Homeಕರ್ನಾಟಕಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’...

ಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ ಆಕ್ರೋಶ

- Advertisement -
- Advertisement -

ಬ್ರಾಹ್ಮಣ್ಯದ ಶಕ್ತಿಗಳು ಇಡೀ ಶೂದ್ರ ಶಕ್ತಿಯನ್ನು ಬಳಸಿಕೊಂಡು ಶೂದ್ರರ ವಿರುದ್ಧವೆ ಬಾಣ ಪ್ರಯೋಗಿಸುತ್ತಿದೆ ಎಂದು ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ಯ ಪರವಾಗಿ ಕಥೆಗಾರ-ಅನುವಾದಕ ಎಸ್. ಗಂಗಾದರಯ್ಯ ಅವರು ಬುಧವಾರ ಹೇಳಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ಬೆಂಬಲಿತ ಸಂಘಟನೆಗಳ ಮೂಲಕ ನಡೆಯುತ್ತಿರುವ ಕೋಮುವಿಭಜನೆಯನ್ನು ಅವರು ವಿರೋಧಿಸಿದ್ದಾರೆ.

ಹಿರಿಯ ಸಾಹಿತಿ ನಟರಾಜ್‌ ಬೂದಾಳು, ಜಿ.ವಿ. ಆನಂದಮೂರ್ತಿ, ಕೆ. ದೊರೈರಾಜ್, ಎಸ್. ಗಂಗಾದರಯ್ಯ, ಡಾ. ಬಸವರಾಜ್, ನಟರಾಜ್ ಹೊನ್ನಾವಳ್ಳಿ, ಉಜ್ಜಜ್ಜಿ ರಾಜಣ್ಣ, ಕೊಟ್ಟ ಶಂಕರ್‌, ಮನುಚಕ್ರವರ್ತಿ ಸೇರಿದಂತೆ ತುಮಕೂರಿನ ಹಲವು ಕಲಾವಿದರು ಮತ್ತು ಲೇಖಕರು ಸೇರಿ ‘ಕರ್ನಾಟಕ ಶೂದ್ರ ಶಕ್ತಿ’ ವೇದಿಕೆಯನ್ನು ಕಟ್ಟಿಕೊಂಡಿದ್ದು, ಕೋಮುವಾದಿ ಸಂಘಟನೆಗಳನ್ನು ಬಿಟ್ಟು, ಎಲ್ಲಾ ಸಂಘಟನೆಗಳನ್ನು ಜೊತೆಗೆ ಸೇರಿಸಿ ಕೋಮು ಸಾಮರಸ್ಯಕ್ಕಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ವೇದಿಕೆಯ ಪರವಾಗಿ ಮಾತನಾಡಿದ ಕಥೆಗಾರ-ಅನುವಾದಕ ಎಸ್. ಗಂಗಾದರಯ್ಯ ಅವರು, “ಕೆಲವೇ ಶೇಕಡ ಇರುವ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ಮಂದಿ ಇಡೀ ಶೂದ್ರ ಶಕ್ತಿಯನ್ನು ಬಳಸಿಕೊಂಡು ಯಾರು ಏನು ತಿನ್ನಬೇಕು, ಏನು ತಿನ್ನಬಾರದು ಎಂದು ಶೂದ್ರರ ವಿರುದ್ಧವೆ ಬಾಣ ತಿರುಗಿಸುತ್ತಿದ್ದಾರೆ. ಹೀಗಾಗಿ ನಾವು ಇಡೀ ಶೂದ್ರ ಜನಾಂಗದ ಎಲ್ಲಾ ಜನರಲ್ಲೂ, ‘ನೋಡ್ರಪ್ಪ…ನಿಮ್ಮ ವಿರುದ್ಧವೆ, ನಿಮ್ಮನ್ನು ಎತ್ತಿಕಟ್ಟಿ, ನಿಮ್ಮ ಕೈಯ್ಯಲ್ಲೇ ಈ ಕೆಲಸ ಮಾಡಿಸುತ್ತಿದ್ದಾರೆ’ ಎಂದು ಎಚ್ಚರ ಮೂಡಿಸಿ, ಪರ್ಯಾಯವಾಗಿ ಆಲೋಚನೆ ಮಾಡಲು ಬೇಕಾಗಿ ಈ ವೇದಿಕೆಯನ್ನು ಹುಟ್ಟು ಹಾಕಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ಸಧ್ಯಕ್ಕೆ ತುಮಕೂರಿನ ಎಲ್ಲಾ ತಾಲೂಕುಗಳನ್ನು ಕೇಂದ್ರವಾಗಿಟ್ಟುಕೊಂಡು ವೇದಿಕೆಯನ್ನು ಹುಟ್ಟು ಹಾಕಿದ್ದು, ಮುಂದಿನ ದಿನಗಳಲ್ಲಿ ಇದನ್ನು ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸುವ ಕೆಲಸವನ್ನು ಮಾಡಲಿದ್ದೇವೆ ಎಂದು ಗಂಗಾದರಯ್ಯ ಅವರು ಹೇಳಿದ್ದಾರೆ.

