Homeಕರ್ನಾಟಕಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’...

ಶೂದ್ರರನ್ನು ಬಳಸಿಕೊಂಡು ಶೂದ್ರರ ವಿರುದ್ದವೆ ಬಾಣ ಪ್ರಯೋಗ: ಬಿಜೆಪಿಯ ಕೋಮುದ್ರುವೀಕರಣದ ವಿರುದ್ದ ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ ಆಕ್ರೋಶ

- Advertisement -
- Advertisement -

ಬ್ರಾಹ್ಮಣ್ಯದ ಶಕ್ತಿಗಳು ಇಡೀ ಶೂದ್ರ ಶಕ್ತಿಯನ್ನು ಬಳಸಿಕೊಂಡು ಶೂದ್ರರ ವಿರುದ್ಧವೆ ಬಾಣ ಪ್ರಯೋಗಿಸುತ್ತಿದೆ ಎಂದು ‘ಕರ್ನಾಟಕ ಶೂದ್ರಶಕ್ತಿ ವೇದಿಕೆ’ಯ ಪರವಾಗಿ ಕಥೆಗಾರ-ಅನುವಾದಕ ಎಸ್. ಗಂಗಾದರಯ್ಯ ಅವರು ಬುಧವಾರ ಹೇಳಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ಬೆಂಬಲಿತ ಸಂಘಟನೆಗಳ ಮೂಲಕ ನಡೆಯುತ್ತಿರುವ ಕೋಮುವಿಭಜನೆಯನ್ನು ಅವರು ವಿರೋಧಿಸಿದ್ದಾರೆ.

ಹಿರಿಯ ಸಾಹಿತಿ ನಟರಾಜ್‌ ಬೂದಾಳು, ಜಿ.ವಿ. ಆನಂದಮೂರ್ತಿ, ಕೆ. ದೊರೈರಾಜ್, ಎಸ್. ಗಂಗಾದರಯ್ಯ, ಡಾ. ಬಸವರಾಜ್, ನಟರಾಜ್ ಹೊನ್ನಾವಳ್ಳಿ, ಉಜ್ಜಜ್ಜಿ ರಾಜಣ್ಣ, ಕೊಟ್ಟ ಶಂಕರ್‌, ಮನುಚಕ್ರವರ್ತಿ ಸೇರಿದಂತೆ ತುಮಕೂರಿನ ಹಲವು ಕಲಾವಿದರು ಮತ್ತು ಲೇಖಕರು ಸೇರಿ ‘ಕರ್ನಾಟಕ ಶೂದ್ರ ಶಕ್ತಿ’ ವೇದಿಕೆಯನ್ನು ಕಟ್ಟಿಕೊಂಡಿದ್ದು, ಕೋಮುವಾದಿ ಸಂಘಟನೆಗಳನ್ನು ಬಿಟ್ಟು, ಎಲ್ಲಾ ಸಂಘಟನೆಗಳನ್ನು ಜೊತೆಗೆ ಸೇರಿಸಿ ಕೋಮು ಸಾಮರಸ್ಯಕ್ಕಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ವೇದಿಕೆಯ ಪರವಾಗಿ ಮಾತನಾಡಿದ ಕಥೆಗಾರ-ಅನುವಾದಕ ಎಸ್. ಗಂಗಾದರಯ್ಯ ಅವರು, “ಕೆಲವೇ ಶೇಕಡ ಇರುವ ಬ್ರಾಹ್ಮಣ ಮತ್ತು ಬ್ರಾಹ್ಮಣ್ಯದ ಮಂದಿ ಇಡೀ ಶೂದ್ರ ಶಕ್ತಿಯನ್ನು ಬಳಸಿಕೊಂಡು ಯಾರು ಏನು ತಿನ್ನಬೇಕು, ಏನು ತಿನ್ನಬಾರದು ಎಂದು ಶೂದ್ರರ ವಿರುದ್ಧವೆ ಬಾಣ ತಿರುಗಿಸುತ್ತಿದ್ದಾರೆ. ಹೀಗಾಗಿ ನಾವು ಇಡೀ ಶೂದ್ರ ಜನಾಂಗದ ಎಲ್ಲಾ ಜನರಲ್ಲೂ, ‘ನೋಡ್ರಪ್ಪ…ನಿಮ್ಮ ವಿರುದ್ಧವೆ, ನಿಮ್ಮನ್ನು ಎತ್ತಿಕಟ್ಟಿ, ನಿಮ್ಮ ಕೈಯ್ಯಲ್ಲೇ ಈ ಕೆಲಸ ಮಾಡಿಸುತ್ತಿದ್ದಾರೆ’ ಎಂದು ಎಚ್ಚರ ಮೂಡಿಸಿ, ಪರ್ಯಾಯವಾಗಿ ಆಲೋಚನೆ ಮಾಡಲು ಬೇಕಾಗಿ ಈ ವೇದಿಕೆಯನ್ನು ಹುಟ್ಟು ಹಾಕಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ಸಧ್ಯಕ್ಕೆ ತುಮಕೂರಿನ ಎಲ್ಲಾ ತಾಲೂಕುಗಳನ್ನು ಕೇಂದ್ರವಾಗಿಟ್ಟುಕೊಂಡು ವೇದಿಕೆಯನ್ನು ಹುಟ್ಟು ಹಾಕಿದ್ದು, ಮುಂದಿನ ದಿನಗಳಲ್ಲಿ ಇದನ್ನು ರಾಜ್ಯದ ಇತರ ಜಿಲ್ಲೆಗಳಿಗೂ ವಿಸ್ತರಿಸುವ ಕೆಲಸವನ್ನು ಮಾಡಲಿದ್ದೇವೆ ಎಂದು ಗಂಗಾದರಯ್ಯ ಅವರು ಹೇಳಿದ್ದಾರೆ.

