Homeಕರ್ನಾಟಕಐದು ದಶಕಗಳ ರಾಜ್ಯ ರಾಜಕಾರಣದ ಅಪರೂಪದ ಸಾಕ್ಷಿಪ್ರಜ್ಞೆ: ಎ.ಕೆ.ಸುಬ್ಬಯ್ಯ

ಐದು ದಶಕಗಳ ರಾಜ್ಯ ರಾಜಕಾರಣದ ಅಪರೂಪದ ಸಾಕ್ಷಿಪ್ರಜ್ಞೆ: ಎ.ಕೆ.ಸುಬ್ಬಯ್ಯ

- Advertisement -
- Advertisement -

ತಮ್ಮ ಪ್ರಖರ ಮಾತಿನ ವೈಖರಿಯಿಂದ ಗಮನ ಸೆಳೆಯುತ್ತಿದ್ದ ಸುಬ್ಬಯ್ಯ ಹೋರಾಟ, ಪ್ರಾಮಾಣಿಕತೆ, ಜಾತ್ಯತೀತ ಮೌಲ್ಯಗಳ ಪ್ರತೀಕದಂತಿದ್ದರು. ಮಾತಿನ ಮನೆಯನ್ನು ಮಾತಿನ ಮೂಲಕವೇ ವಶಕ್ಕೆ ಪಡೆದ ಸುಬ್ಬಯ್ಯ ತರಹದ ನಾಯಕರು ಅಪರೂಪ. ನಾಲ್ಕು ಬಾರಿ ಮೇಲ್ಮನೆ ಸದಸ್ಯರಾಗಿದ್ದ ಸುಬ್ಬಯ್ಯ ಅವರು ಆಡಲು ನಿಂತರೆ ಆಡಳಿತ ಪಕ್ಷದವರಿಗೆ ಆತಂಕ, ಗಾಬರಿ ಉಂಟಾಗುತ್ತಿತ್ತು.

ಸದಾ ವಿರೋಧ ಪಕ್ಷದವರಾಗಿಯೇ ಇರಲು ಬಯಸಿದ ಸುಬ್ಬಯ್ಯ ಬಯಸಿದ್ದರೆ ‘ಅಧಿಕಾರ’ ಅವರಿಂದ ದೂರ ಉಳಿಯುತ್ತಿರಲಿಲ್ಲ. ಹಲವು ಬಾರಿ ಅಧಿಕಾರ ಅವರ ಸಮೀಪ ಬಂದು ಹೋದದ್ದಿದೆ. ಅವರು ಅದಕ್ಕಾಗಿ ಆಸೆ ಪಟ್ಟವರಲ್ಲ. ಆಡಳಿತಾರೂಢ ಪಕ್ಷದ ಲೋಪ ಎತ್ತಿ ತೋರಿಸುವ ಯಾವ ಅವಕಾಶವನ್ನೂ ಸುಬ್ಬಯ್ಯ ಕೈ ಬಿಡುತ್ತಿರಲಿಲ್ಲ. ಮಾತಿನ ಚಟಾಕಿಯ ಮೂಲಕ ತಿವಿಯುತ್ತಿದ್ದರು. ಪ್ರಭುತ್ವದ ಅರೆಕೊರೆಗಳನ್ನು ಅವರ ಹಾಗೆ ದಾಖಲಿಸಿದವರು ವಿರಳ.

ಕಾನೂನು ವಿದ್ಯಾರ್ಥಿಯಾಗಿದ್ದ ದಿನಗಳಲ್ಲಿಯೇ ರಾಜಕೀಯದ ರುಚಿ ಕಂಡವರು ಸುಬ್ಬಯ್ಯ. ಪ್ರಬಲ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಸ್ಪರ್ಧಿಸಿದ್ದ ಪ್ರಜಾ ಸೋಷಲಿಸ್ಟ್ ಪಾರ್ಟಿ (ಪಿಎಸ್‍ಪಿ)ಯ ಅಭ್ಯರ್ಥಿಯ ಪರವಾಗಿ ಭಾಷಣ ಮಾಡುತ್ತಿದ್ದರು. ವೇದಿಕೆಯಲ್ಲಿ ಗಮನ ಸೆಳೆಯುತ್ತಿದ್ದ ಯುವಕ ಸುಬ್ಬಯ್ಯ ಅವರು ಇಂದಿರಾಗಾಂಧಿ ಎಮರ್ಜೆನ್ಸಿ ಹೇರಿದಾಗ ಮೊದಲಿಗೆ ಜೈಲಿಗೆ ಹೋಗಿದ್ದರು. ಮತ್ತು ಕೊನೆಯವರಾಗಿ ಹೊರ ಬಂದರು. ಜೈಲಿನಲ್ಲಿ ಮಾಂಸಾಹಾರ-ಶಾಖಾಹಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯ ಬಂದಾಗ ಸುಬ್ಬಯ್ಯನವರು ‘ಆಹಾರ ಸ್ವಾತಂತ್ರ್ಯ’ದ ಪರವಾಗಿ ನಿಂತಿದ್ದರು.

