Homeಕರ್ನಾಟಕಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೋಟಿಗೊಬ್ಬ ಶಿಕ್ಷಕ ಅಣ್ಣಿಗೇರಿ ಮಾಸ್ತರರ ಸಾವು: ನಿವೃತ್ತರಾಗದೇ ಅಕ್ಷರ ಕಲಿಸಿದ...

ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೋಟಿಗೊಬ್ಬ ಶಿಕ್ಷಕ ಅಣ್ಣಿಗೇರಿ ಮಾಸ್ತರರ ಸಾವು: ನಿವೃತ್ತರಾಗದೇ ಅಕ್ಷರ ಕಲಿಸಿದ ಗುರು!

- Advertisement -
- Advertisement -

ಸೆಪ್ಟೆಂಬರ್ 6ರಂದು ಗದಗ ನಗರದ ಎಲ್ಲ ಶಾಲಾ-ಕಾಲೇಜುಗಳಿಗೂ ರಜೆ ನೀಡಲಾಗಿತ್ತು. ಅದು ನಿವೃತ್ತ ಶಾಲಾ ಶಿಕ್ಷಕರೊಬ್ಬರ ಸಾವಿಗೆ ಗೌರವ ಸಲ್ಲಿಸಲು ಜಿಲ್ಲಾಡಳಿತ ತೆಗೆದುಕೊಂಡ ಸಜ್ಜನಿಕೆಯ ಕ್ರಮವಾಗಿತ್ತು.

‘ಅಣ್ಣಿಗೇರಿ ಮಾಸ್ತರು’ ಎಂದೇ ಗದಗಿನಲ್ಲಿ ಜನಪ್ರಿಯರಾಗಿದ್ದ ಮತ್ತು ಗೌರವಯುತರಾಗಿದ್ದ ಬಸಪ್ಪ ಗುರಪ್ಪ ಅಣ್ಣಿಗೇರಿಯವರು ಸೆಪ್ಟೆಂಬರ್ 5ರಂದು ಶಿಕ್ಷಕ ದಿನಾಚರಣೆಯಂದೇ ನಿಧನರಾಗಿದ್ದು ಕಾಕತಾಳೀಯವೇ ಇರಬಹುದು. ಆದರೆ, ಗದಗಿನಲ್ಲಿ ಅವರೆಂದೂ ಮರೆಯದ ‘ಶಿಕ್ಷಣ ಸಂತ’ ಎಂಬ ಹೆಸರಿನಿಂದ ಸದಾ ಜೀವಂತವಾಗಿರಲಿದ್ದಾರೆ.

ಅವರು ಇಲ್ಲಿ ಸರ್ಕಾರಿ ಶಾಲೆಯ ಮಾಸ್ಟರ್ ಆಗಿದ್ದಾಗ ಆರಂಭಿಸಿದ ಉಚಿತ ಟ್ಯೂಷನ್ ತರಗತಿಗಳನ್ನು ತಮ್ಮ ಕೊನೆಯ ದಿನದವರೆಗೂ ನಡೆಸಿಕೊಂಡು ಬಂದರು. ಅವರ ವಿಶೇಷಾಸಕ್ತಿಯಿಂದ ಪಠ್ಯ ಮತ್ತು ಬದುಕಿನ ಅರಿವು ಪಡೆದ ಸಾವಿರಾರು ಶಿಷ್ಯರು ಇವತ್ತು ದೇಶ-ವಿದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಗದಗ ಜಿಲ್ಲೆ ರೋಣ ತಾಲೂಕಿನ ಮುದೇನಗುಡಿ ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿದ ಮಾಸ್ತರರು ಬಡತನದಲ್ಲೇ ಶಿಕ್ಷಣ ಪಡೆದು, ನಂತರ ಧಾರವಾಡದ ಮುರುಘಾಮಠದ ಹಾಸ್ಟೇಲ್ ಸೌಲಭ್ಯದ ಕಾರಣಕ್ಕಾಗಿ ಬಿ.ಎ ಪದವಿ ಮತ್ತು ಶಿಕ್ಷಕ ತರಬೇತಿ ವಿಷಯದಲ್ಲಿ ಪಾಸಾಗುತ್ತಾರೆ. ಗದಗಿನ ಮಾಡೆಲ್ ಹೈಸ್ಕೂಲ್‍ನಲ್ಲಿ ಶಿಕ್ಷಕರಾಗಿ ಸೇವೆ ಆರಂಭಿಸಿದ ಅವರು, ತಮ್ಮ ಸಂಬಳದ ಹಣ ಉಳಿಸಿ ಮುಂಜಾನೆ ಮತ್ತು ಸಂಜೆ ಬಡ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುತ್ತ ಬಂದರು. ಸಾಯುವವರೆಗೂ ಈ ಕಾಯಕ ಮುಂದುವರೆದೇ ಇತ್ತು.