ಬಿಜೆಪಿ ಬೆಂಬಲಿತ ವ್ಯಕ್ತಿಗಳು ಮುಸ್ಲಿಮರ ಮಾಂಸದ ಅಂಗಡಿಯನ್ನು ಬಹಿಷ್ಕರಿಸುವಂತೆ ನೀಡಿದ ಕರೆಯನ್ನು ವಿರೋಧಿಸಿರುವ ಅವರು, “ಇವರೊಂದಿಗೆ ಕೊಂಡುಕೊಳ್ಳಿ; ಇವರಿಂದ ಕೊಂಡುಕೊಳ್ಳಬೇಡಿ. ಇದನ್ನು ತಿನ್ನಿ; ಇದನ್ನು ತಿನ್ನಬೇಡಿ ಎಂದು ಹೇಳುತ್ತಿದ್ದಾರೆ. ಇವುಗಳೆಲ್ಲಾ ತಿನ್ನದೆ ಇರುವವರು, ತಿನ್ನುವವರ ಮೇಲೆ ನಡೆಸುತ್ತಿರುವ ಪ್ರಹಾರ. ಇದನ್ನು ಹೇಳಲು ಅವರಿಗೇನು ಹಕ್ಕಿದೆ? ನಮಗೆ ಬೇಕಾದುದನ್ನು ನಾವು ಮಾಡಿಕೊಳ್ಳುತ್ತೇವೆ. ಮಾಂಸ ಬೇಕಾದವರು ಅವರಿಗೆ ಬೇಕಾದ ಕಡೆ ಖರೀದಿಸಿ ತಿನ್ನುತ್ತಾರೆ” ಎಂದು ಅವರು ಹೇಳಿದ್ದಾರೆ.

“ಶೂದ್ರರನ್ನು ತಮ್ಮ ಗಾಳಗಳಾಗಿ ಉಪಯೋಗಿಸಿಕೊಂಡು ಅವರ ಮೂಲಕ ತಮ್ಮ ರಾಜಕೀಯ ಬೇಳೆಗಳನ್ನು ಬೇಯಿಸುತ್ತಿದ್ದಾರೆ. ಹೀಗಾಗಿ ಶೂದ್ರ ಸಮುದಾಯ ಇದರ ವಿರುದ್ಧ ಎಚ್ಚೆತ್ತುಕೊಳ್ಳಬೇಕು. ಇಲ್ಲವೆಂದರೆ ಪರಿಸ್ಥಿತಿ ಬೇರೆ ರೀತಿಯಲ್ಲಿ ವಿಕೋಪಕ್ಕೆ ಹೋಗುತ್ತದೆ” ಎಂದು ಗಂಗಾದರಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಸಮಾಜದಲ್ಲಿ ಕಲಹ ಸೃಷ್ಟಿಸುವವರು ಸ್ವಾಮೀಜಿ ಎನಿಸಿಕೊಳ್ಳಲು ಸಾಧ್ಯವಿಲ್ಲ: ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ

