Homeಮುಖಪುಟಆರ್ಟಿಕಲ್ 15: ಭಾರತದ ಜಾತಿವ್ಯವಸ್ಥೆಯ ಕರಾಳ ಮುಖಗಳ ಸಮರ್ಥ ಅನಾವರಣ...

ಆರ್ಟಿಕಲ್ 15: ಭಾರತದ ಜಾತಿವ್ಯವಸ್ಥೆಯ ಕರಾಳ ಮುಖಗಳ ಸಮರ್ಥ ಅನಾವರಣ…

- Advertisement -
- Advertisement -

| ಕುಮಾರ್ ರೈತ |

ಅವರು ಹೊಲಸನ್ನು ಬಾಚಲೆಂದೇ ಬಂದವರು, ಅವರು ಊರಿನಿಂದಾಚೆಯೇ ಇರಬೇಕಾದವರು, ಅವರು ಮುಟ್ಟಿಸಿಕೊಳ್ಳಬಾರದವರು, ಅವರ ನೆರಳೂ ಸೋಕಬಾರದು, ಅವರು ತುಳಿಸಿಕೊಳ್ಳಲೆಂದೆ ಹುಟ್ಟಿದವರು, ದೌರ್ಜನ್ಯಕ್ಕೆ ಒಳಗಾದರೆ, ಅತ್ಯಾಚಾರಕ್ಕೀಡಾದರೆ, ಅದನ್ನು ಮಾಡಿದವರು ಮೇಲ್ಜಾತಿಯವರಾದರೆ ಪ್ರಶ್ನೆಯನ್ನೇ ಮಾಡಬಾರದು. ಏಕೆಂದರೆ ಇದರಿಂದ ಸಾಮಾಜಿಕ ಸೌಹಾರ್ದ ಹಾಳಾಗುತ್ತದೆ, ಸಮಾಜದ ನೆಮ್ಮದಿ ಭಂಗವಾಗುತ್ತದೆ.

ಇಲ್ಲಿ ಅವರು ಎಂದರೆ ದಲಿತರು. ಇವರ ನೋವು, ಮೇಲ್ಜಾತಿಗಳ ಮನೋಭಾವ, ರಾಜಕೀಯ ಸಮೀಕರಣಗಳ ಪರಿಣಾಮ ಇವೆಲ್ಲವನ್ನೂ “ಸಾಕ್ಷಿಪ್ರಜ್ಞೆ”ಯಿಂದ ಕಟ್ಟಿಕೊಡುವ ಕಾರ್ಯವನ್ನು “ಆರ್ಟಿಕಲ್ 15” ಚಿತ್ರ ಸಮರ್ಥವಾಗಿ ಮಾಡಿದೆ. ಮೂಲತಃ ಇದು 2014ರಲ್ಲಿ ಉತ್ತರ ಪ್ರದೇಶದ ಬದೌನ್ ನಲ್ಲಿ ನಡೆದ ಗ್ಯಾಂಗ್ ರೇಪ್ ದುರ್ಘಟನೆಯಿಂದ ಪ್ರೇರಿತಗೊಂಡು ರಚಿತವಾದ ಚಿತ್ರಕಥೆ ಆಧರಿಸಿದೆ.

