Homeಕರ್ನಾಟಕಐದು ದಶಕಗಳ ರಾಜ್ಯ ರಾಜಕಾರಣದ ಅಪರೂಪದ ಸಾಕ್ಷಿಪ್ರಜ್ಞೆ: ಎ.ಕೆ.ಸುಬ್ಬಯ್ಯ

ಐದು ದಶಕಗಳ ರಾಜ್ಯ ರಾಜಕಾರಣದ ಅಪರೂಪದ ಸಾಕ್ಷಿಪ್ರಜ್ಞೆ: ಎ.ಕೆ.ಸುಬ್ಬಯ್ಯ

- Advertisement -
- Advertisement -

ತಮ್ಮ ಪ್ರಖರ ಮಾತಿನ ವೈಖರಿಯಿಂದ ಗಮನ ಸೆಳೆಯುತ್ತಿದ್ದ ಸುಬ್ಬಯ್ಯ ಹೋರಾಟ, ಪ್ರಾಮಾಣಿಕತೆ, ಜಾತ್ಯತೀತ ಮೌಲ್ಯಗಳ ಪ್ರತೀಕದಂತಿದ್ದರು. ಮಾತಿನ ಮನೆಯನ್ನು ಮಾತಿನ ಮೂಲಕವೇ ವಶಕ್ಕೆ ಪಡೆದ ಸುಬ್ಬಯ್ಯ ತರಹದ ನಾಯಕರು ಅಪರೂಪ. ನಾಲ್ಕು ಬಾರಿ ಮೇಲ್ಮನೆ ಸದಸ್ಯರಾಗಿದ್ದ ಸುಬ್ಬಯ್ಯ ಅವರು ಆಡಲು ನಿಂತರೆ ಆಡಳಿತ ಪಕ್ಷದವರಿಗೆ ಆತಂಕ, ಗಾಬರಿ ಉಂಟಾಗುತ್ತಿತ್ತು.

ಸದಾ ವಿರೋಧ ಪಕ್ಷದವರಾಗಿಯೇ ಇರಲು ಬಯಸಿದ ಸುಬ್ಬಯ್ಯ ಬಯಸಿದ್ದರೆ ‘ಅಧಿಕಾರ’ ಅವರಿಂದ ದೂರ ಉಳಿಯುತ್ತಿರಲಿಲ್ಲ. ಹಲವು ಬಾರಿ ಅಧಿಕಾರ ಅವರ ಸಮೀಪ ಬಂದು ಹೋದದ್ದಿದೆ. ಅವರು ಅದಕ್ಕಾಗಿ ಆಸೆ ಪಟ್ಟವರಲ್ಲ. ಆಡಳಿತಾರೂಢ ಪಕ್ಷದ ಲೋಪ ಎತ್ತಿ ತೋರಿಸುವ ಯಾವ ಅವಕಾಶವನ್ನೂ ಸುಬ್ಬಯ್ಯ ಕೈ ಬಿಡುತ್ತಿರಲಿಲ್ಲ. ಮಾತಿನ ಚಟಾಕಿಯ ಮೂಲಕ ತಿವಿಯುತ್ತಿದ್ದರು. ಪ್ರಭುತ್ವದ ಅರೆಕೊರೆಗಳನ್ನು ಅವರ ಹಾಗೆ ದಾಖಲಿಸಿದವರು ವಿರಳ.

ಕಾನೂನು ವಿದ್ಯಾರ್ಥಿಯಾಗಿದ್ದ ದಿನಗಳಲ್ಲಿಯೇ ರಾಜಕೀಯದ ರುಚಿ ಕಂಡವರು ಸುಬ್ಬಯ್ಯ. ಪ್ರಬಲ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಸ್ಪರ್ಧಿಸಿದ್ದ ಪ್ರಜಾ ಸೋಷಲಿಸ್ಟ್ ಪಾರ್ಟಿ (ಪಿಎಸ್‍ಪಿ)ಯ ಅಭ್ಯರ್ಥಿಯ ಪರವಾಗಿ ಭಾಷಣ ಮಾಡುತ್ತಿದ್ದರು. ವೇದಿಕೆಯಲ್ಲಿ ಗಮನ ಸೆಳೆಯುತ್ತಿದ್ದ ಯುವಕ ಸುಬ್ಬಯ್ಯ ಅವರು ಇಂದಿರಾಗಾಂಧಿ ಎಮರ್ಜೆನ್ಸಿ ಹೇರಿದಾಗ ಮೊದಲಿಗೆ ಜೈಲಿಗೆ ಹೋಗಿದ್ದರು. ಮತ್ತು ಕೊನೆಯವರಾಗಿ ಹೊರ ಬಂದರು. ಜೈಲಿನಲ್ಲಿ ಮಾಂಸಾಹಾರ-ಶಾಖಾಹಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯ ಬಂದಾಗ ಸುಬ್ಬಯ್ಯನವರು ‘ಆಹಾರ ಸ್ವಾತಂತ್ರ್ಯ’ದ ಪರವಾಗಿ ನಿಂತಿದ್ದರು.

