Homeಮುಖಪುಟಕಾಶ್ಮೀರದ ವಿಭಜನೆ: 370ನೇ ಕಲಂ ತೆಗೆದು ಹಾಕಿದ ಕೇಂದ್ರ ಸರ್ಕಾರ, ರಾಜ್ಯಸಭೆಯಲ್ಲಿ ಅಮಿತ್ ಷಾ ಮಂಡನೆ

ಕಾಶ್ಮೀರದ ವಿಭಜನೆ: 370ನೇ ಕಲಂ ತೆಗೆದು ಹಾಕಿದ ಕೇಂದ್ರ ಸರ್ಕಾರ, ರಾಜ್ಯಸಭೆಯಲ್ಲಿ ಅಮಿತ್ ಷಾ ಮಂಡನೆ

ಇನ್ನು ಮುಂದೆ ಜಮ್ಮು & ಕಾಶ್ಮೀರವು ಅಸೆಂಬ್ಲಿಯಿರುವ ಕೇಂದ್ರಾಡಳಿತ ಪ್ರದೇಶ ಮತ್ತು ಲಡಖ್ ಅಸೆಂಬ್ಲಿಯಿರದ ಕೇಂದ್ರಾಡಳಿತ ಪ್ರದೇಶವಾಗಲಿದೆ.

- Advertisement -
- Advertisement -

ಸಂವಿಧಾನದ 370ನೇ ವಿಧಿಯನ್ನು ತೆಗೆದು ಹಾಕಲಾಗಿದೆ ಎಂದು ಗೃಹ ಸಚಿವ ಅಮಿತ್ ಷಾ ಇಂದು ರಾಜ್ಯಸಭೆಯಲ್ಲಿ ಮಂಡಿಸಿದರು. ಜಮ್ಮು ಮತ್ತು ಕಾಶ್ಮೀರ ಪ್ರಾಂತವು ಭಾರತದ ಜೊತೆ ವಿಲೀನವಾಗಲು ಮಾಡಿಕೊಂಡಿದ್ದ ಒಪ್ಪಂದದ ಅನ್ವಯ ಸಂವಿಧಾನದಲ್ಲಿ 370ನೇ ವಿಧಿಯನ್ನು ಸೇರಿಸಲಾಗಿತ್ತು. ಅದರ ಪ್ರಕಾರ ಜಮ್ಮು & ಕಾಶ್ಮೀರಕ್ಕೆ ಸಂಬಂಧಿಸಿದಂತೆ ತೆಗೆದುಕೊಳ್ಳುವ ಯಾವುದೇ ತೀರ್ಮಾನವನ್ನು ಆ ರಾಜ್ಯದ ವಿಧಾನಸಭೆಯ ಒಪ್ಪಿಗೆಯಿಲ್ಲದಂತೆ ಮಾಡುವ ಹಾಗಿಲ್ಲ. ಹೀಗಿರುವಾಗ ಕೇಂದ್ರ ಸರ್ಕಾರವು ಆ ವಿಧಿಯನ್ನೇ ತೆಗೆದುಹಾಕಿದ್ದೇವೆ ಎಂದು ಘೋಷಿಸಿರುವುದು ಸಂವಿಧಾನಬದ್ಧವಾ ಎಂಬ ಪ್ರಶ್ನೆ ಏಳುತ್ತದೆ.

ಕಳೆದ ಒಂದು ವಾರದಿಂದ ಸುಮಾರು 45 ಸಾವಿರಕ್ಕೂ ಹೆಚ್ಚು ಸೇನಾಪಡೆಗಳನ್ನು ಕಾಶ್ಮೀರದಲ್ಲಿ ನಿಯೋಜಿಸಿದ್ದು ಮತ್ತು ನಿನ್ನೆ ಅಲ್ಲಿನ ಮಾಜಿ ಮುಖ್ಯಮಂತ್ರಿಗಳಾದ ಮೆಹಬೂಬಾ ಮುಫ್ತಿ ಮತ್ತು ಒಮರ್ ಅಬ್ದುಲ್ಲಾ ಅವರನ್ನು ಗೃಹಬಂಧನಕ್ಕೆ ಒಳಪಡಿಸಿದ್ದು ಹಲವು ವದಂತಿಗಳಿಗೆ ಕಾರಣವಾಗಿತ್ತು. ಕಾಶ್ಮೀರದಲ್ಲಿ ಏನೋ ಮಹತ್ವದ್ದು ನಡೆಯಲಿದೆ ಎಂಬುದು ಎಲ್ಲರಿಗೂ ಖಚಿತವಾಗಿತ್ತು. ಆದರೆ ಏನು ಎಂಬುದು ಎಲ್ಲರಿಗೂ ಪ್ರಶ್ನೆಯಾಗಿತ್ತು.

