Homeಮುಖಪುಟಕ್ಯಾಚ್ ಬಿಟ್ಟಿದ್ದಕ್ಕೆ ಅರ್ಶದೀಪ್‌ ವಿರುದ್ಧ ಟ್ರೋಲ್: ಬೆಂಬಲಕ್ಕೆ ನಿಂತ ಹಿರಿಯ ಆಟಗಾರರು

ಕ್ಯಾಚ್ ಬಿಟ್ಟಿದ್ದಕ್ಕೆ ಅರ್ಶದೀಪ್‌ ವಿರುದ್ಧ ಟ್ರೋಲ್: ಬೆಂಬಲಕ್ಕೆ ನಿಂತ ಹಿರಿಯ ಆಟಗಾರರು

- Advertisement -
- Advertisement -

ಭಾನುವಾರ ರಾತ್ರಿ ನಡೆದ ಏಷ್ಯಾಕಪ್ ಕ್ರಿಕೆಟ್‌ನ ಸೂಪರ್ 4 ಹಂತದ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನದ ಎದುರು 5 ವಿಕೆಟ್‌ಗಳ ಸೋಲು ಅನುಭವಿಸಿತು. ಆ ಪಂದ್ಯದ 18ನೇ ಓವರ್‌ನಲ್ಲಿ ರವಿ ಬಿಷ್ಣೋಯ್ ಬೌಲಿಂಗ್‌ನಲ್ಲಿ ಪಾಕ್ ಆಟಗಾರ ಆಸಿಫ್ ಅಲಿ ನೀಡಿದ ಕ್ಯಾಚ್ ಅನ್ನು ಅರ್ಶದೀಪ್ ಸಿಂಗ್ ಕೈ ಚೆಲ್ಲಿದರು. ಆನಂತರ ಕೊನೆಯ ಓವರ್‌ನಲ್ಲಿ 7 ರನ್‌ ಅನ್ನು ಡಿಫೆಂಡ್ ಮಾಡಿಕೊಳ್ಳಲಾಗದ ಕಾರಣ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಟ್ರೋಲ್ ವ್ಯಕ್ತವಾಗಿದೆ. ಆದರೆ ಅದನ್ನು ಖಂಡಿಸಿರುವ ಭಾರತ ತಂಡದ ಹಿರಿಯ ಆಟಗಾರರಾದ ಹರ್ಭಜನ್ ಸಿಂಗ್ ಮತ್ತು ಇರ್ಫಾನ್ ಪಠಾಣ್ ಅರ್ಶದೀಪ್ ಪರ ದನಿಯೆತ್ತಿದ್ದಾರೆ.

“ಯುವ ಆಟಗಾರರನ್ನು ಟೀಕಿಸುವುದನ್ನು ನಿಲ್ಲಿಸಿ. ಯಾರೂ ಕೂಡ ಬೇಕಂತ ಕ್ಯಾಚ್ ಕೈಚೆಲ್ಲುವುದಿಲ್ಲ. ಭಾರತದ ಯುವ ತಂಡದ ಬಗ್ಗೆ ನಾವು ಅಭಿಮಾನ ವ್ಯಕ್ತಪಡಿಸಬೇಕು. ಪಾಕಿಸ್ತಾನ ನಮಗಿಂತ ಚೆನ್ನಾಗಿ ಆಡಿತು. ಆದರೆ ಭಾರತ ತಂಡ ಮತ್ತು ಅರ್ಶದೀಪ್ ವಿರುದ್ಧ ಕೊಳಕಾಗಿ ಕಮೆಂಟ್ ಮಾಡುವವರ ಬಗ್ಗೆ ನಾಚಿಕೆಯೆನಿಸುತ್ತದೆ. ಅರ್ಶ್ ಎಂದರೆ ಚಿನ್ನ” ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.

ಹರ್ಶದೀಪ್ ಗಟ್ಟಿ ವ್ಯಕ್ತಿತ್ವವುಳ್ಳವರು. ಹಾಗೆಯೇ ಇರಿ ಎಂದು ಇರ್ಫಾನ್ ಪಠಾಣ್ ಟ್ವೀಟ್ ಮಾಡುವ ಮೂಲಕ ಬೆಂಬಲ ನೀಡಿದ್ದಾರೆ.

