Homeಮುಖಪುಟಕಾಶ್ಮೀರದ ವಿಭಜನೆ: 370ನೇ ಕಲಂ ತೆಗೆದು ಹಾಕಿದ ಕೇಂದ್ರ ಸರ್ಕಾರ, ರಾಜ್ಯಸಭೆಯಲ್ಲಿ ಅಮಿತ್ ಷಾ ಮಂಡನೆ

ಕಾಶ್ಮೀರದ ವಿಭಜನೆ: 370ನೇ ಕಲಂ ತೆಗೆದು ಹಾಕಿದ ಕೇಂದ್ರ ಸರ್ಕಾರ, ರಾಜ್ಯಸಭೆಯಲ್ಲಿ ಅಮಿತ್ ಷಾ ಮಂಡನೆ

ಇನ್ನು ಮುಂದೆ ಜಮ್ಮು & ಕಾಶ್ಮೀರವು ಅಸೆಂಬ್ಲಿಯಿರುವ ಕೇಂದ್ರಾಡಳಿತ ಪ್ರದೇಶ ಮತ್ತು ಲಡಖ್ ಅಸೆಂಬ್ಲಿಯಿರದ ಕೇಂದ್ರಾಡಳಿತ ಪ್ರದೇಶವಾಗಲಿದೆ.

- Advertisement -
- Advertisement -

ಸಂವಿಧಾನದ 370ನೇ ವಿಧಿಯನ್ನು ತೆಗೆದು ಹಾಕಲಾಗಿದೆ ಎಂದು ಗೃಹ ಸಚಿವ ಅಮಿತ್ ಷಾ ಇಂದು ರಾಜ್ಯಸಭೆಯಲ್ಲಿ ಮಂಡಿಸಿದರು. ಜಮ್ಮು ಮತ್ತು ಕಾಶ್ಮೀರ ಪ್ರಾಂತವು ಭಾರತದ ಜೊತೆ ವಿಲೀನವಾಗಲು ಮಾಡಿಕೊಂಡಿದ್ದ ಒಪ್ಪಂದದ ಅನ್ವಯ ಸಂವಿಧಾನದಲ್ಲಿ 370ನೇ ವಿಧಿಯನ್ನು ಸೇರಿಸಲಾಗಿತ್ತು. ಅದರ ಪ್ರಕಾರ ಜಮ್ಮು & ಕಾಶ್ಮೀರಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳುವ ಯಾವುದೇ ತೀರ್ಮಾನವನ್ನು ಆ ರಾಜ್ಯದ ವಿಧಾನಸಭೆಯ ಒಪ್ಪಿಗೆಯಿಲ್ಲದಂತೆ ಮಾಡುವ ಹಾಗಿಲ್ಲ. ಹೀಗಿರುವಾಗ ಕೇಂದ್ರ ಸರ್ಕಾರವು ಆ ವಿಧಿಯನ್ನೇ ತೆಗೆದುಹಾಕಿದ್ದೇವೆ ಎಂದು ಘೋಷಿಸಿರುವುದು ಸಂವಿಧಾನಬದ್ಧವಾ ಎಂಬ ಪ್ರಶ್ನೆ ಏಳುತ್ತದೆ.

ಕಳೆದ ಒಂದು ವಾರದಿಂದ ಸುಮಾರು 45 ಸಾವಿರಕ್ಕೂ ಹೆಚ್ಚು ಸೇನಾಪಡೆಗಳನ್ನು ಕಾಶ್ಮೀರದಲ್ಲಿ ನಿಯೋಜಿಸಿದ್ದು ಮತ್ತು ನಿನ್ನೆ ಅಲ್ಲಿನ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಗೃಹಬಂಧನಕ್ಕೆ ಒಳಪಡಿಸಿದ್ದು ಹಲವು ವದಂತಿಗಳಿಗೆ ಕಾರಣವಾಗಿತ್ತು. ಕಾಶ್ಮೀರದಲ್ಲಿ ಏನೋ ಮಹತ್ವದ್ದು ನಡೆಯಲಿದೆ ಎಂಬುದು ಎಲ್ಲರಿಗೂ ಖಚಿತವಾಗಿತ್ತು. ಆದರೆ ಏನು ಎಂಬುದು ಎಲ್ಲರಿಗೂ ಪ್ರಶ್ನೆಯಾಗಿತ್ತು.