ಭಾರತದ ಜಾತಿವ್ಯವಸ್ಥೆ ಬಹುಸಂಕೀರ್ಣ, ಜಟಿಲ. ಇದು ಇಲ್ಲಿನ ಆಡಳಿತ, ಕಾರ್ಯಾಂಗ, ರಾಜಕೀಯ ಎಲ್ಲದರ ಮೇಲೆಯೂ ದುಷ್ಪರಿಣಾಮ ಬೀರಿದೆ. ಇದು ಹೇಗೆ ನಡೆದುಕೊಂಡು ಬಂದಿದೆಯೊ ಹಾಗೆಯೇ ಮುಂದುವರಿಯಲು ಬಿಡಬೇಕು. ಬದಲಾವಣೆ ತರಲು ಹೋದವರನ್ನೇ ಆಪೋಶನ ತೆಗೆದುಕೊಳ್ಳುವ ವ್ಯವಸ್ಥೆ ಇಲ್ಲಿದೆ. ಇದರೊಳಗೆ ಹೊಕ್ಕ ಯುವ ಐಪಿಎಸ್ ಅಧಿಕಾರಿ ಅನುಭವಿಸುವ ತಲ್ಲಣಗಳ ಮೂಲಕ ಈ ವ್ಯವಸ್ಥೆ ಎಷ್ಟು ಕೊಳೆತು ನಾರುತ್ತಿದೆ ಎಂಬುದನ್ನು ಮುಖಕ್ಕೆ ರಾಚುವಂತೆ ಈ ಸಿನಿಮಾ ಕಟ್ಟಿಕೊಟ್ಟಿದೆ.

ಕೆಲವೊಂದು ಸನ್ನಿವೇಶಗಳ ಮೂಲಕ ಪೊಲೀಸ್ ವ್ಯವಸ್ಥೆಯಲ್ಲಿಯೂ ಮಡುಗಟ್ಟಿರುವ ಜಾತೀಯ ಭಾವನೆಯನ್ನು ಚಿತ್ರ ಅನಾವರಣಗೊಳಿಸುತ್ತದೆ. ಉತ್ತರಪ್ರದೇಶದ ಲಾಲ್ಗೌವ್ ಪ್ರದೇಶದ ಹೆಚ್ಚುವರಿ ಪೊಲೀಸ್ ಅಧೀಕ್ಷಕನಾಗಿ ಅಧಿಕಾರ ವಹಿಸಿಕೊಳ್ಳಲು ದೆಹಲಿಯಿಂದ ಬಂದ ಅಯಾನ್,(ಆಯುಷ್ಮಾನ್ ಖುರಾನ)  ಗ್ರಾಮವೊಂದರ ಬಳಿ ಜೀಪ್ ನಿಲ್ಲಿಸಿ ವಾಟರ್ ಬಾಟಲ್ ತರಲು ಹೇಳುತ್ತಾನೆ. ಅದಕ್ಕೆ ಜೊತೆಯಲ್ಲಿದ್ದ ಪೊಲೀಸ್ ಚಾಲಕ ಹೇಳುವುದು “ಇದು ಪಾಸಿಗಳ (ಉತ್ತರ ಪ್ರದೇಶದ ಸಾಮಾಜಿಕ ಶ್ರೇಣಿಯಲ್ಲಿ ಅತ್ಯಂತ ಕೆಳಸ್ತರದ ಜಾತಿ ಎಂದು ಪರಿಗಣಿಸಲ್ಪಟ್ಟವರು) ಗ್ರಾಮ, ಅವರಿಂದ ನೀರು ತೆಗೆದುಕೊಳ್ಳುವುದಿರಲಿ, ಅವರ ನೆರಳೂ ಸೋಕಬಾರದು ಎಂಬ ರಿವಾಜಿದೆ” ಎನ್ನುತ್ತಾನೆ. ಇದು ಅಯಾನ್ ಗೆ ತೀವ್ರ ಶಾಕ್ ಉಂಟು ಮಾಡುತ್ತದೆ.

