Homeಕರ್ನಾಟಕಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೋಟಿಗೊಬ್ಬ ಶಿಕ್ಷಕ ಅಣ್ಣಿಗೇರಿ ಮಾಸ್ತರರ ಸಾವು: ನಿವೃತ್ತರಾಗದೇ ಅಕ್ಷರ ಕಲಿಸಿದ...

ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೋಟಿಗೊಬ್ಬ ಶಿಕ್ಷಕ ಅಣ್ಣಿಗೇರಿ ಮಾಸ್ತರರ ಸಾವು: ನಿವೃತ್ತರಾಗದೇ ಅಕ್ಷರ ಕಲಿಸಿದ ಗುರು!

- Advertisement -
- Advertisement -

ಸೆಪ್ಟೆಂಬರ್ 6ರಂದು ಗದಗ ನಗರದ ಎಲ್ಲ ಶಾಲಾ-ಕಾಲೇಜುಗಳಿಗೂ ರಜೆ ನೀಡಲಾಗಿತ್ತು. ಅದು ನಿವೃತ್ತ ಶಾಲಾ ಶಿಕ್ಷಕರೊಬ್ಬರ ಸಾವಿಗೆ ಗೌರವ ಸಲ್ಲಿಸಲು ಜಿಲ್ಲಾಡಳಿತ ತೆಗೆದುಕೊಂಡ ಸಜ್ಜನಿಕೆಯ ಕ್ರಮವಾಗಿತ್ತು.

‘ಅಣ್ಣಿಗೇರಿ ಮಾಸ್ತರು’ ಎಂದೇ ಗದಗಿನಲ್ಲಿ ಜನಪ್ರಿಯರಾಗಿದ್ದ ಮತ್ತು ಗೌರವಯುತರಾಗಿದ್ದ ಬಸಪ್ಪ ಗುರಪ್ಪ ಅಣ್ಣಿಗೇರಿಯವರು ಸೆಪ್ಟೆಂಬರ್ 5ರಂದು ಶಿಕ್ಷಕ ದಿನಾಚರಣೆಯಂದೇ ನಿಧನರಾಗಿದ್ದು ಕಾಕತಾಳೀಯವೇ ಇರಬಹುದು. ಆದರೆ, ಗದಗಿನಲ್ಲಿ ಅವರೆಂದೂ ಮರೆಯದ ‘ಶಿಕ್ಷಣ ಸಂತ’ ಎಂಬ ಹೆಸರಿನಿಂದ ಸದಾ ಜೀವಂತವಾಗಿರಲಿದ್ದಾರೆ.

ಅವರು ಇಲ್ಲಿ ಸರ್ಕಾರಿ ಶಾಲೆಯ ಮಾಸ್ಟರ್ ಆಗಿದ್ದಾಗ ಆರಂಭಿಸಿದ ಉಚಿತ ಟ್ಯೂಷನ್ ತರಗತಿಗಳನ್ನು ತಮ್ಮ ಕೊನೆಯ ದಿನದವರೆಗೂ ನಡೆಸಿಕೊಂಡು ಬಂದರು. ಅವರ ವಿಶೇಷಾಸಕ್ತಿಯಿಂದ ಪಠ್ಯ ಮತ್ತು ಬದುಕಿನ ಅರಿವು ಪಡೆದ ಸಾವಿರಾರು ಶಿಷ್ಯರು ಇವತ್ತು ದೇಶ-ವಿದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಗದಗ ಜಿಲ್ಲೆ ರೋಣ ತಾಲೂಕಿನ ಮುದೇನಗುಡಿ ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿದ ಮಾಸ್ತರರು ಬಡತನದಲ್ಲೇ ಶಿಕ್ಷಣ ಪಡೆದು, ನಂತರ ಧಾರವಾಡದ ಮುರುಘಾಮಠದ ಹಾಸ್ಟೇಲ್ ಸೌಲಭ್ಯದ ಕಾರಣಕ್ಕಾಗಿ ಬಿ.ಎ ಪದವಿ ಮತ್ತು ಶಿಕ್ಷಕ ತರಬೇತಿ ವಿಷಯದಲ್ಲಿ ಪಾಸಾಗುತ್ತಾರೆ. ಗದಗಿನ ಮಾಡೆಲ್ ಹೈಸ್ಕೂಲ್‍ನಲ್ಲಿ ಶಿಕ್ಷಕರಾಗಿ ಸೇವೆ ಆರಂಭಿಸಿದ ಅವರು, ತಮ್ಮ ಸಂಬಳದ ಹಣ ಉಳಿಸಿ ಮುಂಜಾನೆ ಮತ್ತು ಸಂಜೆ ಬಡ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುತ್ತ ಬಂದರು. ಸಾಯುವವರೆಗೂ ಈ ಕಾಯಕ ಮುಂದುವರೆದೇ ಇತ್ತು.