ಜಮ್ಮು ಮತ್ತು ಕಾಶ್ಮೀರವನ್ನು ತ್ರಿವಿಭಜನೆ ಮಾಡಿ, ಸಂವಿಧಾನದ ಕಲಂಗಳು ಅಪ್ರಸ್ತುತವಾಗುವಂತೆ ಮಾಡಲಾಗುತ್ತದೆ ಎಂಬ ವದಂತಿಯೂ ಇತ್ತು. ಇದೀಗ ಜಮ್ಮು & ಕಾಶ್ಮೀರವನ್ನು ವಿಭಜನೆ ಮಾಡಿ, ಜಮ್ಮು & ಕಾಶ್ಮೀರವನ್ನು ವಿಧಾನಸಭೆಯಿರುವ ಕೇಂದ್ರಾಡಳಿತ ಪ್ರದೇಶವನ್ನಾಗಿಯೂ, ಲಡಖ್ ವಿಧಾನಸಭೆಯಿರದ ಕೇಂದ್ರಾಡಳಿತ ಪ್ರದೇಶವನ್ನಾಗಿಯೂ ಮಾಡಲಾಗಿದೆ.

ಕಲಂ 370 ಅನ್ನು ರಾಷ್ಟ್ರಪತಿಗಳ ಆದೇಶದಿಂದ ತೆಗೆದುಹಾಕಲಾಗಿದೆಯೇ ಹೊರತು, ಸಂಸತ್ತಿನಲ್ಲಿ ಮೂರನೇ ಎರಡು ಬಹುಮತದಿಂದ ಅಲ್ಲ. ಹೀಗಾಗಿ ಒಂದು ವೇಳೆ ಸಂವಿಧಾನದ ಈ ಕಲಂ ಅನ್ನು ತೆಗೆದುಹಾಕುವುದಿದ್ದರೂ, ಅದನ್ನು ಸಂಸತ್ತಿನಲ್ಲಿ ಚರ್ಚಿಸಬೇಕಿತ್ತು. ಅದ್ಯಾವುದನ್ನೂ ಮಾಡದೇ ರಾಷ್ಟ್ರಪತಿಗಳ ಒಂದು ಆದೇಶದಿಂದ ಈ ರೀತಿ ಮಾಡುವುದು ಸಂವಿಧಾನಬದ್ಧವಾಗುತ್ತದೆಯೇ ಎಂಬ ಪ್ರಶ್ನೆಯೂ ಇದೆ. ಸದರಿ ಮಾಹಿತಿಯನ್ನು ರಾಜ್ಯಸಭೆಗೆ ಅಮಿತ್ ಷಾ ನೀಡಿದ ನಂತರ ಪ್ರತಿಪಕ್ಷಗಳು ತೀವ್ರವಾಗಿ ಪ್ರತಿಭಟಿಸಲಾರಂಭಿಸಿದರು. ಅದರ ನಂತರವೂ ಕಾಶ್ಮೀರಕ್ಕೆ ಸಂಬಂಧಿಸಿದ ಹಲವು ಮಸೂದೆಗಳನ್ನು ಅಮಿತ್ ಷಾ ಮಂಡಿಸುತ್ತಿದ್ದು, ಗದ್ದಲದಲ್ಲಿ ಸರಿಯಾಗಿ ಕೇಳಿಸುತ್ತಿಲ್ಲ.

