Homeಮುಖಪುಟನಿಮ್ಮೊಳಗಿನ ಮಗುವನ್ನು ಸಂರಕ್ಷಿಸುವ ಕಲೆ: ಮರೆಯಬೇಡಿ ಇದು ಬಹಳ ಮುಖ್ಯ

ನಿಮ್ಮೊಳಗಿನ ಮಗುವನ್ನು ಸಂರಕ್ಷಿಸುವ ಕಲೆ: ಮರೆಯಬೇಡಿ ಇದು ಬಹಳ ಮುಖ್ಯ

ಜೀವನದಲ್ಲಿ ಎಲ್ಲವೂ ಒಪ್ಪ-ಓರಣವಾಗಿರಬೇಕಿಲ್ಲ. ಮಕ್ಕಳಂತೆ ವಸ್ತುಗಳು ಚೆಲ್ಲಪಿಲ್ಲಿಯಾಗಿರಲು ಬಿಡಿ. ಅವ್ಯವಸ್ಥೆಯಲ್ಲೂ ಜಗತ್ತು ನಡೆಯುತ್ತಿರುತ್ತದೆ ಎಂಬುದನ್ನು ಮರೆಯಬೇಡಿ.

- Advertisement -
- Advertisement -

ಜೀವನ ಕಲೆಗಳು: ಅಂಕಣ-29

ನಿಮ್ಮೊಳಗಿನ ಮಗುವನ್ನು ಸಂರಕ್ಷಿಸುವ ಕಲೆ

ಲೇಖನದ ಶೀರ್ಷಿಕೆ ಓದಿ ಚಕಿತರಾಗಬೇಡಿ. ಹೌದು, ನಮ್ಮೆಲ್ಲರೊಳಗೂ ಒಂದು ಮುಗ್ಧ ಮಗು ಇದೆ, ಇತ್ತು, ಇನ್ನೂ ಇರಬಹುದು. ಕೆಲವರು ಬೇಗನೇ ದೊಡ್ಡವರಾಗುವ ತವಕದಲ್ಲಿ ಆ ಮಗುವನ್ನು ತಿಳಿದೋ ತಿಳಿಯದೆಯೋ ಹತ್ಯೆಗೈದಿರುತ್ತಾರೆ ಅಥವಾ ಮಾರಣಾಂತಿಕವಾಗಿ ಘಾಸಿಗೊಳಿಸಿರುತ್ತಾರೆ. ಸಂತೋಷದ ಸಂಗತಿಯೆಂದರೆ ಈ ಮಗುವನ್ನು ದೃಢ ಪ್ರಯತ್ನದಿಂದ ಮತ್ತೆ ಜೀವಂತಗೊಳಿಸಬಹುದು.

“ನಿಮ್ಮ ಆತ್ಮಕ್ಕೆ ಸನಿಹದಲ್ಲಿರುವ ಈ ಮಗುವಿನ ಕೈ ಎಂದಿಗೂ ಬಿಡಬೇಡಿ, ಈಕೆಂದರೆ ಈ ಮಗುವಿಗೆ ಅಸಾಧ್ಯ ಎನ್ನುವುದು ಏನೂ ಇಲ್ಲ” ಎಂದು ಬ್ರಾಜಿಲ್ ದೇಶದ ಖ್ಯಾತ ಲೇಖಕ ಮತ್ತು ಕವಿ ಪಾವ್ಲೋ ಕೊಯಿಲ್ಹೋ ಹೇಳುತ್ತಾರೆ.

