Homeಮುಖಪುಟಕಾಶ್ಮೀರದ ವಿಭಜನೆ: 370ನೇ ಕಲಂ ತೆಗೆದು ಹಾಕಿದ ಕೇಂದ್ರ ಸರ್ಕಾರ, ರಾಜ್ಯಸಭೆಯಲ್ಲಿ ಅಮಿತ್ ಷಾ ಮಂಡನೆ

ಕಾಶ್ಮೀರದ ವಿಭಜನೆ: 370ನೇ ಕಲಂ ತೆಗೆದು ಹಾಕಿದ ಕೇಂದ್ರ ಸರ್ಕಾರ, ರಾಜ್ಯಸಭೆಯಲ್ಲಿ ಅಮಿತ್ ಷಾ ಮಂಡನೆ

ಇನ್ನು ಮುಂದೆ ಜಮ್ಮು & ಕಾಶ್ಮೀರವು ಅಸೆಂಬ್ಲಿಯಿರುವ ಕೇಂದ್ರಾಡಳಿತ ಪ್ರದೇಶ ಮತ್ತು ಲಡಖ್ ಅಸೆಂಬ್ಲಿಯಿರದ ಕೇಂದ್ರಾಡಳಿತ ಪ್ರದೇಶವಾಗಲಿದೆ.

- Advertisement -
- Advertisement -

ಸಂವಿಧಾನದ 370ನೇ ವಿಧಿಯನ್ನು ತೆಗೆದು ಹಾಕಲಾಗಿದೆ ಎಂದು ಗೃಹ ಸಚಿವ ಅಮಿತ್ ಷಾ ಇಂದು ರಾಜ್ಯಸಭೆಯಲ್ಲಿ ಮಂಡಿಸಿದರು. ಜಮ್ಮು ಮತ್ತು ಕಾಶ್ಮೀರ ಪ್ರಾಂತವು ಭಾರತದ ಜೊತೆ ವಿಲೀನವಾಗಲು ಮಾಡಿಕೊಂಡಿದ್ದ ಒಪ್ಪಂದದ ಅನ್ವಯ ಸಂವಿಧಾನದಲ್ಲಿ 370ನೇ ವಿಧಿಯನ್ನು ಸೇರಿಸಲಾಗಿತ್ತು. ಅದರ ಪ್ರಕಾರ ಜಮ್ಮು & ಕಾಶ್ಮೀರಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳುವ ಯಾವುದೇ ತೀರ್ಮಾನವನ್ನು ಆ ರಾಜ್ಯದ ವಿಧಾನಸಭೆಯ ಒಪ್ಪಿಗೆಯಿಲ್ಲದಂತೆ ಮಾಡುವ ಹಾಗಿಲ್ಲ. ಹೀಗಿರುವಾಗ ಕೇಂದ್ರ ಸರ್ಕಾರವು ಆ ವಿಧಿಯನ್ನೇ ತೆಗೆದುಹಾಕಿದ್ದೇವೆ ಎಂದು ಘೋಷಿಸಿರುವುದು ಸಂವಿಧಾನಬದ್ಧವಾ ಎಂಬ ಪ್ರಶ್ನೆ ಏಳುತ್ತದೆ.

ಕಳೆದ ಒಂದು ವಾರದಿಂದ ಸುಮಾರು 45 ಸಾವಿರಕ್ಕೂ ಹೆಚ್ಚು ಸೇನಾಪಡೆಗಳನ್ನು ಕಾಶ್ಮೀರದಲ್ಲಿ ನಿಯೋಜಿಸಿದ್ದು ಮತ್ತು ನಿನ್ನೆ ಅಲ್ಲಿನ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಗೃಹಬಂಧನಕ್ಕೆ ಒಳಪಡಿಸಿದ್ದು ಹಲವು ವದಂತಿಗಳಿಗೆ ಕಾರಣವಾಗಿತ್ತು. ಕಾಶ್ಮೀರದಲ್ಲಿ ಏನೋ ಮಹತ್ವದ್ದು ನಡೆಯಲಿದೆ ಎಂಬುದು ಎಲ್ಲರಿಗೂ ಖಚಿತವಾಗಿತ್ತು. ಆದರೆ ಏನು ಎಂಬುದು ಎಲ್ಲರಿಗೂ ಪ್ರಶ್ನೆಯಾಗಿತ್ತು.