ಬಿಜೆಪಿ ಬೆಂಬಲಿತ ವ್ಯಕ್ತಿಗಳು ಮುಸ್ಲಿಮರ ಮಾಂಸದ ಅಂಗಡಿಯನ್ನು ಬಹಿಷ್ಕರಿಸುವಂತೆ ನೀಡಿದ ಕರೆಯನ್ನು ವಿರೋಧಿಸಿರುವ ಅವರು, “ಇವರೊಂದಿಗೆ ಕೊಂಡುಕೊಳ್ಳಿ; ಇವರಿಂದ ಕೊಂಡುಕೊಳ್ಳಬೇಡಿ. ಇದನ್ನು ತಿನ್ನಿ; ಇದನ್ನು ತಿನ್ನಬೇಡಿ ಎಂದು ಹೇಳುತ್ತಿದ್ದಾರೆ. ಇವುಗಳೆಲ್ಲಾ ತಿನ್ನದೆ ಇರುವವರು, ತಿನ್ನುವವರ ಮೇಲೆ ನಡೆಸುತ್ತಿರುವ ಪ್ರಹಾರ. ಇದನ್ನು ಹೇಳಲು ಅವರಿಗೇನು ಹಕ್ಕಿದೆ? ನಮಗೆ ಬೇಕಾದುದನ್ನು ನಾವು ಮಾಡಿಕೊಳ್ಳುತ್ತೇವೆ. ಮಾಂಸ ಬೇಕಾದವರು ಅವರಿಗೆ ಬೇಕಾದ ಕಡೆ ಖರೀದಿಸಿ ತಿನ್ನುತ್ತಾರೆ” ಎಂದು ಅವರು ಹೇಳಿದ್ದಾರೆ.

“ಶೂದ್ರರನ್ನು ತಮ್ಮ ಗಾಳಗಳಾಗಿ ಉಪಯೋಗಿಸಿಕೊಂಡು ಅವರ ಮೂಲಕ ತಮ್ಮ ರಾಜಕೀಯ ಬೇಳೆಗಳನ್ನು ಬೇಯಿಸುತ್ತಿದ್ದಾರೆ. ಹೀಗಾಗಿ ಶೂದ್ರ ಸಮುದಾಯ ಇದರ ವಿರುದ್ಧ ಎಚ್ಚೆತ್ತುಕೊಳ್ಳಬೇಕು. ಇಲ್ಲವೆಂದರೆ ಪರಿಸ್ಥಿತಿ ಬೇರೆ ರೀತಿಯಲ್ಲಿ ವಿಕೋಪಕ್ಕೆ ಹೋಗುತ್ತದೆ” ಎಂದು ಗಂಗಾದರಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ

“ರೈತರೊಂದಿಗೆ ಹೋಗಿ ಮುಸ್ಲಿಮರಿಗೆ ಮಾವಿನಕಾಯಿ, ಹುಣಸೆ ಮಾರಬೇಡಿ ಎಂದು ಕೋಮು ಬೀಜ ಬಿತ್ತಲಾಗುತ್ತಿದೆ. ಇವರ ಕೋಮು ದ್ವೇಷದಿಂದಾಗಿ ಇಡೀ ಹಳ್ಳಿಯ ಆರ್ಥಿಕ ಪರಿಸ್ಥಿತಿಯ ಮೇಲೆ ಹೊಡೆತಗಳು ಬೀಳುತ್ತಿವೆ, ರೈತ ಸಂಸ್ಕೃತಿಯ ಮೇಲೆ ಪ್ರಹಾರ ಮಾಡಲಾಗುತ್ತಿದೆ ಹಾಗೂ ರೈತರಿಗೆ ಅವಮಾನ ಮಾಡಲಾಗುತ್ತಿದೆ ಎಂದು ರೈತ ಸಮುದಾಯವನ್ನು ಎಚ್ಚರಿಸುತ್ತೇವೆ” ಎಂದು ಗಂಗಾದರಯ್ಯ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ವೇದಿಕೆಯ ಪರವಾಗಿ ಮಾತನಾಡಿದ ರಂಗಕರ್ಮಿ ನಟರಾಜ್ ಹೊನ್ನವಳ್ಳಿ ಅವರು ಮಾತನಾಡಿ, “ಕೋಮುದ್ವೇಷಗಳನ್ನು ಹರಡಿ ನಮ್ಮ ಮಾರುಕಟ್ಟೆಗಳನ್ನು ವಶಪಡಿಸಲು ಹುನ್ನಾರ ನಡೆಸುತ್ತಿದ್ದಾರೆ. ನಾವು ಹಸಿದವರು, ಕಾರ್ಮಿಕರು ಮತ್ತು ಇತರ ಕೆಲಸ ಮಾಡುವವರು ಹಿಂದೂ ಧರ್ಮದಲ್ಲಿ ಗುರುತಿಸಿಕೊಂಡಿದ್ದೇವೆ. ಆದರೆ ನಮ್ಮ ಹೆಸರಿನಲ್ಲಿ ರಾಜಕಾರಣ, ದೊಂಬಿ, ಗಲಾಟೆ ಮಾಡುವುದಕ್ಕೆ ಅವಕಾಶ ಕೊಡಬಾರದು. ಬಡವರು ನಾವೆಲ್ಲಾ ಒಗ್ಗಟ್ಟಿನಲ್ಲಿ ಇರಬೇಕಾಗಿದೆ. ಇದು ನಮ್ಮ ವೇದಿಕೆಯ ಮುಖ್ಯ ಉದ್ದೇಶ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮತ್ತೆ ಮತೀಯ ಗೂಂಡಾಗಿರಿ: ಭಿನ್ನ ಧರ್ಮದ ಜೋಡಿಗೆ ಕಿರುಕುಳ, ಹಲ್ಲೆ ಆರೋಪ

“ಕಲಾವಿದರಾದ ನಾವು ಬೀದಿಯಿಂದಲೇ ಬಂದಿರುವುದರಿಂದ, ಇಂತಹ ವಿಷಮ ಪರಿಸ್ಥಿತಿಯಲ್ಲಿ ನಾವು ಮತ್ತೇ ಬೀದಿಗೆ ಹೋಗಿ ಕೆಲಸ ಮಾಡಬೇಕಾಗಿದೆ. ಈ ಹೊತ್ತಿನಲ್ಲಿ ನಾವು ಮೌನವಾಗಿ ಇರಬಾರದು. ಮೌನವಾಗಿ ಇದ್ದಷ್ಟು ಪರಿಸ್ಥಿತಿ ಇನ್ನೂ ಹದಗೆಡುತ್ತದೆ. ಅದಾಗಿಯೆ ಸರಿಯಾಗುತ್ತದೆ ಎಂದು ನಾವು ಅಂದುಕೊಳ್ಳುವುದು ತಪ್ಪು. ಧರ್ಮ ಮತ್ತು ರಾಜಕಾರಣದ ಅಪವಿತ್ರ ಮೈತ್ರಿಯಿಂದ ಪರಿಸ್ಥಿತಿ ಹೀಗಾಗುತ್ತಿದೆ ಎಂದು ನಾವು ತಿಳಿದುಕೊಳ್ಳಬೇಕು. ಹಾಗೂ ನಾವು ಜನರ ಭಾಷೆಗಳನ್ನು ಮಾತನಾಡಬೇಕು ಎಂದು ವೇದಿಕೆಯಲ್ಲಿ ನಾವು ತೀರ್ಮಾನಿಸಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಿದ್ದೇವೆ” ಎಂದು ಹೇಳಿದ್ದಾರೆ.