ಇಂದಿನ ಜೀವನದ ಭಯಾನಕ ಆತಂಕಗಳ ಮಧ್ಯೆ ಬದುಕಲು ಕೇವಲ ಮಕ್ಕಳಿಗೆ ಮಾತ್ರ ಸಾಧ್ಯ. ಸಿರಿಯಾ-ಇರಾಕ್ ನಂತಹ ಯುದ್ಧಗ್ರಸ್ಥ ಭಾಗದಲ್ಲೂ ಸಹ ಮಕ್ಕಳು ನಿಶ್ಚಿಂತೆಯಿಂದ ಆಟವಾಡಿಕೊಂಡಿರುವುದನ್ನು ನೀವು ದೃಶ್ಯ ಮಾಧ್ಯಮದಲ್ಲಿ ನೋಡಿರಬಹುದು. ಈ ಮಕ್ಕಳಿಗೆ ಯಾವುದೇ ಸರಹದ್ದು, ಬೇಲಿಗಳು ಇರುವುದಿಲ್ಲ. ಇದ್ದರೂ ಅವರು ಅದನ್ನು ಲೆಕ್ಕಿಸುವುದಿಲ್ಲ. ಯಾವಾಗಲೂ ಸಕಾರತ್ಮಕವಾಗಿ ಚಿಂತಿಸುತ್ತಾರೆ. ಇದೇ ಮಗು ನಿಮಗೆ ಮತ್ತೆ ಮುಕ್ತವಾಗಿ ಜೀವಿಸುವ ಪಾಠ ಕಲಿಸುವ ಸಾಧನವಾಗಬಹುದು. ದೊಡ್ಡವರೂ ಸಹ ಒಂದಲ್ಲ ಒಮ್ಮೆ ಮತ್ತೆ ತಮ್ಮ ಬಾಲ್ಯ ಹಿಂತಿರುಗಬೇಕು ಎಂದು ಹಂಬಲಿಸುವುದನ್ನು ನೀವು ನೋಡಿರಬಹುದು. ಆದ್ದರಿಂದ ಈ ಮಗುವನ್ನು ಕೊಲ್ಲಬೇಡಿ. ಅದರೊಂದಿಗೆ ಮಾತನಾಡಿ, ಅದು ಏನು ಹೇಳುತ್ತಿದೆ ಎಂಬುದನ್ನು ಗಮನವಿಟ್ಟು ಕೇಳಿಸಿಕೊಳ್ಳಿ.

ಈ ಮಗುವಿಗೆ ಸದಾ ಹಸಿವು. ಎಲ್ಲವನ್ನೂ ತಿಂದು ಜೀರ್ಣಿಸಿಕೊಳ್ಳುವ ಹಸಿವು. ಆದ್ದರಿಂದ ಈ ಮಗುವನ್ನು ಉಪವಾಸ ಕೆಡವಬೇಡಿ. ಇದರ ಲಾಲನೆ ಪೋಷಣೆ ಸರಿಯಾಗಿ ಮಾಡಿ. ಹೇಗೆ ನಿಮ್ಮ ಸ್ವಂತ ಮಗು ಹಸಿದುಕೊಂಡಿದ್ದರೆ ನಿಮಗೆ ಸಹಿಸಲು ಸಾಧ್ಯವಿಲ್ಲವೋ, ಅದೇ ರೀತಿ ಈ ಮಗುವನ್ನೂ ಸರಿಯಾಗಿ ನೋಡಿಕೊಳ್ಳಿ. ಈ ಮಗು ತುಂಬ ಕುತೂಹಲವುಳ್ಳದ್ದು. ಎಲ್ಲವನ್ನೂ ಅರಿಯುವ ಈ ಕುತೂಹಲವೇ ಅದಕ್ಕೆ ದಿನನಿತ್ಯ ಹೊಸ ವಿಷಯ ಕಲಿಯುವಂತೆ ಪ್ರೇರೇಪಿಸುತ್ತದೆ.ಇದರ ಜ್ಞಾನಾರ್ಜನೆಗೆ ಸಹಕಾರಿಯಾಗಿ. ಕೌನ್ ಬನೇಗಾ ಕರೋಡಪತಿ ಎಂಬ ಟಿವಿ ಮಾಲಿಕೆಯೊಂದರಲ್ಲಿ ಅದರ ನಿರೂಪಕ ಅಮಿತಾಭ್ ಬಚ್ಚನ್ ಹೇಳಿದಂತೆ, “ಸೀಖನಾ ಬಂದ್ ತೋ ಜೀತನಾ ಬಂದ್” (ಕಲಿಯುವುದನ್ನು ನಿಲ್ಲಿಸಿದಾಗ ಗೆಲ್ಲುವುದೂ ನಿಲ್ಲುತ್ತದೆ).ಈ ಮಗುವಿಗೆ ಸಂರಕ್ಷಣೆ ಬೇಕು, ನಿಮ್ಮಂತೆ ದಿನಕ್ಕೆ 12 ತಾಸು ವಾರಕ್ಕೆ 7 ದಿನ ದುಡಿಯಲು ಇದಕ್ಕೆ ಸಾಧ್ಯವಿಲ್ಲ. ಹಾಗಾಗಿ ಇದಕ್ಕೆ ಹಾಯಾಗಿರಲು, ವಿಶ್ರಾಂತಿ ಪಡೆಯಲು ಸಾಕಷ್ಟು ಸಮಯ ಬೇಕು. ಅದನ್ನು ಈ ಮಗುವಿನಿಂದ ಕಿತ್ತುಕೊಳ್ಳಬೇಡಿ.

