Homeಮುಖಪುಟಒಳಮೀಸಲಾತಿ: ಬಾಣಲೆಯಿಂದ ಬೆಂಕಿಗೆ ಹಾರುವುದು ಬೇಡ.. - ಕರಿಯಪ್ಪ ಗುಡಿಮನಿ

ಒಳಮೀಸಲಾತಿ: ಬಾಣಲೆಯಿಂದ ಬೆಂಕಿಗೆ ಹಾರುವುದು ಬೇಡ.. – ಕರಿಯಪ್ಪ ಗುಡಿಮನಿ

ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿ ಪರ ಹೋರಾಟಗಾರರ ಮೈತುಂಬಾ ಬಾಸುಂಡೆ ಬರುವಂತೆ ಲಾಠಿ ಚಾರ್ಜ್ ಮಾಡಿಸಿದ ಸರ್ಕಾರ ಯಾರದಾಗಿತ್ತು?

- Advertisement -
- Advertisement -

ಆದಿಮ ಕಾಲದ ಮಾದಿಗರು ಸಮಾಜದ ಬ್ರಾಹ್ಮಣ್ಯೀಕರಣದಿಂದ ಅಸ್ಪೃಶ್ಯರಾದರು. ಗಾಂಧೀಜಿಯವರಿಂದ ಹರಿಜನರಾದರು. ಅಂಬೇಡ್ಕರರಿಂದ ಸ್ವಾಭಿಮಾನಿ ದಲಿತರಾದರು. ಹಲವು ಪರಿಶಿಷ್ಟ ಜಾತಿಗಳಲ್ಲಿಂದು ಮಾದಿಗರು ಸಹ ಒಂದು ಸಮುದಾಯವಾಗಿದೆ.

ಮಾದಿಗ ಸಮುದಾಯವು ಸ್ವತಂತ್ರಪೂರ್ವದಲ್ಲಿ ಜಂಡಾ ಹಿಡಿದು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸಮುದಾಯವಾಗಿದೆ. ಆದರೆ ಸ್ವಾತಂತ್ರ್ಯದ ನಂತರದ ರಾಜಕೀಯದಲ್ಲಿ ಮಾದಿಗ ಸಮುದಾಯವನ್ನು ಬೆಲೆಯಿಲ್ಲದ, ನೆಲೆಯಿಲ್ಲದ ಸಮುದಾಯವನ್ನಾಗಿ ಮಾಡಲಾಗಿದೆ. ಇಂದಿಗೂ ಕೃಷಿ ಭೂಮಿ ರಹಿತರಾಗಿರುವ ಮಾದಿಗ ಸಮುದಾಯ ಜಮೀನ್ದಾರರ ಕೈ ಕೆಳಗೆ ನರಳುತ್ತಿದೆ. ಉತ್ತರ ಕರ್ನಾಟಕದಲ್ಲಂತು ಇದು ಎದ್ದು ಕಾಣುವ ಸಂಗತಿಯಾಗಿದೆ. ಬೆನ್ನಿಗೆ ನಿಲ್ಲದ ಸಹೋದರ ಸಮುದಾಯಗಳು, ಕೈಗೆ ಅಧಿಕಾರ ನೀಡದ ರಾಜಕೀಯ ಪಕ್ಷಗಳು, ನಿಷ್ಟೆ ಇಲ್ಲದ ಸಮುದಾಯದ ಮುಖಂಡರು, ಅಸ್ಪೃಶ್ಯತೆಯನ್ನು ಮೆರೆಯುವ ಮೇಲ್ವರ್ಗಗಳು. ಹೀಗೆ ಎತ್ತ ನೋಡಿದರೂ ಅಡ್ಡಗಾಲುಗಳು. ನಮ್ಮ ಹಾಸಿಗೆಯಲ್ಲಿ ನಾವೇ ಕಾಲು ಚಾಚದ ಸ್ಥಿತಿ.

ಇಂತಹ ಪರಿಸ್ಥಿತಿಯಲ್ಲಿ ಎಂದಿಗೂ ಮಾದಿಗರ ಪರ ನಿಲ್ಲದ ವಿವಿಧ ಭ್ರಷ್ಟ ರಾಜಕಾರಣಿಗಳ ಮನೆಯ ಹೆಬ್ಬಾಗಿಲುಗಳಲ್ಲಿ ನಮ್ಮ ಸಮುದಾಯದ ಮುಖಂಡರುಗಳಿಂದು ನಿಂತಿದ್ದಾರೆ. ಮತ್ತಷ್ಟೂ ಹಾದಿ ತಪ್ಪಿ ಅಸ್ಪೃಶ್ಯತೆಯನ್ನು ನಮ್ಮ ಮಾದಿಗರ ಮೇಲೆ ಹೇರಿದ ಬ್ರಾಹ್ಮಣ್ಯದ ತವರು ಸ್ಥಾನ ಸಂಘಪರಿವಾರ, ಆರೆಸ್ಸೆಸ್ ದ್ವಾರದ ಮುಂದೆ ಹೋರಾಟ ಮಾಡದೇ, ಒಳಮೀಸಲಾತಿಯ ಧರ್ಮಭಿಕ್ಷೆ ಬೇಡಲು ನಿಂತಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಒಳಮೀಸಲಾತಿ ಪರ ಹೋರಾಟಗಾರರ ಮೈತುಂಬಾ ಬಾಸುಂಡೆ ಬರುವಂತೆ ಲಾಠಿ ಚಾರ್ಜ್ ಮಾಡಿಸಿದ ಸರ್ಕಾರ ಯಾರದಾಗಿತ್ತು? ಇದು ಖಂಡಿತವಾಗಿಯೂ ಮಾದಿಗ ಸಮುದಾಯದಲ್ಲಿನ ಪ್ರಾಮಾಣಿಕ ಹೋರಾಟಗಾರರಿಗೆ ಚಿಂತೆಗೀಡು ಮಾಡಿದೆ.

