Homeಮುಖಪುಟನಿಮ್ಮೊಳಗಿನ ಮಗುವನ್ನು ಸಂರಕ್ಷಿಸುವ ಕಲೆ: ಮರೆಯಬೇಡಿ ಇದು ಬಹಳ ಮುಖ್ಯ

ನಿಮ್ಮೊಳಗಿನ ಮಗುವನ್ನು ಸಂರಕ್ಷಿಸುವ ಕಲೆ: ಮರೆಯಬೇಡಿ ಇದು ಬಹಳ ಮುಖ್ಯ

ಜೀವನದಲ್ಲಿ ಎಲ್ಲವೂ ಒಪ್ಪ-ಓರಣವಾಗಿರಬೇಕಿಲ್ಲ. ಮಕ್ಕಳಂತೆ ವಸ್ತುಗಳು ಚೆಲ್ಲಪಿಲ್ಲಿಯಾಗಿರಲು ಬಿಡಿ. ಅವ್ಯವಸ್ಥೆಯಲ್ಲೂ ಜಗತ್ತು ನಡೆಯುತ್ತಿರುತ್ತದೆ ಎಂಬುದನ್ನು ಮರೆಯಬೇಡಿ.

- Advertisement -
- Advertisement -

ಜೀವನ ಕಲೆಗಳು: ಅಂಕಣ-29

ನಿಮ್ಮೊಳಗಿನ ಮಗುವನ್ನು ಸಂರಕ್ಷಿಸುವ ಕಲೆ

ಲೇಖನದ ಶೀರ್ಷಿಕೆ ಓದಿ ಚಕಿತರಾಗಬೇಡಿ. ಹೌದು, ನಮ್ಮೆಲ್ಲರೊಳಗೂ ಒಂದು ಮುಗ್ಧ ಮಗು ಇದೆ, ಇತ್ತು, ಇನ್ನೂ ಇರಬಹುದು. ಕೆಲವರು ಬೇಗನೇ ದೊಡ್ಡವರಾಗುವ ತವಕದಲ್ಲಿ ಆ ಮಗುವನ್ನು ತಿಳಿದೋ ತಿಳಿಯದೆಯೋ ಹತ್ಯೆಗೈದಿರುತ್ತಾರೆ ಅಥವಾ ಮಾರಣಾಂತಿಕವಾಗಿ ಘಾಸಿಗೊಳಿಸಿರುತ್ತಾರೆ. ಸಂತೋಷದ ಸಂಗತಿಯೆಂದರೆ ಈ ಮಗುವನ್ನು ದೃಢ ಪ್ರಯತ್ನದಿಂದ ಮತ್ತೆ ಜೀವಂತಗೊಳಿಸಬಹುದು.

“ನಿಮ್ಮ ಆತ್ಮಕ್ಕೆ ಸನಿಹದಲ್ಲಿರುವ ಈ ಮಗುವಿನ ಕೈ ಎಂದಿಗೂ ಬಿಡಬೇಡಿ, ಈಕೆಂದರೆ ಈ ಮಗುವಿಗೆ ಅಸಾಧ್ಯ ಎನ್ನುವುದು ಏನೂ ಇಲ್ಲ” ಎಂದು ಬ್ರಾಜಿಲ್ ದೇಶದ ಖ್ಯಾತ ಲೇಖಕ ಮತ್ತು ಕವಿ ಪಾವ್ಲೋ ಕೊಯಿಲ್ಹೋ ಹೇಳುತ್ತಾರೆ.

