Homeಮುಖಪುಟಕಾಶ್ಮೀರದ ವಿಭಜನೆ: 370ನೇ ಕಲಂ ತೆಗೆದು ಹಾಕಿದ ಕೇಂದ್ರ ಸರ್ಕಾರ, ರಾಜ್ಯಸಭೆಯಲ್ಲಿ ಅಮಿತ್ ಷಾ ಮಂಡನೆ

ಕಾಶ್ಮೀರದ ವಿಭಜನೆ: 370ನೇ ಕಲಂ ತೆಗೆದು ಹಾಕಿದ ಕೇಂದ್ರ ಸರ್ಕಾರ, ರಾಜ್ಯಸಭೆಯಲ್ಲಿ ಅಮಿತ್ ಷಾ ಮಂಡನೆ

ಇನ್ನು ಮುಂದೆ ಜಮ್ಮು & ಕಾಶ್ಮೀರವು ಅಸೆಂಬ್ಲಿಯಿರುವ ಕೇಂದ್ರಾಡಳಿತ ಪ್ರದೇಶ ಮತ್ತು ಲಡಖ್ ಅಸೆಂಬ್ಲಿಯಿರದ ಕೇಂದ್ರಾಡಳಿತ ಪ್ರದೇಶವಾಗಲಿದೆ.

- Advertisement -
- Advertisement -

ಸಂವಿಧಾನದ 370ನೇ ವಿಧಿಯನ್ನು ತೆಗೆದು ಹಾಕಲಾಗಿದೆ ಎಂದು ಗೃಹ ಸಚಿವ ಅಮಿತ್ ಷಾ ಇಂದು ರಾಜ್ಯಸಭೆಯಲ್ಲಿ ಮಂಡಿಸಿದರು. ಜಮ್ಮು ಮತ್ತು ಕಾಶ್ಮೀರ ಪ್ರಾಂತವು ಭಾರತದ ಜೊತೆ ವಿಲೀನವಾಗಲು ಮಾಡಿಕೊಂಡಿದ್ದ ಒಪ್ಪಂದದ ಅನ್ವಯ ಸಂವಿಧಾನದಲ್ಲಿ 370ನೇ ವಿಧಿಯನ್ನು ಸೇರಿಸಲಾಗಿತ್ತು. ಅದರ ಪ್ರಕಾರ ಜಮ್ಮು & ಕಾಶ್ಮೀರಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳುವ ಯಾವುದೇ ತೀರ್ಮಾನವನ್ನು ಆ ರಾಜ್ಯದ ವಿಧಾನಸಭೆಯ ಒಪ್ಪಿಗೆಯಿಲ್ಲದಂತೆ ಮಾಡುವ ಹಾಗಿಲ್ಲ. ಹೀಗಿರುವಾಗ ಕೇಂದ್ರ ಸರ್ಕಾರವು ಆ ವಿಧಿಯನ್ನೇ ತೆಗೆದುಹಾಕಿದ್ದೇವೆ ಎಂದು ಘೋಷಿಸಿರುವುದು ಸಂವಿಧಾನಬದ್ಧವಾ ಎಂಬ ಪ್ರಶ್ನೆ ಏಳುತ್ತದೆ.

ಕಳೆದ ಒಂದು ವಾರದಿಂದ ಸುಮಾರು 45 ಸಾವಿರಕ್ಕೂ ಹೆಚ್ಚು ಸೇನಾಪಡೆಗಳನ್ನು ಕಾಶ್ಮೀರದಲ್ಲಿ ನಿಯೋಜಿಸಿದ್ದು ಮತ್ತು ನಿನ್ನೆ ಅಲ್ಲಿನ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಗೃಹಬಂಧನಕ್ಕೆ ಒಳಪಡಿಸಿದ್ದು ಹಲವು ವದಂತಿಗಳಿಗೆ ಕಾರಣವಾಗಿತ್ತು. ಕಾಶ್ಮೀರದಲ್ಲಿ ಏನೋ ಮಹತ್ವದ್ದು ನಡೆಯಲಿದೆ ಎಂಬುದು ಎಲ್ಲರಿಗೂ ಖಚಿತವಾಗಿತ್ತು. ಆದರೆ ಏನು ಎಂಬುದು ಎಲ್ಲರಿಗೂ ಪ್ರಶ್ನೆಯಾಗಿತ್ತು.

