Homeಮುಖಪುಟಕಾಶ್ಮೀರದ ವಿಭಜನೆ: 370ನೇ ಕಲಂ ತೆಗೆದು ಹಾಕಿದ ಕೇಂದ್ರ ಸರ್ಕಾರ, ರಾಜ್ಯಸಭೆಯಲ್ಲಿ ಅಮಿತ್ ಷಾ ಮಂಡನೆ

ಕಾಶ್ಮೀರದ ವಿಭಜನೆ: 370ನೇ ಕಲಂ ತೆಗೆದು ಹಾಕಿದ ಕೇಂದ್ರ ಸರ್ಕಾರ, ರಾಜ್ಯಸಭೆಯಲ್ಲಿ ಅಮಿತ್ ಷಾ ಮಂಡನೆ

ಇನ್ನು ಮುಂದೆ ಜಮ್ಮು & ಕಾಶ್ಮೀರವು ಅಸೆಂಬ್ಲಿಯಿರುವ ಕೇಂದ್ರಾಡಳಿತ ಪ್ರದೇಶ ಮತ್ತು ಲಡಖ್ ಅಸೆಂಬ್ಲಿಯಿರದ ಕೇಂದ್ರಾಡಳಿತ ಪ್ರದೇಶವಾಗಲಿದೆ.

- Advertisement -
- Advertisement -

ಸಂವಿಧಾನದ 370ನೇ ವಿಧಿಯನ್ನು ತೆಗೆದು ಹಾಕಲಾಗಿದೆ ಎಂದು ಗೃಹ ಸಚಿವ ಅಮಿತ್ ಷಾ ಇಂದು ರಾಜ್ಯಸಭೆಯಲ್ಲಿ ಮಂಡಿಸಿದರು. ಜಮ್ಮು ಮತ್ತು ಕಾಶ್ಮೀರ ಪ್ರಾಂತವು ಭಾರತದ ಜೊತೆ ವಿಲೀನವಾಗಲು ಮಾಡಿಕೊಂಡಿದ್ದ ಒಪ್ಪಂದದ ಅನ್ವಯ ಸಂವಿಧಾನದಲ್ಲಿ 370ನೇ ವಿಧಿಯನ್ನು ಸೇರಿಸಲಾಗಿತ್ತು. ಅದರ ಪ್ರಕಾರ ಜಮ್ಮು & ಕಾಶ್ಮೀರಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳುವ ಯಾವುದೇ ತೀರ್ಮಾನವನ್ನು ಆ ರಾಜ್ಯದ ವಿಧಾನಸಭೆಯ ಒಪ್ಪಿಗೆಯಿಲ್ಲದಂತೆ ಮಾಡುವ ಹಾಗಿಲ್ಲ. ಹೀಗಿರುವಾಗ ಕೇಂದ್ರ ಸರ್ಕಾರವು ಆ ವಿಧಿಯನ್ನೇ ತೆಗೆದುಹಾಕಿದ್ದೇವೆ ಎಂದು ಘೋಷಿಸಿರುವುದು ಸಂವಿಧಾನಬದ್ಧವಾ ಎಂಬ ಪ್ರಶ್ನೆ ಏಳುತ್ತದೆ.

ಕಳೆದ ಒಂದು ವಾರದಿಂದ ಸುಮಾರು 45 ಸಾವಿರಕ್ಕೂ ಹೆಚ್ಚು ಸೇನಾಪಡೆಗಳನ್ನು ಕಾಶ್ಮೀರದಲ್ಲಿ ನಿಯೋಜಿಸಿದ್ದು ಮತ್ತು ನಿನ್ನೆ ಅಲ್ಲಿನ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಗೃಹಬಂಧನಕ್ಕೆ ಒಳಪಡಿಸಿದ್ದು ಹಲವು ವದಂತಿಗಳಿಗೆ ಕಾರಣವಾಗಿತ್ತು. ಕಾಶ್ಮೀರದಲ್ಲಿ ಏನೋ ಮಹತ್ವದ್ದು ನಡೆಯಲಿದೆ ಎಂಬುದು ಎಲ್ಲರಿಗೂ ಖಚಿತವಾಗಿತ್ತು. ಆದರೆ ಏನು ಎಂಬುದು ಎಲ್ಲರಿಗೂ ಪ್ರಶ್ನೆಯಾಗಿತ್ತು.

