Homeಕರ್ನಾಟಕಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೋಟಿಗೊಬ್ಬ ಶಿಕ್ಷಕ ಅಣ್ಣಿಗೇರಿ ಮಾಸ್ತರರ ಸಾವು: ನಿವೃತ್ತರಾಗದೇ ಅಕ್ಷರ ಕಲಿಸಿದ...

ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೋಟಿಗೊಬ್ಬ ಶಿಕ್ಷಕ ಅಣ್ಣಿಗೇರಿ ಮಾಸ್ತರರ ಸಾವು: ನಿವೃತ್ತರಾಗದೇ ಅಕ್ಷರ ಕಲಿಸಿದ ಗುರು!

- Advertisement -
- Advertisement -

ಸೆಪ್ಟೆಂಬರ್ 6ರಂದು ಗದಗ ನಗರದ ಎಲ್ಲ ಶಾಲಾ-ಕಾಲೇಜುಗಳಿಗೂ ರಜೆ ನೀಡಲಾಗಿತ್ತು. ಅದು ನಿವೃತ್ತ ಶಾಲಾ ಶಿಕ್ಷಕರೊಬ್ಬರ ಸಾವಿಗೆ ಗೌರವ ಸಲ್ಲಿಸಲು ಜಿಲ್ಲಾಡಳಿತ ತೆಗೆದುಕೊಂಡ ಸಜ್ಜನಿಕೆಯ ಕ್ರಮವಾಗಿತ್ತು.

‘ಅಣ್ಣಿಗೇರಿ ಮಾಸ್ತರು’ ಎಂದೇ ಗದಗಿನಲ್ಲಿ ಜನಪ್ರಿಯರಾಗಿದ್ದ ಮತ್ತು ಗೌರವಯುತರಾಗಿದ್ದ ಬಸಪ್ಪ ಗುರಪ್ಪ ಅಣ್ಣಿಗೇರಿಯವರು ಸೆಪ್ಟೆಂಬರ್ 5ರಂದು ಶಿಕ್ಷಕ ದಿನಾಚರಣೆಯಂದೇ ನಿಧನರಾಗಿದ್ದು ಕಾಕತಾಳೀಯವೇ ಇರಬಹುದು. ಆದರೆ, ಗದಗಿನಲ್ಲಿ ಅವರೆಂದೂ ಮರೆಯದ ‘ಶಿಕ್ಷಣ ಸಂತ’ ಎಂಬ ಹೆಸರಿನಿಂದ ಸದಾ ಜೀವಂತವಾಗಿರಲಿದ್ದಾರೆ.

ಅವರು ಇಲ್ಲಿ ಸರ್ಕಾರಿ ಶಾಲೆಯ ಮಾಸ್ಟರ್ ಆಗಿದ್ದಾಗ ಆರಂಭಿಸಿದ ಉಚಿತ ಟ್ಯೂಷನ್ ತರಗತಿಗಳನ್ನು ತಮ್ಮ ಕೊನೆಯ ದಿನದವರೆಗೂ ನಡೆಸಿಕೊಂಡು ಬಂದರು. ಅವರ ವಿಶೇಷಾಸಕ್ತಿಯಿಂದ ಪಠ್ಯ ಮತ್ತು ಬದುಕಿನ ಅರಿವು ಪಡೆದ ಸಾವಿರಾರು ಶಿಷ್ಯರು ಇವತ್ತು ದೇಶ-ವಿದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಗದಗ ಜಿಲ್ಲೆ ರೋಣ ತಾಲೂಕಿನ ಮುದೇನಗುಡಿ ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿದ ಮಾಸ್ತರರು ಬಡತನದಲ್ಲೇ ಶಿಕ್ಷಣ ಪಡೆದು, ನಂತರ ಧಾರವಾಡದ ಮುರುಘಾಮಠದ ಹಾಸ್ಟೇಲ್ ಸೌಲಭ್ಯದ ಕಾರಣಕ್ಕಾಗಿ ಬಿ.ಎ ಪದವಿ ಮತ್ತು ಶಿಕ್ಷಕ ತರಬೇತಿ ವಿಷಯದಲ್ಲಿ ಪಾಸಾಗುತ್ತಾರೆ. ಗದಗಿನ ಮಾಡೆಲ್ ಹೈಸ್ಕೂಲ್‍ನಲ್ಲಿ ಶಿಕ್ಷಕರಾಗಿ ಸೇವೆ ಆರಂಭಿಸಿದ ಅವರು, ತಮ್ಮ ಸಂಬಳದ ಹಣ ಉಳಿಸಿ ಮುಂಜಾನೆ ಮತ್ತು ಸಂಜೆ ಬಡ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುತ್ತ ಬಂದರು. ಸಾಯುವವರೆಗೂ ಈ ಕಾಯಕ ಮುಂದುವರೆದೇ ಇತ್ತು.

