HomeಮುಖಪುಟExplained : 370ನೇ ವಿಧಿ ರದ್ದು; 1947ರಿಂದ ಇದುವರೆಗೆ ನಡೆದಿದ್ದೇನು?

Explained : 370ನೇ ವಿಧಿ ರದ್ದು; 1947ರಿಂದ ಇದುವರೆಗೆ ನಡೆದಿದ್ದೇನು?

- Advertisement -
- Advertisement -

ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರದ ಸಿಂಧುತ್ವವನ್ನು ಸುಪ್ರೀಂಕೋರ್ಟ್ ಇಂದು (ಡಿ.11) ಎತ್ತಿ ಹಿಡಿದಿದೆ. ಆಗಸ್ಟ್‌ 5, 2019ರಂದು ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿತ್ತು. ಜಮ್ಮು-ಕಾಶ್ಮೀರ ರಾಜ್ಯವನ್ನು ಜಮ್ಮು-ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿತ್ತು.

ಜಮ್ಮು-ಕಾಶ್ಮೀರವನ್ನು ಆಳ್ವಿಕೆ ಮಾಡುತ್ತಿದ್ದ ಮಹಾರಾಜ ಹರಿಸಿಂಗ್ ಮತ್ತು ಭಾರತ ಸರ್ಕಾರ ಸಹಿ ಹಾಕಿದ 1947ರ ಒಪ್ಪದಂತೆ ಜಮ್ಮು ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ನೀಡಲಾಗಿತ್ತು. ಇದು ಜಮ್ಮು ಕಾಶ್ಮೀರವನ್ನು ಭಾರತ ರಾಜ್ಯವಾಗಿ ಪರಿಗಣಿಸಿತ್ತು. ಆದರೆ, ಅಲ್ಲಿನ ಭದ್ರತೆ, ವಿದೇಶಾಂಗ ವ್ಯವಹಾರ ಮತ್ತು ಸಂಪರ್ಕದ ವಿಷಯದಲ್ಲಿ ಕೇಂದ್ರ ಸರ್ಕಾರಕ್ಕೆ ಮಿತಿಗಳನ್ನು ವಿಧಿಸಿತ್ತು.

370ನೇ ವಿಧಿಯಡಿ ನವೆಂಬರ್‌ 17, 1952ರಿಂದ 31 ಅಕ್ಟೋಬರ್ 2019ರವರೆಗೆ ಜಮ್ಮು-ಕಾಶ್ಮೀರ ಭಾರತದ ರಾಜ್ಯವಾಗಿತ್ತು. ಆದರೆ, ಅಲ್ಲಿನ ಆಂತರಿಕ ವ್ಯವಹಾರದಲ್ಲಿ ವಿಶೇಷ ನಿಯಮವಿತ್ತು. ಜಮ್ಮು-ಕಾಶ್ಮೀರ ತನ್ನದೇ ಆದ ವಿಶೇಷ ಸಂವಿಧಾನ ಮತ್ತು ರಾಜ್ಯ ಧ್ವಜ ಹೊಂದಿತ್ತು. ಸಂವಿಧಾನ ವಿಧಿ XXIರಡಿ ಜಮ್ಮು-ಕಾಶ್ಮೀರ ವಿಶೇಷ ಸ್ಥಾನಮಾನವನ್ನು ‘ತಾತ್ಕಾಲಿಕ, ಪರಿವರ್ತಿತ ಮತ್ತು ವಿಶೇಷ ನಿಬಂಧನೆಗಳು’ ಎಂದು ಉಲ್ಲೇಖಿಸಲಾಗಿತ್ತು. ಇದು ಜಮ್ಮು ಕಾಶ್ಮೀರದ ಚುನಾಯಿತ ವಿಧಾನಸಭೆಗೆ ಭಾರತದ ಸಂವಿಧಾನ ಜಮ್ಮು-ಕಾಶ್ಮೀರದಲ್ಲಿ ಎಷ್ಟು ಜಾರಿಗೊಳಿಸಬಹುದು ಎಂದು ಮಿತಿ ಹೇರುವ ಅಧಿಕಾರಿ ನೀಡಿತ್ತು.

