Homeಮುಖಪುಟಕಾಶ್ಮೀರದ ವಿಭಜನೆ: 370ನೇ ಕಲಂ ತೆಗೆದು ಹಾಕಿದ ಕೇಂದ್ರ ಸರ್ಕಾರ, ರಾಜ್ಯಸಭೆಯಲ್ಲಿ ಅಮಿತ್ ಷಾ ಮಂಡನೆ

ಕಾಶ್ಮೀರದ ವಿಭಜನೆ: 370ನೇ ಕಲಂ ತೆಗೆದು ಹಾಕಿದ ಕೇಂದ್ರ ಸರ್ಕಾರ, ರಾಜ್ಯಸಭೆಯಲ್ಲಿ ಅಮಿತ್ ಷಾ ಮಂಡನೆ

ಇನ್ನು ಮುಂದೆ ಜಮ್ಮು & ಕಾಶ್ಮೀರವು ಅಸೆಂಬ್ಲಿಯಿರುವ ಕೇಂದ್ರಾಡಳಿತ ಪ್ರದೇಶ ಮತ್ತು ಲಡಖ್ ಅಸೆಂಬ್ಲಿಯಿರದ ಕೇಂದ್ರಾಡಳಿತ ಪ್ರದೇಶವಾಗಲಿದೆ.

- Advertisement -
- Advertisement -

ಸಂವಿಧಾನದ 370ನೇ ವಿಧಿಯನ್ನು ತೆಗೆದು ಹಾಕಲಾಗಿದೆ ಎಂದು ಗೃಹ ಸಚಿವ ಅಮಿತ್ ಷಾ ಇಂದು ರಾಜ್ಯಸಭೆಯಲ್ಲಿ ಮಂಡಿಸಿದರು. ಜಮ್ಮು ಮತ್ತು ಕಾಶ್ಮೀರ ಪ್ರಾಂತವು ಭಾರತದ ಜೊತೆ ವಿಲೀನವಾಗಲು ಮಾಡಿಕೊಂಡಿದ್ದ ಒಪ್ಪಂದದ ಅನ್ವಯ ಸಂವಿಧಾನದಲ್ಲಿ 370ನೇ ವಿಧಿಯನ್ನು ಸೇರಿಸಲಾಗಿತ್ತು. ಅದರ ಪ್ರಕಾರ ಜಮ್ಮು & ಕಾಶ್ಮೀರಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳುವ ಯಾವುದೇ ತೀರ್ಮಾನವನ್ನು ಆ ರಾಜ್ಯದ ವಿಧಾನಸಭೆಯ ಒಪ್ಪಿಗೆಯಿಲ್ಲದಂತೆ ಮಾಡುವ ಹಾಗಿಲ್ಲ. ಹೀಗಿರುವಾಗ ಕೇಂದ್ರ ಸರ್ಕಾರವು ಆ ವಿಧಿಯನ್ನೇ ತೆಗೆದುಹಾಕಿದ್ದೇವೆ ಎಂದು ಘೋಷಿಸಿರುವುದು ಸಂವಿಧಾನಬದ್ಧವಾ ಎಂಬ ಪ್ರಶ್ನೆ ಏಳುತ್ತದೆ.

ಕಳೆದ ಒಂದು ವಾರದಿಂದ ಸುಮಾರು 45 ಸಾವಿರಕ್ಕೂ ಹೆಚ್ಚು ಸೇನಾಪಡೆಗಳನ್ನು ಕಾಶ್ಮೀರದಲ್ಲಿ ನಿಯೋಜಿಸಿದ್ದು ಮತ್ತು ನಿನ್ನೆ ಅಲ್ಲಿನ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಗೃಹಬಂಧನಕ್ಕೆ ಒಳಪಡಿಸಿದ್ದು ಹಲವು ವದಂತಿಗಳಿಗೆ ಕಾರಣವಾಗಿತ್ತು. ಕಾಶ್ಮೀರದಲ್ಲಿ ಏನೋ ಮಹತ್ವದ್ದು ನಡೆಯಲಿದೆ ಎಂಬುದು ಎಲ್ಲರಿಗೂ ಖಚಿತವಾಗಿತ್ತು. ಆದರೆ ಏನು ಎಂಬುದು ಎಲ್ಲರಿಗೂ ಪ್ರಶ್ನೆಯಾಗಿತ್ತು.