“ರೈತರೊಂದಿಗೆ ಹೋಗಿ ಮುಸ್ಲಿಮರಿಗೆ ಮಾವಿನಕಾಯಿ, ಹುಣಸೆ ಮಾರಬೇಡಿ ಎಂದು ಕೋಮು ಬೀಜ ಬಿತ್ತಲಾಗುತ್ತಿದೆ. ಇವರ ಕೋಮು ದ್ವೇಷದಿಂದಾಗಿ ಇಡೀ ಹಳ್ಳಿಯ ಆರ್ಥಿಕ ಪರಿಸ್ಥಿತಿಯ ಮೇಲೆ ಹೊಡೆತಗಳು ಬೀಳುತ್ತಿವೆ, ರೈತ ಸಂಸ್ಕೃತಿಯ ಮೇಲೆ ಪ್ರಹಾರ ಮಾಡಲಾಗುತ್ತಿದೆ ಹಾಗೂ ರೈತರಿಗೆ ಅವಮಾನ ಮಾಡಲಾಗುತ್ತಿದೆ ಎಂದು ರೈತ ಸಮುದಾಯವನ್ನು ಎಚ್ಚರಿಸುತ್ತೇವೆ” ಎಂದು ಗಂಗಾದರಯ್ಯ ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

ವೇದಿಕೆಯ ಪರವಾಗಿ ಮಾತನಾಡಿದ ರಂಗಕರ್ಮಿ ನಟರಾಜ್ ಹೊನ್ನವಳ್ಳಿ ಅವರು ಮಾತನಾಡಿ, “ಕೋಮುದ್ವೇಷಗಳನ್ನು ಹರಡಿ ನಮ್ಮ ಮಾರುಕಟ್ಟೆಗಳನ್ನು ವಶಪಡಿಸಲು ಹುನ್ನಾರ ನಡೆಸುತ್ತಿದ್ದಾರೆ. ನಾವು ಹಸಿದವರು, ಕಾರ್ಮಿಕರು ಮತ್ತು ಇತರ ಕೆಲಸ ಮಾಡುವವರು ಹಿಂದೂ ಧರ್ಮದಲ್ಲಿ ಗುರುತಿಸಿಕೊಂಡಿದ್ದೇವೆ. ಆದರೆ ನಮ್ಮ ಹೆಸರಿನಲ್ಲಿ ರಾಜಕಾರಣ, ದೊಂಬಿ, ಗಲಾಟೆ ಮಾಡುವುದಕ್ಕೆ ಅವಕಾಶ ಕೊಡಬಾರದು. ಬಡವರು ನಾವೆಲ್ಲಾ ಒಗ್ಗಟ್ಟಿನಲ್ಲಿ ಇರಬೇಕಾಗಿದೆ. ಇದು ನಮ್ಮ ವೇದಿಕೆಯ ಮುಖ್ಯ ಉದ್ದೇಶ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ಮತ್ತೆ ಮತೀಯ ಗೂಂಡಾಗಿರಿ: ಭಿನ್ನ ಧರ್ಮದ ಜೋಡಿಗೆ ಕಿರುಕುಳ, ಹಲ್ಲೆ ಆರೋಪ

“ಕಲಾವಿದರಾದ ನಾವು ಬೀದಿಯಿಂದಲೇ ಬಂದಿರುವುದರಿಂದ, ಇಂತಹ ವಿಷಮ ಪರಿಸ್ಥಿತಿಯಲ್ಲಿ ನಾವು ಮತ್ತೇ ಬೀದಿಗೆ ಹೋಗಿ ಕೆಲಸ ಮಾಡಬೇಕಾಗಿದೆ. ಈ ಹೊತ್ತಿನಲ್ಲಿ ನಾವು ಮೌನವಾಗಿ ಇರಬಾರದು. ಮೌನವಾಗಿ ಇದ್ದಷ್ಟು ಪರಿಸ್ಥಿತಿ ಇನ್ನೂ ಹದಗೆಡುತ್ತದೆ. ಅದಾಗಿಯೆ ಸರಿಯಾಗುತ್ತದೆ ಎಂದು ನಾವು ಅಂದುಕೊಳ್ಳುವುದು ತಪ್ಪು. ಧರ್ಮ ಮತ್ತು ರಾಜಕಾರಣದ ಅಪವಿತ್ರ ಮೈತ್ರಿಯಿಂದ ಪರಿಸ್ಥಿತಿ ಹೀಗಾಗುತ್ತಿದೆ ಎಂದು ನಾವು ತಿಳಿದುಕೊಳ್ಳಬೇಕು. ಹಾಗೂ ನಾವು ಜನರ ಭಾಷೆಗಳನ್ನು ಮಾತನಾಡಬೇಕು ಎಂದು ವೇದಿಕೆಯಲ್ಲಿ ನಾವು ತೀರ್ಮಾನಿಸಿದ್ದೇವೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಿದ್ದೇವೆ” ಎಂದು ಹೇಳಿದ್ದಾರೆ.