ಸೆರೆಯಿಂದ ಹೊರ ಬಂದ ನಂತರ ಕೆಲಕಾಲ ಜನತಾ ಪಕ್ಷದ ಜೊತೆಗಿದ್ದ ಅವರು ನಂತರ ಭಾರತೀಯ ಜನ ಸಂಘದ ಮುಖ್ಯಸ್ಥರಾದರು. ಮುಂದೆ ಅದು ಭಾರತೀಯ ಜನತಾ ಪಕ್ಷ (ಬಿಜೆಪಿ) ಆದಾಗ ರಾಜ್ಯದಲ್ಲಿ ಅದರ ಚುಕ್ಕಾಣಿ ಹಿಡಿದಿದ್ದರು. ಬಲಪಂಥೀಯ (?) ಪಕ್ಷದ ಜೊತೆಗೆ ಗುರುತಿಸಿಕೊಳ್ಳುವಾಗ ಸುಬ್ಬಯ್ಯ ಅವರಿಗೆ ಕಾಣಿಸಿದ್ದು ಅದರ ಭ್ರಷ್ಟಾಚಾರ ವಿರೋಧಿ ನಿಲುವು. ಬಿಜೆಪಿಯ ಪ್ರಮುಖ-ಹಿರಿಯ ನಾಯಕರ ಜೊತೆ ಹತ್ತಿರದ ಒಡನಾಟ ಹೊಂದಿದ್ದ ಸುಬ್ಬಯ್ಯ ಅವರು ರಾಜ್ಯ ಅಧ್ಯಕ್ಷರಾಗುವುದಕ್ಕೆ ಅಡೆತಡೆಗಳೇ ಇರಲಿಲ್ಲ. 1983ರಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ಸೇತರ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸರ್ಕಾರದ ಭಾಗವಾಗದೇ ಹೊರಗಿನಿಂದ ಬೆಂಬಲ ನೀಡುವ ನಿಲುವು ತಳೆಯುವುದಕ್ಕೆ ಸುಬ್ಬಯ್ಯ ಅವರೇ ಕಾರಣರಾಗಿದ್ದರು.

ಸುಬ್ಬಯ್ಯ ಚುನಾವಣಾ ರಾಜಕೀಯದಲ್ಲಿ ಕಾಣಿಸಿಕೊಂಡದ್ದು ಬಹಳ ಕಡಿಮೆ. ಒಮ್ಮೆ ಮಾತ್ರ ಅವರು 1979ರಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಿದ್ದರು. ಕರ್ನಾಟಕದಲ್ಲಿ ಬಿಜೆಪಿಗೆ ಆರಂಭದಲ್ಲೇ ಭದ್ರ ನೆಲೆ ಒದಗಿಸಿದವರಲ್ಲಿ ಸುಬ್ಬಯ್ಯ ಪ್ರಮುಖರು ಎಂಬುದರಲ್ಲಿ ಎರಡು ಮಾತಿಲ್ಲ. ರಾಜ್ಯದಲ್ಲಿ ಪಕ್ಷದ ಅಧ್ಯಕ್ಷರಾದ ನಂತರ ಆರ್‍ಎಸ್‍ಎಸ್ ಮೂಗು ತೂರಿಸುವುದಕ್ಕೆ ಅಡ್ಡಿಯುಂಟು ಮಾಡಿದರು. ಆರ್‍ಎಸ್‍ಎಸ್ ಜೊತೆಗಿನ ಅವರ ಸಂಘರ್ಷ ಪಕ್ಷ ತೊರೆಯುವುದಕ್ಕೂ ಕಾರಣವಾಯಿತು. ‘ಆರ್‍ಎಸ್‍ಎಸ್. ಅಂತರಂಗ’ ಕೃತಿ ಸುಬ್ಬಯ್ಯನವರ ಪ್ರಖರ ವೈಚಾರಿಕತೆಗೆ ಹಿಡಿದ ಕನ್ನಡಿಯಂತಿದೆ.