ಇಂದು ಮಾದಿಗ ಸಮುದಾಯ ತನ್ನೊಳಗೂ ಹಾಗೂ ಹೊರಗೂ ಪ್ರಾಮಾಣಿಕ ಹೋರಾಟಗಾರರನ್ನು ಕಂಡುಕೊಳ್ಳಬೇಕಿದೆ. ಸದಾ ಚುನಾವಣಾ ರಾಜಕೀಯ ಹಿತಾಸಕ್ತಿಯನ್ನೇ ಬಯಸುವ ದಲಿತ ರಾಜಕಾರಣಿಗಳ ವಿರುದ್ಧವೂ ನಿಲ್ಲಬೇಕಿದೆ. ನಮ್ಮ ಸಂಕಟಗಳು ಬೆಟ್ಟದಷ್ಟಿರುವಾಗ ಆ ಬೆಟ್ಟವನ್ನು ನೆಲಸಮಗೊಳಿಸಲು ಒಳಮೀಸಲಾತಿ ಜಾರಿಯಾಗಲೇಬೇಕಿದೆ.

ಮೊದಲು ಸದಾಶಿವ ಆಯೋಗದ ವರದಿ ಬಹಿರಂಗಗೊಳ್ಳಬೇಕು. ಕಾಲ್ಪನಿಕ ಸೋರಿಕೆ ವಿಚಾರಗಳನ್ನು ಬದಿಗಿಟ್ಟು ಸಾರ್ವಜನಿಕ ಚರ್ಚೆಗಳಾಗಬೇಕು. ಇಡೀ 101 ದಲಿತ ಜಾತಿಗಳ ಪ್ರತಿನಿಧಿಗಳು ಒಂದೆಡೆ ಕುಳಿತು ಆಯೋಗದ ಶಿಫಾರಸ್ಸುಗಳನ್ನು ಪರಿಶೀಲಿಸಿ ಒಳಮೀಸಲಾತಿ ಜಾರಿಗೊಳ್ಳುವ ಸರಿಯಾದ ಕ್ರಮಗಳನ್ನು ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು. ಒಳಮೀಸಲಾತಿ ದಲಿತರ ಒಗ್ಗಟ್ಟನ್ನು ಮುರಿಯುತ್ತದೆ ಎಂಬ ಕಾಲ್ಪನಿಕ ಭಯದೊಂದಿಗೆ ಗುದ್ದಾಡದೆ, ಅದನ್ನು ಬಗೆಹರಿಸಿಕೊಂಡು ಮುಂದೆ ದಲಿತ ಜಾತಿಗಳು ಖಾಸಗಿ ಮೀಸಲಾತಿಗಾಗಿ ಹೋರಾಡಬೇಕು. ಸಮಸಮಾಜದೆಡಗೆ ನಮ್ಮ ನಡಿಗೆ ಆದಷ್ಟು ಬೇಗ ಮತ್ತೆ ಗಟ್ಟಿಗೊಳ್ಳಬೇಕು.

  • ಕರಿಯಪ್ಪ ಗುಡಿಮನಿ

(ಕರ್ನಾಟಕ ಮಾದಿಗ ರಕ್ಷಣಾ ವೇದಿಕೆಯ ರಾಜ್ಯ ಅಧ್ಯಕ್ಷರಾದ ಗುಡಿಮನಿಯವರು ಮೂರ್ನಾಲ್ಕು ದಶಕಗಳಿಂದ  ದಲಿತ, ಎಡಪಂಥೀಯ ಚಳುವಳಿಯಲ್ಲಿ ಸಕ್ರಿಯವಾಗಿರುವವರು. ಬಳ್ಳಾರಿ ಭಾಗದ ಭೂಹೋರಾಟದಲ್ಲಿ ಪ್ರಧಾನವಾಗಿ ಮಾದಿಗ ಸಮುದಾಯದ ಜೊತೆ, ಆದರೆ ಎಲ್ಲಾ ಜಾತಿಗಳಿಗೆ ಸೇರಿದ ಶೋಷಿತರ ಪರವಾದ ಯಶಸ್ವಿ ಹೋರಾಟಗಳನ್ನು ಸಂಘಟಿಸಸಿದವರು.)


ಇದನ್ನೂ ಓದಿ: ಜಗದ ಕಣ್ತೆರೆಸಿದ ಮಾದಿಗರ ಒಳಮೀಸಲಾತಿ ಹೋರಾಟ : ಗುರುಪ್ರಸಾದ್ ಕಂಟಲಗೆರೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...