“ಈ ಹಿಂದೆ ರಾಜ್ಯದಲ್ಲಿ ರೈತ ಸಂಘ ಮತ್ತು ದಲಿತ ಸಂಘಟನೆ ಗಟ್ಟಿಯಾಗಿದ್ದಾಗ ಕೋಮುದ್ವೇಷ ಹರಡುವ ಈ ರೀತಿಯ ಚಟುವಟಿಕೆಗಳು ನಡೆಯುತ್ತಿರಲಿಲ್ಲ. ಈಗ ಅವುಗಳು ನಿಷ್ಕ್ರಿಯವಾಗಿ ಇರುವುದರಿಂದ, ನಾವು ಶೂದ್ರರು ಶೂದ್ರ ವೇದಿಕೆಯನ್ನು ಕಟ್ಟಿ, ಅದರಲ್ಲಿ ಎಲ್ಲಾ ಸಮುದಾಯಗಳನ್ನು ಒಟ್ಟುಗೂಡಿಸಿ, ನಾವು ಕೆಲಸ ಮಾಡಲಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಹಳ್ಳಿಗಳಲ್ಲಿ ಒಂದು ಆರ್ಥಿಕತೆಯಿದೆ. ಈ ಆರ್ಥಿಕತೆಯನ್ನು ಬಿಜೆಪಿ ಬೆಂಬಲಿತ ಸಂಘಟನೆಗಳು ಹಾಳುಮಾಡುತ್ತಿರುವುದರಿಂದ ರೈತರು, ಬಡವರು, ಬಡ ಮುಸ್ಲಿಮರ ವೃತ್ತಿಗಳಿಗೆ ತೊಂದರೆಯಾಗುತ್ತದೆ. ಈಗಾಗಲೇ ನಿರುದ್ಯೋಗ ಸೃಷ್ಟಿಯಾಗಿದೆ, ಈಗ ಇನ್ನಷ್ಟು ದೊಡ್ಡ ಹಂತದಲ್ಲಿ ನಿರುದ್ಯೋಗ ಸೃಷ್ಟಿಯಾಗುವ ವಾತಾವರಣವನ್ನು ಸಂಘಪರಿವಾರ ಸೃಷ್ಟಿಮಾಡುತ್ತಿದೆ. ಹೀಗಾಗಿ ‘ಅನ್ನ’ ಬೆಳೆಯುವವರು ಹಾಗೂ ‘ಅನ್ನ’ ಹಂಚುವವರು ಸಾಧ್ಯವಾದಷ್ಟು ಒಂದಾಗಬೇಕು ಎಂಬ ಆಶಯದೊಂದಿಗೆ ವೇದಿಕೆಯ ಮೂಲಕ ಕೆಲಸ ಮಾಡಲಿದ್ದೇವೆ” ಎಂದು ನಟರಾಜ್ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಫ್ಯಾಕ್ಟ್‌ಚೆಕ್‌: ಹಲಾಲ್‌‌ ಮಾಂಸ ವಿಷಕಾರಿಯೆ? ಬಜರಂಗದಳದ ಈ ಪೋಸ್ಟರ್‌‌‌ನಲ್ಲಿರುವ ಸುಳ್ಳುಗಳೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...

Karnataka SIR : ಇಂದು ಕರಡು ಪಟ್ಟಿ ಪ್ರಕಟ; 43.80 ಲಕ್ಷ ಮತದಾರರಿಗೆ ದಾಖಲೆ ಕೇಳಿ ನೋಟಿಸ್

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್‌) ಮನೆ ಮನೆ ಗಣತಿಯ (ಎನ್ಯುಮರೇಷನ್ ಫಾರಂ ಹಂತ) ಬಳಿಕ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು (ಆ.24, ಸೋಮವಾರ) ಪ್ರಕಟಿಸಲಿದೆ....

