Homeಮುಖಪುಟಒಳಮೀಸಲಾತಿ: ಬಾಣಲೆಯಿಂದ ಬೆಂಕಿಗೆ ಹಾರುವುದು ಬೇಡ.. - ಕರಿಯಪ್ಪ ಗುಡಿಮನಿ

ಒಳಮೀಸಲಾತಿ: ಬಾಣಲೆಯಿಂದ ಬೆಂಕಿಗೆ ಹಾರುವುದು ಬೇಡ.. – ಕರಿಯಪ್ಪ ಗುಡಿಮನಿ

ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿ ಪರ ಹೋರಾಟಗಾರರ ಮೈತುಂಬಾ ಬಾಸುಂಡೆ ಬರುವಂತೆ ಲಾಠಿ ಚಾರ್ಜ್ ಮಾಡಿಸಿದ ಸರ್ಕಾರ ಯಾರದಾಗಿತ್ತು?

- Advertisement -
- Advertisement -

ಆದಿಮ ಕಾಲದ ಮಾದಿಗರು ಸಮಾಜದ ಬ್ರಾಹ್ಮಣ್ಯೀಕರಣದಿಂದ ಅಸ್ಪೃಶ್ಯರಾದರು. ಗಾಂಧೀಜಿಯವರಿಂದ ಹರಿಜನರಾದರು. ಅಂಬೇಡ್ಕರರಿಂದ ಸ್ವಾಭಿಮಾನಿ ದಲಿತರಾದರು. ಹಲವು ಪರಿಶಿಷ್ಟ ಜಾತಿಗಳಲ್ಲಿಂದು ಮಾದಿಗರು ಸಹ ಒಂದು ಸಮುದಾಯವಾಗಿದೆ.

ಮಾದಿಗ ಸಮುದಾಯವು ಸ್ವತಂತ್ರಪೂರ್ವದಲ್ಲಿ ಜಂಡಾ ಹಿಡಿದು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸಮುದಾಯವಾಗಿದೆ. ಆದರೆ ಸ್ವಾತಂತ್ರ್ಯದ ನಂತರದ ರಾಜಕೀಯದಲ್ಲಿ ಮಾದಿಗ ಸಮುದಾಯವನ್ನು ಬೆಲೆಯಿಲ್ಲದ, ನೆಲೆಯಿಲ್ಲದ ಸಮುದಾಯವನ್ನಾಗಿ ಮಾಡಲಾಗಿದೆ. ಇಂದಿಗೂ ಕೃಷಿ ಭೂಮಿ ರಹಿತರಾಗಿರುವ ಮಾದಿಗ ಸಮುದಾಯ ಜಮೀನ್ದಾರರ ಕೈ ಕೆಳಗೆ ನರಳುತ್ತಿದೆ. ಉತ್ತರ ಕರ್ನಾಟಕದಲ್ಲಂತು ಇದು ಎದ್ದು ಕಾಣುವ ಸಂಗತಿಯಾಗಿದೆ. ಬೆನ್ನಿಗೆ ನಿಲ್ಲದ ಸಹೋದರ ಸಮುದಾಯಗಳು, ಕೈಗೆ ಅಧಿಕಾರ ನೀಡದ ರಾಜಕೀಯ ಪಕ್ಷಗಳು, ನಿಷ್ಟೆ ಇಲ್ಲದ ಸಮುದಾಯದ ಮುಖಂಡರು, ಅಸ್ಪೃಶ್ಯತೆಯನ್ನು ಮೆರೆಯುವ ಮೇಲ್ವರ್ಗಗಳು. ಹೀಗೆ ಎತ್ತ ನೋಡಿದರೂ ಅಡ್ಡಗಾಲುಗಳು. ನಮ್ಮ ಹಾಸಿಗೆಯಲ್ಲಿ ನಾವೇ ಕಾಲು ಚಾಚದ ಸ್ಥಿತಿ.

ಇಂತಹ ಪರಿಸ್ಥಿತಿಯಲ್ಲಿ ಎಂದಿಗೂ ಮಾದಿಗರ ಪರ ನಿಲ್ಲದ ವಿವಿಧ ಭ್ರಷ್ಟ ರಾಜಕಾರಣಿಗಳ ಮನೆಯ ಹೆಬ್ಬಾಗಿಲುಗಳಲ್ಲಿ ನಮ್ಮ ಸಮುದಾಯದ ಮುಖಂಡರುಗಳಿಂದು ನಿಂತಿದ್ದಾರೆ. ಮತ್ತಷ್ಟೂ ಹಾದಿ ತಪ್ಪಿ ಅಸ್ಪೃಶ್ಯತೆಯನ್ನು ನಮ್ಮ ಮಾದಿಗರ ಮೇಲೆ ಹೇರಿದ ಬ್ರಾಹ್ಮಣ್ಯದ ತವರು ಸ್ಥಾನ ಸಂಘಪರಿವಾರ, ಆರೆಸ್ಸೆಸ್ ದ್ವಾರದ ಮುಂದೆ ಹೋರಾಟ ಮಾಡದೇ, ಒಳಮೀಸಲಾತಿಯ ಧರ್ಮಭಿಕ್ಷೆ ಬೇಡಲು ನಿಂತಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿ ಪರ ಹೋರಾಟಗಾರರ ಮೈತುಂಬಾ ಬಾಸುಂಡೆ ಬರುವಂತೆ ಲಾಠಿ ಚಾರ್ಜ್ ಮಾಡಿಸಿದ ಸರ್ಕಾರ ಯಾರದಾಗಿತ್ತು? ಇದು ಖಂಡಿತವಾಗಿಯೂ ಮಾದಿಗ ಸಮುದಾಯದಲ್ಲಿನ ಪ್ರಾಮಾಣಿಕ ಹೋರಾಟಗಾರರಿಗೆ ಚಿಂತೆಗೀಡು ಮಾಡಿದೆ.

