Homeಮುಖಪುಟಕ್ಯಾಚ್ ಬಿಟ್ಟಿದ್ದಕ್ಕೆ ಅರ್ಶದೀಪ್‌ ವಿರುದ್ಧ ಟ್ರೋಲ್: ಬೆಂಬಲಕ್ಕೆ ನಿಂತ ಹಿರಿಯ ಆಟಗಾರರು

ಕ್ಯಾಚ್ ಬಿಟ್ಟಿದ್ದಕ್ಕೆ ಅರ್ಶದೀಪ್‌ ವಿರುದ್ಧ ಟ್ರೋಲ್: ಬೆಂಬಲಕ್ಕೆ ನಿಂತ ಹಿರಿಯ ಆಟಗಾರರು

- Advertisement -
- Advertisement -

ಭಾನುವಾರ ರಾತ್ರಿ ನಡೆದ ಏಷ್ಯಾಕಪ್ ಕ್ರಿಕೆಟ್‌ನ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನದ ಎದುರು 5 ವಿಕೆಟ್‌ಗಳ ಸೋಲು ಅನುಭವಿಸಿತು. ಆ ಪಂದ್ಯದ 18ನೇ ಓವರ್‌ನಲ್ಲಿ ರವಿ ಬಿಷ್ಣೋಯ್ ಬೌಲಿಂಗ್‌ನಲ್ಲಿ ಪಾಕ್ ಆಟಗಾರ ಆಸಿಫ್ ಅಲಿ ನೀಡಿದ ಕ್ಯಾಚ್ ಅನ್ನು ಅರ್ಶದೀಪ್ ಸಿಂಗ್ ಕೈ ಚೆಲ್ಲಿದರು. ಆನಂತರ ಕೊನೆಯ ಓವರ್‌ನಲ್ಲಿ 7 ರನ್‌ ಅನ್ನು ಡಿಫೆಂಡ್ ಮಾಡಿಕೊಳ್ಳಲಾಗದ ಕಾರಣ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟ್ರೋಲ್ ವ್ಯಕ್ತವಾಗಿದೆ. ಆದರೆ ಅದನ್ನು ಖಂಡಿಸಿರುವ ಭಾರತ ತಂಡದ ಹಿರಿಯ ಆಟಗಾರರಾದ ಹರ್ಭಜನ್ ಸಿಂಗ್ ಮತ್ತು ಇರ್ಫಾನ್ ಪಠಾಣ್ ಅರ್ಶದೀಪ್ ಪರ ದನಿಯೆತ್ತಿದ್ದಾರೆ.

“ಯುವ ಆಟಗಾರರನ್ನು ಟೀಕಿಸುವುದನ್ನು ನಿಲ್ಲಿಸಿ. ಯಾರೂ ಕೂಡ ಬೇಕಂತ ಕ್ಯಾಚ್ ಕೈಚೆಲ್ಲುವುದಿಲ್ಲ. ಭಾರತದ ಯುವ ತಂಡದ ಬಗ್ಗೆ ನಾವು ಅಭಿಮಾನ ವ್ಯಕ್ತಪಡಿಸಬೇಕು. ಪಾಕಿಸ್ತಾನ ನಮಗಿಂತ ಚೆನ್ನಾಗಿ ಆಡಿತು. ಆದರೆ ಭಾರತ ತಂಡ ಮತ್ತು ಅರ್ಶದೀಪ್ ವಿರುದ್ಧ ಕೊಳಕಾಗಿ ಕಮೆಂಟ್ ಮಾಡುವವರ ಬಗ್ಗೆ ನಾಚಿಕೆಯೆನಿಸುತ್ತದೆ. ಅರ್ಶ್ ಎಂದರೆ ಚಿನ್ನ” ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಹರ್ಶದೀಪ್ ಗಟ್ಟಿ ವ್ಯಕ್ತಿತ್ವವುಳ್ಳವರು. ಹಾಗೆಯೇ ಇರಿ ಎಂದು ಇರ್ಫಾನ್ ಪಠಾಣ್ ಟ್ವೀಟ್ ಮಾಡುವ ಮೂಲಕ ಬೆಂಬಲ ನೀಡಿದ್ದಾರೆ.

