Homeಮುಖಪುಟನಿಮ್ಮೊಳಗಿನ ಮಗುವನ್ನು ಸಂರಕ್ಷಿಸುವ ಕಲೆ: ಮರೆಯಬೇಡಿ ಇದು ಬಹಳ ಮುಖ್ಯ

ನಿಮ್ಮೊಳಗಿನ ಮಗುವನ್ನು ಸಂರಕ್ಷಿಸುವ ಕಲೆ: ಮರೆಯಬೇಡಿ ಇದು ಬಹಳ ಮುಖ್ಯ

ಜೀವನದಲ್ಲಿ ಎಲ್ಲವೂ ಒಪ್ಪ-ಓರಣವಾಗಿರಬೇಕಿಲ್ಲ. ಮಕ್ಕಳಂತೆ ವಸ್ತುಗಳು ಚೆಲ್ಲಪಿಲ್ಲಿಯಾಗಿರಲು ಬಿಡಿ. ಅವ್ಯವಸ್ಥೆಯಲ್ಲೂ ಜಗತ್ತು ನಡೆಯುತ್ತಿರುತ್ತದೆ ಎಂಬುದನ್ನು ಮರೆಯಬೇಡಿ.

- Advertisement -
- Advertisement -

ಜೀವನ ಕಲೆಗಳು: ಅಂಕಣ-29

ನಿಮ್ಮೊಳಗಿನ ಮಗುವನ್ನು ಸಂರಕ್ಷಿಸುವ ಕಲೆ

ಲೇಖನದ ಶೀರ್ಷಿಕೆ ಓದಿ ಚಕಿತರಾಗಬೇಡಿ. ಹೌದು, ನಮ್ಮೆಲ್ಲರೊಳಗೂ ಒಂದು ಮುಗ್ಧ ಮಗು ಇದೆ, ಇತ್ತು, ಇನ್ನೂ ಇರಬಹುದು. ಕೆಲವರು ಬೇಗನೇ ದೊಡ್ಡವರಾಗುವ ತವಕದಲ್ಲಿ ಆ ಮಗುವನ್ನು ತಿಳಿದೋ ತಿಳಿಯದೆಯೋ ಹತ್ಯೆಗೈದಿರುತ್ತಾರೆ ಅಥವಾ ಮಾರಣಾಂತಿಕವಾಗಿ ಘಾಸಿಗೊಳಿಸಿರುತ್ತಾರೆ. ಸಂತೋಷದ ಸಂಗತಿಯೆಂದರೆ ಈ ಮಗುವನ್ನು ದೃಢ ಪ್ರಯತ್ನದಿಂದ ಮತ್ತೆ ಜೀವಂತಗೊಳಿಸಬಹುದು.

“ನಿಮ್ಮ ಆತ್ಮಕ್ಕೆ ಸನಿಹದಲ್ಲಿರುವ ಈ ಮಗುವಿನ ಕೈ ಎಂದಿಗೂ ಬಿಡಬೇಡಿ, ಈಕೆಂದರೆ ಈ ಮಗುವಿಗೆ ಅಸಾಧ್ಯ ಎನ್ನುವುದು ಏನೂ ಇಲ್ಲ” ಎಂದು ಬ್ರಾಜಿಲ್ ದೇಶದ ಖ್ಯಾತ ಲೇಖಕ ಮತ್ತು ಕವಿ ಪಾವ್ಲೋ ಕೊಯಿಲ್ಹೋ ಹೇಳುತ್ತಾರೆ.