ಇಂದು ಮಾದಿಗ ಸಮುದಾಯ ತನ್ನೊಳಗೂ ಹಾಗೂ ಹೊರಗೂ ಪ್ರಾಮಾಣಿಕ ಹೋರಾಟಗಾರರನ್ನು ಕಂಡುಕೊಳ್ಳಬೇಕಿದೆ. ಸದಾ ಚುನಾವಣಾ ರಾಜಕೀಯ ಹಿತಾಸಕ್ತಿಯನ್ನೇ ಬಯಸುವ ದಲಿತ ರಾಜಕಾರಣಿಗಳ ವಿರುದ್ಧವೂ ನಿಲ್ಲಬೇಕಿದೆ. ನಮ್ಮ ಸಂಕಟಗಳು ಬೆಟ್ಟದಷ್ಟಿರುವಾಗ ಆ ಬೆಟ್ಟವನ್ನು ನೆಲಸಮಗೊಳಿಸಲು ಒಳಮೀಸಲಾತಿ ಜಾರಿಯಾಗಲೇಬೇಕಿದೆ.

ಮೊದಲು ಸದಾಶಿವ ಆಯೋಗದ ವರದಿ ಬಹಿರಂಗಗೊಳ್ಳಬೇಕು. ಕಾಲ್ಪನಿಕ ಸೋರಿಕೆ ವಿಚಾರಗಳನ್ನು ಬದಿಗಿಟ್ಟು ಸಾರ್ವಜನಿಕ ಚರ್ಚೆಗಳಾಗಬೇಕು. ಇಡೀ 101 ದಲಿತ ಜಾತಿಗಳ ಪ್ರತಿನಿಧಿಗಳು ಒಂದೆಡೆ ಕುಳಿತು ಆಯೋಗದ ಶಿಫಾರಸ್ಸುಗಳನ್ನು ಪರಿಶೀಲಿಸಿ ಒಳಮೀಸಲಾತಿ ಜಾರಿಗೊಳ್ಳುವ ಸರಿಯಾದ ಕ್ರಮಗಳನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಒಳಮೀಸಲಾತಿ ದಲಿತರ ಒಗ್ಗಟ್ಟನ್ನು ಮುರಿಯುತ್ತದೆ ಎಂಬ ಕಾಲ್ಪನಿಕ ಭಯದೊಂದಿಗೆ ಗುದ್ದಾಡದೆ, ಅದನ್ನು ಬಗೆಹರಿಸಿಕೊಂಡು ಮುಂದೆ ದಲಿತ ಜಾತಿಗಳು ಖಾಸಗಿ ಮೀಸಲಾತಿಗಾಗಿ ಹೋರಾಡಬೇಕು. ಸಮಸಮಾಜದೆಡಗೆ ನಮ್ಮ ನಡಿಗೆ ಆದಷ್ಟು ಬೇಗ ಮತ್ತೆ ಗಟ್ಟಿಗೊಳ್ಳಬೇಕು.

  • ಕರಿಯಪ್ಪ ಗುಡಿಮನಿ

(ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷರಾದ ಗುಡಿಮನಿಯವರು ಮೂರ್ನಾಲ್ಕು ದಶಕಗಳಿಂದ  ದಲಿತ, ಎಡಪಂಥೀಯ ಚಳುವಳಿಯಲ್ಲಿ ಸಕ್ರಿಯವಾಗಿರುವವರು. ಬಳ್ಳಾರಿ ಭಾಗದ ಭೂಹೋರಾಟದಲ್ಲಿ ಪ್ರಧಾನವಾಗಿ ಮಾದಿಗ ಸಮುದಾಯದ ಜೊತೆ, ಆದರೆ ಎಲ್ಲಾ ಜಾತಿಗಳಿಗೆ ಸೇರಿದ ಶೋಷಿತರ ಪರವಾದ ಯಶಸ್ವಿ ಹೋರಾಟಗಳನ್ನು ಸಂಘಟಿಸಸಿದವರು.)


ಇದನ್ನೂ ಓದಿ: ಜಗದ ಕಣ್ತೆರೆಸಿದ ಮಾದಿಗರ ಒಳಮೀಸಲಾತಿ ಹೋರಾಟ : ಗುರುಪ್ರಸಾದ್ ಕಂಟಲಗೆರೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...