ಜಮ್ಮು ಮತ್ತು ಕಾಶ್ಮೀರವನ್ನು ತ್ರಿವಿಭಜನೆ ಮಾಡಿ, ಸಂವಿಧಾನದ ಕಲಂಗಳು ಅಪ್ರಸ್ತುತವಾಗುವಂತೆ ಮಾಡಲಾಗುತ್ತದೆ ಎಂಬ ವದಂತಿಯೂ ಇತ್ತು. ಇದೀಗ ಜಮ್ಮು & ಕಾಶ್ಮೀರವನ್ನು ವಿಭಜನೆ ಮಾಡಿ, ಜಮ್ಮು & ಕಾಶ್ಮೀರವನ್ನು ವಿಧಾನಸಭೆಯಿರುವ ಕೇಂದ್ರಾಡಳಿತ ಪ್ರದೇಶವನ್ನಾಗಿಯೂ, ಲಡಖ್ ವಿಧಾನಸಭೆಯಿರದ ಕೇಂದ್ರಾಡಳಿತ ಪ್ರದೇಶವನ್ನಾಗಿಯೂ ಮಾಡಲಾಗಿದೆ.

ಕಲಂ 370 ಅನ್ನು ರಾಷ್ಟ್ರಪತಿಗಳ ಆದೇಶದಿಂದ ತೆಗೆದುಹಾಕಲಾಗಿದೆಯೇ ಹೊರತು, ಸಂಸತ್ತಿನಲ್ಲಿ ಮೂರನೇ ಎರಡು ಬಹುಮತದಿಂದ ಅಲ್ಲ. ಹೀಗಾಗಿ ಒಂದು ವೇಳೆ ಸಂವಿಧಾನದ ಈ ಕಲಂ ಅನ್ನು ತೆಗೆದುಹಾಕುವುದಿದ್ದರೂ, ಅದನ್ನು ಸಂಸತ್ತಿನಲ್ಲಿ ಚರ್ಚಿಸಬೇಕಿತ್ತು. ಅದ್ಯಾವುದನ್ನೂ ಮಾಡದೇ ರಾಷ್ಟ್ರಪತಿಗಳ ಒಂದು ಆದೇಶದಿಂದ ಈ ರೀತಿ ಮಾಡುವುದು ಸಂವಿಧಾನಬದ್ಧವಾಗುತ್ತದೆಯೇ ಎಂಬ ಪ್ರಶ್ನೆಯೂ ಇದೆ. ಸದರಿ ಮಾಹಿತಿಯನ್ನು ರಾಜ್ಯಸಭೆಗೆ ಅಮಿತ್ ಷಾ ನೀಡಿದ ನಂತರ ಪ್ರತಿಪಕ್ಷಗಳು ತೀವ್ರವಾಗಿ ಪ್ರತಿಭಟಿಸಲಾರಂಭಿಸಿದರು. ಅದರ ನಂತರವೂ ಕಾಶ್ಮೀರಕ್ಕೆ ಸಂಬಂಧಿಸಿದ ಹಲವು ಮಸೂದೆಗಳನ್ನು ಅಮಿತ್ ಷಾ ಮಂಡಿಸುತ್ತಿದ್ದು, ಗದ್ದಲದಲ್ಲಿ ಸರಿಯಾಗಿ ಕೇಳಿಸುತ್ತಿಲ್ಲ.

