Homeಕರ್ನಾಟಕಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೋಟಿಗೊಬ್ಬ ಶಿಕ್ಷಕ ಅಣ್ಣಿಗೇರಿ ಮಾಸ್ತರರ ಸಾವು: ನಿವೃತ್ತರಾಗದೇ ಅಕ್ಷರ ಕಲಿಸಿದ...

ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೋಟಿಗೊಬ್ಬ ಶಿಕ್ಷಕ ಅಣ್ಣಿಗೇರಿ ಮಾಸ್ತರರ ಸಾವು: ನಿವೃತ್ತರಾಗದೇ ಅಕ್ಷರ ಕಲಿಸಿದ ಗುರು!

- Advertisement -
- Advertisement -

ಸೆಪ್ಟೆಂಬರ್ 6ರಂದು ಗದಗ ನಗರದ ಎಲ್ಲ ಶಾಲಾ-ಕಾಲೇಜುಗಳಿಗೂ ರಜೆ ನೀಡಲಾಗಿತ್ತು. ಅದು ನಿವೃತ್ತ ಶಾಲಾ ಶಿಕ್ಷಕರೊಬ್ಬರ ಸಾವಿಗೆ ಗೌರವ ಸಲ್ಲಿಸಲು ಜಿಲ್ಲಾಡಳಿತ ತೆಗೆದುಕೊಂಡ ಸಜ್ಜನಿಕೆಯ ಕ್ರಮವಾಗಿತ್ತು.

‘ಅಣ್ಣಿಗೇರಿ ಮಾಸ್ತರು’ ಎಂದೇ ಗದಗಿನಲ್ಲಿ ಜನಪ್ರಿಯರಾಗಿದ್ದ ಮತ್ತು ಗೌರವಯುತರಾಗಿದ್ದ ಬಸಪ್ಪ ಗುರಪ್ಪ ಅಣ್ಣಿಗೇರಿಯವರು ಸೆಪ್ಟೆಂಬರ್ 5ರಂದು ಶಿಕ್ಷಕ ದಿನಾಚರಣೆಯಂದೇ ನಿಧನರಾಗಿದ್ದು ಕಾಕತಾಳೀಯವೇ ಇರಬಹುದು. ಆದರೆ, ಗದಗಿನಲ್ಲಿ ಅವರೆಂದೂ ಮರೆಯದ ‘ಶಿಕ್ಷಣ ಸಂತ’ ಎಂಬ ಹೆಸರಿನಿಂದ ಸದಾ ಜೀವಂತವಾಗಿರಲಿದ್ದಾರೆ.

ಅವರು ಇಲ್ಲಿ ಸರ್ಕಾರಿ ಶಾಲೆಯ ಮಾಸ್ಟರ್ ಆಗಿದ್ದಾಗ ಆರಂಭಿಸಿದ ಉಚಿತ ಟ್ಯೂಷನ್ ತರಗತಿಗಳನ್ನು ತಮ್ಮ ಕೊನೆಯ ದಿನದವರೆಗೂ ನಡೆಸಿಕೊಂಡು ಬಂದರು. ಅವರ ವಿಶೇಷಾಸಕ್ತಿಯಿಂದ ಪಠ್ಯ ಮತ್ತು ಬದುಕಿನ ಅರಿವು ಪಡೆದ ಸಾವಿರಾರು ಶಿಷ್ಯರು ಇವತ್ತು ದೇಶ-ವಿದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಗದಗ ಜಿಲ್ಲೆ ರೋಣ ತಾಲೂಕಿನ ಮುದೇನಗುಡಿ ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿದ ಮಾಸ್ತರರು ಬಡತನದಲ್ಲೇ ಶಿಕ್ಷಣ ಪಡೆದು, ನಂತರ ಧಾರವಾಡದ ಮುರುಘಾಮಠದ ಹಾಸ್ಟೇಲ್ ಸೌಲಭ್ಯದ ಕಾರಣಕ್ಕಾಗಿ ಬಿ.ಎ ಪದವಿ ಮತ್ತು ಶಿಕ್ಷಕ ತರಬೇತಿ ವಿಷಯದಲ್ಲಿ ಪಾಸಾಗುತ್ತಾರೆ. ಗದಗಿನ ಮಾಡೆಲ್ ಹೈಸ್ಕೂಲ್‍ನಲ್ಲಿ ಶಿಕ್ಷಕರಾಗಿ ಸೇವೆ ಆರಂಭಿಸಿದ ಅವರು, ತಮ್ಮ ಸಂಬಳದ ಹಣ ಉಳಿಸಿ ಮುಂಜಾನೆ ಮತ್ತು ಸಂಜೆ ಬಡ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುತ್ತ ಬಂದರು. ಸಾಯುವವರೆಗೂ ಈ ಕಾಯಕ ಮುಂದುವರೆದೇ ಇತ್ತು.

