Homeಕರ್ನಾಟಕಐದು ದಶಕಗಳ ರಾಜ್ಯ ರಾಜಕಾರಣದ ಅಪರೂಪದ ಸಾಕ್ಷಿಪ್ರಜ್ಞೆ: ಎ.ಕೆ.ಸುಬ್ಬಯ್ಯ

ಐದು ದಶಕಗಳ ರಾಜ್ಯ ರಾಜಕಾರಣದ ಅಪರೂಪದ ಸಾಕ್ಷಿಪ್ರಜ್ಞೆ: ಎ.ಕೆ.ಸುಬ್ಬಯ್ಯ

- Advertisement -
- Advertisement -

ತಮ್ಮ ಪ್ರಖರ ಮಾತಿನ ವೈಖರಿಯಿಂದ ಗಮನ ಸೆಳೆಯುತ್ತಿದ್ದ ಸುಬ್ಬಯ್ಯ ಹೋರಾಟ, ಪ್ರಾಮಾಣಿಕತೆ, ಜಾತ್ಯತೀತ ಮೌಲ್ಯಗಳ ಪ್ರತೀಕದಂತಿದ್ದರು. ಮಾತಿನ ಮನೆಯನ್ನು ಮಾತಿನ ಮೂಲಕವೇ ವಶಕ್ಕೆ ಪಡೆದ ಸುಬ್ಬಯ್ಯ ತರಹದ ನಾಯಕರು ಅಪರೂಪ. ನಾಲ್ಕು ಬಾರಿ ಮೇಲ್ಮನೆ ಸದಸ್ಯರಾಗಿದ್ದ ಸುಬ್ಬಯ್ಯ ಅವರು ಆಡಲು ನಿಂತರೆ ಆಡಳಿತ ಪಕ್ಷದವರಿಗೆ ಆತಂಕ, ಗಾಬರಿ ಉಂಟಾಗುತ್ತಿತ್ತು.

ಸದಾ ವಿರೋಧ ಪಕ್ಷದವರಾಗಿಯೇ ಇರಲು ಬಯಸಿದ ಸುಬ್ಬಯ್ಯ ಬಯಸಿದ್ದರೆ ‘ಅಧಿಕಾರ’ ಅವರಿಂದ ದೂರ ಉಳಿಯುತ್ತಿರಲಿಲ್ಲ. ಹಲವು ಬಾರಿ ಅಧಿಕಾರ ಅವರ ಸಮೀಪ ಬಂದು ಹೋದದ್ದಿದೆ. ಅವರು ಅದಕ್ಕಾಗಿ ಆಸೆ ಪಟ್ಟವರಲ್ಲ. ಆಡಳಿತಾರೂಢ ಪಕ್ಷದ ಲೋಪ ಎತ್ತಿ ತೋರಿಸುವ ಯಾವ ಅವಕಾಶವನ್ನೂ ಸುಬ್ಬಯ್ಯ ಕೈ ಬಿಡುತ್ತಿರಲಿಲ್ಲ. ಮಾತಿನ ಚಟಾಕಿಯ ಮೂಲಕ ತಿವಿಯುತ್ತಿದ್ದರು. ಪ್ರಭುತ್ವದ ಅರೆಕೊರೆಗಳನ್ನು ಅವರ ಹಾಗೆ ದಾಖಲಿಸಿದವರು ವಿರಳ.

ಕಾನೂನು ವಿದ್ಯಾರ್ಥಿಯಾಗಿದ್ದ ದಿನಗಳಲ್ಲಿಯೇ ರಾಜಕೀಯದ ರುಚಿ ಕಂಡವರು ಸುಬ್ಬಯ್ಯ. ಪ್ರಬಲ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಸ್ಪರ್ಧಿಸಿದ್ದ ಪ್ರಜಾ ಸೋಷಲಿಸ್ಟ್ ಪಾರ್ಟಿ (ಪಿಎಸ್‍ಪಿ)ಯ ಅಭ್ಯರ್ಥಿಯ ಪರವಾಗಿ ಭಾಷಣ ಮಾಡುತ್ತಿದ್ದರು. ವೇದಿಕೆಯಲ್ಲಿ ಗಮನ ಸೆಳೆಯುತ್ತಿದ್ದ ಯುವಕ ಸುಬ್ಬಯ್ಯ ಅವರು ಇಂದಿರಾಗಾಂಧಿ ಎಮರ್ಜೆನ್ಸಿ ಹೇರಿದಾಗ ಮೊದಲಿಗೆ ಜೈಲಿಗೆ ಹೋಗಿದ್ದರು. ಮತ್ತು ಕೊನೆಯವರಾಗಿ ಹೊರ ಬಂದರು. ಜೈಲಿನಲ್ಲಿ ಮಾಂಸಾಹಾರ-ಶಾಖಾಹಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯ ಬಂದಾಗ ಸುಬ್ಬಯ್ಯನವರು ‘ಆಹಾರ ಸ್ವಾತಂತ್ರ್ಯ’ದ ಪರವಾಗಿ ನಿಂತಿದ್ದರು.