ನಂತರ ಇದನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನೆ ಮಾಡಿದರೆ, ಸದರಿ ಆದೇಶವು ಊರ್ಜಿತವಾಗುತ್ತದೆಯೇ ಎಂಬ ಚರ್ಚೆ ಈಗಾಗಲೇ ಇದ್ದು, ಎರಡು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರ ಜನಾಂದೋಲನದ ಶೆಹ್ಲಾ ರಷೀದ್ ಅವರು ಬಿಡುಗಡೆ ಮಾಡಿದ ವಿಡಿಯೋದಲ್ಲೂ ಇದನ್ನು ಹೇಳಿದ್ದರು.
ಬಿಜೆಪಿಯ ಮಿತ್ರಪಕ್ಷ ಜೆಡಿಯು ಸಹಾ ಕಲಂ 370ರ ಪರವಾಗಿದ್ದು, ಪದೇ ಪದೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಹೀಗಾಗಿ ಸಂಸತ್ತಿನಲ್ಲಿ ಮೂರನೇ ಎರಡು ಬಹುಮತದಿಂದ ಇದನ್ನು ಸಾಧಿಸಿಕೊಳ್ಳುವುದು ಸಾಧ್ಯವಿರಲಿಲ್ಲ. ಆದ್ದರಿಂದಲೇ ಇಂತಹ ಕ್ರಮಕ್ಕೆ ಬಿಜೆಪಿ ಪಕ್ಷವು ಮುಂದಾಗಿರುವುದು ಎದ್ದು ಕಾಣುತ್ತಿದೆ.

ಕಳೆದ ಒಂದು ವಾರದಿಂದ ದೇಶದ ಆರ್ಥಿಕತೆಯು ತೀವ್ರ ಬಿಕ್ಕಟ್ಟಿನ ಕಡೆಗೆ ಸಾಗುತ್ತಿರುವ ಹಲವು ವರದಿಗಳು ಬಂದಿದ್ದವು. ಈ ಹಿಂದೆ ಮೋದಿಯವರ ಪ್ರಬಲ ಸಮರ್ಥಕರಾಗಿದ್ದ ಉದ್ದಿಮೆಪತಿಗಳೂ ಸಹಾ ಸರ್ಕಾರವನ್ನು ಟೀಕೆ ಮಾಡಲು ಆರಂಭಿಸಿದ್ದರು. ಆದ್ದರಿಂದಲೇ ಜಮ್ಮು ಮತ್ತು ಕಾಶ್ಮೀರದ ವಿಚಾರವನ್ನು ಸರ್ಕಾರವು ಕೈಗೆತ್ತಿಕೊಳ್ಳಲು ಹೊರಟಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.

ಸ್ವಾತಂತ್ರ್ಯಾನಂತರ ನಡೆದಿರುವ ಅತೀ ಮಹತ್ವದ ಬೆಳವಣಿಗೆಗಳಲ್ಲಿ ಇದೂ ಒಂದಾಗಿರಲಿದ್ದು, ಇದರಿಂದ ಕಾಶ್ಮೀರದಲ್ಲಿ ಉಂಟಾಗಬಹುದಾದ ಅಶಾಂತಿಯ ಕುರಿತು ಆತಂಕ ಎದುರಾಗಿದೆ. ಕಾಶ್ಮೀರವನ್ನು ಭಾರತದಲ್ಲಿ ಉಳಿಸಿಕೊಳ್ಳಬೇಕಾದರೆ ಕಲಂ 370 ಇರಲೇಬೇಕು ಎಂದು ಇತ್ತೀಚೆಗೆ ತಾನೇ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದರು.

ಇವೆಲ್ಲಾ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಹಲವಾರು ಸರಣಿ ಬೆಳವಣಿಗೆಗಳಿಗೆ ಕಾರಣವಾಗುವ ಬೆಳವಣಿಗೆ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Nanu Gouri Super BJP ena madidru Nanu AdanA OPAKOLOLA ANTANE HELTIYA SUPER

    NAANU GOURI ANTA HELI ELECTION ADAMELE ONE PERSON MISSING Next Nivu Agabardu Anta Nana Ase

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...