Homeಕರ್ನಾಟಕಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’...

ಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ ಆಕ್ರೋಶ

- Advertisement -
- Advertisement -

ಬ್ರಾಹ್ಮಣ್ಯದ ಶಕ್ತಿಗಳು ಇಡೀ ಶೂದ್ರ ಶಕ್ತಿಯನ್ನು ಬಳಸಿಕೊಂಡು ಶೂದ್ರರ ವಿರುದ್ಧವೆ ಬಾಣ ಪ್ರಯೋಗಿಸುತ್ತಿದೆ ಎಂದು ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ಯ ಪರವಾಗಿ ಕಥೆಗಾರ-ಅನುವಾದಕ ಎಸ್. ಗಂಗಾದರಯ್ಯ ಅವರು ಬುಧವಾರ ಹೇಳಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ಬೆಂಬಲಿತ ಸಂಘಟನೆಗಳ ಮೂಲಕ ನಡೆಯುತ್ತಿರುವ ಕೋಮುವಿಭಜನೆಯನ್ನು ಅವರು ವಿರೋಧಿಸಿದ್ದಾರೆ.

ಹಿರಿಯ ಸಾಹಿತಿ ನಟರಾಜ್‌ ಬೂದಾಳು, ಜಿ.ವಿ. ಆನಂದಮೂರ್ತಿ, ಕೆ. ದೊರೈರಾಜ್, ಎಸ್. ಗಂಗಾದರಯ್ಯ, ಡಾ. ಬಸವರಾಜ್, ನಟರಾಜ್ ಹೊನ್ನಾವಳ್ಳಿ, ಉಜ್ಜಜ್ಜಿ ರಾಜಣ್ಣ, ಕೊಟ್ಟ ಶಂಕರ್‌, ಮನುಚಕ್ರವರ್ತಿ ಸೇರಿದಂತೆ ತುಮಕೂರಿನ ಹಲವು ಕಲಾವಿದರು ಮತ್ತು ಲೇಖಕರು ಸೇರಿ ‘ಕರ್ನಾಟಕ ಶೂದ್ರ ಶಕ್ತಿ’ ವೇದಿಕೆಯನ್ನು ಕಟ್ಟಿಕೊಂಡಿದ್ದು, ಕೋಮುವಾದಿ ಸಂಘಟನೆಗಳನ್ನು ಬಿಟ್ಟು, ಎಲ್ಲಾ ಸಂಘಟನೆಗಳನ್ನು ಜೊತೆಗೆ ಸೇರಿಸಿ ಕೋಮು ಸಾಮರಸ್ಯಕ್ಕಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ವೇದಿಕೆಯ ಪರವಾಗಿ ಮಾತನಾಡಿದ ಕಥೆಗಾರ-ಅನುವಾದಕ ಎಸ್. ಗಂಗಾದರಯ್ಯ ಅವರು, “ಕೆಲವೇ ಶೇಕಡ ಇರುವ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ಮಂದಿ ಇಡೀ ಶೂದ್ರ ಶಕ್ತಿಯನ್ನು ಬಳಸಿಕೊಂಡು ಯಾರು ಏನು ತಿನ್ನಬೇಕು, ಏನು ತಿನ್ನಬಾರದು ಎಂದು ಶೂದ್ರರ ವಿರುದ್ಧವೆ ಬಾಣ ತಿರುಗಿಸುತ್ತಿದ್ದಾರೆ. ಹೀಗಾಗಿ ನಾವು ಇಡೀ ಶೂದ್ರ ಜನಾಂಗದ ಎಲ್ಲಾ ಜನರಲ್ಲೂ, ‘ನೋಡ್ರಪ್ಪ…ನಿಮ್ಮ ವಿರುದ್ಧವೆ, ನಿಮ್ಮನ್ನು ಎತ್ತಿಕಟ್ಟಿ, ನಿಮ್ಮ ಕೈಯ್ಯಲ್ಲೇ ಈ ಕೆಲಸ ಮಾಡಿಸುತ್ತಿದ್ದಾರೆ’ ಎಂದು ಎಚ್ಚರ ಮೂಡಿಸಿ, ಪರ್ಯಾಯವಾಗಿ ಆಲೋಚನೆ ಮಾಡಲು ಬೇಕಾಗಿ ಈ ವೇದಿಕೆಯನ್ನು ಹುಟ್ಟು ಹಾಕಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ಸಧ್ಯಕ್ಕೆ ತುಮಕೂರಿನ ಎಲ್ಲಾ ತಾಲೂಕುಗಳನ್ನು ಕೇಂದ್ರವಾಗಿಟ್ಟುಕೊಂಡು ವೇದಿಕೆಯನ್ನು ಹುಟ್ಟು ಹಾಕಿದ್ದು, ಮುಂದಿನ ದಿನಗಳಲ್ಲಿ ಇದನ್ನು ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸುವ ಕೆಲಸವನ್ನು ಮಾಡಲಿದ್ದೇವೆ ಎಂದು ಗಂಗಾದರಯ್ಯ ಅವರು ಹೇಳಿದ್ದಾರೆ.