ವಿಚಾರದ ಖಚಿತತೆ ಸುಬ್ಬಯ್ಯನವರ ವೈಶಿಷ್ಟ್ಯ. ಅದರ ಜೊತೆಗೆ ನೇರಾನೇರ ಹೇಳುವ ಗುಣ ಅವರಿಗೆ ಮಿತ್ರರಿಗಿಂತ ಶತ್ರುಗಳ ಸಂಖ್ಯೆ ಹೆಚ್ಚುವುದಕ್ಕೆ ಕಾರಣವಾಗಿತ್ತು. ಮಾತು ಅವರ ಶಕ್ತಿಯಾಗಿತ್ತು. ಹಾಗೆಯೇ ಅದೇ ಅವರ ಮಿತಿಯೂ ಆಗಿತ್ತು. ಮಾತಿನ ಮೂಲಕ ಬಹಳಷ್ಟನ್ನು ಪಡೆದ ಸುಬ್ಬಯ್ಯ ಅದೇ ಮಾತಿನಿಂದ ಹಲವನ್ನು ಕಳೆದುಕೊಂಡರು. ಆ ಬಗ್ಗೆ ಅವರಿಗೆ ವಿಷಾದವೇನಿರಲಿಲ್ಲ.

ಅಧಿಕಾರಕ್ಕಾಗಿ ಹಪಾಹಪಿಸದ ಅವರ ನಿಲುವು ಅವರ ವ್ಯಕ್ತಿತ್ವದ ಗಟ್ಟಿತನಕ್ಕೆ ಕಾರಣವಾಗಿತ್ತು. ಯಾರೂ ಅವರಿಗೆ ಆಮಿಷ ಒಡ್ಡುವುದು ಸಾಧ್ಯವಿರಲಿಲ್ಲ. ಅಂತಹ ಎದೆಗಾರಿಕೆ ಆಡಳಿತ ಪಕ್ಷದ ಯಾವ ನಾಯಕನ ಬಳಿಯಲ್ಲಿಯೂ ಇರಲಿಲ್ಲ.

ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಮೇಲ್ಮನೆಯ ಅಖಾಡದಲ್ಲಿ ಸುಬ್ಬಯ್ಯನವರ ಮಾತಿನ ವೈಖರಿ ಆರಂಭವಾಯಿತು. ಅದು ಎಷ್ಟರ ಮಟ್ಟಿಗೆ ಪ್ರಭಾವಶಾಲಿ ಆಗಿತ್ತೆಂದರೆ ಅರಸು ಮೇಲ್ಮನೆಯನ್ನು ‘ಇಲ್ಲ’ವಾಗಿಸುವ ಯೋಚನೆ ಮಾಡಿದ್ದರು.

ಅರಸು ನಂತರ ಮುಖ್ಯಮಂತ್ರಿಯಾದ ಗುಂಡೂರಾವ್ ಅವರಿಗೂ ಹಾಗೂ ಅವರ ಸಂಪುಟದ ಸದಸ್ಯರಿಗೂ ಸುಬ್ಬಯ್ಯ ದುಃಸ್ವಪ್ನವಾಗಿದ್ದರು. ದೀರ್ಘ ಕಾಲದ ಕಾಂಗ್ರೆಸ್ ಆಡಳಿತದ ಅವಧಿ ಮುಗಿದು ಕಾಂಗ್ರೇಸ್ಸೇತರ ಜನತಾ ಸರ್ಕಾರ ಅಧಿಕಾರಕ್ಕೆ ಬಂದರೂ ಸುಬ್ಬಯ್ಯನವರ ಆರ್ಭಟವೇನೂ ಕಡಿಮೆಯಾಗಲಿಲ್ಲ. ಹೆಗಡೆ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವಲ್ಲಿ ಸುಬ್ಬಯ್ಯನವರ ಪಾತ್ರ ಗಮನಾರ್ಹವಾದದ್ದು.