‘ಅವ್ರ ಬಗ್ಗೆ ಏನ್ ಹೇಳೋದ್ ಬಿಡಿ. ಒಂಥರಾ ನಮಗೆಲ್ಲ ಅವ್ರು ದೇವರೇ’ ಎನ್ನುತ್ತಾರೆ ಅವರ ಬಳಿ ಗಣಿತ, ಇಂಗ್ಲಿಷ್ ಪಾಠಗಳನ್ನು ಕಲಿತ ಪಾಲಿಟೆಕ್ನಿಕ್ ಉಪನ್ಯಾಸಕ ವಕ್ಕಲದ. ಮಂಡ್ಯದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಫೀಕ್ ಕೆರೂರ್ ಹೇಳುತ್ತಾರೆ: ‘ಅವರು ಟ್ಯೂಷನ್ ಹೇಳ್ತಿದ್ದ ವಕಾರ ಜಾಗ ನಮ್ಮ ಮನೆಗೆ ದೂರ ಇದ್ದುದರಿಂದ ನಾನು ಕೇವಲ ಒಂದು ತಿಂಗಳು ಮಾತ್ರ ಅವರ ಹತ್ತಿರ ಮ್ಯಾಥ್ಸ್ ಕಲಿಯಲು ಸಾಧ್ಯವಾಯಿತು. ಆದರೆ, ಗದಗಿನ ಎರಡು-ಮೂರು ತಲೆಮಾರುಗಳ ಶಾಲಾ ವಿದ್ಯಾರ್ಥಿಗಳಲ್ಲಿ ಗಣಿತ ಮತ್ತು ಇಂಗ್ಲಿಷ್ ಜ್ಞಾನ ನೀಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ….’

ಬೆಂಗಳೂರಿನ ಸಾಫ್ಟ್ ವೇರ್ ಕಂಪನಿಯ ಹಿರಿಯ ಉದ್ಯೋಗಿ ಸತೀಶ್ ಕುರಿ, ಹುಬ್ಬಳ್ಳಿಯಲ್ಲಿ ವೈದ್ಯ ವೃತ್ತಿ ಮಾಡುವ ಪರಶುರಾಮ ಕಾಂಬಳೆ…. ಹೀಗೆ ಎಲ್ಲರೂ ಅವರು ಕಲಿಸಿದ ವಿಷಯ ಮತ್ತು ಅದಕ್ಕಿಂತ ಮುಖ್ಯವಾಗಿ ಬದುಕಿನ ಪಾಠಗಳನ್ನು ನೆನೆದು ಗದ್ಗದಿತರಾಗುತ್ತಾರೆ….