ಈ ಮಗುವಿಗೆ ಮಗುವಾಗಿ ಇರಲು ಇಷ್ಟ. ಆದ್ದರಿಂದ ನೀವು ನಿಮಗೆ ವಯಸ್ಸಾಯಿತು, ನಾವು ಹೇಗೆ ಮಕ್ಕಳಂತೆ ವರ್ತಿಸಬಹುದು ಎಂದು ಹೇಳಿಕೊಳ್ಳುವುದನ್ನು ಬಿಡಿ. ಮಗುವಿನಂತೆ ಜೀವನವನ್ನು ಆಸ್ವಾದಿಸುವುದನ್ನು ಕಲಿಯಿರಿ. ಕುಣಿದು ಕುಪ್ಪಳಿಸಿ. ನಿಮ್ಮ ದಿನ ನಿತ್ಯದ ಬಿಗುಪು ಕಡಿಮೆಯಾಗುತ್ತದೆ. ತಂದೆ-ತಾಯಿಗೆ ಮಗುವಿನೊಂದಿಗೆ ಸಂತೋಷದ ಸಮಯ ಹೆಚ್ಚಾಗಿ ಕಳೆಯಲು ಸಾಧ್ಯವಾಗುವುದಿಲ್ಲ ಏಕೆಂದರೆ ಅವರು ಮಗುವಿನೊಂದಿಗೆ ಮಗುವಾಗಿರದೆ, ಪೋಷಕರಾಗುತಾರೆ, ಶಿಕ್ಷಕರಾಗುತ್ತಾರೆ. ಆದರೆ ಅಜ್ಜಿ-ತಾತ ಈ ಪೋಷಕ-ಶಿಕ್ಷಕ ಕಟ್ಟುಪಾಡಿನಿಂದ ಹೊರಗುಳಿದು ಮಕ್ಕಳೊಂದಿಗೆ ಮಕ್ಕಳಾಗಿ ತಾವೂ ಹೆಚ್ಚು ಸಂತೋಷವಾಗಿರುತ್ತಾರೆ ಮತ್ತು ಮಕ್ಕಳೂ ಸಹ ಅಜ್ಜಿ-ತಾತನ ಜೊತೆಯನ್ನು ಹೆಚ್ಚಾಗಿ ಬಯಸುತ್ತಾರೆ.