ರಾಷ್ಟ್ರಪತಿ ಆಳ್ವಿಕೆ 2019

ಆಗಸ್ಟ್‌ 5,2019ರಲ್ಲಿ ಸಂವಿಧಾನ 370ನೇ ವಿಧಿ ರದ್ದುಗೊಳಿಸುವ ಪ್ರಸ್ತಾಪ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮೂರನೇ ಎರಡರಷ್ಟು ಬಹುಮತದೊಂದಿಗೆ ಅಂಗೀಕಾರಗೊಂಡಿತ್ತು. ಆ ಬಳಿಕ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿತ್ತು. ಭಾರತೀಯ ಸಂವಿಧಾನದ ಎಲ್ಲಾ ವಿಧಿಗಳು ಜಮ್ಮು-ಕಾಶ್ಮೀರಕ್ಕೆ ಅನ್ವಯವಾಗುತ್ತದೆ ಎಂದು ಘೋಷಣೆ ಮಾಡಿತ್ತು. ಇದೇ ವೇಳೆ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ಜಮ್ಮು-ಕಾಶ್ಮೀರವನ್ನು ಕೇಂದ್ರ ಸರ್ಕಾರ ವಿಂಗಡನೆ ಮಾಡಿತ್ತು. ಇದು 2019, ಅಕ್ಟೋಬರ್ 31ರಿಂದ ಜಾರಿಗೆ ಬಂದಿತ್ತು.

370ನೇ ವಿಧಿ ರದ್ದತಿಯ ಪರಿಣಾಮಗಳೇನು?

370ನೇ ವಿಧಿ ರದ್ದತಿಯ ಬಳಿಕ ಜಮ್ಮು-ಕಾಶ್ಮೀರದಲ್ಲಿ ಶಾಂತಿ ಸ್ಥಾಪನೆಯಾಗಿದೆ. ಇಡೀ ರಾಜ್ಯ ಸಂಪೂರ್ಣ ಅಭಿವೃದ್ದಿ ಪತದತ್ತ ದಾಪುಗಾಲಿಡುತ್ತಿದೆ. ಅಲ್ಲಿನ ಜನರಿಗೆ ಭಾರತದ ಇತರ ರಾಜ್ಯಗಳ ಜನರಿಗೆ ದೊರೆತಂತೆ ಸಂವಿಧಾನದಡಿ ಎಲ್ಲಾ ರೀತಿಯ ಸೌಲಭ್ಯಗಳು ದೊರೆಯುತ್ತಿವೆ. ಇತರ ರಾಜ್ಯಗಳ ಜನರು ಜಮ್ಮು-ಕಾಶ್ಮೀರದಲ್ಲಿ ಹೂಡಿಕೆ ಮಾಡುವ ಮೂಲಕ ಅಲ್ಲಿನ ಆರ್ಥಿಕ, ಸಾಮಾಜಿಕ ಬೆಳವಣಿಗೆ ಆಗಿದೆ. ಜನರಿಗೆ ಉದ್ಯೋಗ ದೊರೆತಿದೆ. ಉತ್ಪಾದನೆ ಹೆಚ್ಚಾಗಿದೆ ಎಂದು ಹಲವು ಮಾಧ್ಯಮ ವರದಿಗಳು ಹೇಳಿವೆ.

ಫೆಬ್ರವರಿ 3, 2021ರಂದು ರಾಜ್ಯ ಸಭೆಯಲ್ಲಿ ಕೇಳಿದ ಪ್ರಶ್ನೆಯೊಂದಕ್ಕೆ ಲಿಖಿತವಾಗಿ ಉತ್ತರಿಸಿದ ಕೇಂದ್ರ ವಿದೇಶಾಂಗ ಸಚಿವಾಲಯದ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ, ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿಯ ಬಳಿಕ ಸಂಪೂರ್ಣ ಪ್ರಜಾಪ್ರಭುತ್ವ ಸ್ಥಾಪನೆಯಾಗಿದೆ. ಬ್ಲಾಕ್ ಅಭಿವೃದ್ದಿ ನಿಗಮ, ಜಿಲ್ಲಾ ಅಭಿವೃದ್ದಿ ನಿಗಮ, ಪಂಚ್‌ಗಳು ಮತ್ತು ಸರ್‌ಪಂಚ್‌ಗಳು ( ಗ್ರಾಮ ಪಂಚಾಯತ್‌) ಸೇರಿದಂತೆ ಪಂಚಾಯತ್ ರಾಜ್‌ನ ಎಲ್ಲಾ ಸ್ಥಳೀಯ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿದೆ ಎಂದು ತಿಳಿಸಿದ್ದಾರೆ.

ಏನಿದು 370ನೇ ವಿಧಿ?