ಸೆರೆಯಿಂದ ಹೊರ ಬಂದ ನಂತರ ಕೆಲಕಾಲ ಜನತಾ ಪಕ್ಷದ ಜೊತೆಗಿದ್ದ ಅವರು ನಂತರ ಭಾರತೀಯ ಜನ ಸಂಘದ ಮುಖ್ಯಸ್ಥರಾದರು. ಮುಂದೆ ಅದು ಭಾರತೀಯ ಜನತಾ ಪಕ್ಷ (ಬಿಜೆಪಿ) ಆದಾಗ ರಾಜ್ಯದಲ್ಲಿ ಅದರ ಚುಕ್ಕಾಣಿ ಹಿಡಿದಿದ್ದರು. ಬಲಪಂಥೀಯ (?) ಪಕ್ಷದ ಜೊತೆಗೆ ಗುರುತಿಸಿಕೊಳ್ಳುವಾಗ ಸುಬ್ಬಯ್ಯ ಅವರಿಗೆ ಕಾಣಿಸಿದ್ದು ಅದರ ಭ್ರಷ್ಟಾಚಾರ ವಿರೋಧಿ ನಿಲುವು. ಬಿಜೆಪಿಯ ಪ್ರಮುಖ-ಹಿರಿಯ ನಾಯಕರ ಜೊತೆ ಹತ್ತಿರದ ಒಡನಾಟ ಹೊಂದಿದ್ದ ಸುಬ್ಬಯ್ಯ ಅವರು ರಾಜ್ಯ ಅಧ್ಯಕ್ಷರಾಗುವುದಕ್ಕೆ ಅಡೆತಡೆಗಳೇ ಇರಲಿಲ್ಲ. 1983ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ಸೇತರ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸರ್ಕಾರದ ಭಾಗವಾಗದೇ ಹೊರಗಿನಿಂದ ಬೆಂಬಲ ನೀಡುವ ನಿಲುವು ತಳೆಯುವುದಕ್ಕೆ ಸುಬ್ಬಯ್ಯ ಅವರೇ ಕಾರಣರಾಗಿದ್ದರು.

ಸುಬ್ಬಯ್ಯ ಚುನಾವಣಾ ರಾಜಕೀಯದಲ್ಲಿ ಕಾಣಿಸಿಕೊಂಡದ್ದು ಬಹಳ ಕಡಿಮೆ. ಒಮ್ಮೆ ಮಾತ್ರ ಅವರು 1979ರಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಕರ್ನಾಟಕದಲ್ಲಿ ಬಿಜೆಪಿಗೆ ಆರಂಭದಲ್ಲೇ ಭದ್ರ ನೆಲೆ ಒದಗಿಸಿದವರಲ್ಲಿ ಸುಬ್ಬಯ್ಯ ಪ್ರಮುಖರು ಎಂಬುದರಲ್ಲಿ ಎರಡು ಮಾತಿಲ್ಲ. ರಾಜ್ಯದಲ್ಲಿ ಪಕ್ಷದ ಅಧ್ಯಕ್ಷರಾದ ನಂತರ ಆರ್‍ಎಸ್‍ಎಸ್ ಮೂಗು ತೂರಿಸುವುದಕ್ಕೆ ಅಡ್ಡಿಯುಂಟು ಮಾಡಿದರು. ಆರ್‍ಎಸ್‍ಎಸ್ ಜೊತೆಗಿನ ಅವರ ಸಂಘರ್ಷ ಪಕ್ಷ ತೊರೆಯುವುದಕ್ಕೂ ಕಾರಣವಾಯಿತು. ‘ಆರ್‍ಎಸ್‍ಎಸ್. ಅಂತರಂಗ’ ಕೃತಿ ಸುಬ್ಬಯ್ಯನವರ ಪ್ರಖರ ವೈಚಾರಿಕತೆಗೆ ಹಿಡಿದ ಕನ್ನಡಿಯಂತಿದೆ.