ಅಮೆರಿಕದೊಂದಿಗಿನ ಯುದ್ಧಕ್ಕೆ ಇರಾನ್ 40 ವರ್ಷಗಳಿಂದ ಸಿದ್ಧವಾಗಿತ್ತು: ನಿವೃತ್ತ ಲೆಫ್ಟಿನೆಂಟ್ ಜನರಲ್ ಧಿಲ್ಲೋನ್

"ತನ್ನ ಅತ್ಯುನ್ನತ ನಾಯಕತ್ವವನ್ನು ಕಳೆದುಕೊಳ್ಳುವಂತಹ ತುರ್ತು ಪರಿಸ್ಥಿತಿಗಳು ಸೇರಿದಂತೆ, ಅಮೆರಿಕದೊಂದಿಗಿನ ಸಂಭಾವ್ಯ ಯುದ್ಧಕ್ಕಾಗಿ ಇರಾನ್ ನಾಲ್ಕು ದಶಕಗಳಿಂದ ಸಿದ್ಧತೆ ನಡೆಸಿದೆ. ಹೀಗಾಗಿ ಎದುರಾಳಿಗಳಿಗೆ ಆ ದೇಶವನ್ನು ಸಂಪೂರ್ಣವಾಗಿ ನಾಶಪಡಿಸುವುದು ಕಷ್ಟಕರವಾಗಿದೆ" ಎಂದು ಭಾರತೀಯ...

ಸಚಿವ ಬಿ. ನಾಗೇಂದ್ರ ವಜಾಗೆ ಆಗ್ರಹಿಸಿ ಆಗಸ್ಟ್ 24ರಂದು ವಿಧಾನಸೌಧ ಮುತ್ತಿಗೆಗೆ ಕರೆ ನೀಡಿದ ಬಿಜೆಪಿ: ಉಲ್ಬಣಗೊಂಡ ರಾಜಕೀಯ ಸಂಘರ್ಷ

ಕರ್ನಾಟಕದ ರಾಜಕೀಯ ವಲಯದಲ್ಲಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣಕಾಸು ಅಕ್ರಮ ಪ್ರಕರಣವು ಭಾರಿ ಸಂಚಲನ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವಿನ ಸಮರ...

ಕೇರಳ ವಿಶ್ವವಿದ್ಯಾಲಯದಲ್ಲಿ ಜಾತಿ ತಾರತಮ್ಯ; ದಲಿತ ಪಿಎಚ್‌ಡಿ ಸಂಶೋಧಕಿಯಿಂದ ಆರೋಪ

ತುಂಚತ್ ಎಝುತ್ತಚ್ಚನ್ ಮಲಯಾಳಂ ವಿಶ್ವವಿದ್ಯಾಲಯದ (ಟಿಇಎಂಯು) ದಲಿತ ಸಂಶೋಧಕಿಯೊಬ್ಬರು, "ಸಹಾಯಕ ಪ್ರಾಧ್ಯಾಪಕರೊಬ್ಬರು ತಮ್ಮ ವಿರುದ್ಧ ಜಾತಿ ಆಧಾರಿತ ತಾರತಮ್ಯ, ಕಿರುಕುಳ ಮತ್ತು ಪಿಎಚ್‌ಡಿ ಸಂಶೋಧನೆಗೆ ಅಡ್ಡಿಪಡಿಸುತ್ತಿದ್ದಾರೆ" ಎಂದು ಆರೋಪಿಸಿದ್ದಾರೆ. ಆಗಸ್ಟ್ 15 ರಿಂದ ತಿರೂರಿನ...