ಇಂದಿನ ಜೀವನದ ಭಯಾನಕ ಆತಂಕಗಳ ಮಧ್ಯೆ ಬದುಕಲು ಕೇವಲ ಮಕ್ಕಳಿಗೆ ಮಾತ್ರ ಸಾಧ್ಯ. ಸಿರಿಯಾ-ಇರಾಕ್ ನಂತಹ ಯುದ್ಧಗ್ರಸ್ಥ ಭಾಗದಲ್ಲೂ ಸಹ ಮಕ್ಕಳು ನಿಶ್ಚಿಂತೆಯಿಂದ ಆಟವಾಡಿಕೊಂಡಿರುವುದನ್ನು ನೀವು ದೃಶ್ಯ ಮಾಧ್ಯಮದಲ್ಲಿ ನೋಡಿರಬಹುದು. ಈ ಮಕ್ಕಳಿಗೆ ಯಾವುದೇ ಸರಹದ್ದು, ಬೇಲಿಗಳು ಇರುವುದಿಲ್ಲ. ಇದ್ದರೂ ಅವರು ಅದನ್ನು ಲೆಕ್ಕಿಸುವುದಿಲ್ಲ. ಯಾವಾಗಲೂ ಸಕಾರತ್ಮಕವಾಗಿ ಚಿಂತಿಸುತ್ತಾರೆ. ಇದೇ ಮಗು ನಿಮಗೆ ಮತ್ತೆ ಮುಕ್ತವಾಗಿ ಜೀವಿಸುವ ಪಾಠ ಕಲಿಸುವ ಸಾಧನವಾಗಬಹುದು. ದೊಡ್ಡವರೂ ಸಹ ಒಂದಲ್ಲ ಒಮ್ಮೆ ಮತ್ತೆ ತಮ್ಮ ಬಾಲ್ಯ ಹಿಂತಿರುಗಬೇಕು ಎಂದು ಹಂಬಲಿಸುವುದನ್ನು ನೀವು ನೋಡಿರಬಹುದು. ಆದ್ದರಿಂದ ಈ ಮಗುವನ್ನು ಕೊಲ್ಲಬೇಡಿ. ಅದರೊಂದಿಗೆ ಮಾತನಾಡಿ, ಅದು ಏನು ಹೇಳುತ್ತಿದೆ ಎಂಬುದನ್ನು ಗಮನವಿಟ್ಟು ಕೇಳಿಸಿಕೊಳ್ಳಿ.

ಈ ಮಗುವಿಗೆ ಸದಾ ಹಸಿವು. ಎಲ್ಲವನ್ನೂ ತಿಂದು ಜೀರ್ಣಿಸಿಕೊಳ್ಳುವ ಹಸಿವು. ಆದ್ದರಿಂದ ಈ ಮಗುವನ್ನು ಉಪವಾಸ ಕೆಡವಬೇಡಿ. ಇದರ ಲಾಲನೆ ಪೋಷಣೆ ಸರಿಯಾಗಿ ಮಾಡಿ. ಹೇಗೆ ನಿಮ್ಮ ಸ್ವಂತ ಮಗು ಹಸಿದುಕೊಂಡಿದ್ದರೆ ನಿಮಗೆ ಸಹಿಸಲು ಸಾಧ್ಯವಿಲ್ಲವೋ, ಅದೇ ರೀತಿ ಈ ಮಗುವನ್ನೂ ಸರಿಯಾಗಿ ನೋಡಿಕೊಳ್ಳಿ. ಈ ಮಗು ತುಂಬ ಕುತೂಹಲವುಳ್ಳದ್ದು. ಎಲ್ಲವನ್ನೂ ಅರಿಯುವ ಈ ಕುತೂಹಲವೇ ಅದಕ್ಕೆ ದಿನನಿತ್ಯ ಹೊಸ ವಿಷಯ ಕಲಿಯುವಂತೆ ಪ್ರೇರೇಪಿಸುತ್ತದೆ.ಇದರ ಜ್ಞಾನಾರ್ಜನೆಗೆ ಸಹಕಾರಿಯಾಗಿ. ಕೌನ್ ಬನೇಗಾ ಕರೋಡಪತಿ ಎಂಬ ಟಿವಿ ಮಾಲಿಕೆಯೊಂದರಲ್ಲಿ ಅದರ ನಿರೂಪಕ ಅಮಿತಾಭ್ ಬಚ್ಚನ್ ಹೇಳಿದಂತೆ, “ಸೀಖನಾ ಬಂದ್ ತೋ ಜೀತನಾ ಬಂದ್” (ಕಲಿಯುವುದನ್ನು ನಿಲ್ಲಿಸಿದಾಗ ಗೆಲ್ಲುವುದೂ ನಿಲ್ಲುತ್ತದೆ).ಈ ಮಗುವಿಗೆ ಸಂರಕ್ಷಣೆ ಬೇಕು, ನಿಮ್ಮಂತೆ ದಿನಕ್ಕೆ 12 ತಾಸು ವಾರಕ್ಕೆ 7 ದಿನ ದುಡಿಯಲು ಇದಕ್ಕೆ ಸಾಧ್ಯವಿಲ್ಲ. ಹಾಗಾಗಿ ಇದಕ್ಕೆ ಹಾಯಾಗಿರಲು, ವಿಶ್ರಾಂತಿ ಪಡೆಯಲು ಸಾಕಷ್ಟು ಸಮಯ ಬೇಕು. ಅದನ್ನು ಈ ಮಗುವಿನಿಂದ ಕಿತ್ತುಕೊಳ್ಳಬೇಡಿ.

