Homeಕರ್ನಾಟಕಐದು ದಶಕಗಳ ರಾಜ್ಯ ರಾಜಕಾರಣದ ಅಪರೂಪದ ಸಾಕ್ಷಿಪ್ರಜ್ಞೆ: ಎ.ಕೆ.ಸುಬ್ಬಯ್ಯ

ಐದು ದಶಕಗಳ ರಾಜ್ಯ ರಾಜಕಾರಣದ ಅಪರೂಪದ ಸಾಕ್ಷಿಪ್ರಜ್ಞೆ: ಎ.ಕೆ.ಸುಬ್ಬಯ್ಯ

- Advertisement -
- Advertisement -

ತಮ್ಮ ಪ್ರಖರ ಮಾತಿನ ವೈಖರಿಯಿಂದ ಗಮನ ಸೆಳೆಯುತ್ತಿದ್ದ ಸುಬ್ಬಯ್ಯ ಹೋರಾಟ, ಪ್ರಾಮಾಣಿಕತೆ, ಜಾತ್ಯತೀತ ಮೌಲ್ಯಗಳ ಪ್ರತೀಕದಂತಿದ್ದರು. ಮಾತಿನ ಮನೆಯನ್ನು ಮಾತಿನ ಮೂಲಕವೇ ವಶಕ್ಕೆ ಪಡೆದ ಸುಬ್ಬಯ್ಯ ತರಹದ ನಾಯಕರು ಅಪರೂಪ. ನಾಲ್ಕು ಬಾರಿ ಮೇಲ್ಮನೆ ಸದಸ್ಯರಾಗಿದ್ದ ಸುಬ್ಬಯ್ಯ ಅವರು ಆಡಲು ನಿಂತರೆ ಆಡಳಿತ ಪಕ್ಷದವರಿಗೆ ಆತಂಕ, ಗಾಬರಿ ಉಂಟಾಗುತ್ತಿತ್ತು.

ಸದಾ ವಿರೋಧ ಪಕ್ಷದವರಾಗಿಯೇ ಇರಲು ಬಯಸಿದ ಸುಬ್ಬಯ್ಯ ಬಯಸಿದ್ದರೆ ‘ಅಧಿಕಾರ’ ಅವರಿಂದ ದೂರ ಉಳಿಯುತ್ತಿರಲಿಲ್ಲ. ಹಲವು ಬಾರಿ ಅಧಿಕಾರ ಅವರ ಸಮೀಪ ಬಂದು ಹೋದದ್ದಿದೆ. ಅವರು ಅದಕ್ಕಾಗಿ ಆಸೆ ಪಟ್ಟವರಲ್ಲ. ಆಡಳಿತಾರೂಢ ಪಕ್ಷದ ಲೋಪ ಎತ್ತಿ ತೋರಿಸುವ ಯಾವ ಅವಕಾಶವನ್ನೂ ಸುಬ್ಬಯ್ಯ ಕೈ ಬಿಡುತ್ತಿರಲಿಲ್ಲ. ಮಾತಿನ ಚಟಾಕಿಯ ಮೂಲಕ ತಿವಿಯುತ್ತಿದ್ದರು. ಪ್ರಭುತ್ವದ ಅರೆಕೊರೆಗಳನ್ನು ಅವರ ಹಾಗೆ ದಾಖಲಿಸಿದವರು ವಿರಳ.

ಕಾನೂನು ವಿದ್ಯಾರ್ಥಿಯಾಗಿದ್ದ ದಿನಗಳಲ್ಲಿಯೇ ರಾಜಕೀಯದ ರುಚಿ ಕಂಡವರು ಸುಬ್ಬಯ್ಯ. ಪ್ರಬಲ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಸ್ಪರ್ಧಿಸಿದ್ದ ಪ್ರಜಾ ಸೋಷಲಿಸ್ಟ್ ಪಾರ್ಟಿ (ಪಿಎಸ್‍ಪಿ)ಯ ಅಭ್ಯರ್ಥಿಯ ಪರವಾಗಿ ಭಾಷಣ ಮಾಡುತ್ತಿದ್ದರು. ವೇದಿಕೆಯಲ್ಲಿ ಗಮನ ಸೆಳೆಯುತ್ತಿದ್ದ ಯುವಕ ಸುಬ್ಬಯ್ಯ ಅವರು ಇಂದಿರಾಗಾಂಧಿ ಎಮರ್ಜೆನ್ಸಿ ಹೇರಿದಾಗ ಮೊದಲಿಗೆ ಜೈಲಿಗೆ ಹೋಗಿದ್ದರು. ಮತ್ತು ಕೊನೆಯವರಾಗಿ ಹೊರ ಬಂದರು. ಜೈಲಿನಲ್ಲಿ ಮಾಂಸಾಹಾರ-ಶಾಖಾಹಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯ ಬಂದಾಗ ಸುಬ್ಬಯ್ಯನವರು ‘ಆಹಾರ ಸ್ವಾತಂತ್ರ್ಯ’ದ ಪರವಾಗಿ ನಿಂತಿದ್ದರು.