ನಂತರ ಇದನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನೆ ಮಾಡಿದರೆ, ಸದರಿ ಆದೇಶವು ಊರ್ಜಿತವಾಗುತ್ತದೆಯೇ ಎಂಬ ಚರ್ಚೆ ಈಗಾಗಲೇ ಇದ್ದು, ಎರಡು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರ ಜನಾಂದೋಲನದ ಶೆಹ್ಲಾ ರಷೀದ್ ಅವರು ಬಿಡುಗಡೆ ಮಾಡಿದ ವಿಡಿಯೋದಲ್ಲೂ ಇದನ್ನು ಹೇಳಿದ್ದರು.
ಬಿಜೆಪಿಯ ಮಿತ್ರಪಕ್ಷ ಜೆಡಿಯು ಸಹಾ ಕಲಂ 370ರ ಪರವಾಗಿದ್ದು, ಪದೇ ಪದೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಹೀಗಾಗಿ ಸಂಸತ್ತಿನಲ್ಲಿ ಮೂರನೇ ಎರಡು ಬಹುಮತದಿಂದ ಇದನ್ನು ಸಾಧಿಸಿಕೊಳ್ಳುವುದು ಸಾಧ್ಯವಿರಲಿಲ್ಲ. ಆದ್ದರಿಂದಲೇ ಇಂತಹ ಕ್ರಮಕ್ಕೆ ಬಿಜೆಪಿ ಪಕ್ಷವು ಮುಂದಾಗಿರುವುದು ಎದ್ದು ಕಾಣುತ್ತಿದೆ.

ಕಳೆದ ಒಂದು ವಾರದಿಂದ ದೇಶದ ಆರ್ಥಿಕತೆಯು ತೀವ್ರ ಬಿಕ್ಕಟ್ಟಿನ ಕಡೆಗೆ ಸಾಗುತ್ತಿರುವ ಹಲವು ವರದಿಗಳು ಬಂದಿದ್ದವು. ಈ ಹಿಂದೆ ಮೋದಿಯವರ ಪ್ರಬಲ ಸಮರ್ಥಕರಾಗಿದ್ದ ಉದ್ದಿಮೆಪತಿಗಳೂ ಸಹಾ ಸರ್ಕಾರವನ್ನು ಟೀಕೆ ಮಾಡಲು ಆರಂಭಿಸಿದ್ದರು. ಆದ್ದರಿಂದಲೇ ಜಮ್ಮು ಮತ್ತು ಕಾಶ್ಮೀರದ ವಿಚಾರವನ್ನು ಸರ್ಕಾರವು ಕೈಗೆತ್ತಿಕೊಳ್ಳಲು ಹೊರಟಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.

ಸ್ವಾತಂತ್ರ್ಯಾನಂತರ ನಡೆದಿರುವ ಅತೀ ಮಹತ್ವದ ಬೆಳವಣಿಗೆಗಳಲ್ಲಿ ಇದೂ ಒಂದಾಗಿರಲಿದ್ದು, ಇದರಿಂದ ಕಾಶ್ಮೀರದಲ್ಲಿ ಉಂಟಾಗಬಹುದಾದ ಅಶಾಂತಿಯ ಕುರಿತು ಆತಂಕ ಎದುರಾಗಿದೆ. ಕಾಶ್ಮೀರವನ್ನು ಭಾರತದಲ್ಲಿ ಉಳಿಸಿಕೊಳ್ಳಬೇಕಾದರೆ ಕಲಂ 370 ಇರಲೇಬೇಕು ಎಂದು ಇತ್ತೀಚೆಗೆ ತಾನೇ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದರು.

ಇವೆಲ್ಲಾ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಹಲವಾರು ಸರಣಿ ಬೆಳವಣಿಗೆಗಳಿಗೆ ಕಾರಣವಾಗುವ ಬೆಳವಣಿಗೆ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Nanu Gouri Super BJP ena madidru Nanu AdanA OPAKOLOLA ANTANE HELTIYA SUPER

    NAANU GOURI ANTA HELI ELECTION ADAMELE ONE PERSON MISSING Next Nivu Agabardu Anta Nana Ase

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...