ಪಾಕಿಸ್ತಾನದ ಮಾಜಿ ನಾಯಕ ಮೊಹಮ್ಮದ್ ಹಫೀಜ್ ಕೂಡ ಹರ್ಶದೀಪ್ ಬೆಂಬಲಕ್ಕೆ ನಿಂತಿದ್ದಾರೆ. “ನಾವೆಲ್ಲರೂ ಮನುಷ್ಯರು. ಹಾಗಾಗಿ ಕ್ರೀಡೆಯಲ್ಲಿ ನಾವೆಲ್ಲರೂ ತಪ್ಪು ಮಾಡಬಹುದು. ಆ ತಪ್ಪುಗಳಿಗಾಗಿ ದಯವಿಟ್ಟು ಯಾರನ್ನೂ ಅವಮಾನಿಸಬೇಡಿ” ಎಂದು ಬರೆದು ಹರ್ಶದೀಪ್‌ರವರನ್ನು ಟ್ಯಾಗ್ ಮಾಡಿದ್ದಾರೆ.

ಪಂದ್ಯ ಮುಗಿದ ನಂತರ ವಿರಾಟ್ ಕೊಹ್ಲಿ ಸಹ ಅರ್ಶದೀಪ್ ಬೆಂಬಲಿಸಿ ಮಾತನಾಡಿದ್ದಾರೆ. “ಎಲ್ಲರೂ ತಪ್ಪು ಮಾಡುತ್ತಾರೆ. ತುಂಬಾ ಒತ್ತಡ ಸನ್ನಿವೇ‍ಷವಿದ್ದಾಗ ತಪ್ಪುಗಳಾಗುವುದು ಸಹಜ. ನನಗಿನ್ನೂ ನೆನಪಿದೆ, ನನ್ನ ಮೊದಲ ಪಂದ್ಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನದ ಎದುರಾಗಿತ್ತು. ಆದರೆ ಎಂದು ಶಾಹಿದ್ ಅಫ್ರಿದಿ ಎದುರು ನಾನು ಕೆಟ್ಟ ಹೊಡೆತ ಹೊಡೆದು ಔಟ್ ಆದೆ. ಅಂದು ರಾತ್ರಿ ನಾನು ನಿದ್ರೆ ಮಾಡಲಿಲ್ಲ ಮತ್ತು ನನ್ನ ಕ್ರಿಕೆಟ್ ಜೀವನ ಮುಗಿಯಿತು ಎಂದುಕೊಂಡೆ. ಆದರೆ ಹಾಗಾಗಲಿಲ್ಲ. ಭಾರತ ತಂಡದಲ್ಲಿ ಹಿರಿಯ ಆಟಗಾರರಿದ್ದಾರೆ. ಒಳ್ಳೆಯ ತಂಡಸ್ಪೂರ್ತಿಯಿದೆ. ಉತ್ತಮ ನಾಯಕ ಮತ್ತು ಕೋಚ್ ಇದ್ದಾರೆ. ಆಟಗಾರರು ತಮ್ಮ ತಪ್ಪುಗಳಿಂದ ಪಾಠ ಕಲಿಯುತ್ತಾರೆ. ತಪ್ಪನ್ನು ಒಪ್ಪಿಕೊಂಡು ಯಾಕಾಯಿತು ಎಂದು ವಿಶ್ಲೇಷಿಸಿ ಮತ್ತೆ ಅಂಥದ್ದೆ ಒತ್ತಡದ ಸಂದರ್ಭಗಳನ್ನು ನಿಭಾಯಿಸುತ್ತಾರೆ’ ಎಂದಿದ್ದಾರೆ.

ಪಂದ್ಯದಲ್ಲಿ ಭಾರತ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದರೆ ಪಾಕ್ ತಂಡ ಒಂದು ಎಸೆತ ಬಾಕಿ ಇರುವಂತೆಯೇ ಐದು ವಿಕೆಟ್ ಕಳೆದುಕೊಂಡು 182 ರನ್ ಗಳಿಸಿ ಜಯ ಸಾಧಿಸಿತು.

ಇದನ್ನೂ ಓದಿ: ಏಷ್ಯಾ ಕಪ್ ಪಂದ್ಯದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಜಯ್‌ ಶಾ ನಕಾರ: ವಿಪಕ್ಷಗಳ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...