ಸೆರೆಯಿಂದ ಹೊರ ಬಂದ ನಂತರ ಕೆಲಕಾಲ ಜನತಾ ಪಕ್ಷದ ಜೊತೆಗಿದ್ದ ಅವರು ನಂತರ ಭಾರತೀಯ ಜನ ಸಂಘದ ಮುಖ್ಯಸ್ಥರಾದರು. ಮುಂದೆ ಅದು ಭಾರತೀಯ ಜನತಾ ಪಕ್ಷ (ಬಿಜೆಪಿ) ಆದಾಗ ರಾಜ್ಯದಲ್ಲಿ ಅದರ ಚುಕ್ಕಾಣಿ ಹಿಡಿದಿದ್ದರು. ಬಲಪಂಥೀಯ (?) ಪಕ್ಷದ ಜೊತೆಗೆ ಗುರುತಿಸಿಕೊಳ್ಳುವಾಗ ಸುಬ್ಬಯ್ಯ ಅವರಿಗೆ ಕಾಣಿಸಿದ್ದು ಅದರ ಭ್ರಷ್ಟಾಚಾರ ವಿರೋಧಿ ನಿಲುವು. ಬಿಜೆಪಿಯ ಪ್ರಮುಖ-ಹಿರಿಯ ನಾಯಕರ ಜೊತೆ ಹತ್ತಿರದ ಒಡನಾಟ ಹೊಂದಿದ್ದ ಸುಬ್ಬಯ್ಯ ಅವರು ರಾಜ್ಯ ಅಧ್ಯಕ್ಷರಾಗುವುದಕ್ಕೆ ಅಡೆತಡೆಗಳೇ ಇರಲಿಲ್ಲ. 1983ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ಸೇತರ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸರ್ಕಾರದ ಭಾಗವಾಗದೇ ಹೊರಗಿನಿಂದ ಬೆಂಬಲ ನೀಡುವ ನಿಲುವು ತಳೆಯುವುದಕ್ಕೆ ಸುಬ್ಬಯ್ಯ ಅವರೇ ಕಾರಣರಾಗಿದ್ದರು.

ಸುಬ್ಬಯ್ಯ ಚುನಾವಣಾ ರಾಜಕೀಯದಲ್ಲಿ ಕಾಣಿಸಿಕೊಂಡದ್ದು ಬಹಳ ಕಡಿಮೆ. ಒಮ್ಮೆ ಮಾತ್ರ ಅವರು 1979ರಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಕರ್ನಾಟಕದಲ್ಲಿ ಬಿಜೆಪಿಗೆ ಆರಂಭದಲ್ಲೇ ಭದ್ರ ನೆಲೆ ಒದಗಿಸಿದವರಲ್ಲಿ ಸುಬ್ಬಯ್ಯ ಪ್ರಮುಖರು ಎಂಬುದರಲ್ಲಿ ಎರಡು ಮಾತಿಲ್ಲ. ರಾಜ್ಯದಲ್ಲಿ ಪಕ್ಷದ ಅಧ್ಯಕ್ಷರಾದ ನಂತರ ಆರ್‍ಎಸ್‍ಎಸ್ ಮೂಗು ತೂರಿಸುವುದಕ್ಕೆ ಅಡ್ಡಿಯುಂಟು ಮಾಡಿದರು. ಆರ್‍ಎಸ್‍ಎಸ್ ಜೊತೆಗಿನ ಅವರ ಸಂಘರ್ಷ ಪಕ್ಷ ತೊರೆಯುವುದಕ್ಕೂ ಕಾರಣವಾಯಿತು. ‘ಆರ್‍ಎಸ್‍ಎಸ್. ಅಂತರಂಗ’ ಕೃತಿ ಸುಬ್ಬಯ್ಯನವರ ಪ್ರಖರ ವೈಚಾರಿಕತೆಗೆ ಹಿಡಿದ ಕನ್ನಡಿಯಂತಿದೆ.