“ಈ ಹಿಂದೆ ರಾಜ್ಯದಲ್ಲಿ ರೈತ ಸಂಘ ಮತ್ತು ದಲಿತ ಸಂಘಟನೆ ಗಟ್ಟಿಯಾಗಿದ್ದಾಗ ಕೋಮುದ್ವೇಷ ಹರಡುವ ಈ ರೀತಿಯ ಚಟುವಟಿಕೆಗಳು ನಡೆಯುತ್ತಿರಲಿಲ್ಲ. ಈಗ ಅವುಗಳು ನಿಷ್ಕ್ರಿಯವಾಗಿ ಇರುವುದರಿಂದ, ನಾವು ಶೂದ್ರರು ಶೂದ್ರ ವೇದಿಕೆಯನ್ನು ಕಟ್ಟಿ, ಅದರಲ್ಲಿ ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸಿ, ನಾವು ಕೆಲಸ ಮಾಡಲಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಹಳ್ಳಿಗಳಲ್ಲಿ ಒಂದು ಆರ್ಥಿಕತೆಯಿದೆ. ಈ ಆರ್ಥಿಕತೆಯನ್ನು ಬಿಜೆಪಿ ಬೆಂಬಲಿತ ಸಂಘಟನೆಗಳು ಹಾಳುಮಾಡುತ್ತಿರುವುದರಿಂದ ರೈತರು, ಬಡವರು, ಬಡ ಮುಸ್ಲಿಮರ ವೃತ್ತಿಗಳಿಗೆ ತೊಂದರೆಯಾಗುತ್ತದೆ. ಈಗಾಗಲೇ ನಿರುದ್ಯೋಗ ಸೃಷ್ಟಿಯಾಗಿದೆ, ಈಗ ಇನ್ನಷ್ಟು ದೊಡ್ಡ ಹಂತದಲ್ಲಿ ನಿರುದ್ಯೋಗ ಸೃಷ್ಟಿಯಾಗುವ ವಾತಾವರಣವನ್ನು ಸಂಘಪರಿವಾರ ಸೃಷ್ಟಿಮಾಡುತ್ತಿದೆ. ಹೀಗಾಗಿ ‘ಅನ್ನ’ ಬೆಳೆಯುವವರು ಹಾಗೂ ‘ಅನ್ನ’ ಹಂಚುವವರು ಸಾಧ್ಯವಾದಷ್ಟು ಒಂದಾಗಬೇಕು ಎಂಬ ಆಶಯದೊಂದಿಗೆ ವೇದಿಕೆಯ ಮೂಲಕ ಕೆಲಸ ಮಾಡಲಿದ್ದೇವೆ” ಎಂದು ನಟರಾಜ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...

ಪಾಕಿಸ್ತಾನದ ಐಎಸ್‌ಐ ಪರ ಬೇಹುಗಾರಿಕೆ ಆರೋಪ : ನೌಕಾಪಡೆಯ ಲ್ಯಾನ್ಸ್ ನಾಯಕ್ ಆದರ್ಶ್ ಕುಮಾರ್ ಬಂಧನ

ಪಾಕಿಸ್ತಾನದ ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ) ಪರ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ 24 ವರ್ಷದ ಭಾರತೀಯ ನೌಕಾಪಡೆಯ ಲ್ಯಾನ್ಸ್ ನಾಯಕ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮಂಗಳವಾರ (ಮಾ.10)...

ಅಮೆರಿಕದ ತೈಲ ಸಂಸ್ಕರಣಾ ಘಟಕಕ್ಕೆ ರಿಲಯನ್ಸ್ ಹೂಡಿಕೆ : ಟ್ರಂಪ್ ಘೋಷಣೆ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಹೂಡಿಕೆಯ ಸಹಾಯದಿಂದ 50 ವರ್ಷಗಳಲ್ಲಿ ಅಮೆರಿಕ ತನ್ನ ಮೊದಲ ಹೊಸ ತೈಲ ಸಂಸ್ಕರಣಾಗಾರವನ್ನು ಪಡೆಯಲಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. 'ಅಮೆರಿಕ ಫಸ್ಟ್ ರಿಫೈನಿಂಗ್ ಸಂಸ್ಥೆ'ಯು ಟೆಕ್ಸಾಸ್‌ನ...

ಭಾರತೀಯರ ಅಡುಗೆ ಮನೆ ತಲುಪಿದ ಯುದ್ಧದ ಪರಿಣಾಮ : ದೇಶದಾದ್ಯಂತ ಎಲ್‌ಪಿಜಿ ಕೊರತೆ ಉಲ್ಬಣ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದಿಂದ ಭಾರತದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ದೇಶ ಪ್ರಧಾನಿ ಮೋದಿಯವರ ಕೈಯಲ್ಲಿ ಭದ್ರವಾಗಿದೆ ಎಂದು ಒಂದಷ್ಟು ಜನರು ಸಾಮಾಜಿಕ ಜಾಲತಾಣಗಳಲ್ಲಿ ಕಾಮೆಂಟ್ ಮಾಡುತ್ತಿರುವಾಗಲೇ,...