ಜಮ್ಮು ಮತ್ತು ಕಾಶ್ಮೀರವನ್ನು ತ್ರಿವಿಭಜನೆ ಮಾಡಿ, ಸಂವಿಧಾನದ ಕಲಂಗಳು ಅಪ್ರಸ್ತುತವಾಗುವಂತೆ ಮಾಡಲಾಗುತ್ತದೆ ಎಂಬ ವದಂತಿಯೂ ಇತ್ತು. ಇದೀಗ ಜಮ್ಮು & ಕಾಶ್ಮೀರವನ್ನು ವಿಭಜನೆ ಮಾಡಿ, ಜಮ್ಮು & ಕಾಶ್ಮೀರವನ್ನು ವಿಧಾನಸಭೆಯಿರುವ ಕೇಂದ್ರಾಡಳಿತ ಪ್ರದೇಶವನ್ನಾಗಿಯೂ, ಲಡಖ್ ವಿಧಾನಸಭೆಯಿರದ ಕೇಂದ್ರಾಡಳಿತ ಪ್ರದೇಶವನ್ನಾಗಿಯೂ ಮಾಡಲಾಗಿದೆ.

ಕಲಂ 370 ಅನ್ನು ರಾಷ್ಟ್ರಪತಿಗಳ ಆದೇಶದಿಂದ ತೆಗೆದುಹಾಕಲಾಗಿದೆಯೇ ಹೊರತು, ಸಂಸತ್ತಿನಲ್ಲಿ ಮೂರನೇ ಎರಡು ಬಹುಮತದಿಂದ ಅಲ್ಲ. ಹೀಗಾಗಿ ಒಂದು ವೇಳೆ ಸಂವಿಧಾನದ ಈ ಕಲಂ ಅನ್ನು ತೆಗೆದುಹಾಕುವುದಿದ್ದರೂ, ಅದನ್ನು ಸಂಸತ್ತಿನಲ್ಲಿ ಚರ್ಚಿಸಬೇಕಿತ್ತು. ಅದ್ಯಾವುದನ್ನೂ ಮಾಡದೇ ರಾಷ್ಟ್ರಪತಿಗಳ ಒಂದು ಆದೇಶದಿಂದ ಈ ರೀತಿ ಮಾಡುವುದು ಸಂವಿಧಾನಬದ್ಧವಾಗುತ್ತದೆಯೇ ಎಂಬ ಪ್ರಶ್ನೆಯೂ ಇದೆ. ಸದರಿ ಮಾಹಿತಿಯನ್ನು ರಾಜ್ಯಸಭೆಗೆ ಅಮಿತ್ ಷಾ ನೀಡಿದ ನಂತರ ಪ್ರತಿಪಕ್ಷಗಳು ತೀವ್ರವಾಗಿ ಪ್ರತಿಭಟಿಸಲಾರಂಭಿಸಿದರು. ಅದರ ನಂತರವೂ ಕಾಶ್ಮೀರಕ್ಕೆ ಸಂಬಂಧಿಸಿದ ಹಲವು ಮಸೂದೆಗಳನ್ನು ಅಮಿತ್ ಷಾ ಮಂಡಿಸುತ್ತಿದ್ದು, ಗದ್ದಲದಲ್ಲಿ ಸರಿಯಾಗಿ ಕೇಳಿಸುತ್ತಿಲ್ಲ.