ಮತ್ತೊಂದು ಸನ್ನಿವೇಶ: ತನ್ನ ಸಹೋದ್ಯೋಗಿಗಳಲ್ಲಿಯೇ ಮಡುಗಟ್ಟಿರುವ ಜಾತೀಯತೆಯಿಂದ ರೋಸಿ ಹೋದ ಅಯಾನ್ ಕೇಳುತ್ತಾನೆ “ನೀವೆಲ್ಲರೂ ಯಾವಯಾವ ಜಾತಿ” ಅದಕ್ಕೆ ಒಬ್ಬೊಬ್ಬರೂ ಒಂದೊಂದು ಉತ್ತರ ಹೇಳುತ್ತಾರೆ. “ಕಾಯಸ್ಥ, ಠಾಕೂರ್, ಜಾಟ್, ರಜಪೂತ್, ಚಮ್ಮಾರ್”. “ಪಾಸಿ ಮತ್ತು ಚಮ್ಮಾರ್ ಒಂದೆಯೇ ಎಂದು ಅಯಾನ್ ಮರುಪ್ರಶ್ನೆ ಹಾಕುತ್ತಾನೆ. “ಇಲ್ಲಿಇಲ್ಲ, ನಾವು (ಚಮ್ಮಾರ್) ಪಾಸಿಗಳಿಗಿಂತ ಮೇಲುಸ್ತರದವರು. ಅವರ ಮನೆಯಲ್ಲಿ ನಾವು ಆಹಾರ ಕೂಡ ಸೇವಿಸುವುದಿಲ್ಲ” ಎಂಬ ಉತ್ತರವನ್ನು ಸಬ್ ಇನ್ಸ್ಪೆಕ್ಟರ್ ನೀಡುತ್ತಾನೆ.

“ಸರಿ ನಾನ್ಯಾರು” ಎಂಬ ಮರುಪ್ರಶ್ನೆ ಅಯಾನ್ ಕೇಳಿದಾಗ “ನೀವು ಬ್ರಾಹ್ಮಣರಲ್ಲಿಯೇ ಅತ್ಯಂತ ಶ್ರೇಷ್ಠ ಬ್ರಾಹ್ಮಣರು” ಎಂಬ ಮರು ಉತ್ತರ ಬರುತ್ತದೆ. ಇಷ್ಟೆಲ್ಲ ಜಾತೀಯ ಸಿಕ್ಕುಗಳು, ಕಗ್ಗಂಟುಗಳು ತನಿಖೆಯ ಮೇಲೂ ದುಷ್ಪರಿಣಾಮ ಬೀರುತ್ತದೆ. ತನ್ನ ಸಹೋದ್ಯೋಗಿಗಳ ಮನೋಭಾವ ಅರಿಯಲು ಅಯಾನ್ ಕೇಳಿದ ಪ್ರಶ್ನೆಯೇ ಆತನಿಗೆ ಮುಳುವಾಗುತ್ತದೆ. ಆತನ ಮೇಲೆಯೇ ಸಾಮಾಜಿಕ ಸೌಹಾರ್ದಕ್ಕೆ ಭಂಗ ತಂದ ಆರೋಪ ಹೊರಿಸಲಾಗುತ್ತದೆ. ಆತ ಪೂರ್ವಾಗ್ರಹ ಪೀಡಿತನಾಗಿ ತನಿಖೆ ಮಾಡುತ್ತಿದ್ದಾನೆ ಎಂದು ಆರೋಪಿಸಿ ಸಸ್ಪೆಂಡ್ ಮಾಡಲಾಗುತ್ತದೆ.

ಇಬ್ಬರು ಪಾಸಿ ಸಮುದಾಯದ ಬಾಲಕಿಯರು ನೇಣು ಬಿಗಿದುಕೊಂಡಿದ್ದಾರೆ. ಇದನ್ನು ಮರ್ಯಾದಾಹತ್ಯೆ ಎಂದು ವರದಿಕೊಟ್ಟು ಪ್ರಕರಣ ಮುಚ್ಚಿಹಾಕುವಂತೆ ಒತ್ತಡ. ಗ್ಯಾಂಗ್ ರೇಪ್ ನಡೆದಿದೆ ಎಂದು ಮರಣೋತ್ತರ ಪರೀಕ್ಷಾ ವರದಿ ಕೊಟ್ಟ ವೈದ್ಯೆಯ ಮೇಲೂ ಒತ್ತಡ. ಪ್ರಕರಣಕ್ಕೆ ತಿಪ್ಪೆ ಸಾರಿಸಲು ಯತ್ನಿಸುವ ದೆಹಲಿಯಿಂದ ಬಂದ ತನಿಖಾ ತಂಡದ ಮುಖ್ಯಸ್ಥ. ಇವಿಷ್ಟರ ನಡುವೆಯೂ ತನಿಖೆ ಮುಂದುವರೆಯುತ್ತದೆ. ತನಿಖಾಧಿಕಾರಿಯನ್ನೇ ದಿಗ್ಬ್ರಮೆಗೊಳಿಸುವ ಸತ್ಯಗಳು ಹೊರಬೀಳುತ್ತವೆ.

