Homeಕರ್ನಾಟಕಐದು ದಶಕಗಳ ರಾಜ್ಯ ರಾಜಕಾರಣದ ಅಪರೂಪದ ಸಾಕ್ಷಿಪ್ರಜ್ಞೆ: ಎ.ಕೆ.ಸುಬ್ಬಯ್ಯ

ಐದು ದಶಕಗಳ ರಾಜ್ಯ ರಾಜಕಾರಣದ ಅಪರೂಪದ ಸಾಕ್ಷಿಪ್ರಜ್ಞೆ: ಎ.ಕೆ.ಸುಬ್ಬಯ್ಯ

- Advertisement -
- Advertisement -

ತಮ್ಮ ಪ್ರಖರ ಮಾತಿನ ವೈಖರಿಯಿಂದ ಗಮನ ಸೆಳೆಯುತ್ತಿದ್ದ ಸುಬ್ಬಯ್ಯ ಹೋರಾಟ, ಪ್ರಾಮಾಣಿಕತೆ, ಜಾತ್ಯತೀತ ಮೌಲ್ಯಗಳ ಪ್ರತೀಕದಂತಿದ್ದರು. ಮಾತಿನ ಮನೆಯನ್ನು ಮಾತಿನ ಮೂಲಕವೇ ವಶಕ್ಕೆ ಪಡೆದ ಸುಬ್ಬಯ್ಯ ತರಹದ ನಾಯಕರು ಅಪರೂಪ. ನಾಲ್ಕು ಬಾರಿ ಮೇಲ್ಮನೆ ಸದಸ್ಯರಾಗಿದ್ದ ಸುಬ್ಬಯ್ಯ ಅವರು ಆಡಲು ನಿಂತರೆ ಆಡಳಿತ ಪಕ್ಷದವರಿಗೆ ಆತಂಕ, ಗಾಬರಿ ಉಂಟಾಗುತ್ತಿತ್ತು.

ಸದಾ ವಿರೋಧ ಪಕ್ಷದವರಾಗಿಯೇ ಇರಲು ಬಯಸಿದ ಸುಬ್ಬಯ್ಯ ಬಯಸಿದ್ದರೆ ‘ಅಧಿಕಾರ’ ಅವರಿಂದ ದೂರ ಉಳಿಯುತ್ತಿರಲಿಲ್ಲ. ಹಲವು ಬಾರಿ ಅಧಿಕಾರ ಅವರ ಸಮೀಪ ಬಂದು ಹೋದದ್ದಿದೆ. ಅವರು ಅದಕ್ಕಾಗಿ ಆಸೆ ಪಟ್ಟವರಲ್ಲ. ಆಡಳಿತಾರೂಢ ಪಕ್ಷದ ಲೋಪ ಎತ್ತಿ ತೋರಿಸುವ ಯಾವ ಅವಕಾಶವನ್ನೂ ಸುಬ್ಬಯ್ಯ ಕೈ ಬಿಡುತ್ತಿರಲಿಲ್ಲ. ಮಾತಿನ ಚಟಾಕಿಯ ಮೂಲಕ ತಿವಿಯುತ್ತಿದ್ದರು. ಪ್ರಭುತ್ವದ ಅರೆಕೊರೆಗಳನ್ನು ಅವರ ಹಾಗೆ ದಾಖಲಿಸಿದವರು ವಿರಳ.

ಕಾನೂನು ವಿದ್ಯಾರ್ಥಿಯಾಗಿದ್ದ ದಿನಗಳಲ್ಲಿಯೇ ರಾಜಕೀಯದ ರುಚಿ ಕಂಡವರು ಸುಬ್ಬಯ್ಯ. ಪ್ರಬಲ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಸ್ಪರ್ಧಿಸಿದ್ದ ಪ್ರಜಾ ಸೋಷಲಿಸ್ಟ್ ಪಾರ್ಟಿ (ಪಿಎಸ್‍ಪಿ)ಯ ಅಭ್ಯರ್ಥಿಯ ಪರವಾಗಿ ಭಾಷಣ ಮಾಡುತ್ತಿದ್ದರು. ವೇದಿಕೆಯಲ್ಲಿ ಗಮನ ಸೆಳೆಯುತ್ತಿದ್ದ ಯುವಕ ಸುಬ್ಬಯ್ಯ ಅವರು ಇಂದಿರಾಗಾಂಧಿ ಎಮರ್ಜೆನ್ಸಿ ಹೇರಿದಾಗ ಮೊದಲಿಗೆ ಜೈಲಿಗೆ ಹೋಗಿದ್ದರು. ಮತ್ತು ಕೊನೆಯವರಾಗಿ ಹೊರ ಬಂದರು. ಜೈಲಿನಲ್ಲಿ ಮಾಂಸಾಹಾರ-ಶಾಖಾಹಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯ ಬಂದಾಗ ಸುಬ್ಬಯ್ಯನವರು ‘ಆಹಾರ ಸ್ವಾತಂತ್ರ್ಯ’ದ ಪರವಾಗಿ ನಿಂತಿದ್ದರು.

