Homeಮುಖಪುಟಒಳಮೀಸಲಾತಿ: ಬಾಣಲೆಯಿಂದ ಬೆಂಕಿಗೆ ಹಾರುವುದು ಬೇಡ.. - ಕರಿಯಪ್ಪ ಗುಡಿಮನಿ

ಒಳಮೀಸಲಾತಿ: ಬಾಣಲೆಯಿಂದ ಬೆಂಕಿಗೆ ಹಾರುವುದು ಬೇಡ.. – ಕರಿಯಪ್ಪ ಗುಡಿಮನಿ

ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿ ಪರ ಹೋರಾಟಗಾರರ ಮೈತುಂಬಾ ಬಾಸುಂಡೆ ಬರುವಂತೆ ಲಾಠಿ ಚಾರ್ಜ್ ಮಾಡಿಸಿದ ಸರ್ಕಾರ ಯಾರದಾಗಿತ್ತು?

- Advertisement -
- Advertisement -

ಆದಿಮ ಕಾಲದ ಮಾದಿಗರು ಸಮಾಜದ ಬ್ರಾಹ್ಮಣ್ಯೀಕರಣದಿಂದ ಅಸ್ಪೃಶ್ಯರಾದರು. ಗಾಂಧೀಜಿಯವರಿಂದ ಹರಿಜನರಾದರು. ಅಂಬೇಡ್ಕರರಿಂದ ಸ್ವಾಭಿಮಾನಿ ದಲಿತರಾದರು. ಹಲವು ಪರಿಶಿಷ್ಟ ಜಾತಿಗಳಲ್ಲಿಂದು ಮಾದಿಗರು ಸಹ ಒಂದು ಸಮುದಾಯವಾಗಿದೆ.

ಮಾದಿಗ ಸಮುದಾಯವು ಸ್ವತಂತ್ರಪೂರ್ವದಲ್ಲಿ ಜಂಡಾ ಹಿಡಿದು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸಮುದಾಯವಾಗಿದೆ. ಆದರೆ ಸ್ವಾತಂತ್ರ್ಯದ ನಂತರದ ರಾಜಕೀಯದಲ್ಲಿ ಮಾದಿಗ ಸಮುದಾಯವನ್ನು ಬೆಲೆಯಿಲ್ಲದ, ನೆಲೆಯಿಲ್ಲದ ಸಮುದಾಯವನ್ನಾಗಿ ಮಾಡಲಾಗಿದೆ. ಇಂದಿಗೂ ಕೃಷಿ ಭೂಮಿ ರಹಿತರಾಗಿರುವ ಮಾದಿಗ ಸಮುದಾಯ ಜಮೀನ್ದಾರರ ಕೈ ಕೆಳಗೆ ನರಳುತ್ತಿದೆ. ಉತ್ತರ ಕರ್ನಾಟಕದಲ್ಲಂತು ಇದು ಎದ್ದು ಕಾಣುವ ಸಂಗತಿಯಾಗಿದೆ. ಬೆನ್ನಿಗೆ ನಿಲ್ಲದ ಸಹೋದರ ಸಮುದಾಯಗಳು, ಕೈಗೆ ಅಧಿಕಾರ ನೀಡದ ರಾಜಕೀಯ ಪಕ್ಷಗಳು, ನಿಷ್ಟೆ ಇಲ್ಲದ ಸಮುದಾಯದ ಮುಖಂಡರು, ಅಸ್ಪೃಶ್ಯತೆಯನ್ನು ಮೆರೆಯುವ ಮೇಲ್ವರ್ಗಗಳು. ಹೀಗೆ ಎತ್ತ ನೋಡಿದರೂ ಅಡ್ಡಗಾಲುಗಳು. ನಮ್ಮ ಹಾಸಿಗೆಯಲ್ಲಿ ನಾವೇ ಕಾಲು ಚಾಚದ ಸ್ಥಿತಿ.

ಇಂತಹ ಪರಿಸ್ಥಿತಿಯಲ್ಲಿ ಎಂದಿಗೂ ಮಾದಿಗರ ಪರ ನಿಲ್ಲದ ವಿವಿಧ ಭ್ರಷ್ಟ ರಾಜಕಾರಣಿಗಳ ಮನೆಯ ಹೆಬ್ಬಾಗಿಲುಗಳಲ್ಲಿ ನಮ್ಮ ಸಮುದಾಯದ ಮುಖಂಡರುಗಳಿಂದು ನಿಂತಿದ್ದಾರೆ. ಮತ್ತಷ್ಟೂ ಹಾದಿ ತಪ್ಪಿ ಅಸ್ಪೃಶ್ಯತೆಯನ್ನು ನಮ್ಮ ಮಾದಿಗರ ಮೇಲೆ ಹೇರಿದ ಬ್ರಾಹ್ಮಣ್ಯದ ತವರು ಸ್ಥಾನ ಸಂಘಪರಿವಾರ, ಆರೆಸ್ಸೆಸ್ ದ್ವಾರದ ಮುಂದೆ ಹೋರಾಟ ಮಾಡದೇ, ಒಳಮೀಸಲಾತಿಯ ಧರ್ಮಭಿಕ್ಷೆ ಬೇಡಲು ನಿಂತಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿ ಪರ ಹೋರಾಟಗಾರರ ಮೈತುಂಬಾ ಬಾಸುಂಡೆ ಬರುವಂತೆ ಲಾಠಿ ಚಾರ್ಜ್ ಮಾಡಿಸಿದ ಸರ್ಕಾರ ಯಾರದಾಗಿತ್ತು? ಇದು ಖಂಡಿತವಾಗಿಯೂ ಮಾದಿಗ ಸಮುದಾಯದಲ್ಲಿನ ಪ್ರಾಮಾಣಿಕ ಹೋರಾಟಗಾರರಿಗೆ ಚಿಂತೆಗೀಡು ಮಾಡಿದೆ.

