕೆಯ ಪರವಾಗಿ ಮಾತನಾಡಿದ ರಂಗಕರ್ಮಿ ನಟರಾಜ್ ಹೊನ್ನವಳ್ಳಿ ಅವರು ಮಾತನಾಡಿ, “ಕೋಮುದ್ವೇಷಗಳನ್ನು ಹರಡಿ ನಮ್ಮ ಮಾರುಕಟ್ಟೆಗಳನ್ನು ವಶಪಡಿಸಲು ಹುನ್ನಾರ ನಡೆಸುತ್ತಿದ್ದಾರೆ. ನಾವು ಹಸಿದವರು, ಕಾರ್ಮಿಕರು ಮತ್ತು ಇತರ ಕೆಲಸ ಮಾಡುವವರು ಹಿಂದೂ ಧರ್ಮದಲ್ಲಿ ಗುರುತಿಸಿಕೊಂಡಿದ್ದೇವೆ. ಆದರೆ ನಮ್ಮ ಹೆಸರಿನಲ್ಲಿ ರಾಜಕಾರಣ, ದೊಂಬಿ, ಗಲಾಟೆ ಮಾಡುವುದಕ್ಕೆ ಅವಕಾಶ ಕೊಡಬಾರದು. ಬಡವರು ನಾವೆಲ್ಲಾ ಒಗ್ಗಟ್ಟಿನಲ್ಲಿ ಇರಬೇಕಾಗಿದೆ. ಇದು ನಮ್ಮ ವೇದಿಕೆಯ ಮುಖ್ಯ ಉದ್ದೇಶ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮತ್ತೆ ಮತೀಯ ಗೂಂಡಾಗಿರಿ: ಭಿನ್ನ ಧರ್ಮದ ಜೋಡಿಗೆ ಕಿರುಕುಳ, ಹಲ್ಲೆ ಆರೋಪ

“ಕಲಾವಿದರಾದ ನಾವು ಬೀದಿಯಿಂದಲೇ ಬಂದಿರುವುದರಿಂದ, ಇಂತಹ ವಿಷಮ ಪರಿಸ್ಥಿತಿಯಲ್ಲಿ ನಾವು ಮತ್ತೇ ಬೀದಿಗೆ ಹೋಗಿ ಕೆಲಸ ಮಾಡಬೇಕಾಗಿದೆ. ಈ ಹೊತ್ತಿನಲ್ಲಿ ನಾವು ಮೌನವಾಗಿ ಇರಬಾರದು. ಮೌನವಾಗಿ ಇದ್ದಷ್ಟು ಪರಿಸ್ಥಿತಿ ಇನ್ನೂ ಹದಗೆಡುತ್ತದೆ. ಅದಾಗಿಯೆ ಸರಿಯಾಗುತ್ತದೆ ಎಂದು ನಾವು ಅಂದುಕೊಳ್ಳುವುದು ತಪ್ಪು. ಧರ್ಮ ಮತ್ತು ರಾಜಕಾರಣದ ಅಪವಿತ್ರ ಮೈತ್ರಿಯಿಂದ ಪರಿಸ್ಥಿತಿ ಹೀಗಾಗುತ್ತಿದೆ ಎಂದು ನಾವು ತಿಳಿದುಕೊಳ್ಳಬೇಕು. ಹಾಗೂ ನಾವು ಜನರ ಭಾಷೆಗಳನ್ನು ಮಾತನಾಡಬೇಕು ಎಂದು ವೇದಿಕೆಯಲ್ಲಿ ನಾವು ತೀರ್ಮಾನಿಸಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಿದ್ದೇವೆ” ಎಂದು ಹೇಳಿದ್ದಾರೆ.

“ಈ ಹಿಂದೆ ರಾಜ್ಯದಲ್ಲಿ ರೈತ ಸಂಘ ಮತ್ತು ದಲಿತ ಸಂಘಟನೆ ಗಟ್ಟಿಯಾಗಿದ್ದಾಗ ಕೋಮುದ್ವೇಷ ಹರಡುವ ಈ ರೀತಿಯ ಚಟುವಟಿಕೆಗಳು ನಡೆಯುತ್ತಿರಲಿಲ್ಲ. ಈಗ ಅವುಗಳು ನಿಷ್ಕ್ರಿಯವಾಗಿ ಇರುವುದರಿಂದ, ನಾವು ಶೂದ್ರರು ಶೂದ್ರ ವೇದಿಕೆಯನ್ನು ಕಟ್ಟಿ, ಅದರಲ್ಲಿ ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸಿ, ನಾವು ಕೆಲಸ ಮಾಡಲಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಹಳ್ಳಿಗಳಲ್ಲಿ ಒಂದು ಆರ್ಥಿಕತೆಯಿದೆ. ಈ ಆರ್ಥಿಕತೆಯನ್ನು ಬಿಜೆಪಿ ಬೆಂಬಲಿತ ಸಂಘಟನೆಗಳು ಹಾಳುಮಾಡುತ್ತಿರುವುದರಿಂದ ರೈತರು, ಬಡವರು, ಬಡ ಮುಸ್ಲಿಮರ ವೃತ್ತಿಗಳಿಗೆ ತೊಂದರೆಯಾಗುತ್ತದೆ. ಈಗಾಗಲೇ ನಿರುದ್ಯೋಗ ಸೃಷ್ಟಿಯಾಗಿದೆ, ಈಗ ಇನ್ನಷ್ಟು ದೊಡ್ಡ ಹಂತದಲ್ಲಿ ನಿರುದ್ಯೋಗ ಸೃಷ್ಟಿಯಾಗುವ ವಾತಾವರಣವನ್ನು ಸಂಘಪರಿವಾರ ಸೃಷ್ಟಿಮಾಡುತ್ತಿದೆ. ಹೀಗಾಗಿ ‘ಅನ್ನ’ ಬೆಳೆಯುವವರು ಹಾಗೂ ‘ಅನ್ನ’ ಹಂಚುವವರು ಸಾಧ್ಯವಾದಷ್ಟು ಒಂದಾಗಬೇಕು ಎಂಬ ಆಶಯದೊಂದಿಗೆ ವೇದಿಕೆಯ ಮೂಲಕ ಕೆಲಸ ಮಾಡಲಿದ್ದೇವೆ” ಎಂದು ನಟರಾಜ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....