ಈ ಮಗುವಿಗೆ ಮಗುವಾಗಿ ಇರಲು ಇಷ್ಟ. ಆದ್ದರಿಂದ ನೀವು ನಿಮಗೆ ವಯಸ್ಸಾಯಿತು, ನಾವು ಹೇಗೆ ಮಕ್ಕಳಂತೆ ವರ್ತಿಸಬಹುದು ಎಂದು ಹೇಳಿಕೊಳ್ಳುವುದನ್ನು ಬಿಡಿ. ಮಗುವಿನಂತೆ ಜೀವನವನ್ನು ಆಸ್ವಾದಿಸುವುದನ್ನು ಕಲಿಯಿರಿ. ಕುಣಿದು ಕುಪ್ಪಳಿಸಿ. ನಿಮ್ಮ ದಿನ ನಿತ್ಯದ ಬಿಗುಪು ಕಡಿಮೆಯಾಗುತ್ತದೆ. ತಂದೆ-ತಾಯಿಗೆ ಮಗುವಿನೊಂದಿಗೆ ಸಂತೋಷದ ಸಮಯ ಹೆಚ್ಚಾಗಿ ಕಳೆಯಲು ಸಾಧ್ಯವಾಗುವುದಿಲ್ಲ ಏಕೆಂದರೆ ಅವರು ಮಗುವಿನೊಂದಿಗೆ ಮಗುವಾಗಿರದೆ, ಪೋಷಕರಾಗುತಾರೆ, ಶಿಕ್ಷಕರಾಗುತ್ತಾರೆ. ಆದರೆ ಅಜ್ಜಿ-ತಾತ ಈ ಪೋಷಕ-ಶಿಕ್ಷಕ ಕಟ್ಟುಪಾಡಿನಿಂದ ಹೊರಗುಳಿದು ಮಕ್ಕಳೊಂದಿಗೆ ಮಕ್ಕಳಾಗಿ ತಾವೂ ಹೆಚ್ಚು ಸಂತೋಷವಾಗಿರುತ್ತಾರೆ ಮತ್ತು ಮಕ್ಕಳೂ ಸಹ ಅಜ್ಜಿ-ತಾತನ ಜೊತೆಯನ್ನು ಹೆಚ್ಚಾಗಿ ಬಯಸುತ್ತಾರೆ.