ಸಂವಿಧಾನದ 370ನೇ ವಿಧಿಯಡಿ ಜಮ್ಮು-ಕಾಶ್ಮೀರದಲ್ಲಿ ಪ್ರತ್ಯೇಕ ಸಂವಿಧಾನ ಅಸ್ತಿತ್ವದಲ್ಲಿತ್ತು. 1956ರ ನವೆಂಬರ್‌ 17ರಂದು ರಾಜ್ಯದ ವಿಧಾನಸಭೆಯು ಸರ್ವಾನುಮತದಿಂದ ಇದನ್ನು ಅಂಗೀಕರಿಸಿತ್ತು. ಈ ಸಂವಿಧಾನದ 1ರಿಂದ8 ಮತ್ತು 158ನೇ ವಿಧಿಗಳು ಅಂದೇ ಜಾರಿಗೆ ಬಂದಿತ್ತು. ಉಳಿದೆಲ್ಲಾ ವಿಧಿಗಳು 1957ರ ಜನವರಿ 26ರಂದು ಜಾರಿಗೆ ಬಂದಿತ್ತು.

ಜಮ್ಮು-ಕಾಶ್ಮೀರದ ಸಂವಿಧಾನವನ್ನು ದೇಶದಲ್ಲಿ ಜಾರಿಯಲ್ಲಿದ್ದ ಎರಡನೇ ಸಂವಿಧಾನ ಎಂದು ಹೇಳಲಾಗುತ್ತಿತ್ತು. ಸಂವಿಧಾನ ತಿದ್ದುಪಡಿಗೊಳ್ಳುವುದು ಅಲ್ಲಿನ ವಿಧಾನಸಭೆಯಲ್ಲಾಗಿತ್ತು. ಈ ಸಂವಿಧಾನ ರಾಜ್ಯದಲ್ಲಿ ಆಸ್ತಿ ಹೊಂದಿರುವವರು ಪ್ರತ್ಯೇಕ ಕಾನೂನು ಪಾಲಿಸಬೇಕು ಹಾಗೂ ಪ್ರತ್ಯೇಕ ನಾಗರಿಕತೆ ಹೊಂದಿರಬೇಕು ಎನ್ನುತ್ತಿತ್ತು. ರಾಜ್ಯದ ಜನರ ಮೂಲಭೂತ ಹಕ್ಕುಗಳು ಕೂಡ ಇತರ ರಾಜ್ಯಗಳಿಗಿಂತ ಭಿನ್ನವಾಗಿತ್ತು.

35–ಎ ಕಲಂ ಏನು ಹೇಳುತ್ತದೆ?

370ನೇ ವಿಧಿಯಡಿ ಇದ್ದ 35–ಎ ಕಲಂ ಅನ್ನು ಕೂಡ ಕೇಂದ್ರ ಸರ್ಕಾರ ರದ್ದು ಮಾಡಿದೆ. ಇದು ಜಮ್ಮು-ಕಾಶ್ಮೀರದ ನಾಗರಿಕರಿಗೆ ಮಾತ್ರ ಆಸ್ತಿ, ಶಿಕ್ಷಣ, ಉದ್ಯೋಗದಲ್ಲಿ ವಿಶೇಷ ಅಧಿಕಾರ ನೀಡುವುದಕ್ಕೆ ಸಂಬಂಧಿಸಿದ್ದು. 35–ಎ ಕಲಂ ಪ್ರಕಾರ, ಜಮ್ಮು-ಕಾಶ್ಮಿರದ ಕಾಯಂ ನಿವಾಸಿಗಳನ್ನು, ಅಂದರೆ ಸ್ಥಳೀಯರನ್ನು ಬಿಟ್ಟು ಹೊರಗಿನವರು ಯಾರೂ ಅಲ್ಲಿ ಸ್ಥಿರ ಆಸ್ತಿ ಹೊಂದುವಂತಿಲ್ಲ. ಅಲ್ಲದೆ ಶಿಕ್ಷಣ, ವಿದ್ಯಾರ್ಥಿ ವೇತನ ಮತ್ತು ಉದ್ಯೋಗಕ್ಕೆ ಸ್ಥಳೀಯರಷ್ಟೇ ಅರ್ಹರು. ಅಲ್ಲಿನ ಮಹಿಳೆ, ರಾಜ್ಯದ ಹೊರಗಿನವರನ್ನು ಮದುವೆಯಾದರೆ ಈ ವಿಶೇಷ ಸೌಲಭ್ಯಗಳಿಂದ ವಂಚಿತಳಾಗುತ್ತಾಳೆ. ಆದರೆ, ಅಲ್ಲಿನ ಪುರುಷ ಹೊರ ರಾಜ್ಯದ ಮಹಿಳೆಯನ್ನು ಮದುವೆಯಾದರೆ ಆತನ ಹಕ್ಕಿಗೆ ಧಕ್ಕೆ ಬರುವುದಿಲ್ಲ. ಆತನ ಪತ್ನಿಗೂ ಈ ಎಲ್ಲ ಹಕ್ಕುಗಳು ದೊರೆಯುತ್ತವೆ. ಸಂವಿಧಾನಕ್ಕೆ ಈ ಕಲಂ ಸೇರ್ಪಡೆಯಾಗಿದ್ದು ಕೂಡ ಸಂಸತ್ತಿನ ನಿರ್ಣಯದ ಮೂಲಕ ಅಲ್ಲ. ಬದಲಿಗೆ, ಕಾಶ್ಮೀರಕ್ಕೆ ಸಂಬಂಧಪಟ್ಟಂತೆ ಇರುವ ವಿಶೇಷಾಧಿಕಾರ ಬಳಸಿ ರಾಷ್ಟ್ರಪತಿ ಹೊರಡಿಸಿದ ಅಧಿಸೂಚನೆಯ ಮೂಲಕ. 1954ರಲ್ಲಿ ರಾಷ್ಟ್ರಪತಿಗಳು ಅಧಿಸೂಚನೆ ಹೊರಡಿಸಿದ್ದರು.

