Homeಮುಖಪುಟಒಳಮೀಸಲಾತಿ: ಬಾಣಲೆಯಿಂದ ಬೆಂಕಿಗೆ ಹಾರುವುದು ಬೇಡ.. - ಕರಿಯಪ್ಪ ಗುಡಿಮನಿ

ಒಳಮೀಸಲಾತಿ: ಬಾಣಲೆಯಿಂದ ಬೆಂಕಿಗೆ ಹಾರುವುದು ಬೇಡ.. – ಕರಿಯಪ್ಪ ಗುಡಿಮನಿ

ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿ ಪರ ಹೋರಾಟಗಾರರ ಮೈತುಂಬಾ ಬಾಸುಂಡೆ ಬರುವಂತೆ ಲಾಠಿ ಚಾರ್ಜ್ ಮಾಡಿಸಿದ ಸರ್ಕಾರ ಯಾರದಾಗಿತ್ತು?

- Advertisement -
- Advertisement -

ಆದಿಮ ಕಾಲದ ಮಾದಿಗರು ಸಮಾಜದ ಬ್ರಾಹ್ಮಣ್ಯೀಕರಣದಿಂದ ಅಸ್ಪೃಶ್ಯರಾದರು. ಗಾಂಧೀಜಿಯವರಿಂದ ಹರಿಜನರಾದರು. ಅಂಬೇಡ್ಕರರಿಂದ ಸ್ವಾಭಿಮಾನಿ ದಲಿತರಾದರು. ಹಲವು ಪರಿಶಿಷ್ಟ ಜಾತಿಗಳಲ್ಲಿಂದು ಮಾದಿಗರು ಸಹ ಒಂದು ಸಮುದಾಯವಾಗಿದೆ.

ಮಾದಿಗ ಸಮುದಾಯವು ಸ್ವತಂತ್ರಪೂರ್ವದಲ್ಲಿ ಜಂಡಾ ಹಿಡಿದು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸಮುದಾಯವಾಗಿದೆ. ಆದರೆ ಸ್ವಾತಂತ್ರ್ಯದ ನಂತರದ ರಾಜಕೀಯದಲ್ಲಿ ಮಾದಿಗ ಸಮುದಾಯವನ್ನು ಬೆಲೆಯಿಲ್ಲದ, ನೆಲೆಯಿಲ್ಲದ ಸಮುದಾಯವನ್ನಾಗಿ ಮಾಡಲಾಗಿದೆ. ಇಂದಿಗೂ ಕೃಷಿ ಭೂಮಿ ರಹಿತರಾಗಿರುವ ಮಾದಿಗ ಸಮುದಾಯ ಜಮೀನ್ದಾರರ ಕೈ ಕೆಳಗೆ ನರಳುತ್ತಿದೆ. ಉತ್ತರ ಕರ್ನಾಟಕದಲ್ಲಂತು ಇದು ಎದ್ದು ಕಾಣುವ ಸಂಗತಿಯಾಗಿದೆ. ಬೆನ್ನಿಗೆ ನಿಲ್ಲದ ಸಹೋದರ ಸಮುದಾಯಗಳು, ಕೈಗೆ ಅಧಿಕಾರ ನೀಡದ ರಾಜಕೀಯ ಪಕ್ಷಗಳು, ನಿಷ್ಟೆ ಇಲ್ಲದ ಸಮುದಾಯದ ಮುಖಂಡರು, ಅಸ್ಪೃಶ್ಯತೆಯನ್ನು ಮೆರೆಯುವ ಮೇಲ್ವರ್ಗಗಳು. ಹೀಗೆ ಎತ್ತ ನೋಡಿದರೂ ಅಡ್ಡಗಾಲುಗಳು. ನಮ್ಮ ಹಾಸಿಗೆಯಲ್ಲಿ ನಾವೇ ಕಾಲು ಚಾಚದ ಸ್ಥಿತಿ.

ಇಂತಹ ಪರಿಸ್ಥಿತಿಯಲ್ಲಿ ಎಂದಿಗೂ ಮಾದಿಗರ ಪರ ನಿಲ್ಲದ ವಿವಿಧ ಭ್ರಷ್ಟ ರಾಜಕಾರಣಿಗಳ ಮನೆಯ ಹೆಬ್ಬಾಗಿಲುಗಳಲ್ಲಿ ನಮ್ಮ ಸಮುದಾಯದ ಮುಖಂಡರುಗಳಿಂದು ನಿಂತಿದ್ದಾರೆ. ಮತ್ತಷ್ಟೂ ಹಾದಿ ತಪ್ಪಿ ಅಸ್ಪೃಶ್ಯತೆಯನ್ನು ನಮ್ಮ ಮಾದಿಗರ ಮೇಲೆ ಹೇರಿದ ಬ್ರಾಹ್ಮಣ್ಯದ ತವರು ಸ್ಥಾನ ಸಂಘಪರಿವಾರ, ಆರೆಸ್ಸೆಸ್ ದ್ವಾರದ ಮುಂದೆ ಹೋರಾಟ ಮಾಡದೇ, ಒಳಮೀಸಲಾತಿಯ ಧರ್ಮಭಿಕ್ಷೆ ಬೇಡಲು ನಿಂತಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿ ಪರ ಹೋರಾಟಗಾರರ ಮೈತುಂಬಾ ಬಾಸುಂಡೆ ಬರುವಂತೆ ಲಾಠಿ ಚಾರ್ಜ್ ಮಾಡಿಸಿದ ಸರ್ಕಾರ ಯಾರದಾಗಿತ್ತು? ಇದು ಖಂಡಿತವಾಗಿಯೂ ಮಾದಿಗ ಸಮುದಾಯದಲ್ಲಿನ ಪ್ರಾಮಾಣಿಕ ಹೋರಾಟಗಾರರಿಗೆ ಚಿಂತೆಗೀಡು ಮಾಡಿದೆ.