ಇಂದಿನ ಜೀವನದ ಭಯಾನಕ ಆತಂಕಗಳ ಮಧ್ಯೆ ಬದುಕಲು ಕೇವಲ ಮಕ್ಕಳಿಗೆ ಮಾತ್ರ ಸಾಧ್ಯ. ಸಿರಿಯಾ-ಇರಾಕ್ ನಂತಹ ಯುದ್ಧಗ್ರಸ್ಥ ಭಾಗದಲ್ಲೂ ಸಹ ಮಕ್ಕಳು ನಿಶ್ಚಿಂತೆಯಿಂದ ಆಟವಾಡಿಕೊಂಡಿರುವುದನ್ನು ನೀವು ದೃಶ್ಯ ಮಾಧ್ಯಮದಲ್ಲಿ ನೋಡಿರಬಹುದು. ಈ ಮಕ್ಕಳಿಗೆ ಯಾವುದೇ ಸರಹದ್ದು, ಬೇಲಿಗಳು ಇರುವುದಿಲ್ಲ. ಇದ್ದರೂ ಅವರು ಅದನ್ನು ಲೆಕ್ಕಿಸುವುದಿಲ್ಲ. ಯಾವಾಗಲೂ ಸಕಾರತ್ಮಕವಾಗಿ ಚಿಂತಿಸುತ್ತಾರೆ. ಇದೇ ಮಗು ನಿಮಗೆ ಮತ್ತೆ ಮುಕ್ತವಾಗಿ ಜೀವಿಸುವ ಪಾಠ ಕಲಿಸುವ ಸಾಧನವಾಗಬಹುದು. ದೊಡ್ಡವರೂ ಸಹ ಒಂದಲ್ಲ ಒಮ್ಮೆ ಮತ್ತೆ ತಮ್ಮ ಬಾಲ್ಯ ಹಿಂತಿರುಗಬೇಕು ಎಂದು ಹಂಬಲಿಸುವುದನ್ನು ನೀವು ನೋಡಿರಬಹುದು. ಆದ್ದರಿಂದ ಈ ಮಗುವನ್ನು ಕೊಲ್ಲಬೇಡಿ. ಅದರೊಂದಿಗೆ ಮಾತನಾಡಿ, ಅದು ಏನು ಹೇಳುತ್ತಿದೆ ಎಂಬುದನ್ನು ಗಮನವಿಟ್ಟು ಕೇಳಿಸಿಕೊಳ್ಳಿ.

ಈ ಮಗುವಿಗೆ ಸದಾ ಹಸಿವು. ಎಲ್ಲವನ್ನೂ ತಿಂದು ಜೀರ್ಣಿಸಿಕೊಳ್ಳುವ ಹಸಿವು. ಆದ್ದರಿಂದ ಈ ಮಗುವನ್ನು ಉಪವಾಸ ಕೆಡವಬೇಡಿ. ಇದರ ಲಾಲನೆ ಪೋಷಣೆ ಸರಿಯಾಗಿ ಮಾಡಿ. ಹೇಗೆ ನಿಮ್ಮ ಸ್ವಂತ ಮಗು ಹಸಿದುಕೊಂಡಿದ್ದರೆ ನಿಮಗೆ ಸಹಿಸಲು ಸಾಧ್ಯವಿಲ್ಲವೋ, ಅದೇ ರೀತಿ ಈ ಮಗುವನ್ನೂ ಸರಿಯಾಗಿ ನೋಡಿಕೊಳ್ಳಿ. ಈ ಮಗು ತುಂಬ ಕುತೂಹಲವುಳ್ಳದ್ದು. ಎಲ್ಲವನ್ನೂ ಅರಿಯುವ ಈ ಕುತೂಹಲವೇ ಅದಕ್ಕೆ ದಿನನಿತ್ಯ ಹೊಸ ವಿಷಯ ಕಲಿಯುವಂತೆ ಪ್ರೇರೇಪಿಸುತ್ತದೆ.ಇದರ ಜ್ಞಾನಾರ್ಜನೆಗೆ ಸಹಕಾರಿಯಾಗಿ. ಕೌನ್ ಬನೇಗಾ ಕರೋಡಪತಿ ಎಂಬ ಟಿವಿ ಮಾಲಿಕೆಯೊಂದರಲ್ಲಿ ಅದರ ನಿರೂಪಕ ಅಮಿತಾಭ್ ಬಚ್ಚನ್ ಹೇಳಿದಂತೆ, “ಸೀಖನಾ ಬಂದ್ ತೋ ಜೀತನಾ ಬಂದ್” (ಕಲಿಯುವುದನ್ನು ನಿಲ್ಲಿಸಿದಾಗ ಗೆಲ್ಲುವುದೂ ನಿಲ್ಲುತ್ತದೆ).ಈ ಮಗುವಿಗೆ ಸಂರಕ್ಷಣೆ ಬೇಕು, ನಿಮ್ಮಂತೆ ದಿನಕ್ಕೆ 12 ತಾಸು ವಾರಕ್ಕೆ 7 ದಿನ ದುಡಿಯಲು ಇದಕ್ಕೆ ಸಾಧ್ಯವಿಲ್ಲ. ಹಾಗಾಗಿ ಇದಕ್ಕೆ ಹಾಯಾಗಿರಲು, ವಿಶ್ರಾಂತಿ ಪಡೆಯಲು ಸಾಕಷ್ಟು ಸಮಯ ಬೇಕು. ಅದನ್ನು ಈ ಮಗುವಿನಿಂದ ಕಿತ್ತುಕೊಳ್ಳಬೇಡಿ.