ಜಮ್ಮು ಮತ್ತು ಕಾಶ್ಮೀರವನ್ನು ತ್ರಿವಿಭಜನೆ ಮಾಡಿ, ಸಂವಿಧಾನದ ಕಲಂಗಳು ಅಪ್ರಸ್ತುತವಾಗುವಂತೆ ಮಾಡಲಾಗುತ್ತದೆ ಎಂಬ ವದಂತಿಯೂ ಇತ್ತು. ಇದೀಗ ಜಮ್ಮು & ಕಾಶ್ಮೀರವನ್ನು ವಿಭಜನೆ ಮಾಡಿ, ಜಮ್ಮು & ಕಾಶ್ಮೀರವನ್ನು ವಿಧಾನಸಭೆಯಿರುವ ಕೇಂದ್ರಾಡಳಿತ ಪ್ರದೇಶವನ್ನಾಗಿಯೂ, ಲಡಖ್ ವಿಧಾನಸಭೆಯಿರದ ಕೇಂದ್ರಾಡಳಿತ ಪ್ರದೇಶವನ್ನಾಗಿಯೂ ಮಾಡಲಾಗಿದೆ.

ಕಲಂ 370 ಅನ್ನು ರಾಷ್ಟ್ರಪತಿಗಳ ಆದೇಶದಿಂದ ತೆಗೆದುಹಾಕಲಾಗಿದೆಯೇ ಹೊರತು, ಸಂಸತ್ತಿನಲ್ಲಿ ಮೂರನೇ ಎರಡು ಬಹುಮತದಿಂದ ಅಲ್ಲ. ಹೀಗಾಗಿ ಒಂದು ವೇಳೆ ಸಂವಿಧಾನದ ಈ ಕಲಂ ಅನ್ನು ತೆಗೆದುಹಾಕುವುದಿದ್ದರೂ, ಅದನ್ನು ಸಂಸತ್ತಿನಲ್ಲಿ ಚರ್ಚಿಸಬೇಕಿತ್ತು. ಅದ್ಯಾವುದನ್ನೂ ಮಾಡದೇ ರಾಷ್ಟ್ರಪತಿಗಳ ಒಂದು ಆದೇಶದಿಂದ ಈ ರೀತಿ ಮಾಡುವುದು ಸಂವಿಧಾನಬದ್ಧವಾಗುತ್ತದೆಯೇ ಎಂಬ ಪ್ರಶ್ನೆಯೂ ಇದೆ. ಸದರಿ ಮಾಹಿತಿಯನ್ನು ರಾಜ್ಯಸಭೆಗೆ ಅಮಿತ್ ಷಾ ನೀಡಿದ ನಂತರ ಪ್ರತಿಪಕ್ಷಗಳು ತೀವ್ರವಾಗಿ ಪ್ರತಿಭಟಿಸಲಾರಂಭಿಸಿದರು. ಅದರ ನಂತರವೂ ಕಾಶ್ಮೀರಕ್ಕೆ ಸಂಬಂಧಿಸಿದ ಹಲವು ಮಸೂದೆಗಳನ್ನು ಅಮಿತ್ ಷಾ ಮಂಡಿಸುತ್ತಿದ್ದು, ಗದ್ದಲದಲ್ಲಿ ಸರಿಯಾಗಿ ಕೇಳಿಸುತ್ತಿಲ್ಲ.