ಬಿಜೆಪಿ ಬೆಂಬಲಿತ ವ್ಯಕ್ತಿಗಳು ಮುಸ್ಲಿಮರ ಮಾಂಸದ ಅಂಗಡಿಯನ್ನು ಬಹಿಷ್ಕರಿಸುವಂತೆ ನೀಡಿದ ಕರೆಯನ್ನು ವಿರೋಧಿಸಿರುವ ಅವರು, “ಇವರೊಂದಿಗೆ ಕೊಂಡುಕೊಳ್ಳಿ; ಇವರಿಂದ ಕೊಂಡುಕೊಳ್ಳಬೇಡಿ. ಇದನ್ನು ತಿನ್ನಿ; ಇದನ್ನು ತಿನ್ನಬೇಡಿ ಎಂದು ಹೇಳುತ್ತಿದ್ದಾರೆ. ಇವುಗಳೆಲ್ಲಾ ತಿನ್ನದೆ ಇರುವವರು, ತಿನ್ನುವವರ ಮೇಲೆ ನಡೆಸುತ್ತಿರುವ ಪ್ರಹಾರ. ಇದನ್ನು ಹೇಳಲು ಅವರಿಗೇನು ಹಕ್ಕಿದೆ? ನಮಗೆ ಬೇಕಾದುದನ್ನು ನಾವು ಮಾಡಿಕೊಳ್ಳುತ್ತೇವೆ. ಮಾಂಸ ಬೇಕಾದವರು ಅವರಿಗೆ ಬೇಕಾದ ಕಡೆ ಖರೀದಿಸಿ ತಿನ್ನುತ್ತಾರೆ” ಎಂದು ಅವರು ಹೇಳಿದ್ದಾರೆ.

“ಶೂದ್ರರನ್ನು ತಮ್ಮ ಗಾಳಗಳಾಗಿ ಉಪಯೋಗಿಸಿಕೊಂಡು ಅವರ ಮೂಲಕ ತಮ್ಮ ರಾಜಕೀಯ ಬೇಳೆಗಳನ್ನು ಬೇಯಿಸುತ್ತಿದ್ದಾರೆ. ಹೀಗಾಗಿ ಶೂದ್ರ ಸಮುದಾಯ ಇದರ ವಿರುದ್ಧ ಎಚ್ಚೆತ್ತುಕೊಳ್ಳಬೇಕು. ಇಲ್ಲವೆಂದರೆ ಪರಿಸ್ಥಿತಿ ಬೇರೆ ರೀತಿಯಲ್ಲಿ ವಿಕೋಪಕ್ಕೆ ಹೋಗುತ್ತದೆ” ಎಂದು ಗಂಗಾದರಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ

“ರೈತರೊಂದಿಗೆ ಹೋಗಿ ಮುಸ್ಲಿಮರಿಗೆ ಮಾವಿನಕಾಯಿ, ಹುಣಸೆ ಮಾರಬೇಡಿ ಎಂದು ಕೋಮು ಬೀಜ ಬಿತ್ತಲಾಗುತ್ತಿದೆ. ಇವರ ಕೋಮು ದ್ವೇಷದಿಂದಾಗಿ ಇಡೀ ಹಳ್ಳಿಯ ಆರ್ಥಿಕ ಪರಿಸ್ಥಿತಿಯ ಮೇಲೆ ಹೊಡೆತಗಳು ಬೀಳುತ್ತಿವೆ, ರೈತ ಸಂಸ್ಕೃತಿಯ ಮೇಲೆ ಪ್ರಹಾರ ಮಾಡಲಾಗುತ್ತಿದೆ ಹಾಗೂ ರೈತರಿಗೆ ಅವಮಾನ ಮಾಡಲಾಗುತ್ತಿದೆ ಎಂದು ರೈತ ಸಮುದಾಯವನ್ನು ಎಚ್ಚರಿಸುತ್ತೇವೆ” ಎಂದು ಗಂಗಾದರಯ್ಯ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ವೇದಿಕೆಯ ಪರವಾಗಿ ಮಾತನಾಡಿದ ರಂಗಕರ್ಮಿ ನಟರಾಜ್ ಹೊನ್ನವಳ್ಳಿ ಅವರು ಮಾತನಾಡಿ, “ಕೋಮುದ್ವೇಷಗಳನ್ನು ಹರಡಿ ನಮ್ಮ ಮಾರುಕಟ್ಟೆಗಳನ್ನು ವಶಪಡಿಸಲು ಹುನ್ನಾರ ನಡೆಸುತ್ತಿದ್ದಾರೆ. ನಾವು ಹಸಿದವರು, ಕಾರ್ಮಿಕರು ಮತ್ತು ಇತರ ಕೆಲಸ ಮಾಡುವವರು ಹಿಂದೂ ಧರ್ಮದಲ್ಲಿ ಗುರುತಿಸಿಕೊಂಡಿದ್ದೇವೆ. ಆದರೆ ನಮ್ಮ ಹೆಸರಿನಲ್ಲಿ ರಾಜಕಾರಣ, ದೊಂಬಿ, ಗಲಾಟೆ ಮಾಡುವುದಕ್ಕೆ ಅವಕಾಶ ಕೊಡಬಾರದು. ಬಡವರು ನಾವೆಲ್ಲಾ ಒಗ್ಗಟ್ಟಿನಲ್ಲಿ ಇರಬೇಕಾಗಿದೆ. ಇದು ನಮ್ಮ ವೇದಿಕೆಯ ಮುಖ್ಯ ಉದ್ದೇಶ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮತ್ತೆ ಮತೀಯ ಗೂಂಡಾಗಿರಿ: ಭಿನ್ನ ಧರ್ಮದ ಜೋಡಿಗೆ ಕಿರುಕುಳ, ಹಲ್ಲೆ ಆರೋಪ