ಈ ಮಗುವಿಗೆ ಮಗುವಾಗಿ ಇರಲು ಇಷ್ಟ. ಆದ್ದರಿಂದ ನೀವು ನಿಮಗೆ ವಯಸ್ಸಾಯಿತು, ನಾವು ಹೇಗೆ ಮಕ್ಕಳಂತೆ ವರ್ತಿಸಬಹುದು ಎಂದು ಹೇಳಿಕೊಳ್ಳುವುದನ್ನು ಬಿಡಿ. ಮಗುವಿನಂತೆ ಜೀವನವನ್ನು ಆಸ್ವಾದಿಸುವುದನ್ನು ಕಲಿಯಿರಿ. ಕುಣಿದು ಕುಪ್ಪಳಿಸಿ. ನಿಮ್ಮ ದಿನ ನಿತ್ಯದ ಬಿಗುಪು ಕಡಿಮೆಯಾಗುತ್ತದೆ. ತಂದೆ-ತಾಯಿಗೆ ಮಗುವಿನೊಂದಿಗೆ ಸಂತೋಷದ ಸಮಯ ಹೆಚ್ಚಾಗಿ ಕಳೆಯಲು ಸಾಧ್ಯವಾಗುವುದಿಲ್ಲ ಏಕೆಂದರೆ ಅವರು ಮಗುವಿನೊಂದಿಗೆ ಮಗುವಾಗಿರದೆ, ಪೋಷಕರಾಗುತಾರೆ, ಶಿಕ್ಷಕರಾಗುತ್ತಾರೆ. ಆದರೆ ಅಜ್ಜಿ-ತಾತ ಈ ಪೋಷಕ-ಶಿಕ್ಷಕ ಕಟ್ಟುಪಾಡಿನಿಂದ ಹೊರಗುಳಿದು ಮಕ್ಕಳೊಂದಿಗೆ ಮಕ್ಕಳಾಗಿ ತಾವೂ ಹೆಚ್ಚು ಸಂತೋಷವಾಗಿರುತ್ತಾರೆ ಮತ್ತು ಮಕ್ಕಳೂ ಸಹ ಅಜ್ಜಿ-ತಾತನ ಜೊತೆಯನ್ನು ಹೆಚ್ಚಾಗಿ ಬಯಸುತ್ತಾರೆ.