ಉತ್ತರ ಪ್ರದೇಶ| ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ; ತನ್ನದೇ ಅಂಗಡಿಯ ಸಿಹಿತಿಂಡಿ ತಿನ್ನಲು ನಿರಾಕರಿಸಿದ ಮಾಲೀಕ

ಆಹಾರ ಸುರಕ್ಷತಾ ದಾಳಿಯ ವೇಳೆ ಸಿಹಿ ತಿಂಡಿ ಅಂಗಡಿಯ ಮಾಲೀಕನೊಬ್ಬ ತನ್ನದೇ ಅಂಗಡಿಯಲ್ಲಿ ಮಾರಾಟಕ್ಕಿಟ್ಟಿದ್ದ ಸಿಹಿತಿಂಡಿಯನ್ನು ತಿನ್ನಲು ನಿರಾಕರಿಸಿ ಸುದ್ದಿಯಾಗಿರುವ ಘಟನೆ ಉತ್ತರ ಪ್ರದೇಶದ ಹಮೀರ್‌ಪುರದಲ್ಲಿ ನಡೆದಿದೆ. ಕಲಬೆರಕೆ ಹಾಗೂ ನಕಲಿ ಸಿಹಿತಿಂಡಿಗಳನ್ನು ಮಾರಾಟ...

ದೇಶದ ಅಭಿವೃದ್ಧಿಗೆ ಕೌಶಲ್ಯದ ಕೊರತೆ ಸವಾಲು: 8.7 ಕೋಟಿ ಯುವಜನರು ಶಿಕ್ಷಣ, ಉದ್ಯೋಗದಿಂದ ವಂಚಿತರಾಗಿದ್ದಾರೆ ಎಂದ ನೀತಿ ಆಯೋಗ

ಭಾರತದ ಆರ್ಥಿಕ ಪ್ರಗತಿ ಹಾಗೂ ಭವಿಷ್ಯದ ಅಭಿವೃದ್ಧಿಯ ಹಾದಿಯಲ್ಲಿ ದೇಶದ ಯುವಶಕ್ತಿಯನ್ನು ಬಳಸಿಕೊಳ್ಳುವುದು ಅತ್ಯಂತ ನಿರ್ಣಾಯಕವಾಗಿದೆ. ಆದರೆ ಪ್ರಸ್ತುತ ದೇಶದಲ್ಲಿ ಕೋಟ್ಯಂತರ ಯುವಜನರು ಯಾವುದೇ ರೀತಿಯ ಶಿಕ್ಷಣ, ಉದ್ಯೋಗ ಅಥವಾ ಕೌಶಲ್ಯ ತರಬೇತಿಯಲ್ಲಿ...

ಮೀಸಲಾತಿ ಭಿಕ್ಷೆಯಲ್ಲ, ಸಾಂವಿಧಾನಿಕ ಹಕ್ಕು: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್

"ಯಾರದ್ದೋ ಬೇಡಿಕೆಗೆ ಮೀಸಲಾತಿಯನ್ನು ರದ್ದುಗೊಳಿಸಲು ಸಾಧ್ಯವಿಲ್ಲ. ಇದು ತಲೆಮಾರುಗಳಿಂದ ಸಾಮಾಜಿಕ ತಾರತಮ್ಯವನ್ನು ಎದುರಿಸಿದ ಸಮುದಾಯಗಳನ್ನು ಬೆಂಬಲಿಸಲು ಇರುವ ಸಾಂವಿಧಾನಿಕ ಹಕ್ಕು" ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಶುಕ್ರವಾರ ಹೇಳಿದ್ದಾರೆ. ದೆಹಲಿಗೆ ತೆರಳುವ...

ಸರ್ಕಾರಿ ಶಾಲೆಗೆ ಅತಿಕ್ರಮಣ ಮತ್ತು ಶಿಕ್ಷಕರಿಗೆ ಬೆದರಿಕೆ ಆರೋಪ: ಲಾತೂರ್‌ನಲ್ಲಿ ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ವಿರುದ್ಧ ಎಫ್‌ಐಆರ್ ದಾಖಲು

ಅನುಮತಿಯಿಲ್ಲದೆ ಸರ್ಕಾರಿ ಶಾಲೆಯ ತರಗತಿ ಕೊಠಡಿಗೆ ಪ್ರವೇಶಿಸಿ, ಶೈಕ್ಷಣಿಕ ಕಾರ್ಯಗಳಿಗೆ ಅಡ್ಡಿಪಡಿಸಿದ ಹಾಗೂ ಕರ್ತವ್ಯದಲ್ಲಿದ್ದ ಶಿಕ್ಷಕರಿಗೆ ಬೆದರಿಕೆಯೊಡ್ಡಿದ ಆರೋಪದ ಮೇಲೆ ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದೀಪ್ಕೆ ಮತ್ತು ಅವರ...