Homeಮುಖಪುಟಕಾಶ್ಮೀರದ ವಿಭಜನೆ: 370ನೇ ಕಲಂ ತೆಗೆದು ಹಾಕಿದ ಕೇಂದ್ರ ಸರ್ಕಾರ, ರಾಜ್ಯಸಭೆಯಲ್ಲಿ ಅಮಿತ್ ಷಾ ಮಂಡನೆ

ಕಾಶ್ಮೀರದ ವಿಭಜನೆ: 370ನೇ ಕಲಂ ತೆಗೆದು ಹಾಕಿದ ಕೇಂದ್ರ ಸರ್ಕಾರ, ರಾಜ್ಯಸಭೆಯಲ್ಲಿ ಅಮಿತ್ ಷಾ ಮಂಡನೆ

ಇನ್ನು ಮುಂದೆ ಜಮ್ಮು & ಕಾಶ್ಮೀರವು ಅಸೆಂಬ್ಲಿಯಿರುವ ಕೇಂದ್ರಾಡಳಿತ ಪ್ರದೇಶ ಮತ್ತು ಲಡಖ್ ಅಸೆಂಬ್ಲಿಯಿರದ ಕೇಂದ್ರಾಡಳಿತ ಪ್ರದೇಶವಾಗಲಿದೆ.

- Advertisement -
- Advertisement -

ಸಂವಿಧಾನದ 370ನೇ ವಿಧಿಯನ್ನು ತೆಗೆದು ಹಾಕಲಾಗಿದೆ ಎಂದು ಗೃಹ ಸಚಿವ ಅಮಿತ್ ಷಾ ಇಂದು ರಾಜ್ಯಸಭೆಯಲ್ಲಿ ಮಂಡಿಸಿದರು. ಜಮ್ಮು ಮತ್ತು ಕಾಶ್ಮೀರ ಪ್ರಾಂತವು ಭಾರತದ ಜೊತೆ ವಿಲೀನವಾಗಲು ಮಾಡಿಕೊಂಡಿದ್ದ ಒಪ್ಪಂದದ ಅನ್ವಯ ಸಂವಿಧಾನದಲ್ಲಿ 370ನೇ ವಿಧಿಯನ್ನು ಸೇರಿಸಲಾಗಿತ್ತು. ಅದರ ಪ್ರಕಾರ ಜಮ್ಮು & ಕಾಶ್ಮೀರಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳುವ ಯಾವುದೇ ತೀರ್ಮಾನವನ್ನು ಆ ರಾಜ್ಯದ ವಿಧಾನಸಭೆಯ ಒಪ್ಪಿಗೆಯಿಲ್ಲದಂತೆ ಮಾಡುವ ಹಾಗಿಲ್ಲ. ಹೀಗಿರುವಾಗ ಕೇಂದ್ರ ಸರ್ಕಾರವು ಆ ವಿಧಿಯನ್ನೇ ತೆಗೆದುಹಾಕಿದ್ದೇವೆ ಎಂದು ಘೋಷಿಸಿರುವುದು ಸಂವಿಧಾನಬದ್ಧವಾ ಎಂಬ ಪ್ರಶ್ನೆ ಏಳುತ್ತದೆ.

ಕಳೆದ ಒಂದು ವಾರದಿಂದ ಸುಮಾರು 45 ಸಾವಿರಕ್ಕೂ ಹೆಚ್ಚು ಸೇನಾಪಡೆಗಳನ್ನು ಕಾಶ್ಮೀರದಲ್ಲಿ ನಿಯೋಜಿಸಿದ್ದು ಮತ್ತು ನಿನ್ನೆ ಅಲ್ಲಿನ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಗೃಹಬಂಧನಕ್ಕೆ ಒಳಪಡಿಸಿದ್ದು ಹಲವು ವದಂತಿಗಳಿಗೆ ಕಾರಣವಾಗಿತ್ತು. ಕಾಶ್ಮೀರದಲ್ಲಿ ಏನೋ ಮಹತ್ವದ್ದು ನಡೆಯಲಿದೆ ಎಂಬುದು ಎಲ್ಲರಿಗೂ ಖಚಿತವಾಗಿತ್ತು. ಆದರೆ ಏನು ಎಂಬುದು ಎಲ್ಲರಿಗೂ ಪ್ರಶ್ನೆಯಾಗಿತ್ತು.