ಮಕ್ಕಳು ಮೂರ್ಖತನ ಮಾಡುತ್ತಾರೆ, ಅದು ಅವರ ಹಕ್ಕು. ಆ ಮೂರ್ಖತನ ಅವರಿಗೆ ಜೀವನದುದ್ದಕ್ಕೂ ನೆನಪಿನಲ್ಲಿ ಉಳಿಯುವಂತಹ ಪಾಠ ಕಲಿಸುತ್ತದೆ. ಆಪಲ್ ಕಂಪನಿಯ ಸಂಸ್ಥಾಪಕ ಅಮೇರಿಕದ ಸ್ಟೀವ್ ಜಾಬ್ಸ್ ಅವರ ಒಂದು ಪ್ರಖ್ಯಾತ ಹೇಳಿಕೆ “ಸ್ಟೇ ಹಂಗ್ರೀ, ಸ್ಟೇ ಫೂಲಿಷ್” (ಸದಾ ಹಸಿದುಕೊಂಡಿರು, ಸದಾ ಮೂರ್ಖನಾಗಿರು) ಪ್ರಕಾರ ಈ ಹಸಿವು ನಮ್ಮನ್ನು ಏನಾದರೂ ಮಾಡಲು ಪ್ರಚೋದಿಸುತ್ತದೆ ಮತ್ತು ಈ ಮೂರ್ಖತನ ನಮಗೆ ಕಲಿಯಲು ಸಹಕಾರಿಯಾಗುತ್ತದೆ. ಒಟ್ಟಾಗಿ ಇವೆರಡು ನಮ್ಮನ್ನು ಉನ್ನತ ಮಟ್ಟಕ್ಕೆ ಏರಿಸುತ್ತವೆ. ಮಕ್ಕಳಿಗೆ ಯಾವುದು ಅಸಾಧ್ಯ ಎಂಬುದು ತಿಳಿದಿರುವುದಿಲ್ಲ, ಹಾಗಾಗಿ ಅವರು ಅಸಾಧ್ಯವಾದುದನ್ನು ಮಾಡಲು ಸದಾ ಪ್ರಯತ್ನಿಸುತ್ತಾರೆ ಮತ್ತು ಅದರಲ್ಲಿ ಸಫಲರೂ ಆಗುತ್ತಾರೆ.

ಜೀವನದ ಎಲ್ಲಾ ಸನ್ನಿವೇಶಗಳೂ ಸಮಸ್ಯೆಗಳಲ್ಲ, ಅದನ್ನು ಪರಿಹರಿಸಲು ಯಾರೂ ನಮಗೆ ಗುತ್ತಿಗೆ ಕೊಟ್ಟಿಲ್ಲ. “ಲೋಕದ ಡೊಂಕ ನೀವೇಕೆ ತಿದ್ದುವಿರಿಯ್ಯಾ”ಎಂದು ಬಸವಣ್ಣನವರು ಹೇಳಿದ ಹಾಗೆ, ಜೀವನವನ್ನು ಬಂದಂತೆ ಸ್ವೀಕರಿಸಬೇಕು. ಏಕೆಂದರೆ ಯಾರ ಕೈಯಲ್ಲಿ ಸುತ್ತಿಗೆ ಇರುತ್ತದೋ ಅವರಿಗೆ ಎಲ್ಲವೂ ಮೊಳೆಯಂತೆ ಕಾಣುತ್ತದೆ; ಯಾರ ಕೈಯಲ್ಲಿ ಸ್ಪ್ಯಾನರ್ ಇರುತ್ತದೋ ಅವರಿಗೆ ಎಲ್ಲವೂ ಸಡಿಲವಾದ, ಬಿಗಿಯಾಗಿ ಭದ್ರಪಡಿಸಬೇಕಾಗಿರುವ, ನಟ್-ಬೋಲ್ಟಿನಂತೆ ಕಾಣುತ್ತದೆ. ಆ ಸುತ್ತಿಗೆ, ಆ ಸ್ಪ್ಯಾನರ್ ಬದಿಗಿಡಿ. ಜೀವನವನ್ನು ಮಗುವಿನ ದೃಷ್ಟಿಕೋನದಿಂದ ನೋಡಿ, ಅದರಿಂದ ಏನು ಕಲಿಯಬಹುದು, ಅದನ್ನು ಕಲಿಯಿರಿ.