ಸೆರೆಯಿಂದ ಹೊರ ಬಂದ ನಂತರ ಕೆಲಕಾಲ ಜನತಾ ಪಕ್ಷದ ಜೊತೆಗಿದ್ದ ಅವರು ನಂತರ ಭಾರತೀಯ ಜನ ಸಂಘದ ಮುಖ್ಯಸ್ಥರಾದರು. ಮುಂದೆ ಅದು ಭಾರತೀಯ ಜನತಾ ಪಕ್ಷ (ಬಿಜೆಪಿ) ಆದಾಗ ರಾಜ್ಯದಲ್ಲಿ ಅದರ ಚುಕ್ಕಾಣಿ ಹಿಡಿದಿದ್ದರು. ಬಲಪಂಥೀಯ (?) ಪಕ್ಷದ ಜೊತೆಗೆ ಗುರುತಿಸಿಕೊಳ್ಳುವಾಗ ಸುಬ್ಬಯ್ಯ ಅವರಿಗೆ ಕಾಣಿಸಿದ್ದು ಅದರ ಭ್ರಷ್ಟಾಚಾರ ವಿರೋಧಿ ನಿಲುವು. ಬಿಜೆಪಿಯ ಪ್ರಮುಖ-ಹಿರಿಯ ನಾಯಕರ ಜೊತೆ ಹತ್ತಿರದ ಒಡನಾಟ ಹೊಂದಿದ್ದ ಸುಬ್ಬಯ್ಯ ಅವರು ರಾಜ್ಯ ಅಧ್ಯಕ್ಷರಾಗುವುದಕ್ಕೆ ಅಡೆತಡೆಗಳೇ ಇರಲಿಲ್ಲ. 1983ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ಸೇತರ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸರ್ಕಾರದ ಭಾಗವಾಗದೇ ಹೊರಗಿನಿಂದ ಬೆಂಬಲ ನೀಡುವ ನಿಲುವು ತಳೆಯುವುದಕ್ಕೆ ಸುಬ್ಬಯ್ಯ ಅವರೇ ಕಾರಣರಾಗಿದ್ದರು.

ಸುಬ್ಬಯ್ಯ ಚುನಾವಣಾ ರಾಜಕೀಯದಲ್ಲಿ ಕಾಣಿಸಿಕೊಂಡದ್ದು ಬಹಳ ಕಡಿಮೆ. ಒಮ್ಮೆ ಮಾತ್ರ ಅವರು 1979ರಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಕರ್ನಾಟಕದಲ್ಲಿ ಬಿಜೆಪಿಗೆ ಆರಂಭದಲ್ಲೇ ಭದ್ರ ನೆಲೆ ಒದಗಿಸಿದವರಲ್ಲಿ ಸುಬ್ಬಯ್ಯ ಪ್ರಮುಖರು ಎಂಬುದರಲ್ಲಿ ಎರಡು ಮಾತಿಲ್ಲ. ರಾಜ್ಯದಲ್ಲಿ ಪಕ್ಷದ ಅಧ್ಯಕ್ಷರಾದ ನಂತರ ಆರ್‍ಎಸ್‍ಎಸ್ ಮೂಗು ತೂರಿಸುವುದಕ್ಕೆ ಅಡ್ಡಿಯುಂಟು ಮಾಡಿದರು. ಆರ್‍ಎಸ್‍ಎಸ್ ಜೊತೆಗಿನ ಅವರ ಸಂಘರ್ಷ ಪಕ್ಷ ತೊರೆಯುವುದಕ್ಕೂ ಕಾರಣವಾಯಿತು. ‘ಆರ್‍ಎಸ್‍ಎಸ್. ಅಂತರಂಗ’ ಕೃತಿ ಸುಬ್ಬಯ್ಯನವರ ಪ್ರಖರ ವೈಚಾರಿಕತೆಗೆ ಹಿಡಿದ ಕನ್ನಡಿಯಂತಿದೆ.