ಮಕ್ಕಳು ಮೂರ್ಖತನ ಮಾಡುತ್ತಾರೆ, ಅದು ಅವರ ಹಕ್ಕು. ಆ ಮೂರ್ಖತನ ಅವರಿಗೆ ಜೀವನದುದ್ದಕ್ಕೂ ನೆನಪಿನಲ್ಲಿ ಉಳಿಯುವಂತಹ ಪಾಠ ಕಲಿಸುತ್ತದೆ. ಆಪಲ್ ಕಂಪನಿಯ ಸಂಸ್ಥಾಪಕ ಅಮೇರಿಕದ ಸ್ಟೀವ್ ಜಾಬ್ಸ್ ಅವರ ಒಂದು ಪ್ರಖ್ಯಾತ ಹೇಳಿಕೆ “ಸ್ಟೇ ಹಂಗ್ರೀ, ಸ್ಟೇ ಫೂಲಿಷ್” (ಸದಾ ಹಸಿದುಕೊಂಡಿರು, ಸದಾ ಮೂರ್ಖನಾಗಿರು) ಪ್ರಕಾರ ಈ ಹಸಿವು ನಮ್ಮನ್ನು ಏನಾದರೂ ಮಾಡಲು ಪ್ರಚೋದಿಸುತ್ತದೆ ಮತ್ತು ಈ ಮೂರ್ಖತನ ನಮಗೆ ಕಲಿಯಲು ಸಹಕಾರಿಯಾಗುತ್ತದೆ. ಒಟ್ಟಾಗಿ ಇವೆರಡು ನಮ್ಮನ್ನು ಉನ್ನತ ಮಟ್ಟಕ್ಕೆ ಏರಿಸುತ್ತವೆ. ಮಕ್ಕಳಿಗೆ ಯಾವುದು ಅಸಾಧ್ಯ ಎಂಬುದು ತಿಳಿದಿರುವುದಿಲ್ಲ, ಹಾಗಾಗಿ ಅವರು ಅಸಾಧ್ಯವಾದುದನ್ನು ಮಾಡಲು ಸದಾ ಪ್ರಯತ್ನಿಸುತ್ತಾರೆ ಮತ್ತು ಅದರಲ್ಲಿ ಸಫಲರೂ ಆಗುತ್ತಾರೆ.

ಜೀವನದ ಎಲ್ಲಾ ಸನ್ನಿವೇಶಗಳೂ ಸಮಸ್ಯೆಗಳಲ್ಲ, ಅದನ್ನು ಪರಿಹರಿಸಲು ಯಾರೂ ನಮಗೆ ಗುತ್ತಿಗೆ ಕೊಟ್ಟಿಲ್ಲ. “ಲೋಕದ ಡೊಂಕ ನೀವೇಕೆ ತಿದ್ದುವಿರಿಯ್ಯಾ”ಎಂದು ಬಸವಣ್ಣನವರು ಹೇಳಿದ ಹಾಗೆ, ಜೀವನವನ್ನು ಬಂದಂತೆ ಸ್ವೀಕರಿಸಬೇಕು. ಏಕೆಂದರೆ ಯಾರ ಕೈಯಲ್ಲಿ ಸುತ್ತಿಗೆ ಇರುತ್ತದೋ ಅವರಿಗೆ ಎಲ್ಲವೂ ಮೊಳೆಯಂತೆ ಕಾಣುತ್ತದೆ; ಯಾರ ಕೈಯಲ್ಲಿ ಸ್ಪ್ಯಾನರ್ ಇರುತ್ತದೋ ಅವರಿಗೆ ಎಲ್ಲವೂ ಸಡಿಲವಾದ, ಬಿಗಿಯಾಗಿ ಭದ್ರಪಡಿಸಬೇಕಾಗಿರುವ, ನಟ್-ಬೋಲ್ಟಿನಂತೆ ಕಾಣುತ್ತದೆ. ಆ ಸುತ್ತಿಗೆ, ಆ ಸ್ಪ್ಯಾನರ್ ಬದಿಗಿಡಿ. ಜೀವನವನ್ನು ಮಗುವಿನ ದೃಷ್ಟಿಕೋನದಿಂದ ನೋಡಿ, ಅದರಿಂದ ಏನು ಕಲಿಯಬಹುದು, ಅದನ್ನು ಕಲಿಯಿರಿ.