ಸುಪ್ರೀಂ ಕೋರ್ಟ್‌ ತೀರ್ಪು: 

ನಾಲ್ಕು ವರ್ಷಗಳ ಹಿಂದೆ 370ನೇ ವಿಧಿ ರದ್ದು ಮಾಡುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದರು. ಕೇಂದ್ರದ ಈ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂಕೋರ್ಟಿಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದವು. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠ ಇಂದು ತೀರ್ಪು ನೀಡಿದೆ.

ಐವರು ನ್ಯಾಯಮೂರ್ತಿಗಳಾದ ಸಿಜೆಐ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಎಸ್ ಕೆ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯ ಕಾಂತ್ ಅವರು 16 ದಿನಗಳ ಕಾಲ ಅರ್ಜಿದಾರರು ಮತ್ತು ಕೇಂದ್ರದ ವಾದವನ್ನು ಆಲಿಸಿದ್ದರು. ಸುಪ್ರೀಂ ಕೋರ್ಟ್ ಸೆಪ್ಟೆಂಬರ್ 5 ರಂದು ಈ ಪ್ರಕರಣದ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.

ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ರಾಷ್ಟ್ರಪತಿಗಳ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಕೇಂದ್ರದ ಒಪ್ಪಿಗೆಯೊಂದಿಗೆ ಸಂವಿಧಾನದ ಎಲ್ಲ ನಿಬಂಧನೆಗಳನ್ನು ರಾಷ್ಟ್ರಪತಿಗಳು ಜಮ್ಮು-ಕಾಶ್ಮೀರಕ್ಕೆ ಅನ್ವಯಿಸಬಹುದಿತ್ತು. ರಾಜ್ಯ ವಿಧಾನಸಭೆಯ ಒಪ್ಪಿಗೆಯನ್ನೂ ಪಡೆಯುವ ಅಗತ್ಯವಿಲ್ಲ ಎಂದು ಸಿಜೆಐ ಚಂದ್ರಚೂಡ್ ಹೇಳಿದ್ದಾರೆ.

ಚುನಾವಣೆ ನಡೆಸಲು ಆದೇಶ:

ತೀರ್ಪು ಪ್ರಕಟಿಸುವ ವೇಳೆ ಸೆಪ್ಟೆಂಬರ್ 30, 2024 ರೊಳಗೆ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಗೆ ಚುನಾವಣೆ ನಡೆಸುವಂತೆ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ.

ಲಡಾಖ್ ಕೇಂದ್ರಾಡಳಿತ ಪ್ರದೇಶ:

ಈ ನಡುವೆ ಲಡಾಖ್ ಕೇಂದ್ರಾಡಳಿತ ಪ್ರದೇಶವನ್ನು ಜಮ್ಮು ಕಾಶ್ಮೀರದಿಂದ ಬೇರ್ಪಡಿಸುವ ನಿರ್ಧಾರದ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. “ಜಮ್ಮು ಮತ್ತು ಕಾಶ್ಮೀರದಿಂದ ಲಡಾಖ್ ಕೇಂದ್ರಾಡಳಿತ ಪ್ರದೇಶವನ್ನು ಬೇರ್ಪಡಿಸುವ ನಿರ್ಧಾರದ ಸಿಂಧುತ್ವವನ್ನು ನಾವು ಎತ್ತಿ ಹಿಡಿಯುತ್ತೇವೆ” ಎಂದು ಸಿಜೆಐ ಹೇಳಿದ್ದಾರೆ.

ಇದನ್ನೂ ಓದಿ : 370ನೇ ವಿಧಿ ರದ್ದು: ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸಲು ಸುಪ್ರೀಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...