‘ಅವ್ರ ಬಗ್ಗೆ ಏನ್ ಹೇಳೋದ್ ಬಿಡಿ. ಒಂಥರಾ ನಮಗೆಲ್ಲ ಅವ್ರು ದೇವರೇ’ ಎನ್ನುತ್ತಾರೆ ಅವರ ಬಳಿ ಗಣಿತ, ಇಂಗ್ಲಿಷ್ ಪಾಠಗಳನ್ನು ಕಲಿತ ಪಾಲಿಟೆಕ್ನಿಕ್ ಉಪನ್ಯಾಸಕ ವಕ್ಕಲದ. ಮಂಡ್ಯದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಫೀಕ್ ಕೆರೂರ್ ಹೇಳುತ್ತಾರೆ: ‘ಅವರು ಟ್ಯೂಷನ್ ಹೇಳ್ತಿದ್ದ ವಕಾರ ಜಾಗ ನಮ್ಮ ಮನೆಗೆ ದೂರ ಇದ್ದುದರಿಂದ ನಾನು ಕೇವಲ ಒಂದು ತಿಂಗಳು ಮಾತ್ರ ಅವರ ಹತ್ತಿರ ಮ್ಯಾಥ್ಸ್ ಕಲಿಯಲು ಸಾಧ್ಯವಾಯಿತು. ಆದರೆ, ಗದಗಿನ ಎರಡು-ಮೂರು ತಲೆಮಾರುಗಳ ಶಾಲಾ ವಿದ್ಯಾರ್ಥಿಗಳಲ್ಲಿ ಗಣಿತ ಮತ್ತು ಇಂಗ್ಲಿಷ್ ಜ್ಞಾನ ನೀಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ….’

ಬೆಂಗಳೂರಿನ ಸಾಫ್ಟ್ ವೇರ್ ಕಂಪನಿಯ ಹಿರಿಯ ಉದ್ಯೋಗಿ ಸತೀಶ್ ಕುರಿ, ಹುಬ್ಬಳ್ಳಿಯಲ್ಲಿ ವೈದ್ಯ ವೃತ್ತಿ ಮಾಡುವ ಪರಶುರಾಮ ಕಾಂಬಳೆ…. ಹೀಗೆ ಎಲ್ಲರೂ ಅವರು ಕಲಿಸಿದ ವಿಷಯ ಮತ್ತು ಅದಕ್ಕಿಂತ ಮುಖ್ಯವಾಗಿ ಬದುಕಿನ ಪಾಠಗಳನ್ನು ನೆನೆದು ಗದ್ಗದಿತರಾಗುತ್ತಾರೆ….