ಇವೆಲ್ಲದರ ನಡುವೆ ಇಲ್ಲಿ ರಾಜಕೀಯ ಕಾರಣಗಳಿಗಾಗಿ “ಹಿಂದೂಗಳೆಲ್ಲ ಒಂದೇ ಎನ್ನುವುದು”, ನ್ಯಾಯಕ್ಕಾಗಿ ಒತ್ತಾಯಿಸಿ ಪೌರಕಾರ್ಮಿಕರು ಮುಷ್ಕರ ಹೂಡುವುದು, ದಲಿತರ ಹಕ್ಕುಗಳಿಗಾಗಿ ಹೋರಾಟ ಮಾಡುವ ಯುವಕನ ಆಂದೋಲನ ಯಶಸ್ವಿಯಾಗದಂತೆ ತಡೆಯಲು ಯತ್ನಿಸುವುದು, ಪಟ್ಟಭದ್ರ ಹಿತಾಸಕ್ತಿಗಳು ಪೊಲೀಸ್ ವ್ಯವಸ್ಥೆಯನ್ನೇ ದಾಳವಾಗಿ ಬಳಸಿಕೊಂಡು ಆತನನ್ನು ಎನ್ ಕೌಂಟರ್ ಮಾಡಿಸುವುದು. ಅಬ್ಬಬ್ಬಾ ಎನ್ನಿಸುವಂಥ ವಿವರಗಳೆಲ್ಲವೂ ಕೂಡ ಈ ಚಿತ್ರದಲ್ಲಿ ಒಂದೊಂದೇ ಒಂದೊಂದೇ ಹೊರಬೀಳುತ್ತದೆ.

“ಪೊಲೀಸ್ ಸಂಕೀರ್ಣದ ಒಳಚರಂಡಿ ಕಟ್ಟಿಕೊಂಡಿದೆ. ಕೊಳಚೆನೀರು ಆವರಣ ಪ್ರವೇಶಿಸಿದೆ. ಪೌರಕಾರ್ಮಿಕರು ಮುಷ್ಕರ ಹೂಡಿರುವುದರಿಂದ ಅಲ್ಲಿ ದುರ್ವಾಸನೆ, ಕೊಳೆತ ನೀರು ಇನ್ನೂ ಮಲೆಯುತ್ತಿದೆ. ಅದರ ಮಧ್ಯದಲ್ಲಿಯೇ ಇಟ್ಟಿಗೆಗಳನ್ನು ಪೇರಿಸಿದ ಪೊಲೀಸರು ಸರ್ಕಸ್ ಮಾಡುತ್ತಾ ನಡೆದಾಡುತ್ತಿದ್ದಾರೆ” ಇದೊಂದು ಸಾಂಕೇತಿಕ ಸನ್ನಿವೇಶದ ಮೂಲಕವೇ ಪ್ರಸಕ್ತ ಭಾರತ ಹೇಗೆ ಸಾಗಿದೆ ಎಂಬುದನ್ನು ನಿರ್ದೇಶಕರು ಅತ್ಯಂತ ಪರಿಣಾಮಕಾರಿಯಾಗಿ ಹೇಳಿದ್ದಾರೆ.