‘ಅವ್ರ ಬಗ್ಗೆ ಏನ್ ಹೇಳೋದ್ ಬಿಡಿ. ಒಂಥರಾ ನಮಗೆಲ್ಲ ಅವ್ರು ದೇವರೇ’ ಎನ್ನುತ್ತಾರೆ ಅವರ ಬಳಿ ಗಣಿತ, ಇಂಗ್ಲಿಷ್ ಪಾಠಗಳನ್ನು ಕಲಿತ ಪಾಲಿಟೆಕ್ನಿಕ್ ಉಪನ್ಯಾಸಕ ವಕ್ಕಲದ. ಮಂಡ್ಯದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಫೀಕ್ ಕೆರೂರ್ ಹೇಳುತ್ತಾರೆ: ‘ಅವರು ಟ್ಯೂಷನ್ ಹೇಳ್ತಿದ್ದ ವಕಾರ ಜಾಗ ನಮ್ಮ ಮನೆಗೆ ದೂರ ಇದ್ದುದರಿಂದ ನಾನು ಕೇವಲ ಒಂದು ತಿಂಗಳು ಮಾತ್ರ ಅವರ ಹತ್ತಿರ ಮ್ಯಾಥ್ಸ್ ಕಲಿಯಲು ಸಾಧ್ಯವಾಯಿತು. ಆದರೆ, ಗದಗಿನ ಎರಡು-ಮೂರು ತಲೆಮಾರುಗಳ ಶಾಲಾ ವಿದ್ಯಾರ್ಥಿಗಳಲ್ಲಿ ಗಣಿತ ಮತ್ತು ಇಂಗ್ಲಿಷ್ ಜ್ಞಾನ ನೀಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ….’

ಬೆಂಗಳೂರಿನ ಸಾಫ್ಟ್ ವೇರ್ ಕಂಪನಿಯ ಹಿರಿಯ ಉದ್ಯೋಗಿ ಸತೀಶ್ ಕುರಿ, ಹುಬ್ಬಳ್ಳಿಯಲ್ಲಿ ವೈದ್ಯ ವೃತ್ತಿ ಮಾಡುವ ಪರಶುರಾಮ ಕಾಂಬಳೆ…. ಹೀಗೆ ಎಲ್ಲರೂ ಅವರು ಕಲಿಸಿದ ವಿಷಯ ಮತ್ತು ಅದಕ್ಕಿಂತ ಮುಖ್ಯವಾಗಿ ಬದುಕಿನ ಪಾಠಗಳನ್ನು ನೆನೆದು ಗದ್ಗದಿತರಾಗುತ್ತಾರೆ….