ವಿಚಾರದ ಖಚಿತತೆ ಸುಬ್ಬಯ್ಯನವರ ವೈಶಿಷ್ಟ್ಯ. ಅದರ ಜೊತೆಗೆ ನೇರಾನೇರ ಹೇಳುವ ಗುಣ ಅವರಿಗೆ ಮಿತ್ರರಿಗಿಂತ ಶತ್ರುಗಳ ಸಂಖ್ಯೆ ಹೆಚ್ಚುವುದಕ್ಕೆ ಕಾರಣವಾಗಿತ್ತು. ಮಾತು ಅವರ ಶಕ್ತಿಯಾಗಿತ್ತು. ಹಾಗೆಯೇ ಅದೇ ಅವರ ಮಿತಿಯೂ ಆಗಿತ್ತು. ಮಾತಿನ ಮೂಲಕ ಬಹಳಷ್ಟನ್ನು ಪಡೆದ ಸುಬ್ಬಯ್ಯ ಅದೇ ಮಾತಿನಿಂದ ಹಲವನ್ನು ಕಳೆದುಕೊಂಡರು. ಆ ಬಗ್ಗೆ ಅವರಿಗೆ ವಿಷಾದವೇನಿರಲಿಲ್ಲ.

ಅಧಿಕಾರಕ್ಕಾಗಿ ಹಪಾಹಪಿಸದ ಅವರ ನಿಲುವು ಅವರ ವ್ಯಕ್ತಿತ್ವದ ಗಟ್ಟಿತನಕ್ಕೆ ಕಾರಣವಾಗಿತ್ತು. ಯಾರೂ ಅವರಿಗೆ ಆಮಿಷ ಒಡ್ಡುವುದು ಸಾಧ್ಯವಿರಲಿಲ್ಲ. ಅಂತಹ ಎದೆಗಾರಿಕೆ ಆಡಳಿತ ಪಕ್ಷದ ಯಾವ ನಾಯಕನ ಬಳಿಯಲ್ಲಿಯೂ ಇರಲಿಲ್ಲ.

ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಮೇಲ್ಮನೆಯ ಅಖಾಡದಲ್ಲಿ ಸುಬ್ಬಯ್ಯನವರ ಮಾತಿನ ವೈಖರಿ ಆರಂಭವಾಯಿತು. ಅದು ಎಷ್ಟರ ಮಟ್ಟಿಗೆ ಪ್ರಭಾವಶಾಲಿ ಆಗಿತ್ತೆಂದರೆ ಅರಸು ಮೇಲ್ಮನೆಯನ್ನು ‘ಇಲ್ಲ’ವಾಗಿಸುವ ಯೋಚನೆ ಮಾಡಿದ್ದರು.

ಅರಸು ನಂತರ ಮುಖ್ಯಮಂತ್ರಿಯಾದ ಗುಂಡೂರಾವ್ ಅವರಿಗೂ ಹಾಗೂ ಅವರ ಸಂಪುಟದ ಸದಸ್ಯರಿಗೂ ಸುಬ್ಬಯ್ಯ ದುಃಸ್ವಪ್ನವಾಗಿದ್ದರು. ದೀರ್ಘ ಕಾಲದ ಕಾಂಗ್ರೆಸ್ ಆಡಳಿತದ ಅವಧಿ ಮುಗಿದು ಕಾಂಗ್ರೇಸ್ಸೇತರ ಜನತಾ ಸರ್ಕಾರ ಅಧಿಕಾರಕ್ಕೆ ಬಂದರೂ ಸುಬ್ಬಯ್ಯನವರ ಆರ್ಭಟವೇನೂ ಕಡಿಮೆಯಾಗಲಿಲ್ಲ. ಹೆಗಡೆ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವಲ್ಲಿ ಸುಬ್ಬಯ್ಯನವರ ಪಾತ್ರ ಗಮನಾರ್ಹವಾದದ್ದು.

ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ನೆಲೆ ನಿಲ್ಲಲು ಕಾರಣರಾದ ಕಾನ್ಶಿರಾಮ್ ಅವರ ಪ್ರೀತಿ-ಆಗ್ರಹಕ್ಕೆ ಮಣಿದು ಪಕ್ಷ ಸೇರಿದ ಸುಬ್ಬಯ್ಯ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದರು. ವಿಧಾನಸಭೆಯಲ್ಲಿ ಪಕ್ಷದ ಪ್ರತಿನಿಧಿ ಕಾಣಿಸಿಕೊಳ್ಳಲು ಕಾರಣರಾಗಿದ್ದರು. ಪಕ್ಷದೊಳಗಿನ ಅಸಹನೆ-ಧೋರಣೆಯಿಂದ ಹೆಚ್ಚು ಕಾಲ ಬಿಎಸ್‍ಪಿಯಲ್ಲಿಯೂ ಉಳಿಯಲಿಲ್ಲ. ಕಾಂಗ್ರೆಸ್ ಪಕ್ಷ ಸೇರಿದ ಸುಬ್ಬಯ್ಯ ಅವರು ಅಲ್ಲಿದ್ದದ್ದು ತೀರಾ ಕಡಿಮೆ ಅವಧಿಗೆ.

ಬಲಪಂಥೀಯರು ಪ್ರಭುತ್ವದ ಚುಕ್ಕಾಣಿ ಹಿಡಿಯುವುದರ ವಿರುದ್ಧ ಸುಬ್ಬಯ್ಯ ಅವರು ಬಹುತ್ವದ ನೆಲೆಯಿಂದ ದೇಶ ಕಟ್ಟಬಯಸುವ ಧೋರಣೆ ಉಳ್ಳವರಾಗಿದ್ದರು. ಪ್ರಜಾಸತ್ತಾತ್ಮಕ ಹಾಗೂ ಜಾತ್ಯತೀತ-ಧರ್ಮ ನಿರಪೇಕ್ಷ ನಿಲುವು ಅವರ ಆಸಕ್ತಿ ಹಾಗೂ ಕಾಳಜಿಗಳಾಗಿದ್ದವು. ಅದಕ್ಕಾಗಿ ಅವರು ಬೀದಿಗೆ ಇಳಿಯಲು ಎಂದೂ ಹಿಂದೇಟು ಹಾಕಿದವರಲ್ಲ. ‘ಸಮೂಹ ಸನ್ನಿ’ಯ ವಿರುದ್ಧದ ನಿಲುವು ತಳೆಯುವ ಧಾಷ್ಟ್ರ್ಯ ಮತ್ತು ಎದೆಗಾರಿಕೆಗಳೆರಡೂ ಅವರಿಗಿದ್ದವು. ರಾಜ್ ಅಭಿಮಾನಿಗಳನ್ನು ಎದುರಿಸಿದ ರೀತಿಯೇ ಅದಕ್ಕೆ ಸಾಕ್ಷಿ.

ಸುಬ್ಬಯ್ಯನವರ ರಾಜಕೀಯ-ಸಾಮಾಜಿಕ ಬದುಕು ಕರ್ನಾಟಕದ ರಾಜಕೀಯ-ಸಾಮಾಜಿಕ ಬದುಕಿನೊಂದಿಗೆ ತಳುಕು ಹಾಕಿಕೊಂಡಿದೆ. ಸುಬ್ಬಯ್ಯನವರ ಗೆಲುವು ರಾಜ್ಯ ರಾಜಕಾರಣದ ದಿಕ್ಕು ಬದಲಿಸುವುದಕ್ಕೆ ಕಾರಣವಾಗಿದೆ. ಹಾಗೆಯೇ ಅವರ ‘ಸೋಲು’ ಇಂದಿನ ದುಸ್ಥಿತಿಗೆ ದಾರಿ ಮಾಡಿಕೊಟ್ಟಿದೆ. ಕರ್ನಾಟಕದ ಸಾಕ್ಷಿಪ್ರಜ್ಞೆಯಂತಿದ್ದ ಸುಬ್ಬಯ್ಯ ಅವರು ಜೀವಪರ-ಜನಪರ ಕಾಳಜಿಯಿದ್ದ ಅಪರೂಪದ ನಾಯಕ. ‘ಮಾದರಿ’ ನಾಯಕರಾಗಿದ್ದ ಸುಬ್ಬಯ್ಯ ಅವರ ನಿರ್ಗಮನದಿಂದ ತೆರವಾದ ಸ್ಥಳವನ್ನು ಯಾರೂ ತುಂಬಲು ಸಾಧ್ಯವಿಲ್ಲ. ತುಂಬದ-ತುಂಬಲಾಗದ ‘ಸ್ಥಿತಿ’ ಕರ್ನಾಟಕದ ಸಾರ್ವಜನಿಕ ಬದುಕು ತಲುಪಿರುವ ದುಸ್ಥಿತಿಯ ದ್ಯೋತಕ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...