ಜಮ್ಮು ಮತ್ತು ಕಾಶ್ಮೀರವನ್ನು ತ್ರಿವಿಭಜನೆ ಮಾಡಿ, ಸಂವಿಧಾನದ ಕಲಂಗಳು ಅಪ್ರಸ್ತುತವಾಗುವಂತೆ ಮಾಡಲಾಗುತ್ತದೆ ಎಂಬ ವದಂತಿಯೂ ಇತ್ತು. ಇದೀಗ ಜಮ್ಮು & ಕಾಶ್ಮೀರವನ್ನು ವಿಭಜನೆ ಮಾಡಿ, ಜಮ್ಮು & ಕಾಶ್ಮೀರವನ್ನು ವಿಧಾನಸಭೆಯಿರುವ ಕೇಂದ್ರಾಡಳಿತ ಪ್ರದೇಶವನ್ನಾಗಿಯೂ, ಲಡಖ್ ವಿಧಾನಸಭೆಯಿರದ ಕೇಂದ್ರಾಡಳಿತ ಪ್ರದೇಶವನ್ನಾಗಿಯೂ ಮಾಡಲಾಗಿದೆ.

ಕಲಂ 370 ಅನ್ನು ರಾಷ್ಟ್ರಪತಿಗಳ ಆದೇಶದಿಂದ ತೆಗೆದುಹಾಕಲಾಗಿದೆಯೇ ಹೊರತು, ಸಂಸತ್ತಿನಲ್ಲಿ ಮೂರನೇ ಎರಡು ಬಹುಮತದಿಂದ ಅಲ್ಲ. ಹೀಗಾಗಿ ಒಂದು ವೇಳೆ ಸಂವಿಧಾನದ ಈ ಕಲಂ ಅನ್ನು ತೆಗೆದುಹಾಕುವುದಿದ್ದರೂ, ಅದನ್ನು ಸಂಸತ್ತಿನಲ್ಲಿ ಚರ್ಚಿಸಬೇಕಿತ್ತು. ಅದ್ಯಾವುದನ್ನೂ ಮಾಡದೇ ರಾಷ್ಟ್ರಪತಿಗಳ ಒಂದು ಆದೇಶದಿಂದ ಈ ರೀತಿ ಮಾಡುವುದು ಸಂವಿಧಾನಬದ್ಧವಾಗುತ್ತದೆಯೇ ಎಂಬ ಪ್ರಶ್ನೆಯೂ ಇದೆ. ಸದರಿ ಮಾಹಿತಿಯನ್ನು ರಾಜ್ಯಸಭೆಗೆ ಅಮಿತ್ ಷಾ ನೀಡಿದ ನಂತರ ಪ್ರತಿಪಕ್ಷಗಳು ತೀವ್ರವಾಗಿ ಪ್ರತಿಭಟಿಸಲಾರಂಭಿಸಿದರು. ಅದರ ನಂತರವೂ ಕಾಶ್ಮೀರಕ್ಕೆ ಸಂಬಂಧಿಸಿದ ಹಲವು ಮಸೂದೆಗಳನ್ನು ಅಮಿತ್ ಷಾ ಮಂಡಿಸುತ್ತಿದ್ದು, ಗದ್ದಲದಲ್ಲಿ ಸರಿಯಾಗಿ ಕೇಳಿಸುತ್ತಿಲ್ಲ.

ನಂತರ ಇದನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನೆ ಮಾಡಿದರೆ, ಸದರಿ ಆದೇಶವು ಊರ್ಜಿತವಾಗುತ್ತದೆಯೇ ಎಂಬ ಚರ್ಚೆ ಈಗಾಗಲೇ ಇದ್ದು, ಎರಡು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರ ಜನಾಂದೋಲನದ ಶೆಹ್ಲಾ ರಷೀದ್ ಅವರು ಬಿಡುಗಡೆ ಮಾಡಿದ ವಿಡಿಯೋದಲ್ಲೂ ಇದನ್ನು ಹೇಳಿದ್ದರು.
ಬಿಜೆಪಿಯ ಮಿತ್ರಪಕ್ಷ ಜೆಡಿಯು ಸಹಾ ಕಲಂ 370ರ ಪರವಾಗಿದ್ದು, ಪದೇ ಪದೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಹೀಗಾಗಿ ಸಂಸತ್ತಿನಲ್ಲಿ ಮೂರನೇ ಎರಡು ಬಹುಮತದಿಂದ ಇದನ್ನು ಸಾಧಿಸಿಕೊಳ್ಳುವುದು ಸಾಧ್ಯವಿರಲಿಲ್ಲ. ಆದ್ದರಿಂದಲೇ ಇಂತಹ ಕ್ರಮಕ್ಕೆ ಬಿಜೆಪಿ ಪಕ್ಷವು ಮುಂದಾಗಿರುವುದು ಎದ್ದು ಕಾಣುತ್ತಿದೆ.