ಜಮ್ಮು ಮತ್ತು ಕಾಶ್ಮೀರವನ್ನು ತ್ರಿವಿಭಜನೆ ಮಾಡಿ, ಸಂವಿಧಾನದ ಕಲಂಗಳು ಅಪ್ರಸ್ತುತವಾಗುವಂತೆ ಮಾಡಲಾಗುತ್ತದೆ ಎಂಬ ವದಂತಿಯೂ ಇತ್ತು. ಇದೀಗ ಜಮ್ಮು & ಕಾಶ್ಮೀರವನ್ನು ವಿಭಜನೆ ಮಾಡಿ, ಜಮ್ಮು & ಕಾಶ್ಮೀರವನ್ನು ವಿಧಾನಸಭೆಯಿರುವ ಕೇಂದ್ರಾಡಳಿತ ಪ್ರದೇಶವನ್ನಾಗಿಯೂ, ಲಡಖ್ ವಿಧಾನಸಭೆಯಿರದ ಕೇಂದ್ರಾಡಳಿತ ಪ್ರದೇಶವನ್ನಾಗಿಯೂ ಮಾಡಲಾಗಿದೆ.

ಕಲಂ 370 ಅನ್ನು ರಾಷ್ಟ್ರಪತಿಗಳ ಆದೇಶದಿಂದ ತೆಗೆದುಹಾಕಲಾಗಿದೆಯೇ ಹೊರತು, ಸಂಸತ್ತಿನಲ್ಲಿ ಮೂರನೇ ಎರಡು ಬಹುಮತದಿಂದ ಅಲ್ಲ. ಹೀಗಾಗಿ ಒಂದು ವೇಳೆ ಸಂವಿಧಾನದ ಈ ಕಲಂ ಅನ್ನು ತೆಗೆದುಹಾಕುವುದಿದ್ದರೂ, ಅದನ್ನು ಸಂಸತ್ತಿನಲ್ಲಿ ಚರ್ಚಿಸಬೇಕಿತ್ತು. ಅದ್ಯಾವುದನ್ನೂ ಮಾಡದೇ ರಾಷ್ಟ್ರಪತಿಗಳ ಒಂದು ಆದೇಶದಿಂದ ಈ ರೀತಿ ಮಾಡುವುದು ಸಂವಿಧಾನಬದ್ಧವಾಗುತ್ತದೆಯೇ ಎಂಬ ಪ್ರಶ್ನೆಯೂ ಇದೆ. ಸದರಿ ಮಾಹಿತಿಯನ್ನು ರಾಜ್ಯಸಭೆಗೆ ಅಮಿತ್ ಷಾ ನೀಡಿದ ನಂತರ ಪ್ರತಿಪಕ್ಷಗಳು ತೀವ್ರವಾಗಿ ಪ್ರತಿಭಟಿಸಲಾರಂಭಿಸಿದರು. ಅದರ ನಂತರವೂ ಕಾಶ್ಮೀರಕ್ಕೆ ಸಂಬಂಧಿಸಿದ ಹಲವು ಮಸೂದೆಗಳನ್ನು ಅಮಿತ್ ಷಾ ಮಂಡಿಸುತ್ತಿದ್ದು, ಗದ್ದಲದಲ್ಲಿ ಸರಿಯಾಗಿ ಕೇಳಿಸುತ್ತಿಲ್ಲ.

