Homeಮುಖಪುಟ370ನೇ ವಿಧಿಯ ಪರ ನಿರ್ಣಯ | ಕಾಶ್ಮೀರದ ವಿರುದ್ಧದ ಪಿತೂರಿ ಎಂದ ಮೋದಿ

370ನೇ ವಿಧಿಯ ಪರ ನಿರ್ಣಯ | ಕಾಶ್ಮೀರದ ವಿರುದ್ಧದ ಪಿತೂರಿ ಎಂದ ಮೋದಿ

- Advertisement -
- Advertisement -

ಜಮ್ಮು ಕಾಶ್ಮೀರ ವಿಧಾನಸಭೆಯು ಸಂವಿಧಾನದ 370 ನೇ ವಿಧಿಯ ಅಡಿಯಲ್ಲಿ ರಾಜ್ಯಕ್ಕೆ ಈ ಹಿಂದೆ ಇದ್ದ ವಿಶೇಷ ಸ್ಥಾನಮಾನವನ್ನು ಮರುಸ್ಥಾಪಿಸಲು ಆಗ್ರಹಿಸುವ ನಿರ್ಣಯವನ್ನು ಬುಧವಾರ ಅಂಗೀಕರಿಸಿತ್ತು. ಈ ನಿರ್ಣಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಇದು ಕಾಶ್ಮೀರದ ವಿರುದ್ಧದ ಪಿತೂರಿ ಎಂದು ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿ ಸರ್ಕಾರವನ್ನು ಟೀಕಿಸಿದ್ದಾರೆ. 370ನೇ ವಿಧಿಯ ಪರ ನಿರ್ಣಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು 2019ರ ಆಗಸ್ಟ್‌ನಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿತು. ಜೊತೆಗೆ ರಾಜ್ಯವನ್ನು ಜಮ್ಮು ಕಾಶ್ಮೀರ ಮತ್ತು ಲಡಾಖ್ ಎಂದು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತ್ತು. ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮತ್ತು ಉಪ ಮುಖ್ಯಮಂತ್ರಿ ಸುರೀಂದರ್ ಕುಮಾರ್ ಚೌಧರಿ ಅವರು ಮಂಡಿಸಿದ ನಿರ್ಣಯವು ಕೇಂದ್ರಾಡಳಿತ ಪ್ರದೇಶದ ವಿರುದ್ಧದ ಪಿತೂರಿಯ ಭಾಗವಾಗಿದೆ ಎಂದು ಮೋದಿ ಶುಕ್ರವಾರ ಹೇಳಿದ್ದಾರೆ. 370ನೇ ವಿಧಿಯ ಪರ ನಿರ್ಣಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ.

“ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟಕ್ಕೆ ಜಮ್ಮು ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಅವಕಾಶ ಸಿಕ್ಕ ತಕ್ಷಣ, ಅವರು ಕಾಶ್ಮೀರದ ವಿರುದ್ಧ ತಮ್ಮ ಪಿತೂರಿಗಳನ್ನು ಪ್ರಾರಂಭಿಸಿದರು…” ಎಂದು ಮಹಾರಾಷ್ಟ್ರದ ಧುಲೆಯಲ್ಲಿ ಚುನಾವಣಾ ರ್ಯಾಲಿಯಲ್ಲಿ ಮೋದಿ ಹೇಳಿದ್ದಾರೆ.

“ಕಾಂಗ್ರೆಸ್ ಮೈತ್ರಿಕೂಟವು ಅಲ್ಲಿ ಮತ್ತೆ 370 ನೇ ವಿಧಿಯನ್ನು ಜಾರಿಗೆ ತರಲು ನಿರ್ಣಯವನ್ನು ಅಂಗೀಕರಿಸಿತು … ದೇಶವು ಇದನ್ನು ಒಪ್ಪಿಕೊಳ್ಳುತ್ತದೆಯೇ? ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ 370ನೇ ವಿಧಿಯನ್ನು ಬೆಂಬಲಿಸಿ ಬ್ಯಾನರ್‌ಗಳನ್ನು ಪ್ರದರ್ಶಿಸಲಾಯಿತು. ನಿರ್ಣಯವನ್ನು ವಿರೋಧಿಸಿದ್ದಕ್ಕಾಗಿ ಪ್ರತಿಪಕ್ಷ ಬಿಜೆಪಿಗೆ ಸೇರಿದ ವಿಧಾನಸಭಾ ಸದಸ್ಯರನ್ನು ಸದನದಿಂದ ಹೊರಹಾಕಲಾಯಿತು” ಎಂದು ಮೋದಿ ಹೇಳಿದ್ದಾರೆ.