ಕಳೆದ ಒಂದು ವಾರದಿಂದ ದೇಶದ ಆರ್ಥಿಕತೆಯು ತೀವ್ರ ಬಿಕ್ಕಟ್ಟಿನ ಕಡೆಗೆ ಸಾಗುತ್ತಿರುವ ಹಲವು ವರದಿಗಳು ಬಂದಿದ್ದವು. ಈ ಹಿಂದೆ ಮೋದಿಯವರ ಪ್ರಬಲ ಸಮರ್ಥಕರಾಗಿದ್ದ ಉದ್ದಿಮೆಪತಿಗಳೂ ಸಹಾ ಸರ್ಕಾರವನ್ನು ಟೀಕೆ ಮಾಡಲು ಆರಂಭಿಸಿದ್ದರು. ಆದ್ದರಿಂದಲೇ ಜಮ್ಮು ಮತ್ತು ಕಾಶ್ಮೀರದ ವಿಚಾರವನ್ನು ಸರ್ಕಾರವು ಕೈಗೆತ್ತಿಕೊಳ್ಳಲು ಹೊರಟಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.

ಸ್ವಾತಂತ್ರ್ಯಾನಂತರ ನಡೆದಿರುವ ಅತೀ ಮಹತ್ವದ ಬೆಳವಣಿಗೆಗಳಲ್ಲಿ ಇದೂ ಒಂದಾಗಿರಲಿದ್ದು, ಇದರಿಂದ ಕಾಶ್ಮೀರದಲ್ಲಿ ಉಂಟಾಗಬಹುದಾದ ಅಶಾಂತಿಯ ಕುರಿತು ಆತಂಕ ಎದುರಾಗಿದೆ. ಕಾಶ್ಮೀರವನ್ನು ಭಾರತದಲ್ಲಿ ಉಳಿಸಿಕೊಳ್ಳಬೇಕಾದರೆ ಕಲಂ 370 ಇರಲೇಬೇಕು ಎಂದು ಇತ್ತೀಚೆಗೆ ತಾನೇ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದರು.

ಇವೆಲ್ಲಾ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಹಲವಾರು ಸರಣಿ ಬೆಳವಣಿಗೆಗಳಿಗೆ ಕಾರಣವಾಗುವ ಬೆಳವಣಿಗೆ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Nanu Gouri Super BJP ena madidru Nanu AdanA OPAKOLOLA ANTANE HELTIYA SUPER

    NAANU GOURI ANTA HELI ELECTION ADAMELE ONE PERSON MISSING Next Nivu Agabardu Anta Nana Ase

LEAVE A REPLY

Please enter your comment!
Please enter your name here

- Advertisment -

‘ಯುದ್ಧ ಮುಂದುವರಿಸಲು ಸಾಧ್ಯವಾಗದೆ ಅಮೆರಿಕ ಬಲವಂತವಾಗಿ ಕದನ ವಿರಾಮ ಘೋಷಿಸಿತು’: ಭಾರತದಲ್ಲಿ ಇರಾನ್ ಸುಪ್ರೀಂ ಲೀಡರ್ ಪ್ರತಿನಿಧಿ

ನವದೆಹಲಿ: ಸಂಘರ್ಷವನ್ನು ಮುುಂದುವರಿಸಲು ವಿಫಲವಾದ ನಂತರ ಅಮೆರಿಕವು ಇರಾನ್ ಜೊತೆ ಕದನ ವಿರಾಮ ಘೋಷಿಸಲು ಒತ್ತಾಯಿಸಲ್ಪಟ್ಟಿತು ಮತ್ತು ನಿರಂತರ ಹಗೆತನವು ವಾಷಿಂಗ್ಟನ್‌ಗೆ ಮತ್ತಷ್ಟು ಹಿನ್ನಡೆಗೆ ಕಾರಣವಾಗುತ್ತಿತ್ತು ಎಂದು ಇರಾನ್‌ನ ಸರ್ವೋಚ್ಚ ನಾಯಕನ ಭಾರತದಲ್ಲಿನ...

ಶಾರದಾ ಚಿಟ್ ಫಂಡ್ ಹಗರಣ: 13 ವರ್ಷಗಳ ನಂತರ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಜಾಮೀನು ಮಂಜೂರು ಮಾಡಿದ ಕೊಲ್ಕತ್ತಾ ಹೈಕೋರ್ಟ್

ಕೊಲ್ಕತ್ತಾ ಹೈಕೋರ್ಟ್ ಬುಧವಾರ ಬಹುಕೋಟಿ ಶಾರದಾ ಚಿಟ್ ಫಂಡ್ ಹಗರಣದ ಪ್ರಮುಖ ಆರೋಪಿ ಸುದೀಪ್ತ ಸೇನ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದು, 13 ವರ್ಷಗಳ ನಂತರ ಜೈಲಿನಿಂದ ಬಿಡುಗಡೆಯಾಗಲು ದಾರಿ ಸುಗಮವಾಗಿದೆ. ಪಶ್ಚಿಮ...

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...