ವಿಚಾರದ ಖಚಿತತೆ ಸುಬ್ಬಯ್ಯನವರ ವೈಶಿಷ್ಟ್ಯ. ಅದರ ಜೊತೆಗೆ ನೇರಾನೇರ ಹೇಳುವ ಗುಣ ಅವರಿಗೆ ಮಿತ್ರರಿಗಿಂತ ಶತ್ರುಗಳ ಸಂಖ್ಯೆ ಹೆಚ್ಚುವುದಕ್ಕೆ ಕಾರಣವಾಗಿತ್ತು. ಮಾತು ಅವರ ಶಕ್ತಿಯಾಗಿತ್ತು. ಹಾಗೆಯೇ ಅದೇ ಅವರ ಮಿತಿಯೂ ಆಗಿತ್ತು. ಮಾತಿನ ಮೂಲಕ ಬಹಳಷ್ಟನ್ನು ಪಡೆದ ಸುಬ್ಬಯ್ಯ ಅದೇ ಮಾತಿನಿಂದ ಹಲವನ್ನು ಕಳೆದುಕೊಂಡರು. ಆ ಬಗ್ಗೆ ಅವರಿಗೆ ವಿಷಾದವೇನಿರಲಿಲ್ಲ.

ಅಧಿಕಾರಕ್ಕಾಗಿ ಹಪಾಹಪಿಸದ ಅವರ ನಿಲುವು ಅವರ ವ್ಯಕ್ತಿತ್ವದ ಗಟ್ಟಿತನಕ್ಕೆ ಕಾರಣವಾಗಿತ್ತು. ಯಾರೂ ಅವರಿಗೆ ಆಮಿಷ ಒಡ್ಡುವುದು ಸಾಧ್ಯವಿರಲಿಲ್ಲ. ಅಂತಹ ಎದೆಗಾರಿಕೆ ಆಡಳಿತ ಪಕ್ಷದ ಯಾವ ನಾಯಕನ ಬಳಿಯಲ್ಲಿಯೂ ಇರಲಿಲ್ಲ.

ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಮೇಲ್ಮನೆಯ ಅಖಾಡದಲ್ಲಿ ಸುಬ್ಬಯ್ಯನವರ ಮಾತಿನ ವೈಖರಿ ಆರಂಭವಾಯಿತು. ಅದು ಎಷ್ಟರ ಮಟ್ಟಿಗೆ ಪ್ರಭಾವಶಾಲಿ ಆಗಿತ್ತೆಂದರೆ ಅರಸು ಮೇಲ್ಮನೆಯನ್ನು ‘ಇಲ್ಲ’ವಾಗಿಸುವ ಯೋಚನೆ ಮಾಡಿದ್ದರು.

ಅರಸು ನಂತರ ಮುಖ್ಯಮಂತ್ರಿಯಾದ ಗುಂಡೂರಾವ್ ಅವರಿಗೂ ಹಾಗೂ ಅವರ ಸಂಪುಟದ ಸದಸ್ಯರಿಗೂ ಸುಬ್ಬಯ್ಯ ದುಃಸ್ವಪ್ನವಾಗಿದ್ದರು. ದೀರ್ಘ ಕಾಲದ ಕಾಂಗ್ರೆಸ್ ಆಡಳಿತದ ಅವಧಿ ಮುಗಿದು ಕಾಂಗ್ರೇಸ್ಸೇತರ ಜನತಾ ಸರ್ಕಾರ ಅಧಿಕಾರಕ್ಕೆ ಬಂದರೂ ಸುಬ್ಬಯ್ಯನವರ ಆರ್ಭಟವೇನೂ ಕಡಿಮೆಯಾಗಲಿಲ್ಲ. ಹೆಗಡೆ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವಲ್ಲಿ ಸುಬ್ಬಯ್ಯನವರ ಪಾತ್ರ ಗಮನಾರ್ಹವಾದದ್ದು.

ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ನೆಲೆ ನಿಲ್ಲಲು ಕಾರಣರಾದ ಕಾನ್ಶಿರಾಮ್ ಅವರ ಪ್ರೀತಿ-ಆಗ್ರಹಕ್ಕೆ ಮಣಿದು ಪಕ್ಷ ಸೇರಿದ ಸುಬ್ಬಯ್ಯ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದರು. ವಿಧಾನಸಭೆಯಲ್ಲಿ ಪಕ್ಷದ ಪ್ರತಿನಿಧಿ ಕಾಣಿಸಿಕೊಳ್ಳಲು ಕಾರಣರಾಗಿದ್ದರು. ಪಕ್ಷದೊಳಗಿನ ಅಸಹನೆ-ಧೋರಣೆಯಿಂದ ಹೆಚ್ಚು ಕಾಲ ಬಿಎಸ್‍ಪಿಯಲ್ಲಿಯೂ ಉಳಿಯಲಿಲ್ಲ. ಕಾಂಗ್ರೆಸ್ ಪಕ್ಷ ಸೇರಿದ ಸುಬ್ಬಯ್ಯ ಅವರು ಅಲ್ಲಿದ್ದದ್ದು ತೀರಾ ಕಡಿಮೆ ಅವಧಿಗೆ.

ಬಲಪಂಥೀಯರು ಪ್ರಭುತ್ವದ ಚುಕ್ಕಾಣಿ ಹಿಡಿಯುವುದರ ವಿರುದ್ಧ ಸುಬ್ಬಯ್ಯ ಅವರು ಬಹುತ್ವದ ನೆಲೆಯಿಂದ ದೇಶ ಕಟ್ಟಬಯಸುವ ಧೋರಣೆ ಉಳ್ಳವರಾಗಿದ್ದರು. ಪ್ರಜಾಸತ್ತಾತ್ಮಕ ಹಾಗೂ ಜಾತ್ಯತೀತ-ಧರ್ಮ ನಿರಪೇಕ್ಷ ನಿಲುವು ಅವರ ಆಸಕ್ತಿ ಹಾಗೂ ಕಾಳಜಿಗಳಾಗಿದ್ದವು. ಅದಕ್ಕಾಗಿ ಅವರು ಬೀದಿಗೆ ಇಳಿಯಲು ಎಂದೂ ಹಿಂದೇಟು ಹಾಕಿದವರಲ್ಲ. ‘ಸಮೂಹ ಸನ್ನಿ’ಯ ವಿರುದ್ಧದ ನಿಲುವು ತಳೆಯುವ ಧಾಷ್ಟ್ರ್ಯ ಮತ್ತು ಎದೆಗಾರಿಕೆಗಳೆರಡೂ ಅವರಿಗಿದ್ದವು. ರಾಜ್ ಅಭಿಮಾನಿಗಳನ್ನು ಎದುರಿಸಿದ ರೀತಿಯೇ ಅದಕ್ಕೆ ಸಾಕ್ಷಿ.

ಸುಬ್ಬಯ್ಯನವರ ರಾಜಕೀಯ-ಸಾಮಾಜಿಕ ಬದುಕು ಕರ್ನಾಟಕದ ರಾಜಕೀಯ-ಸಾಮಾಜಿಕ ಬದುಕಿನೊಂದಿಗೆ ತಳುಕು ಹಾಕಿಕೊಂಡಿದೆ. ಸುಬ್ಬಯ್ಯನವರ ಗೆಲುವು ರಾಜ್ಯ ರಾಜಕಾರಣದ ದಿಕ್ಕು ಬದಲಿಸುವುದಕ್ಕೆ ಕಾರಣವಾಗಿದೆ. ಹಾಗೆಯೇ ಅವರ ‘ಸೋಲು’ ಇಂದಿನ ದುಸ್ಥಿತಿಗೆ ದಾರಿ ಮಾಡಿಕೊಟ್ಟಿದೆ. ಕರ್ನಾಟಕದ ಸಾಕ್ಷಿಪ್ರಜ್ಞೆಯಂತಿದ್ದ ಸುಬ್ಬಯ್ಯ ಅವರು ಜೀವಪರ-ಜನಪರ ಕಾಳಜಿಯಿದ್ದ ಅಪರೂಪದ ನಾಯಕ. ‘ಮಾದರಿ’ ನಾಯಕರಾಗಿದ್ದ ಸುಬ್ಬಯ್ಯ ಅವರ ನಿರ್ಗಮನದಿಂದ ತೆರವಾದ ಸ್ಥಳವನ್ನು ಯಾರೂ ತುಂಬಲು ಸಾಧ್ಯವಿಲ್ಲ. ತುಂಬದ-ತುಂಬಲಾಗದ ‘ಸ್ಥಿತಿ’ ಕರ್ನಾಟಕದ ಸಾರ್ವಜನಿಕ ಬದುಕು ತಲುಪಿರುವ ದುಸ್ಥಿತಿಯ ದ್ಯೋತಕ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...