ಸಾಮಾನ್ಯ ಶಿಕ್ಷಕರೊಬ್ಬರು ಸಹಜ ಪಾಠ ಮತ್ತು ಜೀವನದ ಮೌಲ್ಯಗಳನ್ನು ನಿರಂತರವಾಗಿ ಕಲಿಸುವ ಮೂಲಕ ಅಸಾಮಾನ್ಯ ಬದುಕನ್ನು ಇಲ್ಲಿ ಸವೆಸಿ ಹೋಗಿದ್ದಾರೆ. ಹಿಂದಿನ ಸಿದ್ದಲಿಂಗ ತೋಂಟದಾರ್ಯ ಸ್ವಾಮೀಜಿ ಅವರಂತೂ ಬಿ.ಜಿ. ಅಣ್ಣಿಗೇರಿಯವರನ್ನು ‘ಶಿಕ್ಷಣ ಸಂತ’ ಎಂದೇ ಕರೆಯುತ್ತಿದ್ದರು. ಮುಂದೆ ಅದೇ ಟೈಟಲ್ಲಿನಲ್ಲಿ ಅಣ್ಣಿಗೇರಿ ಅವರ ಶಿಷ್ಯವೃಂದ ಒಂದು ಅಭಿನಂದನಾ ಗ್ರಂಥವನ್ನು ಪ್ರಕಟಿಸಿತ್ತು. ಅಣ್ಣಿಗೇರಿ ಮಾಸ್ತರು ಹೆಸರಲ್ಲೇ ಅವರ ಕುರಿತಾಗಿಯೇ ಇನ್ನೂ ಮೂರು ಕೃತಿಗಳು ಬಂದಿವೆ ಎಂಬುದನ್ನು ನಾವಿಲ್ಲಿ ಗಮನಿಸಬೇಕು.

ಸಮಾಜ ಕಲಿಸುತ್ತಿದ್ದ ಅಣ್ಣಿಗೇರಿ ಮಾಸ್ತರು ಕ್ರಮೇಣ ಗಣಿತ ವಿಷಯ ಬೋಧನೆಗಾಗಿಯೇ ಗದಗಿನಲ್ಲಿ ಪ್ರಸಿದ್ಧರಾದುದದರ ಹಿಂದೆ ಒಂದು ರೋಚಕ ಅಂಶ ಇದೆ. ಅವರ ಶಿಷ್ಯನೊಬ್ಬ ಗಣಿತದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ಆತನಿಂದ ಹಲವು ತಿಂಗಳು ಕಾಲ ಸರಳ ಗಣಿತ ಕಲಿಕೆಯ ಬಗ್ಗೆ ಪಾಠ ಕಲಿತ ಅವರು, ಕ್ರಮೇಣ ಗದಿನಲ್ಲಿ ಜನಪ್ರಿಯ ಗಣಿತ ಶಿಕ್ಷಕರೆನಿಸಿದರು.
ವಕಾರು ಸಾಲಿನಲ್ಲಿ ಅವರು ಮೂರು ದಶಕಗಳಿಂದ ನಡೆಸುತ್ತ ಬಂದಿರುವ ಶಿಕ್ಷಣ ಆಶ್ರಮಕ್ಕೆ ‘ಗದಗಿನ ಶಾಂತಿನಿಕೇತನ’ ಎಂದೂ ಅವರ ಶಿಷ್ಯರು ಕರೆಯುತ್ತಾರೆ.

ಅವರ ಆಶ್ರಮ ಶಾಲೆಯ ಗೋಡೆಗಳ ಮೇಲಿರುವ ಕೆಲವು ಸಾಲುಗಳು:
‘ಸ್ವಾರ್ಥದಿಂದ ಕೂಡಿದುದು ಅನೈತಿಕ, ಸ್ವಾರ್ಥಶೂನ್ಯವಾದುದು ನೈತಿಕ…’
‘ಪೂರ್ಣತ್ಯಾಗವೇ ಪರಮಾದರ್ಶ, ನಿಸ್ವಾರ್ಥತೆಯೇ ದೇವರು….’
‘ಶಕ್ತಿಯೇ ಜೀವನ, ದುರ್ಬಲತೆಯೇ ಮರಣ…’

ಸಾವೇ ಇಲ್ಲದ ಇಂತಹ ‘ಮಾಸ್ತರು’ಗಳಿಗೆ ನಮ್ಮ ಕಡೆಯಿಂದ ಇದೊಂದು ಶ್ರದ್ಧಾಂಜಲಿ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...