ಪಾಕಿಸ್ತಾನದ ಮಾಜಿ ನಾಯಕ ಮೊಹಮ್ಮದ್ ಹಫೀಜ್ ಕೂಡ ಹರ್ಶದೀಪ್ ಬೆಂಬಲಕ್ಕೆ ನಿಂತಿದ್ದಾರೆ. “ನಾವೆಲ್ಲರೂ ಮನುಷ್ಯರು. ಹಾಗಾಗಿ ಕ್ರೀಡೆಯಲ್ಲಿ ನಾವೆಲ್ಲರೂ ತಪ್ಪು ಮಾಡಬಹುದು. ಆ ತಪ್ಪುಗಳಿಗಾಗಿ ದಯವಿಟ್ಟು ಯಾರನ್ನೂ ಅವಮಾನಿಸಬೇಡಿ” ಎಂದು ಬರೆದು ಹರ್ಶದೀಪ್‌ರವರನ್ನು ಟ್ಯಾಗ್ ಮಾಡಿದ್ದಾರೆ.

ಪಂದ್ಯ ಮುಗಿದ ನಂತರ ವಿರಾಟ್ ಕೊಹ್ಲಿ ಸಹ ಅರ್ಶದೀಪ್ ಬೆಂಬಲಿಸಿ ಮಾತನಾಡಿದ್ದಾರೆ. “ಎಲ್ಲರೂ ತಪ್ಪು ಮಾಡುತ್ತಾರೆ. ತುಂಬಾ ಒತ್ತಡ ಸನ್ನಿವೇ‍ಷವಿದ್ದಾಗ ತಪ್ಪುಗಳಾಗುವುದು ಸಹಜ. ನನಗಿನ್ನೂ ನೆನಪಿದೆ, ನನ್ನ ಮೊದಲ ಪಂದ್ಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಕಿಸ್ತಾನದ ಎದುರಾಗಿತ್ತು. ಆದರೆ ಎಂದು ಶಾಹಿದ್ ಅಫ್ರಿದಿ ಎದುರು ನಾನು ಕೆಟ್ಟ ಹೊಡೆತ ಹೊಡೆದು ಔಟ್ ಆದೆ. ಅಂದು ರಾತ್ರಿ ನಾನು ನಿದ್ರೆ ಮಾಡಲಿಲ್ಲ ಮತ್ತು ನನ್ನ ಕ್ರಿಕೆಟ್ ಜೀವನ ಮುಗಿಯಿತು ಎಂದುಕೊಂಡೆ. ಆದರೆ ಹಾಗಾಗಲಿಲ್ಲ. ಭಾರತ ತಂಡದಲ್ಲಿ ಹಿರಿಯ ಆಟಗಾರರಿದ್ದಾರೆ. ಒಳ್ಳೆಯ ತಂಡಸ್ಪೂರ್ತಿಯಿದೆ. ಉತ್ತಮ ನಾಯಕ ಮತ್ತು ಕೋಚ್ ಇದ್ದಾರೆ. ಆಟಗಾರರು ತಮ್ಮ ತಪ್ಪುಗಳಿಂದ ಪಾಠ ಕಲಿಯುತ್ತಾರೆ. ತಪ್ಪನ್ನು ಒಪ್ಪಿಕೊಂಡು ಯಾಕಾಯಿತು ಎಂದು ವಿಶ್ಲೇಷಿಸಿ ಮತ್ತೆ ಅಂಥದ್ದೆ ಒತ್ತಡದ ಸಂದರ್ಭಗಳನ್ನು ನಿಭಾಯಿಸುತ್ತಾರೆ’ ಎಂದಿದ್ದಾರೆ.

ಪಂದ್ಯದಲ್ಲಿ ಭಾರತ 7 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿದರೆ ಪಾಕ್ ತಂಡ ಒಂದು ಎಸೆತ ಬಾಕಿ ಇರುವಂತೆಯೇ ಐದು ವಿಕೆಟ್ ಕಳೆದುಕೊಂಡು 182 ರನ್ ಗಳಿಸಿ ಜಯ ಸಾಧಿಸಿತು.

ಇದನ್ನೂ ಓದಿ: ಏಷ್ಯಾ ಕಪ್ ಪಂದ್ಯದ ನಂತರ ಭಾರತದ ತ್ರಿವರ್ಣ ಧ್ವಜ ಹಿಡಿಯಲು ಜಯ್‌ ಶಾ ನಕಾರ: ವಿಪಕ್ಷಗಳ ತರಾಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...