‘ಅವ್ರ ಬಗ್ಗೆ ಏನ್ ಹೇಳೋದ್ ಬಿಡಿ. ಒಂಥರಾ ನಮಗೆಲ್ಲ ಅವ್ರು ದೇವರೇ’ ಎನ್ನುತ್ತಾರೆ ಅವರ ಬಳಿ ಗಣಿತ, ಇಂಗ್ಲಿಷ್ ಪಾಠಗಳನ್ನು ಕಲಿತ ಪಾಲಿಟೆಕ್ನಿಕ್ ಉಪನ್ಯಾಸಕ ವಕ್ಕಲದ. ಮಂಡ್ಯದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಫೀಕ್ ಕೆರೂರ್ ಹೇಳುತ್ತಾರೆ: ‘ಅವರು ಟ್ಯೂಷನ್ ಹೇಳ್ತಿದ್ದ ವಕಾರ ಜಾಗ ನಮ್ಮ ಮನೆಗೆ ದೂರ ಇದ್ದುದರಿಂದ ನಾನು ಕೇವಲ ಒಂದು ತಿಂಗಳು ಮಾತ್ರ ಅವರ ಹತ್ತಿರ ಮ್ಯಾಥ್ಸ್ ಕಲಿಯಲು ಸಾಧ್ಯವಾಯಿತು. ಆದರೆ, ಗದಗಿನ ಎರಡು-ಮೂರು ತಲೆಮಾರುಗಳ ಶಾಲಾ ವಿದ್ಯಾರ್ಥಿಗಳಲ್ಲಿ ಗಣಿತ ಮತ್ತು ಇಂಗ್ಲಿಷ್ ಜ್ಞಾನ ನೀಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ….’

ಬೆಂಗಳೂರಿನ ಸಾಫ್ಟ್ ವೇರ್ ಕಂಪನಿಯ ಹಿರಿಯ ಉದ್ಯೋಗಿ ಸತೀಶ್ ಕುರಿ, ಹುಬ್ಬಳ್ಳಿಯಲ್ಲಿ ವೈದ್ಯ ವೃತ್ತಿ ಮಾಡುವ ಪರಶುರಾಮ ಕಾಂಬಳೆ…. ಹೀಗೆ ಎಲ್ಲರೂ ಅವರು ಕಲಿಸಿದ ವಿಷಯ ಮತ್ತು ಅದಕ್ಕಿಂತ ಮುಖ್ಯವಾಗಿ ಬದುಕಿನ ಪಾಠಗಳನ್ನು ನೆನೆದು ಗದ್ಗದಿತರಾಗುತ್ತಾರೆ….