ನಂತರ ಇದನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನೆ ಮಾಡಿದರೆ, ಸದರಿ ಆದೇಶವು ಊರ್ಜಿತವಾಗುತ್ತದೆಯೇ ಎಂಬ ಚರ್ಚೆ ಈಗಾಗಲೇ ಇದ್ದು, ಎರಡು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರ ಜನಾಂದೋಲನದ ಶೆಹ್ಲಾ ರಷೀದ್ ಅವರು ಬಿಡುಗಡೆ ಮಾಡಿದ ವಿಡಿಯೋದಲ್ಲೂ ಇದನ್ನು ಹೇಳಿದ್ದರು.
ಬಿಜೆಪಿಯ ಮಿತ್ರಪಕ್ಷ ಜೆಡಿಯು ಸಹಾ ಕಲಂ 370ರ ಪರವಾಗಿದ್ದು, ಪದೇ ಪದೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಹೀಗಾಗಿ ಸಂಸತ್ತಿನಲ್ಲಿ ಮೂರನೇ ಎರಡು ಬಹುಮತದಿಂದ ಇದನ್ನು ಸಾಧಿಸಿಕೊಳ್ಳುವುದು ಸಾಧ್ಯವಿರಲಿಲ್ಲ. ಆದ್ದರಿಂದಲೇ ಇಂತಹ ಕ್ರಮಕ್ಕೆ ಬಿಜೆಪಿ ಪಕ್ಷವು ಮುಂದಾಗಿರುವುದು ಎದ್ದು ಕಾಣುತ್ತಿದೆ.

ಕಳೆದ ಒಂದು ವಾರದಿಂದ ದೇಶದ ಆರ್ಥಿಕತೆಯು ತೀವ್ರ ಬಿಕ್ಕಟ್ಟಿನ ಕಡೆಗೆ ಸಾಗುತ್ತಿರುವ ಹಲವು ವರದಿಗಳು ಬಂದಿದ್ದವು. ಈ ಹಿಂದೆ ಮೋದಿಯವರ ಪ್ರಬಲ ಸಮರ್ಥಕರಾಗಿದ್ದ ಉದ್ದಿಮೆಪತಿಗಳೂ ಸಹಾ ಸರ್ಕಾರವನ್ನು ಟೀಕೆ ಮಾಡಲು ಆರಂಭಿಸಿದ್ದರು. ಆದ್ದರಿಂದಲೇ ಜಮ್ಮು ಮತ್ತು ಕಾಶ್ಮೀರದ ವಿಚಾರವನ್ನು ಸರ್ಕಾರವು ಕೈಗೆತ್ತಿಕೊಳ್ಳಲು ಹೊರಟಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.

ಸ್ವಾತಂತ್ರ್ಯಾನಂತರ ನಡೆದಿರುವ ಅತೀ ಮಹತ್ವದ ಬೆಳವಣಿಗೆಗಳಲ್ಲಿ ಇದೂ ಒಂದಾಗಿರಲಿದ್ದು, ಇದರಿಂದ ಕಾಶ್ಮೀರದಲ್ಲಿ ಉಂಟಾಗಬಹುದಾದ ಅಶಾಂತಿಯ ಕುರಿತು ಆತಂಕ ಎದುರಾಗಿದೆ. ಕಾಶ್ಮೀರವನ್ನು ಭಾರತದಲ್ಲಿ ಉಳಿಸಿಕೊಳ್ಳಬೇಕಾದರೆ ಕಲಂ 370 ಇರಲೇಬೇಕು ಎಂದು ಇತ್ತೀಚೆಗೆ ತಾನೇ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದರು.

ಇವೆಲ್ಲಾ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಹಲವಾರು ಸರಣಿ ಬೆಳವಣಿಗೆಗಳಿಗೆ ಕಾರಣವಾಗುವ ಬೆಳವಣಿಗೆ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Nanu Gouri Super BJP ena madidru Nanu AdanA OPAKOLOLA ANTANE HELTIYA SUPER

    NAANU GOURI ANTA HELI ELECTION ADAMELE ONE PERSON MISSING Next Nivu Agabardu Anta Nana Ase

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...