ಇಂದು ಮಾದಿಗ ಸಮುದಾಯ ತನ್ನೊಳಗೂ ಹಾಗೂ ಹೊರಗೂ ಪ್ರಾಮಾಣಿಕ ಹೋರಾಟಗಾರರನ್ನು ಕಂಡುಕೊಳ್ಳಬೇಕಿದೆ. ಸದಾ ಚುನಾವಣಾ ರಾಜಕೀಯ ಹಿತಾಸಕ್ತಿಯನ್ನೇ ಬಯಸುವ ದಲಿತ ರಾಜಕಾರಣಿಗಳ ವಿರುದ್ಧವೂ ನಿಲ್ಲಬೇಕಿದೆ. ನಮ್ಮ ಸಂಕಟಗಳು ಬೆಟ್ಟದಷ್ಟಿರುವಾಗ ಆ ಬೆಟ್ಟವನ್ನು ನೆಲಸಮಗೊಳಿಸಲು ಒಳಮೀಸಲಾತಿ ಜಾರಿಯಾಗಲೇಬೇಕಿದೆ.

ಮೊದಲು ಸದಾಶಿವ ಆಯೋಗದ ವರದಿ ಬಹಿರಂಗಗೊಳ್ಳಬೇಕು. ಕಾಲ್ಪನಿಕ ಸೋರಿಕೆ ವಿಚಾರಗಳನ್ನು ಬದಿಗಿಟ್ಟು ಸಾರ್ವಜನಿಕ ಚರ್ಚೆಗಳಾಗಬೇಕು. ಇಡೀ 101 ದಲಿತ ಜಾತಿಗಳ ಪ್ರತಿನಿಧಿಗಳು ಒಂದೆಡೆ ಕುಳಿತು ಆಯೋಗದ ಶಿಫಾರಸ್ಸುಗಳನ್ನು ಪರಿಶೀಲಿಸಿ ಒಳಮೀಸಲಾತಿ ಜಾರಿಗೊಳ್ಳುವ ಸರಿಯಾದ ಕ್ರಮಗಳನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಒಳಮೀಸಲಾತಿ ದಲಿತರ ಒಗ್ಗಟ್ಟನ್ನು ಮುರಿಯುತ್ತದೆ ಎಂಬ ಕಾಲ್ಪನಿಕ ಭಯದೊಂದಿಗೆ ಗುದ್ದಾಡದೆ, ಅದನ್ನು ಬಗೆಹರಿಸಿಕೊಂಡು ಮುಂದೆ ದಲಿತ ಜಾತಿಗಳು ಖಾಸಗಿ ಮೀಸಲಾತಿಗಾಗಿ ಹೋರಾಡಬೇಕು. ಸಮಸಮಾಜದೆಡಗೆ ನಮ್ಮ ನಡಿಗೆ ಆದಷ್ಟು ಬೇಗ ಮತ್ತೆ ಗಟ್ಟಿಗೊಳ್ಳಬೇಕು.

  • ಕರಿಯಪ್ಪ ಗುಡಿಮನಿ

(ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷರಾದ ಗುಡಿಮನಿಯವರು ಮೂರ್ನಾಲ್ಕು ದಶಕಗಳಿಂದ  ದಲಿತ, ಎಡಪಂಥೀಯ ಚಳುವಳಿಯಲ್ಲಿ ಸಕ್ರಿಯವಾಗಿರುವವರು. ಬಳ್ಳಾರಿ ಭಾಗದ ಭೂಹೋರಾಟದಲ್ಲಿ ಪ್ರಧಾನವಾಗಿ ಮಾದಿಗ ಸಮುದಾಯದ ಜೊತೆ, ಆದರೆ ಎಲ್ಲಾ ಜಾತಿಗಳಿಗೆ ಸೇರಿದ ಶೋಷಿತರ ಪರವಾದ ಯಶಸ್ವಿ ಹೋರಾಟಗಳನ್ನು ಸಂಘಟಿಸಸಿದವರು.)


ಇದನ್ನೂ ಓದಿ: ಜಗದ ಕಣ್ತೆರೆಸಿದ ಮಾದಿಗರ ಒಳಮೀಸಲಾತಿ ಹೋರಾಟ : ಗುರುಪ್ರಸಾದ್ ಕಂಟಲಗೆರೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...