ಸಾಮಾನ್ಯ ಶಿಕ್ಷಕರೊಬ್ಬರು ಸಹಜ ಪಾಠ ಮತ್ತು ಜೀವನದ ಮೌಲ್ಯಗಳನ್ನು ನಿರಂತರವಾಗಿ ಕಲಿಸುವ ಮೂಲಕ ಅಸಾಮಾನ್ಯ ಬದುಕನ್ನು ಇಲ್ಲಿ ಸವೆಸಿ ಹೋಗಿದ್ದಾರೆ. ಹಿಂದಿನ ಸಿದ್ದಲಿಂಗ ತೋಂಟದಾರ್ಯ ಸ್ವಾಮೀಜಿ ಅವರಂತೂ ಬಿ.ಜಿ. ಅಣ್ಣಿಗೇರಿಯವರನ್ನು ‘ಶಿಕ್ಷಣ ಸಂತ’ ಎಂದೇ ಕರೆಯುತ್ತಿದ್ದರು. ಮುಂದೆ ಅದೇ ಟೈಟಲ್ಲಿನಲ್ಲಿ ಅಣ್ಣಿಗೇರಿ ಅವರ ಶಿಷ್ಯವೃಂದ ಒಂದು ಅಭಿನಂದನಾ ಗ್ರಂಥವನ್ನು ಪ್ರಕಟಿಸಿತ್ತು. ಅಣ್ಣಿಗೇರಿ ಮಾಸ್ತರು ಹೆಸರಲ್ಲೇ ಅವರ ಕುರಿತಾಗಿಯೇ ಇನ್ನೂ ಮೂರು ಕೃತಿಗಳು ಬಂದಿವೆ ಎಂಬುದನ್ನು ನಾವಿಲ್ಲಿ ಗಮನಿಸಬೇಕು.

ಸಮಾಜ ಕಲಿಸುತ್ತಿದ್ದ ಅಣ್ಣಿಗೇರಿ ಮಾಸ್ತರು ಕ್ರಮೇಣ ಗಣಿತ ವಿಷಯ ಬೋಧನೆಗಾಗಿಯೇ ಗದಗಿನಲ್ಲಿ ಪ್ರಸಿದ್ಧರಾದುದದರ ಹಿಂದೆ ಒಂದು ರೋಚಕ ಅಂಶ ಇದೆ. ಅವರ ಶಿಷ್ಯನೊಬ್ಬ ಗಣಿತದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ಆತನಿಂದ ಹಲವು ತಿಂಗಳು ಕಾಲ ಸರಳ ಗಣಿತ ಕಲಿಕೆಯ ಬಗ್ಗೆ ಪಾಠ ಕಲಿತ ಅವರು, ಕ್ರಮೇಣ ಗದಿನಲ್ಲಿ ಜನಪ್ರಿಯ ಗಣಿತ ಶಿಕ್ಷಕರೆನಿಸಿದರು.
ವಕಾರು ಸಾಲಿನಲ್ಲಿ ಅವರು ಮೂರು ದಶಕಗಳಿಂದ ನಡೆಸುತ್ತ ಬಂದಿರುವ ಶಿಕ್ಷಣ ಆಶ್ರಮಕ್ಕೆ ‘ಗದಗಿನ ಶಾಂತಿನಿಕೇತನ’ ಎಂದೂ ಅವರ ಶಿಷ್ಯರು ಕರೆಯುತ್ತಾರೆ.

ಅವರ ಆಶ್ರಮ ಶಾಲೆಯ ಗೋಡೆಗಳ ಮೇಲಿರುವ ಕೆಲವು ಸಾಲುಗಳು:
‘ಸ್ವಾರ್ಥದಿಂದ ಕೂಡಿದುದು ಅನೈತಿಕ, ಸ್ವಾರ್ಥಶೂನ್ಯವಾದುದು ನೈತಿಕ…’
‘ಪೂರ್ಣತ್ಯಾಗವೇ ಪರಮಾದರ್ಶ, ನಿಸ್ವಾರ್ಥತೆಯೇ ದೇವರು….’
‘ಶಕ್ತಿಯೇ ಜೀವನ, ದುರ್ಬಲತೆಯೇ ಮರಣ…’

ಸಾವೇ ಇಲ್ಲದ ಇಂತಹ ‘ಮಾಸ್ತರು’ಗಳಿಗೆ ನಮ್ಮ ಕಡೆಯಿಂದ ಇದೊಂದು ಶ್ರದ್ಧಾಂಜಲಿ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...