ಸೆರೆಯಿಂದ ಹೊರ ಬಂದ ನಂತರ ಕೆಲಕಾಲ ಜನತಾ ಪಕ್ಷದ ಜೊತೆಗಿದ್ದ ಅವರು ನಂತರ ಭಾರತೀಯ ಜನ ಸಂಘದ ಮುಖ್ಯಸ್ಥರಾದರು. ಮುಂದೆ ಅದು ಭಾರತೀಯ ಜನತಾ ಪಕ್ಷ (ಬಿಜೆಪಿ) ಆದಾಗ ರಾಜ್ಯದಲ್ಲಿ ಅದರ ಚುಕ್ಕಾಣಿ ಹಿಡಿದಿದ್ದರು. ಬಲಪಂಥೀಯ (?) ಪಕ್ಷದ ಜೊತೆಗೆ ಗುರುತಿಸಿಕೊಳ್ಳುವಾಗ ಸುಬ್ಬಯ್ಯ ಅವರಿಗೆ ಕಾಣಿಸಿದ್ದು ಅದರ ಭ್ರಷ್ಟಾಚಾರ ವಿರೋಧಿ ನಿಲುವು. ಬಿಜೆಪಿಯ ಪ್ರಮುಖ-ಹಿರಿಯ ನಾಯಕರ ಜೊತೆ ಹತ್ತಿರದ ಒಡನಾಟ ಹೊಂದಿದ್ದ ಸುಬ್ಬಯ್ಯ ಅವರು ರಾಜ್ಯ ಅಧ್ಯಕ್ಷರಾಗುವುದಕ್ಕೆ ಅಡೆತಡೆಗಳೇ ಇರಲಿಲ್ಲ. 1983ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ಸೇತರ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸರ್ಕಾರದ ಭಾಗವಾಗದೇ ಹೊರಗಿನಿಂದ ಬೆಂಬಲ ನೀಡುವ ನಿಲುವು ತಳೆಯುವುದಕ್ಕೆ ಸುಬ್ಬಯ್ಯ ಅವರೇ ಕಾರಣರಾಗಿದ್ದರು.

ಸುಬ್ಬಯ್ಯ ಚುನಾವಣಾ ರಾಜಕೀಯದಲ್ಲಿ ಕಾಣಿಸಿಕೊಂಡದ್ದು ಬಹಳ ಕಡಿಮೆ. ಒಮ್ಮೆ ಮಾತ್ರ ಅವರು 1979ರಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಕರ್ನಾಟಕದಲ್ಲಿ ಬಿಜೆಪಿಗೆ ಆರಂಭದಲ್ಲೇ ಭದ್ರ ನೆಲೆ ಒದಗಿಸಿದವರಲ್ಲಿ ಸುಬ್ಬಯ್ಯ ಪ್ರಮುಖರು ಎಂಬುದರಲ್ಲಿ ಎರಡು ಮಾತಿಲ್ಲ. ರಾಜ್ಯದಲ್ಲಿ ಪಕ್ಷದ ಅಧ್ಯಕ್ಷರಾದ ನಂತರ ಆರ್‍ಎಸ್‍ಎಸ್ ಮೂಗು ತೂರಿಸುವುದಕ್ಕೆ ಅಡ್ಡಿಯುಂಟು ಮಾಡಿದರು. ಆರ್‍ಎಸ್‍ಎಸ್ ಜೊತೆಗಿನ ಅವರ ಸಂಘರ್ಷ ಪಕ್ಷ ತೊರೆಯುವುದಕ್ಕೂ ಕಾರಣವಾಯಿತು. ‘ಆರ್‍ಎಸ್‍ಎಸ್. ಅಂತರಂಗ’ ಕೃತಿ ಸುಬ್ಬಯ್ಯನವರ ಪ್ರಖರ ವೈಚಾರಿಕತೆಗೆ ಹಿಡಿದ ಕನ್ನಡಿಯಂತಿದೆ.