ಜೀವನದಲ್ಲಿ ಎಲ್ಲವೂ ಒಪ್ಪ-ಓರಣವಾಗಿರಬೇಕಿಲ್ಲ. ಮಕ್ಕಳಂತೆ ವಸ್ತುಗಳು ಚೆಲ್ಲಪಿಲ್ಲಿಯಾಗಿರಲು ಬಿಡಿ. ಅವ್ಯವಸ್ಥೆಯಲ್ಲೂ ಜಗತ್ತು ನಡೆಯುತ್ತಿರುತ್ತದೆ ಎಂಬುದನ್ನು ಮರೆಯಬೇಡಿ.

ನಿಮ್ಮ ಬಾಲ್ಯದ ನೆನಪನ್ನು ಭದ್ರವಾಗಿರಿಸಿಕೊಳ್ಳಿ. ನೀವು ಮಾಡಿದ ತಪ್ಪುಗಳು, ಚೇಷ್ಟೆಗಳು ಎಂದಿದ್ದರೂ ನಿಮಗೆ ಸಂತೋಷ ನೀಡುವ ಚಿಲುಮೆಗಳು. ಅದು ಬತ್ತದಂತೆ ಜಾಗೃತೆ ವಹಿಸಿ. ಅದೇ ರೀತಿ ಮಕ್ಕಳು ತಮಗೆ ಬೇಡವಾದುದನ್ನು ಎಸೆಯುತ್ತಿರುತ್ತವೆ, ನೀವೂ ಸಹ ಬೇಡವಾದ ಕಹಿ ನೆನಪುಗಳ, ಸಂಬಂಧಗಳ ಭಾರವಾದ ಮೂಟೆ ಜೀವನವಿಡೀ ಹೊರುವುದನ್ನು ಬಿಡಿ, ಅವನ್ನು ಎತ್ತೆಸೆಯಿರಿ.

ಮಿಕ್ಕ ಮಕ್ಕಳಂತೆ ಈ ಮಗುವಿಗೂ ಪ್ರೀತಿ ಬೇಕು. ಉಡುಗೊರೆ ಬೇಕು. ಆದ್ದರಿಂದ ನಿಮ್ಮ ಕಲ್ಪನಾಶಕ್ತಿ ಉಪಯೋಗಿಸಿ ಇದರ ಜೊತೆಗೂ ನಿಮ್ಮ ಅಮೂಲ್ಯವಾದ ಸಮಯ ಕಳೆಯಿರಿ, ನಿಮ್ಮ ಪ್ರೀತಿ ತೋರಿಸಿ, ಉಡುಗೊರೆಗಳನ್ನು ನೀಡಿ. ಆ ಮಗುವೂ ನಿಮ್ಮ ಭಾವನೆಗಳನ್ನು ಬಡ್ಡಿಯೊಂದಿಗೆ ಹಿಂತಿರುಗಿಸುತ್ತದೆ.

“ವಿಶ್ವದ ನಿಜವಾದ ಸಮಸ್ಯೆ ಎಂದರೆ (ವಿಶ್ವದ) ಬಹುತೇಕ ಜನ ಬೇಗ ವಯಸ್ಕರಾಗುತ್ತಾರೆ” ಎನ್ನುತ್ತಾರೆ ಮಕ್ಕಳ ಅಚ್ಚುಮೆಚ್ಚಿನ ಖ್ಯಾತ ಕಾರ್ಟೂನ್ ಚಿತ್ರ ನಿರ್ಮಾಪಕ ವಾಲ್ಟ್ ಡಿಸ್ನಿ. ನೀವಾದರೂ ವಯಸ್ಕರಾಗದೇ ನಿಮ್ಮೊಳಗಿರುವ ಮಗುವನ್ನು ಸಂರಕ್ಷಿಸಿ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...