ಪೊಲೀಸ್ ಅಧಿಕಾರಿ ಅಯಾನ್ ಮನವಿ ನಂತರ ಪೌರಕಾರ್ಮಿಕರು ಮುಷ್ಕರ ಕೈಬಿಟ್ಟಿದ್ದಾರೆ. ಪೊಲೀಸ್ ಸ್ಟೇಷನ್ ಆವರಣದ ಒಳಗೆ ಕಟ್ಟಿಕೊಂಡ ಒಳಚರಂಡಿ ಮ್ಯಾನ್ ಹೋಲ್ ಗೆ ಅದೇ ಪಾಸಿ ಸಮುದಾಯದ ವ್ಯಕ್ತಿ ಬರೀಮೈಯಲ್ಲಿ ಮುಳಗಿ ಎದ್ದು ಕಸ ಎತ್ತಿದ್ದಾನೆ. ಬಂದ್ ಆಗಿದ್ದ ಒಳಚರಂಡಿ ಸರಿಯಾಗುವಂತೆ ಮಾಡಿದ್ದಾನೆ. ಈ ದೃಶ್ಯ ನೋಡುಗರಿಗೆ ಶಾಕ್ ಉಂಟು ಮಾಡುತ್ತದೆ. ಇಲ್ಲಿಯ ತನಕ ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದ “ಪಾಸಿಗಳ ನೆರಳೂ ಸೋಂಕಬಾರದು” ಎಂಬ ಮನೋಭಾವದ ಪೊಲೀಸರು ಮೂಗು ಮುಚ್ಚಿಕೊಳ್ಳದೇ ಓಡಾಡತೊಡಗಿದ್ದಾರೆ. ಈ ಪರಿಯ ತೀವ್ರತೆಯಲ್ಲಿ ಸಂಕೀರ್ಣ ವಿವರವನ್ನು ದಟ್ಟವಾಗಿ ಕಟ್ಟಿಕೊಡಲಾಗಿದೆ.

ಹತ್ಯೆಗೀಡಾದ ಇಬ್ಬರು ಬಾಲಕಿಯರ ಜೊತೆಗಿದ್ದು ನಾಪತ್ತೆಯಾದ ಮತ್ತೊಬ್ಬ ಬಾಲಕಿಯ ಹುಡುಕಾಟ ನಡೆದಿದೆ. ಕೊಳೆತು ವಾಸನೆ ಬರುತ್ತರುವ ಕೆಸರಿನ ಬಹು ವಿಶಾಲ ಮಡುವಿನಲ್ಲಿ ಪೊಲೀಸರು ಹುಡುಕುತ್ತಾ ನಡೆದಿದ್ದಾರೆ. ಯಾರು ಯಾರಿಗೆ ಮತ ಹಾಕಿದಿರಿ ಎಂಬ ಪ್ರಶ್ನೆ ಅವರಲ್ಲೇ ಮೂಡುತ್ತದೆ. ಆನೆಗೆ, ಸೈಕಲಿಗೆ, ಹೂವಿಗೆ (ಕಮಲಕ್ಕೆ), ಆನೆ, ಕಮಲ ಜೊತೆಯಾದಾಗ ಯಾರಿಗೆ ಸೈಕಲಿಗೆ ಎಂಬ ಉತ್ತರಗಳು ಬರುತ್ತವೆ. ರಾಜಕೀಯ ಪಕ್ಷಗಳ ಸಮೀಕರಣದ ಸಂದರ್ಭದಲ್ಲಿ ಮತದಾರ ಹೇಗೆಲ್ಲ ವಿವೇಚಿಸಬಹುದು ಎಂಬ ಸಂಗತಿಗಳನ್ನು ಕೂಡ “ಆರ್ಟಿಕಲ್ 15” ಚರ್ಚಿಸುತ್ತದೆ.