“ಕಲಾವಿದರಾದ ನಾವು ಬೀದಿಯಿಂದಲೇ ಬಂದಿರುವುದರಿಂದ, ಇಂತಹ ವಿಷಮ ಪರಿಸ್ಥಿತಿಯಲ್ಲಿ ನಾವು ಮತ್ತೇ ಬೀದಿಗೆ ಹೋಗಿ ಕೆಲಸ ಮಾಡಬೇಕಾಗಿದೆ. ಈ ಹೊತ್ತಿನಲ್ಲಿ ನಾವು ಮೌನವಾಗಿ ಇರಬಾರದು. ಮೌನವಾಗಿ ಇದ್ದಷ್ಟು ಪರಿಸ್ಥಿತಿ ಇನ್ನೂ ಹದಗೆಡುತ್ತದೆ. ಅದಾಗಿಯೆ ಸರಿಯಾಗುತ್ತದೆ ಎಂದು ನಾವು ಅಂದುಕೊಳ್ಳುವುದು ತಪ್ಪು. ಧರ್ಮ ಮತ್ತು ರಾಜಕಾರಣದ ಅಪವಿತ್ರ ಮೈತ್ರಿಯಿಂದ ಪರಿಸ್ಥಿತಿ ಹೀಗಾಗುತ್ತಿದೆ ಎಂದು ನಾವು ತಿಳಿದುಕೊಳ್ಳಬೇಕು. ಹಾಗೂ ನಾವು ಜನರ ಭಾಷೆಗಳನ್ನು ಮಾತನಾಡಬೇಕು ಎಂದು ವೇದಿಕೆಯಲ್ಲಿ ನಾವು ತೀರ್ಮಾನಿಸಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಿದ್ದೇವೆ” ಎಂದು ಹೇಳಿದ್ದಾರೆ.

“ಈ ಹಿಂದೆ ರಾಜ್ಯದಲ್ಲಿ ರೈತ ಸಂಘ ಮತ್ತು ದಲಿತ ಸಂಘಟನೆ ಗಟ್ಟಿಯಾಗಿದ್ದಾಗ ಕೋಮುದ್ವೇಷ ಹರಡುವ ಈ ರೀತಿಯ ಚಟುವಟಿಕೆಗಳು ನಡೆಯುತ್ತಿರಲಿಲ್ಲ. ಈಗ ಅವುಗಳು ನಿಷ್ಕ್ರಿಯವಾಗಿ ಇರುವುದರಿಂದ, ನಾವು ಶೂದ್ರರು ಶೂದ್ರ ವೇದಿಕೆಯನ್ನು ಕಟ್ಟಿ, ಅದರಲ್ಲಿ ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸಿ, ನಾವು ಕೆಲಸ ಮಾಡಲಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಹಳ್ಳಿಗಳಲ್ಲಿ ಒಂದು ಆರ್ಥಿಕತೆಯಿದೆ. ಈ ಆರ್ಥಿಕತೆಯನ್ನು ಬಿಜೆಪಿ ಬೆಂಬಲಿತ ಸಂಘಟನೆಗಳು ಹಾಳುಮಾಡುತ್ತಿರುವುದರಿಂದ ರೈತರು, ಬಡವರು, ಬಡ ಮುಸ್ಲಿಮರ ವೃತ್ತಿಗಳಿಗೆ ತೊಂದರೆಯಾಗುತ್ತದೆ. ಈಗಾಗಲೇ ನಿರುದ್ಯೋಗ ಸೃಷ್ಟಿಯಾಗಿದೆ, ಈಗ ಇನ್ನಷ್ಟು ದೊಡ್ಡ ಹಂತದಲ್ಲಿ ನಿರುದ್ಯೋಗ ಸೃಷ್ಟಿಯಾಗುವ ವಾತಾವರಣವನ್ನು ಸಂಘಪರಿವಾರ ಸೃಷ್ಟಿಮಾಡುತ್ತಿದೆ. ಹೀಗಾಗಿ ‘ಅನ್ನ’ ಬೆಳೆಯುವವರು ಹಾಗೂ ‘ಅನ್ನ’ ಹಂಚುವವರು ಸಾಧ್ಯವಾದಷ್ಟು ಒಂದಾಗಬೇಕು ಎಂಬ ಆಶಯದೊಂದಿಗೆ ವೇದಿಕೆಯ ಮೂಲಕ ಕೆಲಸ ಮಾಡಲಿದ್ದೇವೆ” ಎಂದು ನಟರಾಜ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...