“ಬಿಜೆಪಿ ಶಾಸಕರು ಇದನ್ನು ವಿರೋಧಿಸಿದಾಗ, ಅವರನ್ನು ಎತ್ತಿಕೊಂಡು ವಿಧಾನಸಭೆಯಿಂದ ಹೊರಹಾಕಲಾಯಿತು. ಇಡೀ ದೇಶವು ಕಾಂಗ್ರೆಸ್ ಮತ್ತು ಅದರ ಮೈತ್ರಿಯ ಸತ್ಯವನ್ನು ಅರ್ಥಮಾಡಿಕೊಳ್ಳಬೇಕು. ಜಮ್ಮು ಕಾಶ್ಮೀರದಲ್ಲಿ ಕೇವಲ ಅಂಬೇಡ್ಕರ್ ಅವರ ಸಂವಿಧಾನವನ್ನು ಅನುಸರಿಸಲಾಗುತ್ತದೆ ಮತ್ತು ವಿಶ್ವದ ಯಾವುದೇ ಶಕ್ತಿಗೆ ಆರ್ಟಿಕಲ್ 370 ಅನ್ನು ಪುನಃಸ್ಥಾಪಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯ ನಂತರ ನಡೆದ ಮೊದಲ ವಿಧಾನಸಭಾ ಅಧಿವೇಶನದಲ್ಲಿ ಈ ನಿರ್ಣಯವನ್ನು ಅಂಗೀಕರಿಸಲಾಯಿತು. ಕಳೆದ 10 ವರ್ಷಗಳ ನಂತರ ನಡೆದ ಮೊದಲ ಚುನಾವಣೆ ಇದಾಗಿದೆ. ಹಾಗೆಯೆ 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ ನಡೆದ ಮೊದಲ ಚುನಾವಣೆ ಇದಾಗಿತ್ತು.

ಗುರುವಾರ ಸ್ವತಂತ್ರ ಶಾಸಕ ಖುರ್ಷೀದ್ ಅಹ್ಮದ್ ಶೇಖ್, ಸಂವಿಧಾನದ 370 ನೇ ವಿಧಿಯನ್ನು ಮರುಸ್ಥಾಪಿಸಬೇಕು ಮತ್ತು ಎಲ್ಲಾ ರಾಜಕೀಯ ಕೈದಿಗಳನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಬ್ಯಾನರ್ ಅನ್ನು ಪ್ರದರ್ಶಿಸಿದ ನಂತರ ಗುರುವಾರ ವಿಧಾನಸಭೆಯಲ್ಲಿ ಗದ್ದಲ ನಡೆಯಿತು. ಅವರು ಬಾರಾಮುಲ್ಲಾ ಸಂಸದ, ಪ್ರಸ್ತುತ ಜೈಲಿನಲ್ಲಿರುವ ಇಂಜಿನಿಯರ್ ರಶೀದ್ ಅವರ ಸಹೋದರರಾಗಿದ್ದಾರೆ.

ಪೀಪಲ್ಸ್ ಕಾನ್ಫರೆನ್ಸ್ ನಾಯಕ ಸಜಾದ್ ಲೋನ್ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ನಾಯಕ ವಹೀದ್ ಪಾರಾ ಅವರು ಶೇಖ್ ಅವರನ್ನು ಬೆಂಬಲಿಸಿ ಕಣಕ್ಕಿಳಿಯುತ್ತಿದ್ದಂತೆ ಬಿಜೆಪಿಯ ಶಾಸಕರು ಸದನದ ಬಾವಿಗೆ ನುಗ್ಗಿ ಬ್ಯಾನರ್ ಕಿತ್ತುಕೊಳ್ಳಲು ಯತ್ನಿಸಿದ್ದರು.

ಇದನ್ನೂ ಓದಿ: ದೆಹಲಿ ಗಲಭೆ ಪ್ರಕರಣ | ವಾಟ್ಸಾಪ್‌ನಲ್ಲಿ ಗಲಭೆಗೆ ಕರೆ ನೀಡಿಲ್ಲ – ಕೋರ್ಟ್‌ಗೆ ತಾಹಿರ್ ಹುಸೇನ್

ದೆಹಲಿ ಗಲಭೆ ಪ್ರಕರಣ | ವಾಟ್ಸಾಪ್‌ನಲ್ಲಿ ಗಲಭೆಗೆ ಕರೆ ನೀಡಿಲ್ಲ – ಕೋರ್ಟ್‌ಗೆ ತಾಹಿರ್ ಹುಸೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...