ತನಿಖೆ ಏನಾಗುತ್ತದೆ, ಅಪರಾಧಿಗಳಿಗೆ ಶಿಕ್ಷೆ ಆಗುತ್ತದೆಯೇ, ಜಾತಿ ಸಂಕೀರ್ಣತೆ, ಚಕ್ರವ್ಯೂಹದೊಳಗೆ ಸಿಲುಕಿದ ಪೊಲೀಸ್ ಅಧಿಕಾರಿ ಸ್ಥಿತಿಯೇನು ಎಂಬ ವಿವರಗಳನ್ನು ನಾನಿಲ್ಲಿ ಹೇಳಲು ಹೋಗುವುದಿಲ್ಲ. ಅದು ಚಿತ್ರವನ್ನು ನೋಡಬೇಕೆನ್ನುವ ಕುತೂಹಲವನ್ನು ಕಡಿಮೆ ಮಾಡಬಹುದು. ಇದು ನೋಡಲೇ ಬೇಕಾದ ಸಿನೆಮಾ ಎಂಬುದನ್ನು ಗಮನದಲ್ಲಿಟ್ಟುಕೊಂಡು ಈ ಮಾತನ್ನು ಹೀಗೆ ಮಾಡಿದ್ದೇನೆ.

ಭಾರತವನ್ನು ನಿರಂತರವಾಗಿ ಕಾಡುತ್ತಲೇ ಬಂದ ಸಂಕೀರ್ಣ ಸಮಸ್ಯೆಗಳನ್ನು ಗೋಜಲಿಲ್ಲದೇ ಹೇಳುವುದು ಸವಾಲಿನ ಕೆಲಸ. ಇದನ್ನು ಸ್ವೀಕರಿಸುವ ನಿರ್ದೇಶಕ ಅನುಭವ್ ಸಿನ್ಹಾ ಬಹು ಪರಿಣಾಮಕಾರಿ ಸಿನೆಮಾವೊಂದನ್ನು ನಮ್ಮ ಮುಂದಿಟ್ಟಿದ್ದಾರೆ. ಇವರ ಕಾರ್ಯ ಯಶಸ್ವಿಯಾಗಲು ಇವರು ಮತ್ತು ಗೌರವ್ ಸೋಲ್ಹಂಕಿ ರಚಿಸುವ ಸಮರ್ಥ ಸ್ಕ್ರಿಪ್ಟ್ ಸಹಕಾರಿಯಾಗಿದೆ. ಚಿತ್ರದ ಇತರ ತಾಂತ್ರಿಕ ವರ್ಗದ ಸಹಕಾರದ ಕೆಮಿಸ್ಟ್ರಿಯೂ ಉತ್ತಮವಾಗಿ ವರ್ಕ್ ಆಗಿದೆ. ಛಾಯಾಗ್ರಾಹಣ ಮಾಡಿರುವ ಇವಾನ್ ಮುಲ್ಲಿಗನ್, ಸಂಕಲನದ ಜವಾಬ್ದಾರಿ ಹೊತ್ತ ಯಶ ರಾಮಚಂದ್ರನಿ, ಸಂಗೀತ ನೀಡಿರುವ ಅನುರಾಗ್ ಸೈಕಿಯಾ ಕಾರ್ಯ ಅನನ್ಯ. ಇಂಥದ್ದೊಂದು ಅಪರೂಪದ ಸಿನೆಮಾ ನಿರ್ಮಾಣ ಮಾಡಿದ ಹೆಗ್ಗಳಿಕೆಯೂ ಅನುಭವ್ ಸಿನ್ಹಾ ಮತ್ತು ಜಿ ಸ್ಟುಡಿಯೋಗೆ ಸಲ್ಲುತ್ತದೆ.