ಸಾಮಾನ್ಯ ಶಿಕ್ಷಕರೊಬ್ಬರು ಸಹಜ ಪಾಠ ಮತ್ತು ಜೀವನದ ಮೌಲ್ಯಗಳನ್ನು ನಿರಂತರವಾಗಿ ಕಲಿಸುವ ಮೂಲಕ ಅಸಾಮಾನ್ಯ ಬದುಕನ್ನು ಇಲ್ಲಿ ಸವೆಸಿ ಹೋಗಿದ್ದಾರೆ. ಹಿಂದಿನ ಸಿದ್ದಲಿಂಗ ತೋಂಟದಾರ್ಯ ಸ್ವಾಮೀಜಿ ಅವರಂತೂ ಬಿ.ಜಿ. ಅಣ್ಣಿಗೇರಿಯವರನ್ನು ‘ಶಿಕ್ಷಣ ಸಂತ’ ಎಂದೇ ಕರೆಯುತ್ತಿದ್ದರು. ಮುಂದೆ ಅದೇ ಟೈಟಲ್ಲಿನಲ್ಲಿ ಅಣ್ಣಿಗೇರಿ ಅವರ ಶಿಷ್ಯವೃಂದ ಒಂದು ಅಭಿನಂದನಾ ಗ್ರಂಥವನ್ನು ಪ್ರಕಟಿಸಿತ್ತು. ಅಣ್ಣಿಗೇರಿ ಮಾಸ್ತರು ಹೆಸರಲ್ಲೇ ಅವರ ಕುರಿತಾಗಿಯೇ ಇನ್ನೂ ಮೂರು ಕೃತಿಗಳು ಬಂದಿವೆ ಎಂಬುದನ್ನು ನಾವಿಲ್ಲಿ ಗಮನಿಸಬೇಕು.

ಸಮಾಜ ಕಲಿಸುತ್ತಿದ್ದ ಅಣ್ಣಿಗೇರಿ ಮಾಸ್ತರು ಕ್ರಮೇಣ ಗಣಿತ ವಿಷಯ ಬೋಧನೆಗಾಗಿಯೇ ಗದಗಿನಲ್ಲಿ ಪ್ರಸಿದ್ಧರಾದುದದರ ಹಿಂದೆ ಒಂದು ರೋಚಕ ಅಂಶ ಇದೆ. ಅವರ ಶಿಷ್ಯನೊಬ್ಬ ಗಣಿತದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ಆತನಿಂದ ಹಲವು ತಿಂಗಳು ಕಾಲ ಸರಳ ಗಣಿತ ಕಲಿಕೆಯ ಬಗ್ಗೆ ಪಾಠ ಕಲಿತ ಅವರು, ಕ್ರಮೇಣ ಗದಿನಲ್ಲಿ ಜನಪ್ರಿಯ ಗಣಿತ ಶಿಕ್ಷಕರೆನಿಸಿದರು.
ವಕಾರು ಸಾಲಿನಲ್ಲಿ ಅವರು ಮೂರು ದಶಕಗಳಿಂದ ನಡೆಸುತ್ತ ಬಂದಿರುವ ಶಿಕ್ಷಣ ಆಶ್ರಮಕ್ಕೆ ‘ಗದಗಿನ ಶಾಂತಿನಿಕೇತನ’ ಎಂದೂ ಅವರ ಶಿಷ್ಯರು ಕರೆಯುತ್ತಾರೆ.

ಅವರ ಆಶ್ರಮ ಶಾಲೆಯ ಗೋಡೆಗಳ ಮೇಲಿರುವ ಕೆಲವು ಸಾಲುಗಳು:
‘ಸ್ವಾರ್ಥದಿಂದ ಕೂಡಿದುದು ಅನೈತಿಕ, ಸ್ವಾರ್ಥಶೂನ್ಯವಾದುದು ನೈತಿಕ…’
‘ಪೂರ್ಣತ್ಯಾಗವೇ ಪರಮಾದರ್ಶ, ನಿಸ್ವಾರ್ಥತೆಯೇ ದೇವರು….’
‘ಶಕ್ತಿಯೇ ಜೀವನ, ದುರ್ಬಲತೆಯೇ ಮರಣ…’

ಸಾವೇ ಇಲ್ಲದ ಇಂತಹ ‘ಮಾಸ್ತರು’ಗಳಿಗೆ ನಮ್ಮ ಕಡೆಯಿಂದ ಇದೊಂದು ಶ್ರದ್ಧಾಂಜಲಿ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...