ಮಕ್ಕಳು ಮೂರ್ಖತನ ಮಾಡುತ್ತಾರೆ, ಅದು ಅವರ ಹಕ್ಕು. ಆ ಮೂರ್ಖತನ ಅವರಿಗೆ ಜೀವನದುದ್ದಕ್ಕೂ ನೆನಪಿನಲ್ಲಿ ಉಳಿಯುವಂತಹ ಪಾಠ ಕಲಿಸುತ್ತದೆ. ಆಪಲ್ ಕಂಪನಿಯ ಸಂಸ್ಥಾಪಕ ಅಮೇರಿಕದ ಸ್ಟೀವ್ ಜಾಬ್ಸ್ ಅವರ ಒಂದು ಪ್ರಖ್ಯಾತ ಹೇಳಿಕೆ “ಸ್ಟೇ ಹಂಗ್ರೀ, ಸ್ಟೇ ಫೂಲಿಷ್” (ಸದಾ ಹಸಿದುಕೊಂಡಿರು, ಸದಾ ಮೂರ್ಖನಾಗಿರು) ಪ್ರಕಾರ ಈ ಹಸಿವು ನಮ್ಮನ್ನು ಏನಾದರೂ ಮಾಡಲು ಪ್ರಚೋದಿಸುತ್ತದೆ ಮತ್ತು ಈ ಮೂರ್ಖತನ ನಮಗೆ ಕಲಿಯಲು ಸಹಕಾರಿಯಾಗುತ್ತದೆ. ಒಟ್ಟಾಗಿ ಇವೆರಡು ನಮ್ಮನ್ನು ಉನ್ನತ ಮಟ್ಟಕ್ಕೆ ಏರಿಸುತ್ತವೆ. ಮಕ್ಕಳಿಗೆ ಯಾವುದು ಅಸಾಧ್ಯ ಎಂಬುದು ತಿಳಿದಿರುವುದಿಲ್ಲ, ಹಾಗಾಗಿ ಅವರು ಅಸಾಧ್ಯವಾದುದನ್ನು ಮಾಡಲು ಸದಾ ಪ್ರಯತ್ನಿಸುತ್ತಾರೆ ಮತ್ತು ಅದರಲ್ಲಿ ಸಫಲರೂ ಆಗುತ್ತಾರೆ.

ಜೀವನದ ಎಲ್ಲಾ ಸನ್ನಿವೇಶಗಳೂ ಸಮಸ್ಯೆಗಳಲ್ಲ, ಅದನ್ನು ಪರಿಹರಿಸಲು ಯಾರೂ ನಮಗೆ ಗುತ್ತಿಗೆ ಕೊಟ್ಟಿಲ್ಲ. “ಲೋಕದ ಡೊಂಕ ನೀವೇಕೆ ತಿದ್ದುವಿರಿಯ್ಯಾ”ಎಂದು ಬಸವಣ್ಣನವರು ಹೇಳಿದ ಹಾಗೆ, ಜೀವನವನ್ನು ಬಂದಂತೆ ಸ್ವೀಕರಿಸಬೇಕು. ಏಕೆಂದರೆ ಯಾರ ಕೈಯಲ್ಲಿ ಸುತ್ತಿಗೆ ಇರುತ್ತದೋ ಅವರಿಗೆ ಎಲ್ಲವೂ ಮೊಳೆಯಂತೆ ಕಾಣುತ್ತದೆ; ಯಾರ ಕೈಯಲ್ಲಿ ಸ್ಪ್ಯಾನರ್ ಇರುತ್ತದೋ ಅವರಿಗೆ ಎಲ್ಲವೂ ಸಡಿಲವಾದ, ಬಿಗಿಯಾಗಿ ಭದ್ರಪಡಿಸಬೇಕಾಗಿರುವ, ನಟ್-ಬೋಲ್ಟಿನಂತೆ ಕಾಣುತ್ತದೆ. ಆ ಸುತ್ತಿಗೆ, ಆ ಸ್ಪ್ಯಾನರ್ ಬದಿಗಿಡಿ. ಜೀವನವನ್ನು ಮಗುವಿನ ದೃಷ್ಟಿಕೋನದಿಂದ ನೋಡಿ, ಅದರಿಂದ ಏನು ಕಲಿಯಬಹುದು, ಅದನ್ನು ಕಲಿಯಿರಿ.