ಆಯುಷ್ಮಾನ್ ಖುರಾನ (ಯುವ ಪೊಲೀಸ್ ಅಧಿಕಾರಿ ಅಯಾನ್) ಸಯ್ಯಾನಿ ಗುಪ್ತಾ (ದಲಿತ ಯುವತಿ ಗೌರ) ಕುಮುದ್ ಮಿಶ್ರಾ (ಸಬ್ ಇನ್ಸ್ಪೆಕ್ಟರ್) ಮನೋಜ್ ಪ್ಹಾವಾ ( ಸರ್ಕಲ್ ಇನ್ಸ್ಪೆಕ್ಟರ್ ಬಹ್ಮದತ್ತ) ಮಹಮ್ಮದ್ ಜಿಶಾನ್ ಆಯೂಬ್ (ದಲಿತ ನಾಯಕ ನಿಷಾದ್) ನಾಸೀರ್ (ದೆಹಲಿಯಿಂದ ಬರುವ ಕೇಂದ್ರ ತನಿಖಾ ತಂಡದ ಮುಖ್ಯಸ್ಥ), ರಂಜಿನಿ ಚಕ್ರವರ್ತಿ (ಪೋಸ್ಟ್ ಮಾರ್ಟಂ ಮಾಡುವ ವೈದ್ಯೆ) ಇಶಾ ತಲ್ವಾರ್ (ಆದಿತಿ) ಸೇರಿದಂತೆ ಸಿನೆಮಾದಲ್ಲಿ ಇರುವ ಎಲ್ಲ ಕಲಾವಿದರೂ ಸಮರ್ಥವಾಗಿ ನಟಿಸಿದ್ದಾರೆ.

ಅಂದಹಾಗೆ ಸಂವಿಧಾನದ ಆರ್ಟಿಕಲ್ 15; ತಾರತಮ್ಯಗಳಿಲ್ಲದ, ಲಿಂಗಭೇದವಿಲ್ಲದ, ಎಲ್ಲರೂ ಸಮಾನವಾಗಿ ಗೌರವಿಸಲ್ಪಡಬೇಕಾದ ಅಂಶಗಳ ಬಗ್ಗೆ ಹೇಳುತ್ತದೆ. ಡಾ. ಬಿ.ಆರ್ . ಅಂಬೇಡ್ಕರ್ ಅವರ ಮಹತ್ತರ ಆಶಯವಿದು. ಅವರ ಆಶಯ ಆಶಯವಾಗದೇ ಉಳಿದಿದೆ. ಸಂವಿಧಾನದ ಆಶಯಗಳನ್ನು ಜನರ ನಡುವೆ ಕಾರ್ಯಗತಗೊಳಿಸುವಲ್ಲಿ ಬಹು ಪ್ರಮುಖ ಪಾತ್ರ ವಹಿಸಬೇಕಾದ ಪೊಲೀಸ್ ಠಾಣೆ ನೋಟಿಸ್ ಬೋರ್ಡಿಗೆ “ಆರ್ಟಿಕಲ್ 15” ತೂಗಹಾಕಬೇಕಾದ ದುಸ್ಥಿತಿಯಿದೆ. ಇದೊಂದು ದೊಡ್ಡ ವಿಪರ್ಯಾಸ ಎಂಬುದರತ್ತವೂ ಚಿತ್ರ ಗಮನ ಸೆಳೆಯುತ್ತದೆ.

ದಲಿತ ಸಮುದಾಯಗಳ ಯುವ ನಾಯಕ ನಿಷಾದ್ “ಆಗ ಹರಿಜನ, ಈಗ ಬಹುಜನ, ಆದರೆ ಎಂದಿಗೂ ನಾವು ಜನವಾಗಲೇ ಇಲ್ಲ” ಎನ್ನುತ್ತಾನೆ. ಹೌದಲ್ಲವೆ… ಅವರು ದಲಿತರಲ್ಲ, ಮನುಷ್ಯರು ಎಂದು ಭಾರತೀಯ ಸಮಾಜದ ಹೆಚ್ಚಿನಾಂಶ ಯೋಚಿಸುತ್ತಲೇ ಇಲ್ಲವೇ ಎಂಬ ತಲ್ಲಣ ದಿಗ್ಗನೆ ಆವರಿಸಿಕೊಳ್ಳುತ್ತದೆ. ಬಹುಕಾಲ ಕಾಡುತ್ತಲೇ ಇರುವ ಚೌಕಟ್ಟಿನಾಚೆಯ ಚಿತ್ರವಿದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...