ಜೀವನದಲ್ಲಿ ಎಲ್ಲವೂ ಒಪ್ಪ-ಓರಣವಾಗಿರಬೇಕಿಲ್ಲ. ಮಕ್ಕಳಂತೆ ವಸ್ತುಗಳು ಚೆಲ್ಲಪಿಲ್ಲಿಯಾಗಿರಲು ಬಿಡಿ. ಅವ್ಯವಸ್ಥೆಯಲ್ಲೂ ಜಗತ್ತು ನಡೆಯುತ್ತಿರುತ್ತದೆ ಎಂಬುದನ್ನು ಮರೆಯಬೇಡಿ.

ನಿಮ್ಮ ಬಾಲ್ಯದ ನೆನಪನ್ನು ಭದ್ರವಾಗಿರಿಸಿಕೊಳ್ಳಿ. ನೀವು ಮಾಡಿದ ತಪ್ಪುಗಳು, ಚೇಷ್ಟೆಗಳು ಎಂದಿದ್ದರೂ ನಿಮಗೆ ಸಂತೋಷ ನೀಡುವ ಚಿಲುಮೆಗಳು. ಅದು ಬತ್ತದಂತೆ ಜಾಗೃತೆ ವಹಿಸಿ. ಅದೇ ರೀತಿ ಮಕ್ಕಳು ತಮಗೆ ಬೇಡವಾದುದನ್ನು ಎಸೆಯುತ್ತಿರುತ್ತವೆ, ನೀವೂ ಸಹ ಬೇಡವಾದ ಕಹಿ ನೆನಪುಗಳ, ಸಂಬಂಧಗಳ ಭಾರವಾದ ಮೂಟೆ ಜೀವನವಿಡೀ ಹೊರುವುದನ್ನು ಬಿಡಿ, ಅವನ್ನು ಎತ್ತೆಸೆಯಿರಿ.

ಮಿಕ್ಕ ಮಕ್ಕಳಂತೆ ಈ ಮಗುವಿಗೂ ಪ್ರೀತಿ ಬೇಕು. ಉಡುಗೊರೆ ಬೇಕು. ಆದ್ದರಿಂದ ನಿಮ್ಮ ಕಲ್ಪನಾಶಕ್ತಿ ಉಪಯೋಗಿಸಿ ಇದರ ಜೊತೆಗೂ ನಿಮ್ಮ ಅಮೂಲ್ಯವಾದ ಸಮಯ ಕಳೆಯಿರಿ, ನಿಮ್ಮ ಪ್ರೀತಿ ತೋರಿಸಿ, ಉಡುಗೊರೆಗಳನ್ನು ನೀಡಿ. ಆ ಮಗುವೂ ನಿಮ್ಮ ಭಾವನೆಗಳನ್ನು ಬಡ್ಡಿಯೊಂದಿಗೆ ಹಿಂತಿರುಗಿಸುತ್ತದೆ.

“ವಿಶ್ವದ ನಿಜವಾದ ಸಮಸ್ಯೆ ಎಂದರೆ (ವಿಶ್ವದ) ಬಹುತೇಕ ಜನ ಬೇಗ ವಯಸ್ಕರಾಗುತ್ತಾರೆ” ಎನ್ನುತ್ತಾರೆ ಮಕ್ಕಳ ಅಚ್ಚುಮೆಚ್ಚಿನ ಖ್ಯಾತ ಕಾರ್ಟೂನ್ ಚಿತ್ರ ನಿರ್ಮಾಪಕ ವಾಲ್ಟ್ ಡಿಸ್ನಿ. ನೀವಾದರೂ ವಯಸ್ಕರಾಗದೇ ನಿಮ್ಮೊಳಗಿರುವ ಮಗುವನ್ನು ಸಂರಕ್ಷಿಸಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...