ಪಹಲ್ಗಾಮ್ ದಾಳಿ ಕುರಿತ ಪೋಸ್ಟ್‌: ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಸಾಮಾಜಿಕ ಮಾಧ್ಯಮ ಪೋಸ್ಟ್‌ಗೆ ಸಂಬಂಧಿಸಿದಂತೆ ಜಾನಪದ ಗಾಯಕಿ ನೇಹಾ ಸಿಂಗ್ ರಾಥೋಡ್ ಅವರ ವಿರುದ್ಧ ದಾಖಲಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಂಗಳವಾರ ಅವರಿಗೆ ನಿರೀಕ್ಷಣಾ ಜಾಮೀನು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಎಲ್‌ಪಿಜಿ ಕೊರತೆಗೆ ಮುಂಬೈನಲ್ಲಿ ಶೇ. 20 ರಷ್ಟು ಹೋಟೆಲ್‌, ರೆಸ್ಟೋರೆಂಟ್‌ ಬಂದ್: ಬೆಂಗಳೂರು, ಚೆನ್ನೈನಲ್ಲೂ ಸಮಸ್ಯೆ

ಪಶ್ಚಿಮ ಏಷ್ಯಾ ಸಂಘರ್ಷ ಹತ್ತು ದಿನಗಳಿಗೂ ಹೆಚ್ಚು ಕಾಲ ಮುಂದುವರಿದಿರುವುದರಿಂದ, ಭಾರತದ ಹೋಟೆಲ್‌ಗಳು ಮತ್ತು ಇತರ ಉಧ್ಯಮಗಳು ಎಲ್‌ಪಿಜಿ ಪೂರೈಕೆ ಬಿಕ್ಕಟ್ಟನ್ನು ಎದುರಿಸುತ್ತಿವೆ. ಬೆಂಗಳೂರಿನ ನಂತರ, ಚೆನ್ನೈ ಮತ್ತು ಮುಂಬೈನಂತಹ ಇತರ ನಗರಗಳು ಸಹ...

‘ಕೋವಿಡ್ ಲಸಿಕೆ ಪೀಡಿತರಿಗಾಗಿ ಪರಿಹಾರ ನೀತಿ ಅಳವಡಿಸಿಕೊಳ್ಳಿ..’; ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕೋವಿಡ್ ವಿರುದ್ಧ ರೋಗನಿರೋಧಕ ಶಕ್ತಿಯಾಗಿ ಲಸಿಕೆ ನೀಡಿದ ನಂತರ ಉಂಟಾಗುವ ಪ್ರತಿಕೂಲ ಪರಿಣಾಮಗಳ ವೈಜ್ಞಾನಿಕ ಮೌಲ್ಯಮಾಪನಕ್ಕಾಗಿ ಅಸ್ತಿತ್ವದಲ್ಲಿರುವ ಕಾರ್ಯವಿಧಾನವನ್ನು ಮುಂದುವರಿಸಬೇಕೆಂದು ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ. ಅದೇ ಸಮಯದಲ್ಲಿ, ಕೋವಿಡ್ -19 ವ್ಯಾಕ್ಸಿನೇಷನ್ ನಂತರದ...

ಮೇಘಾಲಯ|ಜಿಲ್ಲಾ ಪರಿಷತ್ ಚುನಾವಣೆಯಲ್ಲಿ ವಿವಾದಾತ್ಮಕ ಅಧಿಸೂಚನೆ: ಪಶ್ಚಿಮ ಗಾರೋ ಬೆಟ್ಟಗಳಲ್ಲಿ ಭುಗಿಲೆದ್ದ ಹಿಂಸಾಚಾರ; ಇಬ್ಬರ ಸಾವು

ಗುವಾಹಟಿ: ಏಪ್ರಿಲ್ 10 ರಂದು ನಡೆಯಲಿರುವ ಗಾರೋ ಹಿಲ್ಸ್ ಸ್ವಾಯತ್ತ ಜಿಲ್ಲಾ ಮಂಡಳಿ (ಜಿಎಚ್‌ಎಡಿಸಿ) ಚುನಾವಣೆಯಲ್ಲಿ ಬುಡಕಟ್ಟು ಜನಾಂಗದವರಲ್ಲದವರು ಸ್ಪರ್ಧಿಸುವುದನ್ನು ನಿಷೇಧಿಸುವ ವಿವಾದಾತ್ಮಕ ಅಧಿಸೂಚನೆಯನ್ನು ವಿರೋಧಿಸಿ ಮೇಘಾಲಯದ ಪಶ್ಚಿಮ ಗಾರೋ ಹಿಲ್ಸ್ ಜಿಲ್ಲೆಯಲ್ಲಿ...