ಜಮ್ಮು ಮತ್ತು ಕಾಶ್ಮೀರವನ್ನು ತ್ರಿವಿಭಜನೆ ಮಾಡಿ, ಸಂವಿಧಾನದ ಕಲಂಗಳು ಅಪ್ರಸ್ತುತವಾಗುವಂತೆ ಮಾಡಲಾಗುತ್ತದೆ ಎಂಬ ವದಂತಿಯೂ ಇತ್ತು. ಇದೀಗ ಜಮ್ಮು & ಕಾಶ್ಮೀರವನ್ನು ವಿಭಜನೆ ಮಾಡಿ, ಜಮ್ಮು & ಕಾಶ್ಮೀರವನ್ನು ವಿಧಾನಸಭೆಯಿರುವ ಕೇಂದ್ರಾಡಳಿತ ಪ್ರದೇಶವನ್ನಾಗಿಯೂ, ಲಡಖ್ ವಿಧಾನಸಭೆಯಿರದ ಕೇಂದ್ರಾಡಳಿತ ಪ್ರದೇಶವನ್ನಾಗಿಯೂ ಮಾಡಲಾಗಿದೆ.

ಕಲಂ 370 ಅನ್ನು ರಾಷ್ಟ್ರಪತಿಗಳ ಆದೇಶದಿಂದ ತೆಗೆದುಹಾಕಲಾಗಿದೆಯೇ ಹೊರತು, ಸಂಸತ್ತಿನಲ್ಲಿ ಮೂರನೇ ಎರಡು ಬಹುಮತದಿಂದ ಅಲ್ಲ. ಹೀಗಾಗಿ ಒಂದು ವೇಳೆ ಸಂವಿಧಾನದ ಈ ಕಲಂ ಅನ್ನು ತೆಗೆದುಹಾಕುವುದಿದ್ದರೂ, ಅದನ್ನು ಸಂಸತ್ತಿನಲ್ಲಿ ಚರ್ಚಿಸಬೇಕಿತ್ತು. ಅದ್ಯಾವುದನ್ನೂ ಮಾಡದೇ ರಾಷ್ಟ್ರಪತಿಗಳ ಒಂದು ಆದೇಶದಿಂದ ಈ ರೀತಿ ಮಾಡುವುದು ಸಂವಿಧಾನಬದ್ಧವಾಗುತ್ತದೆಯೇ ಎಂಬ ಪ್ರಶ್ನೆಯೂ ಇದೆ. ಸದರಿ ಮಾಹಿತಿಯನ್ನು ರಾಜ್ಯಸಭೆಗೆ ಅಮಿತ್ ಷಾ ನೀಡಿದ ನಂತರ ಪ್ರತಿಪಕ್ಷಗಳು ತೀವ್ರವಾಗಿ ಪ್ರತಿಭಟಿಸಲಾರಂಭಿಸಿದರು. ಅದರ ನಂತರವೂ ಕಾಶ್ಮೀರಕ್ಕೆ ಸಂಬಂಧಿಸಿದ ಹಲವು ಮಸೂದೆಗಳನ್ನು ಅಮಿತ್ ಷಾ ಮಂಡಿಸುತ್ತಿದ್ದು, ಗದ್ದಲದಲ್ಲಿ ಸರಿಯಾಗಿ ಕೇಳಿಸುತ್ತಿಲ್ಲ.