ಸಾಮಾನ್ಯ ಶಿಕ್ಷಕರೊಬ್ಬರು ಸಹಜ ಪಾಠ ಮತ್ತು ಜೀವನದ ಮೌಲ್ಯಗಳನ್ನು ನಿರಂತರವಾಗಿ ಕಲಿಸುವ ಮೂಲಕ ಅಸಾಮಾನ್ಯ ಬದುಕನ್ನು ಇಲ್ಲಿ ಸವೆಸಿ ಹೋಗಿದ್ದಾರೆ. ಹಿಂದಿನ ಸಿದ್ದಲಿಂಗ ತೋಂಟದಾರ್ಯ ಸ್ವಾಮೀಜಿ ಅವರಂತೂ ಬಿ.ಜಿ. ಅಣ್ಣಿಗೇರಿಯವರನ್ನು ‘ಶಿಕ್ಷಣ ಸಂತ’ ಎಂದೇ ಕರೆಯುತ್ತಿದ್ದರು. ಮುಂದೆ ಅದೇ ಟೈಟಲ್ಲಿನಲ್ಲಿ ಅಣ್ಣಿಗೇರಿ ಅವರ ಶಿಷ್ಯವೃಂದ ಒಂದು ಅಭಿನಂದನಾ ಗ್ರಂಥವನ್ನು ಪ್ರಕಟಿಸಿತ್ತು. ಅಣ್ಣಿಗೇರಿ ಮಾಸ್ತರು ಹೆಸರಲ್ಲೇ ಅವರ ಕುರಿತಾಗಿಯೇ ಇನ್ನೂ ಮೂರು ಕೃತಿಗಳು ಬಂದಿವೆ ಎಂಬುದನ್ನು ನಾವಿಲ್ಲಿ ಗಮನಿಸಬೇಕು.

ಸಮಾಜ ಕಲಿಸುತ್ತಿದ್ದ ಅಣ್ಣಿಗೇರಿ ಮಾಸ್ತರು ಕ್ರಮೇಣ ಗಣಿತ ವಿಷಯ ಬೋಧನೆಗಾಗಿಯೇ ಗದಗಿನಲ್ಲಿ ಪ್ರಸಿದ್ಧರಾದುದದರ ಹಿಂದೆ ಒಂದು ರೋಚಕ ಅಂಶ ಇದೆ. ಅವರ ಶಿಷ್ಯನೊಬ್ಬ ಗಣಿತದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ಆತನಿಂದ ಹಲವು ತಿಂಗಳು ಕಾಲ ಸರಳ ಗಣಿತ ಕಲಿಕೆಯ ಬಗ್ಗೆ ಪಾಠ ಕಲಿತ ಅವರು, ಕ್ರಮೇಣ ಗದಿನಲ್ಲಿ ಜನಪ್ರಿಯ ಗಣಿತ ಶಿಕ್ಷಕರೆನಿಸಿದರು.
ವಕಾರು ಸಾಲಿನಲ್ಲಿ ಅವರು ಮೂರು ದಶಕಗಳಿಂದ ನಡೆಸುತ್ತ ಬಂದಿರುವ ಶಿಕ್ಷಣ ಆಶ್ರಮಕ್ಕೆ ‘ಗದಗಿನ ಶಾಂತಿನಿಕೇತನ’ ಎಂದೂ ಅವರ ಶಿಷ್ಯರು ಕರೆಯುತ್ತಾರೆ.

ಅವರ ಆಶ್ರಮ ಶಾಲೆಯ ಗೋಡೆಗಳ ಮೇಲಿರುವ ಕೆಲವು ಸಾಲುಗಳು:
‘ಸ್ವಾರ್ಥದಿಂದ ಕೂಡಿದುದು ಅನೈತಿಕ, ಸ್ವಾರ್ಥಶೂನ್ಯವಾದುದು ನೈತಿಕ…’
‘ಪೂರ್ಣತ್ಯಾಗವೇ ಪರಮಾದರ್ಶ, ನಿಸ್ವಾರ್ಥತೆಯೇ ದೇವರು….’
‘ಶಕ್ತಿಯೇ ಜೀವನ, ದುರ್ಬಲತೆಯೇ ಮರಣ…’

ಸಾವೇ ಇಲ್ಲದ ಇಂತಹ ‘ಮಾಸ್ತರು’ಗಳಿಗೆ ನಮ್ಮ ಕಡೆಯಿಂದ ಇದೊಂದು ಶ್ರದ್ಧಾಂಜಲಿ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...