ನಂತರ ಇದನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನೆ ಮಾಡಿದರೆ, ಸದರಿ ಆದೇಶವು ಊರ್ಜಿತವಾಗುತ್ತದೆಯೇ ಎಂಬ ಚರ್ಚೆ ಈಗಾಗಲೇ ಇದ್ದು, ಎರಡು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರ ಜನಾಂದೋಲನದ ಶೆಹ್ಲಾ ರಷೀದ್ ಅವರು ಬಿಡುಗಡೆ ಮಾಡಿದ ವಿಡಿಯೋದಲ್ಲೂ ಇದನ್ನು ಹೇಳಿದ್ದರು.
ಬಿಜೆಪಿಯ ಮಿತ್ರಪಕ್ಷ ಜೆಡಿಯು ಸಹಾ ಕಲಂ 370ರ ಪರವಾಗಿದ್ದು, ಪದೇ ಪದೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಹೀಗಾಗಿ ಸಂಸತ್ತಿನಲ್ಲಿ ಮೂರನೇ ಎರಡು ಬಹುಮತದಿಂದ ಇದನ್ನು ಸಾಧಿಸಿಕೊಳ್ಳುವುದು ಸಾಧ್ಯವಿರಲಿಲ್ಲ. ಆದ್ದರಿಂದಲೇ ಇಂತಹ ಕ್ರಮಕ್ಕೆ ಬಿಜೆಪಿ ಪಕ್ಷವು ಮುಂದಾಗಿರುವುದು ಎದ್ದು ಕಾಣುತ್ತಿದೆ.

ಕಳೆದ ಒಂದು ವಾರದಿಂದ ದೇಶದ ಆರ್ಥಿಕತೆಯು ತೀವ್ರ ಬಿಕ್ಕಟ್ಟಿನ ಕಡೆಗೆ ಸಾಗುತ್ತಿರುವ ಹಲವು ವರದಿಗಳು ಬಂದಿದ್ದವು. ಈ ಹಿಂದೆ ಮೋದಿಯವರ ಪ್ರಬಲ ಸಮರ್ಥಕರಾಗಿದ್ದ ಉದ್ದಿಮೆಪತಿಗಳೂ ಸಹಾ ಸರ್ಕಾರವನ್ನು ಟೀಕೆ ಮಾಡಲು ಆರಂಭಿಸಿದ್ದರು. ಆದ್ದರಿಂದಲೇ ಜಮ್ಮು ಮತ್ತು ಕಾಶ್ಮೀರದ ವಿಚಾರವನ್ನು ಸರ್ಕಾರವು ಕೈಗೆತ್ತಿಕೊಳ್ಳಲು ಹೊರಟಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.

ಸ್ವಾತಂತ್ರ್ಯಾನಂತರ ನಡೆದಿರುವ ಅತೀ ಮಹತ್ವದ ಬೆಳವಣಿಗೆಗಳಲ್ಲಿ ಇದೂ ಒಂದಾಗಿರಲಿದ್ದು, ಇದರಿಂದ ಕಾಶ್ಮೀರದಲ್ಲಿ ಉಂಟಾಗಬಹುದಾದ ಅಶಾಂತಿಯ ಕುರಿತು ಆತಂಕ ಎದುರಾಗಿದೆ. ಕಾಶ್ಮೀರವನ್ನು ಭಾರತದಲ್ಲಿ ಉಳಿಸಿಕೊಳ್ಳಬೇಕಾದರೆ ಕಲಂ 370 ಇರಲೇಬೇಕು ಎಂದು ಇತ್ತೀಚೆಗೆ ತಾನೇ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದರು.

ಇವೆಲ್ಲಾ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಹಲವಾರು ಸರಣಿ ಬೆಳವಣಿಗೆಗಳಿಗೆ ಕಾರಣವಾಗುವ ಬೆಳವಣಿಗೆ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Nanu Gouri Super BJP ena madidru Nanu AdanA OPAKOLOLA ANTANE HELTIYA SUPER

    NAANU GOURI ANTA HELI ELECTION ADAMELE ONE PERSON MISSING Next Nivu Agabardu Anta Nana Ase

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...