ನಂತರ ಇದನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನೆ ಮಾಡಿದರೆ, ಸದರಿ ಆದೇಶವು ಊರ್ಜಿತವಾಗುತ್ತದೆಯೇ ಎಂಬ ಚರ್ಚೆ ಈಗಾಗಲೇ ಇದ್ದು, ಎರಡು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರ ಜನಾಂದೋಲನದ ಶೆಹ್ಲಾ ರಷೀದ್ ಅವರು ಬಿಡುಗಡೆ ಮಾಡಿದ ವಿಡಿಯೋದಲ್ಲೂ ಇದನ್ನು ಹೇಳಿದ್ದರು.
ಬಿಜೆಪಿಯ ಮಿತ್ರಪಕ್ಷ ಜೆಡಿಯು ಸಹಾ ಕಲಂ 370ರ ಪರವಾಗಿದ್ದು, ಪದೇ ಪದೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಹೀಗಾಗಿ ಸಂಸತ್ತಿನಲ್ಲಿ ಮೂರನೇ ಎರಡು ಬಹುಮತದಿಂದ ಇದನ್ನು ಸಾಧಿಸಿಕೊಳ್ಳುವುದು ಸಾಧ್ಯವಿರಲಿಲ್ಲ. ಆದ್ದರಿಂದಲೇ ಇಂತಹ ಕ್ರಮಕ್ಕೆ ಬಿಜೆಪಿ ಪಕ್ಷವು ಮುಂದಾಗಿರುವುದು ಎದ್ದು ಕಾಣುತ್ತಿದೆ.

ಕಳೆದ ಒಂದು ವಾರದಿಂದ ದೇಶದ ಆರ್ಥಿಕತೆಯು ತೀವ್ರ ಬಿಕ್ಕಟ್ಟಿನ ಕಡೆಗೆ ಸಾಗುತ್ತಿರುವ ಹಲವು ವರದಿಗಳು ಬಂದಿದ್ದವು. ಈ ಹಿಂದೆ ಮೋದಿಯವರ ಪ್ರಬಲ ಸಮರ್ಥಕರಾಗಿದ್ದ ಉದ್ದಿಮೆಪತಿಗಳೂ ಸಹಾ ಸರ್ಕಾರವನ್ನು ಟೀಕೆ ಮಾಡಲು ಆರಂಭಿಸಿದ್ದರು. ಆದ್ದರಿಂದಲೇ ಜಮ್ಮು ಮತ್ತು ಕಾಶ್ಮೀರದ ವಿಚಾರವನ್ನು ಸರ್ಕಾರವು ಕೈಗೆತ್ತಿಕೊಳ್ಳಲು ಹೊರಟಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.

ಸ್ವಾತಂತ್ರ್ಯಾನಂತರ ನಡೆದಿರುವ ಅತೀ ಮಹತ್ವದ ಬೆಳವಣಿಗೆಗಳಲ್ಲಿ ಇದೂ ಒಂದಾಗಿರಲಿದ್ದು, ಇದರಿಂದ ಕಾಶ್ಮೀರದಲ್ಲಿ ಉಂಟಾಗಬಹುದಾದ ಅಶಾಂತಿಯ ಕುರಿತು ಆತಂಕ ಎದುರಾಗಿದೆ. ಕಾಶ್ಮೀರವನ್ನು ಭಾರತದಲ್ಲಿ ಉಳಿಸಿಕೊಳ್ಳಬೇಕಾದರೆ ಕಲಂ 370 ಇರಲೇಬೇಕು ಎಂದು ಇತ್ತೀಚೆಗೆ ತಾನೇ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದರು.

ಇವೆಲ್ಲಾ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಹಲವಾರು ಸರಣಿ ಬೆಳವಣಿಗೆಗಳಿಗೆ ಕಾರಣವಾಗುವ ಬೆಳವಣಿಗೆ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Nanu Gouri Super BJP ena madidru Nanu AdanA OPAKOLOLA ANTANE HELTIYA SUPER

    NAANU GOURI ANTA HELI ELECTION ADAMELE ONE PERSON MISSING Next Nivu Agabardu Anta Nana Ase

LEAVE A REPLY

Please enter your comment!
Please enter your name here

- Advertisment -

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...