ಜೀವನದಲ್ಲಿ ಎಲ್ಲವೂ ಒಪ್ಪ-ಓರಣವಾಗಿರಬೇಕಿಲ್ಲ. ಮಕ್ಕಳಂತೆ ವಸ್ತುಗಳು ಚೆಲ್ಲಪಿಲ್ಲಿಯಾಗಿರಲು ಬಿಡಿ. ಅವ್ಯವಸ್ಥೆಯಲ್ಲೂ ಜಗತ್ತು ನಡೆಯುತ್ತಿರುತ್ತದೆ ಎಂಬುದನ್ನು ಮರೆಯಬೇಡಿ.

ನಿಮ್ಮ ಬಾಲ್ಯದ ನೆನಪನ್ನು ಭದ್ರವಾಗಿರಿಸಿಕೊಳ್ಳಿ. ನೀವು ಮಾಡಿದ ತಪ್ಪುಗಳು, ಚೇಷ್ಟೆಗಳು ಎಂದಿದ್ದರೂ ನಿಮಗೆ ಸಂತೋಷ ನೀಡುವ ಚಿಲುಮೆಗಳು. ಅದು ಬತ್ತದಂತೆ ಜಾಗೃತೆ ವಹಿಸಿ. ಅದೇ ರೀತಿ ಮಕ್ಕಳು ತಮಗೆ ಬೇಡವಾದುದನ್ನು ಎಸೆಯುತ್ತಿರುತ್ತವೆ, ನೀವೂ ಸಹ ಬೇಡವಾದ ಕಹಿ ನೆನಪುಗಳ, ಸಂಬಂಧಗಳ ಭಾರವಾದ ಮೂಟೆ ಜೀವನವಿಡೀ ಹೊರುವುದನ್ನು ಬಿಡಿ, ಅವನ್ನು ಎತ್ತೆಸೆಯಿರಿ.

ಮಿಕ್ಕ ಮಕ್ಕಳಂತೆ ಈ ಮಗುವಿಗೂ ಪ್ರೀತಿ ಬೇಕು. ಉಡುಗೊರೆ ಬೇಕು. ಆದ್ದರಿಂದ ನಿಮ್ಮ ಕಲ್ಪನಾಶಕ್ತಿ ಉಪಯೋಗಿಸಿ ಇದರ ಜೊತೆಗೂ ನಿಮ್ಮ ಅಮೂಲ್ಯವಾದ ಸಮಯ ಕಳೆಯಿರಿ, ನಿಮ್ಮ ಪ್ರೀತಿ ತೋರಿಸಿ, ಉಡುಗೊರೆಗಳನ್ನು ನೀಡಿ. ಆ ಮಗುವೂ ನಿಮ್ಮ ಭಾವನೆಗಳನ್ನು ಬಡ್ಡಿಯೊಂದಿಗೆ ಹಿಂತಿರುಗಿಸುತ್ತದೆ.

“ವಿಶ್ವದ ನಿಜವಾದ ಸಮಸ್ಯೆ ಎಂದರೆ (ವಿಶ್ವದ) ಬಹುತೇಕ ಜನ ಬೇಗ ವಯಸ್ಕರಾಗುತ್ತಾರೆ” ಎನ್ನುತ್ತಾರೆ ಮಕ್ಕಳ ಅಚ್ಚುಮೆಚ್ಚಿನ ಖ್ಯಾತ ಕಾರ್ಟೂನ್ ಚಿತ್ರ ನಿರ್ಮಾಪಕ ವಾಲ್ಟ್ ಡಿಸ್ನಿ. ನೀವಾದರೂ ವಯಸ್ಕರಾಗದೇ ನಿಮ್ಮೊಳಗಿರುವ ಮಗುವನ್ನು ಸಂರಕ್ಷಿಸಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...