ವಿಚಾರದ ಖಚಿತತೆ ಸುಬ್ಬಯ್ಯನವರ ವೈಶಿಷ್ಟ್ಯ. ಅದರ ಜೊತೆಗೆ ನೇರಾನೇರ ಹೇಳುವ ಗುಣ ಅವರಿಗೆ ಮಿತ್ರರಿಗಿಂತ ಶತ್ರುಗಳ ಸಂಖ್ಯೆ ಹೆಚ್ಚುವುದಕ್ಕೆ ಕಾರಣವಾಗಿತ್ತು. ಮಾತು ಅವರ ಶಕ್ತಿಯಾಗಿತ್ತು. ಹಾಗೆಯೇ ಅದೇ ಅವರ ಮಿತಿಯೂ ಆಗಿತ್ತು. ಮಾತಿನ ಮೂಲಕ ಬಹಳಷ್ಟನ್ನು ಪಡೆದ ಸುಬ್ಬಯ್ಯ ಅದೇ ಮಾತಿನಿಂದ ಹಲವನ್ನು ಕಳೆದುಕೊಂಡರು. ಆ ಬಗ್ಗೆ ಅವರಿಗೆ ವಿಷಾದವೇನಿರಲಿಲ್ಲ.

ಅಧಿಕಾರಕ್ಕಾಗಿ ಹಪಾಹಪಿಸದ ಅವರ ನಿಲುವು ಅವರ ವ್ಯಕ್ತಿತ್ವದ ಗಟ್ಟಿತನಕ್ಕೆ ಕಾರಣವಾಗಿತ್ತು. ಯಾರೂ ಅವರಿಗೆ ಆಮಿಷ ಒಡ್ಡುವುದು ಸಾಧ್ಯವಿರಲಿಲ್ಲ. ಅಂತಹ ಎದೆಗಾರಿಕೆ ಆಡಳಿತ ಪಕ್ಷದ ಯಾವ ನಾಯಕನ ಬಳಿಯಲ್ಲಿಯೂ ಇರಲಿಲ್ಲ.

ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಮೇಲ್ಮನೆಯ ಅಖಾಡದಲ್ಲಿ ಸುಬ್ಬಯ್ಯನವರ ಮಾತಿನ ವೈಖರಿ ಆರಂಭವಾಯಿತು. ಅದು ಎಷ್ಟರ ಮಟ್ಟಿಗೆ ಪ್ರಭಾವಶಾಲಿ ಆಗಿತ್ತೆಂದರೆ ಅರಸು ಮೇಲ್ಮನೆಯನ್ನು ‘ಇಲ್ಲ’ವಾಗಿಸುವ ಯೋಚನೆ ಮಾಡಿದ್ದರು.

ಅರಸು ನಂತರ ಮುಖ್ಯಮಂತ್ರಿಯಾದ ಗುಂಡೂರಾವ್ ಅವರಿಗೂ ಹಾಗೂ ಅವರ ಸಂಪುಟದ ಸದಸ್ಯರಿಗೂ ಸುಬ್ಬಯ್ಯ ದುಃಸ್ವಪ್ನವಾಗಿದ್ದರು. ದೀರ್ಘ ಕಾಲದ ಕಾಂಗ್ರೆಸ್ ಆಡಳಿತದ ಅವಧಿ ಮುಗಿದು ಕಾಂಗ್ರೇಸ್ಸೇತರ ಜನತಾ ಸರ್ಕಾರ ಅಧಿಕಾರಕ್ಕೆ ಬಂದರೂ ಸುಬ್ಬಯ್ಯನವರ ಆರ್ಭಟವೇನೂ ಕಡಿಮೆಯಾಗಲಿಲ್ಲ. ಹೆಗಡೆ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವಲ್ಲಿ ಸುಬ್ಬಯ್ಯನವರ ಪಾತ್ರ ಗಮನಾರ್ಹವಾದದ್ದು.

ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ನೆಲೆ ನಿಲ್ಲಲು ಕಾರಣರಾದ ಕಾನ್ಶಿರಾಮ್ ಅವರ ಪ್ರೀತಿ-ಆಗ್ರಹಕ್ಕೆ ಮಣಿದು ಪಕ್ಷ ಸೇರಿದ ಸುಬ್ಬಯ್ಯ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದರು. ವಿಧಾನಸಭೆಯಲ್ಲಿ ಪಕ್ಷದ ಪ್ರತಿನಿಧಿ ಕಾಣಿಸಿಕೊಳ್ಳಲು ಕಾರಣರಾಗಿದ್ದರು. ಪಕ್ಷದೊಳಗಿನ ಅಸಹನೆ-ಧೋರಣೆಯಿಂದ ಹೆಚ್ಚು ಕಾಲ ಬಿಎಸ್‍ಪಿಯಲ್ಲಿಯೂ ಉಳಿಯಲಿಲ್ಲ. ಕಾಂಗ್ರೆಸ್ ಪಕ್ಷ ಸೇರಿದ ಸುಬ್ಬಯ್ಯ ಅವರು ಅಲ್ಲಿದ್ದದ್ದು ತೀರಾ ಕಡಿಮೆ ಅವಧಿಗೆ.

ಬಲಪಂಥೀಯರು ಪ್ರಭುತ್ವದ ಚುಕ್ಕಾಣಿ ಹಿಡಿಯುವುದರ ವಿರುದ್ಧ ಸುಬ್ಬಯ್ಯ ಅವರು ಬಹುತ್ವದ ನೆಲೆಯಿಂದ ದೇಶ ಕಟ್ಟಬಯಸುವ ಧೋರಣೆ ಉಳ್ಳವರಾಗಿದ್ದರು. ಪ್ರಜಾಸತ್ತಾತ್ಮಕ ಹಾಗೂ ಜಾತ್ಯತೀತ-ಧರ್ಮ ನಿರಪೇಕ್ಷ ನಿಲುವು ಅವರ ಆಸಕ್ತಿ ಹಾಗೂ ಕಾಳಜಿಗಳಾಗಿದ್ದವು. ಅದಕ್ಕಾಗಿ ಅವರು ಬೀದಿಗೆ ಇಳಿಯಲು ಎಂದೂ ಹಿಂದೇಟು ಹಾಕಿದವರಲ್ಲ. ‘ಸಮೂಹ ಸನ್ನಿ’ಯ ವಿರುದ್ಧದ ನಿಲುವು ತಳೆಯುವ ಧಾಷ್ಟ್ರ್ಯ ಮತ್ತು ಎದೆಗಾರಿಕೆಗಳೆರಡೂ ಅವರಿಗಿದ್ದವು. ರಾಜ್ ಅಭಿಮಾನಿಗಳನ್ನು ಎದುರಿಸಿದ ರೀತಿಯೇ ಅದಕ್ಕೆ ಸಾಕ್ಷಿ.

ಸುಬ್ಬಯ್ಯನವರ ರಾಜಕೀಯ-ಸಾಮಾಜಿಕ ಬದುಕು ಕರ್ನಾಟಕದ ರಾಜಕೀಯ-ಸಾಮಾಜಿಕ ಬದುಕಿನೊಂದಿಗೆ ತಳುಕು ಹಾಕಿಕೊಂಡಿದೆ. ಸುಬ್ಬಯ್ಯನವರ ಗೆಲುವು ರಾಜ್ಯ ರಾಜಕಾರಣದ ದಿಕ್ಕು ಬದಲಿಸುವುದಕ್ಕೆ ಕಾರಣವಾಗಿದೆ. ಹಾಗೆಯೇ ಅವರ ‘ಸೋಲು’ ಇಂದಿನ ದುಸ್ಥಿತಿಗೆ ದಾರಿ ಮಾಡಿಕೊಟ್ಟಿದೆ. ಕರ್ನಾಟಕದ ಸಾಕ್ಷಿಪ್ರಜ್ಞೆಯಂತಿದ್ದ ಸುಬ್ಬಯ್ಯ ಅವರು ಜೀವಪರ-ಜನಪರ ಕಾಳಜಿಯಿದ್ದ ಅಪರೂಪದ ನಾಯಕ. ‘ಮಾದರಿ’ ನಾಯಕರಾಗಿದ್ದ ಸುಬ್ಬಯ್ಯ ಅವರ ನಿರ್ಗಮನದಿಂದ ತೆರವಾದ ಸ್ಥಳವನ್ನು ಯಾರೂ ತುಂಬಲು ಸಾಧ್ಯವಿಲ್ಲ. ತುಂಬದ-ತುಂಬಲಾಗದ ‘ಸ್ಥಿತಿ’ ಕರ್ನಾಟಕದ ಸಾರ್ವಜನಿಕ ಬದುಕು ತಲುಪಿರುವ ದುಸ್ಥಿತಿಯ ದ್ಯೋತಕ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...