ನಂತರ ಇದನ್ನು ಸುಪ್ರೀಂಕೋರ್ಟಿನಲ್ಲಿ ಪ್ರಶ್ನೆ ಮಾಡಿದರೆ, ಸದರಿ ಆದೇಶವು ಊರ್ಜಿತವಾಗುತ್ತದೆಯೇ ಎಂಬ ಚರ್ಚೆ ಈಗಾಗಲೇ ಇದ್ದು, ಎರಡು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರ ಜನಾಂದೋಲನದ ಶೆಹ್ಲಾ ರಷೀದ್ ಅವರು ಬಿಡುಗಡೆ ಮಾಡಿದ ವಿಡಿಯೋದಲ್ಲೂ ಇದನ್ನು ಹೇಳಿದ್ದರು.
ಬಿಜೆಪಿಯ ಮಿತ್ರಪಕ್ಷ ಜೆಡಿಯು ಸಹಾ ಕಲಂ 370ರ ಪರವಾಗಿದ್ದು, ಪದೇ ಪದೇ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಹೀಗಾಗಿ ಸಂಸತ್ತಿನಲ್ಲಿ ಮೂರನೇ ಎರಡು ಬಹುಮತದಿಂದ ಇದನ್ನು ಸಾಧಿಸಿಕೊಳ್ಳುವುದು ಸಾಧ್ಯವಿರಲಿಲ್ಲ. ಆದ್ದರಿಂದಲೇ ಇಂತಹ ಕ್ರಮಕ್ಕೆ ಬಿಜೆಪಿ ಪಕ್ಷವು ಮುಂದಾಗಿರುವುದು ಎದ್ದು ಕಾಣುತ್ತಿದೆ.

ಕಳೆದ ಒಂದು ವಾರದಿಂದ ದೇಶದ ಆರ್ಥಿಕತೆಯು ತೀವ್ರ ಬಿಕ್ಕಟ್ಟಿನ ಕಡೆಗೆ ಸಾಗುತ್ತಿರುವ ಹಲವು ವರದಿಗಳು ಬಂದಿದ್ದವು. ಈ ಹಿಂದೆ ಮೋದಿಯವರ ಪ್ರಬಲ ಸಮರ್ಥಕರಾಗಿದ್ದ ಉದ್ದಿಮೆಪತಿಗಳೂ ಸಹಾ ಸರ್ಕಾರವನ್ನು ಟೀಕೆ ಮಾಡಲು ಆರಂಭಿಸಿದ್ದರು. ಆದ್ದರಿಂದಲೇ ಜಮ್ಮು ಮತ್ತು ಕಾಶ್ಮೀರದ ವಿಚಾರವನ್ನು ಸರ್ಕಾರವು ಕೈಗೆತ್ತಿಕೊಳ್ಳಲು ಹೊರಟಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.

ಸ್ವಾತಂತ್ರ್ಯಾನಂತರ ನಡೆದಿರುವ ಅತೀ ಮಹತ್ವದ ಬೆಳವಣಿಗೆಗಳಲ್ಲಿ ಇದೂ ಒಂದಾಗಿರಲಿದ್ದು, ಇದರಿಂದ ಕಾಶ್ಮೀರದಲ್ಲಿ ಉಂಟಾಗಬಹುದಾದ ಅಶಾಂತಿಯ ಕುರಿತು ಆತಂಕ ಎದುರಾಗಿದೆ. ಕಾಶ್ಮೀರವನ್ನು ಭಾರತದಲ್ಲಿ ಉಳಿಸಿಕೊಳ್ಳಬೇಕಾದರೆ ಕಲಂ 370 ಇರಲೇಬೇಕು ಎಂದು ಇತ್ತೀಚೆಗೆ ತಾನೇ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹೇಳಿದ್ದರು.

ಇವೆಲ್ಲಾ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಹಲವಾರು ಸರಣಿ ಬೆಳವಣಿಗೆಗಳಿಗೆ ಕಾರಣವಾಗುವ ಬೆಳವಣಿಗೆ ಇದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Nanu Gouri Super BJP ena madidru Nanu AdanA OPAKOLOLA ANTANE HELTIYA SUPER

    NAANU GOURI ANTA HELI ELECTION ADAMELE ONE PERSON MISSING Next Nivu Agabardu Anta Nana Ase

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...