ಉತ್ತರ ಪ್ರದೇಶದಲ್ಲಿ ಬಹುಜನ ಸಮಾಜ ಪಕ್ಷ (ಬಿಎಸ್‍ಪಿ) ನೆಲೆ ನಿಲ್ಲಲು ಕಾರಣರಾದ ಕಾನ್ಶಿರಾಮ್ ಅವರ ಪ್ರೀತಿ-ಆಗ್ರಹಕ್ಕೆ ಮಣಿದು ಪಕ್ಷ ಸೇರಿದ ಸುಬ್ಬಯ್ಯ ರಾಜ್ಯ ಘಟಕದ ಅಧ್ಯಕ್ಷರೂ ಆಗಿದ್ದರು. ವಿಧಾನಸಭೆಯಲ್ಲಿ ಪಕ್ಷದ ಪ್ರತಿನಿಧಿ ಕಾಣಿಸಿಕೊಳ್ಳಲು ಕಾರಣರಾಗಿದ್ದರು. ಪಕ್ಷದೊಳಗಿನ ಅಸಹನೆ-ಧೋರಣೆಯಿಂದ ಹೆಚ್ಚು ಕಾಲ ಬಿಎಸ್‍ಪಿಯಲ್ಲಿಯೂ ಉಳಿಯಲಿಲ್ಲ. ಕಾಂಗ್ರೆಸ್ ಪಕ್ಷ ಸೇರಿದ ಸುಬ್ಬಯ್ಯ ಅವರು ಅಲ್ಲಿದ್ದದ್ದು ತೀರಾ ಕಡಿಮೆ ಅವಧಿಗೆ.

ಬಲಪಂಥೀಯರು ಪ್ರಭುತ್ವದ ಚುಕ್ಕಾಣಿ ಹಿಡಿಯುವುದರ ವಿರುದ್ಧ ಸುಬ್ಬಯ್ಯ ಅವರು ಬಹುತ್ವದ ನೆಲೆಯಿಂದ ದೇಶ ಕಟ್ಟಬಯಸುವ ಧೋರಣೆ ಉಳ್ಳವರಾಗಿದ್ದರು. ಪ್ರಜಾಸತ್ತಾತ್ಮಕ ಹಾಗೂ ಜಾತ್ಯತೀತ-ಧರ್ಮ ನಿರಪೇಕ್ಷ ನಿಲುವು ಅವರ ಆಸಕ್ತಿ ಹಾಗೂ ಕಾಳಜಿಗಳಾಗಿದ್ದವು. ಅದಕ್ಕಾಗಿ ಅವರು ಬೀದಿಗೆ ಇಳಿಯಲು ಎಂದೂ ಹಿಂದೇಟು ಹಾಕಿದವರಲ್ಲ. ‘ಸಮೂಹ ಸನ್ನಿ’ಯ ವಿರುದ್ಧದ ನಿಲುವು ತಳೆಯುವ ಧಾಷ್ಟ್ರ್ಯ ಮತ್ತು ಎದೆಗಾರಿಕೆಗಳೆರಡೂ ಅವರಿಗಿದ್ದವು. ರಾಜ್ ಅಭಿಮಾನಿಗಳನ್ನು ಎದುರಿಸಿದ ರೀತಿಯೇ ಅದಕ್ಕೆ ಸಾಕ್ಷಿ.

ಸುಬ್ಬಯ್ಯನವರ ರಾಜಕೀಯ-ಸಾಮಾಜಿಕ ಬದುಕು ಕರ್ನಾಟಕದ ರಾಜಕೀಯ-ಸಾಮಾಜಿಕ ಬದುಕಿನೊಂದಿಗೆ ತಳುಕು ಹಾಕಿಕೊಂಡಿದೆ. ಸುಬ್ಬಯ್ಯನವರ ಗೆಲುವು ರಾಜ್ಯ ರಾಜಕಾರಣದ ದಿಕ್ಕು ಬದಲಿಸುವುದಕ್ಕೆ ಕಾರಣವಾಗಿದೆ. ಹಾಗೆಯೇ ಅವರ ‘ಸೋಲು’ ಇಂದಿನ ದುಸ್ಥಿತಿಗೆ ದಾರಿ ಮಾಡಿಕೊಟ್ಟಿದೆ. ಕರ್ನಾಟಕದ ಸಾಕ್ಷಿಪ್ರಜ್ಞೆಯಂತಿದ್ದ ಸುಬ್ಬಯ್ಯ ಅವರು ಜೀವಪರ-ಜನಪರ ಕಾಳಜಿಯಿದ್ದ ಅಪರೂಪದ ನಾಯಕ. ‘ಮಾದರಿ’ ನಾಯಕರಾಗಿದ್ದ ಸುಬ್ಬಯ್ಯ ಅವರ ನಿರ್ಗಮನದಿಂದ ತೆರವಾದ ಸ್ಥಳವನ್ನು ಯಾರೂ ತುಂಬಲು ಸಾಧ್ಯವಿಲ್ಲ. ತುಂಬದ-ತುಂಬಲಾಗದ ‘ಸ್ಥಿತಿ’ ಕರ್ನಾಟಕದ ಸಾರ್ವಜನಿಕ ಬದುಕು ತಲುಪಿರುವ ದುಸ್ಥಿತಿಯ ದ್ಯೋತಕ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...