ವಿಚಾರದ ಖಚಿತತೆ ಸುಬ್ಬಯ್ಯನವರ ವೈಶಿಷ್ಟ್ಯ. ಅದರ ಜೊತೆಗೆ ನೇರಾನೇರ ಹೇಳುವ ಗುಣ ಅವರಿಗೆ ಮಿತ್ರರಿಗಿಂತ ಶತ್ರುಗಳ ಸಂಖ್ಯೆ ಹೆಚ್ಚುವುದಕ್ಕೆ ಕಾರಣವಾಗಿತ್ತು. ಮಾತು ಅವರ ಶಕ್ತಿಯಾಗಿತ್ತು. ಹಾಗೆಯೇ ಅದೇ ಅವರ ಮಿತಿಯೂ ಆಗಿತ್ತು. ಮಾತಿನ ಮೂಲಕ ಬಹಳಷ್ಟನ್ನು ಪಡೆದ ಸುಬ್ಬಯ್ಯ ಅದೇ ಮಾತಿನಿಂದ ಹಲವನ್ನು ಕಳೆದುಕೊಂಡರು. ಆ ಬಗ್ಗೆ ಅವರಿಗೆ ವಿಷಾದವೇನಿರಲಿಲ್ಲ.

ಅಧಿಕಾರಕ್ಕಾಗಿ ಹಪಾಹಪಿಸದ ಅವರ ನಿಲುವು ಅವರ ವ್ಯಕ್ತಿತ್ವದ ಗಟ್ಟಿತನಕ್ಕೆ ಕಾರಣವಾಗಿತ್ತು. ಯಾರೂ ಅವರಿಗೆ ಆಮಿಷ ಒಡ್ಡುವುದು ಸಾಧ್ಯವಿರಲಿಲ್ಲ. ಅಂತಹ ಎದೆಗಾರಿಕೆ ಆಡಳಿತ ಪಕ್ಷದ ಯಾವ ನಾಯಕನ ಬಳಿಯಲ್ಲಿಯೂ ಇರಲಿಲ್ಲ.

ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಮೇಲ್ಮನೆಯ ಅಖಾಡದಲ್ಲಿ ಸುಬ್ಬಯ್ಯನವರ ಮಾತಿನ ವೈಖರಿ ಆರಂಭವಾಯಿತು. ಅದು ಎಷ್ಟರ ಮಟ್ಟಿಗೆ ಪ್ರಭಾವಶಾಲಿ ಆಗಿತ್ತೆಂದರೆ ಅರಸು ಮೇಲ್ಮನೆಯನ್ನು ‘ಇಲ್ಲ’ವಾಗಿಸುವ ಯೋಚನೆ ಮಾಡಿದ್ದರು.

ಅರಸು ನಂತರ ಮುಖ್ಯಮಂತ್ರಿಯಾದ ಗುಂಡೂರಾವ್ ಅವರಿಗೂ ಹಾಗೂ ಅವರ ಸಂಪುಟದ ಸದಸ್ಯರಿಗೂ ಸುಬ್ಬಯ್ಯ ದುಃಸ್ವಪ್ನವಾಗಿದ್ದರು. ದೀರ್ಘ ಕಾಲದ ಕಾಂಗ್ರೆಸ್ ಆಡಳಿತದ ಅವಧಿ ಮುಗಿದು ಕಾಂಗ್ರೇಸ್ಸೇತರ ಜನತಾ ಸರ್ಕಾರ ಅಧಿಕಾರಕ್ಕೆ ಬಂದರೂ ಸುಬ್ಬಯ್ಯನವರ ಆರ್ಭಟವೇನೂ ಕಡಿಮೆಯಾಗಲಿಲ್ಲ. ಹೆಗಡೆ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವಲ್ಲಿ ಸುಬ್ಬಯ್ಯನವರ ಪಾತ್ರ ಗಮನಾರ್ಹವಾದದ್ದು.

ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ನೆಲೆ ನಿಲ್ಲಲು ಕಾರಣರಾದ ಕಾನ್ಶಿರಾಮ್ ಅವರ ಪ್ರೀತಿ-ಆಗ್ರಹಕ್ಕೆ ಮಣಿದು ಪಕ್ಷ ಸೇರಿದ ಸುಬ್ಬಯ್ಯ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದರು. ವಿಧಾನಸಭೆಯಲ್ಲಿ ಪಕ್ಷದ ಪ್ರತಿನಿಧಿ ಕಾಣಿಸಿಕೊಳ್ಳಲು ಕಾರಣರಾಗಿದ್ದರು. ಪಕ್ಷದೊಳಗಿನ ಅಸಹನೆ-ಧೋರಣೆಯಿಂದ ಹೆಚ್ಚು ಕಾಲ ಬಿಎಸ್‍ಪಿಯಲ್ಲಿಯೂ ಉಳಿಯಲಿಲ್ಲ. ಕಾಂಗ್ರೆಸ್ ಪಕ್ಷ ಸೇರಿದ ಸುಬ್ಬಯ್ಯ ಅವರು ಅಲ್ಲಿದ್ದದ್ದು ತೀರಾ ಕಡಿಮೆ ಅವಧಿಗೆ.

ಬಲಪಂಥೀಯರು ಪ್ರಭುತ್ವದ ಚುಕ್ಕಾಣಿ ಹಿಡಿಯುವುದರ ವಿರುದ್ಧ ಸುಬ್ಬಯ್ಯ ಅವರು ಬಹುತ್ವದ ನೆಲೆಯಿಂದ ದೇಶ ಕಟ್ಟಬಯಸುವ ಧೋರಣೆ ಉಳ್ಳವರಾಗಿದ್ದರು. ಪ್ರಜಾಸತ್ತಾತ್ಮಕ ಹಾಗೂ ಜಾತ್ಯತೀತ-ಧರ್ಮ ನಿರಪೇಕ್ಷ ನಿಲುವು ಅವರ ಆಸಕ್ತಿ ಹಾಗೂ ಕಾಳಜಿಗಳಾಗಿದ್ದವು. ಅದಕ್ಕಾಗಿ ಅವರು ಬೀದಿಗೆ ಇಳಿಯಲು ಎಂದೂ ಹಿಂದೇಟು ಹಾಕಿದವರಲ್ಲ. ‘ಸಮೂಹ ಸನ್ನಿ’ಯ ವಿರುದ್ಧದ ನಿಲುವು ತಳೆಯುವ ಧಾಷ್ಟ್ರ್ಯ ಮತ್ತು ಎದೆಗಾರಿಕೆಗಳೆರಡೂ ಅವರಿಗಿದ್ದವು. ರಾಜ್ ಅಭಿಮಾನಿಗಳನ್ನು ಎದುರಿಸಿದ ರೀತಿಯೇ ಅದಕ್ಕೆ ಸಾಕ್ಷಿ.

ಸುಬ್ಬಯ್ಯನವರ ರಾಜಕೀಯ-ಸಾಮಾಜಿಕ ಬದುಕು ಕರ್ನಾಟಕದ ರಾಜಕೀಯ-ಸಾಮಾಜಿಕ ಬದುಕಿನೊಂದಿಗೆ ತಳುಕು ಹಾಕಿಕೊಂಡಿದೆ. ಸುಬ್ಬಯ್ಯನವರ ಗೆಲುವು ರಾಜ್ಯ ರಾಜಕಾರಣದ ದಿಕ್ಕು ಬದಲಿಸುವುದಕ್ಕೆ ಕಾರಣವಾಗಿದೆ. ಹಾಗೆಯೇ ಅವರ ‘ಸೋಲು’ ಇಂದಿನ ದುಸ್ಥಿತಿಗೆ ದಾರಿ ಮಾಡಿಕೊಟ್ಟಿದೆ. ಕರ್ನಾಟಕದ ಸಾಕ್ಷಿಪ್ರಜ್ಞೆಯಂತಿದ್ದ ಸುಬ್ಬಯ್ಯ ಅವರು ಜೀವಪರ-ಜನಪರ ಕಾಳಜಿಯಿದ್ದ ಅಪರೂಪದ ನಾಯಕ. ‘ಮಾದರಿ’ ನಾಯಕರಾಗಿದ್ದ ಸುಬ್ಬಯ್ಯ ಅವರ ನಿರ್ಗಮನದಿಂದ ತೆರವಾದ ಸ್ಥಳವನ್ನು ಯಾರೂ ತುಂಬಲು ಸಾಧ್ಯವಿಲ್ಲ. ತುಂಬದ-ತುಂಬಲಾಗದ ‘ಸ್ಥಿತಿ’ ಕರ್ನಾಟಕದ ಸಾರ್ವಜನಿಕ ಬದುಕು ತಲುಪಿರುವ ದುಸ್ಥಿತಿಯ ದ್ಯೋತಕ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...