ಇಂದು ಮಾದಿಗ ಸಮುದಾಯ ತನ್ನೊಳಗೂ ಹಾಗೂ ಹೊರಗೂ ಪ್ರಾಮಾಣಿಕ ಹೋರಾಟಗಾರರನ್ನು ಕಂಡುಕೊಳ್ಳಬೇಕಿದೆ. ಸದಾ ಚುನಾವಣಾ ರಾಜಕೀಯ ಹಿತಾಸಕ್ತಿಯನ್ನೇ ಬಯಸುವ ದಲಿತ ರಾಜಕಾರಣಿಗಳ ವಿರುದ್ಧವೂ ನಿಲ್ಲಬೇಕಿದೆ. ನಮ್ಮ ಸಂಕಟಗಳು ಬೆಟ್ಟದಷ್ಟಿರುವಾಗ ಆ ಬೆಟ್ಟವನ್ನು ನೆಲಸಮಗೊಳಿಸಲು ಒಳಮೀಸಲಾತಿ ಜಾರಿಯಾಗಲೇಬೇಕಿದೆ.

ಮೊದಲು ಸದಾಶಿವ ಆಯೋಗದ ವರದಿ ಬಹಿರಂಗಗೊಳ್ಳಬೇಕು. ಕಾಲ್ಪನಿಕ ಸೋರಿಕೆ ವಿಚಾರಗಳನ್ನು ಬದಿಗಿಟ್ಟು ಸಾರ್ವಜನಿಕ ಚರ್ಚೆಗಳಾಗಬೇಕು. ಇಡೀ 101 ದಲಿತ ಜಾತಿಗಳ ಪ್ರತಿನಿಧಿಗಳು ಒಂದೆಡೆ ಕುಳಿತು ಆಯೋಗದ ಶಿಫಾರಸ್ಸುಗಳನ್ನು ಪರಿಶೀಲಿಸಿ ಒಳಮೀಸಲಾತಿ ಜಾರಿಗೊಳ್ಳುವ ಸರಿಯಾದ ಕ್ರಮಗಳನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಒಳಮೀಸಲಾತಿ ದಲಿತರ ಒಗ್ಗಟ್ಟನ್ನು ಮುರಿಯುತ್ತದೆ ಎಂಬ ಕಾಲ್ಪನಿಕ ಭಯದೊಂದಿಗೆ ಗುದ್ದಾಡದೆ, ಅದನ್ನು ಬಗೆಹರಿಸಿಕೊಂಡು ಮುಂದೆ ದಲಿತ ಜಾತಿಗಳು ಖಾಸಗಿ ಮೀಸಲಾತಿಗಾಗಿ ಹೋರಾಡಬೇಕು. ಸಮಸಮಾಜದೆಡಗೆ ನಮ್ಮ ನಡಿಗೆ ಆದಷ್ಟು ಬೇಗ ಮತ್ತೆ ಗಟ್ಟಿಗೊಳ್ಳಬೇಕು.

  • ಕರಿಯಪ್ಪ ಗುಡಿಮನಿ

(ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷರಾದ ಗುಡಿಮನಿಯವರು ಮೂರ್ನಾಲ್ಕು ದಶಕಗಳಿಂದ  ದಲಿತ, ಎಡಪಂಥೀಯ ಚಳುವಳಿಯಲ್ಲಿ ಸಕ್ರಿಯವಾಗಿರುವವರು. ಬಳ್ಳಾರಿ ಭಾಗದ ಭೂಹೋರಾಟದಲ್ಲಿ ಪ್ರಧಾನವಾಗಿ ಮಾದಿಗ ಸಮುದಾಯದ ಜೊತೆ, ಆದರೆ ಎಲ್ಲಾ ಜಾತಿಗಳಿಗೆ ಸೇರಿದ ಶೋಷಿತರ ಪರವಾದ ಯಶಸ್ವಿ ಹೋರಾಟಗಳನ್ನು ಸಂಘಟಿಸಸಿದವರು.)


ಇದನ್ನೂ ಓದಿ: ಜಗದ ಕಣ್ತೆರೆಸಿದ ಮಾದಿಗರ ಒಳಮೀಸಲಾತಿ ಹೋರಾಟ : ಗುರುಪ್ರಸಾದ್ ಕಂಟಲಗೆರೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...