Homeಕರ್ನಾಟಕಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೋಟಿಗೊಬ್ಬ ಶಿಕ್ಷಕ ಅಣ್ಣಿಗೇರಿ ಮಾಸ್ತರರ ಸಾವು: ನಿವೃತ್ತರಾಗದೇ ಅಕ್ಷರ ಕಲಿಸಿದ...

ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೋಟಿಗೊಬ್ಬ ಶಿಕ್ಷಕ ಅಣ್ಣಿಗೇರಿ ಮಾಸ್ತರರ ಸಾವು: ನಿವೃತ್ತರಾಗದೇ ಅಕ್ಷರ ಕಲಿಸಿದ ಗುರು!

- Advertisement -
- Advertisement -

ಸೆಪ್ಟೆಂಬರ್ 6ರಂದು ಗದಗ ನಗರದ ಎಲ್ಲ ಶಾಲಾ-ಕಾಲೇಜುಗಳಿಗೂ ರಜೆ ನೀಡಲಾಗಿತ್ತು. ಅದು ನಿವೃತ್ತ ಶಾಲಾ ಶಿಕ್ಷಕರೊಬ್ಬರ ಸಾವಿಗೆ ಗೌರವ ಸಲ್ಲಿಸಲು ಜಿಲ್ಲಾಡಳಿತ ತೆಗೆದುಕೊಂಡ ಸಜ್ಜನಿಕೆಯ ಕ್ರಮವಾಗಿತ್ತು.

‘ಅಣ್ಣಿಗೇರಿ ಮಾಸ್ತರು’ ಎಂದೇ ಗದಗಿನಲ್ಲಿ ಜನಪ್ರಿಯರಾಗಿದ್ದ ಮತ್ತು ಗೌರವಯುತರಾಗಿದ್ದ ಬಸಪ್ಪ ಗುರಪ್ಪ ಅಣ್ಣಿಗೇರಿಯವರು ಸೆಪ್ಟೆಂಬರ್ 5ರಂದು ಶಿಕ್ಷಕ ದಿನಾಚರಣೆಯಂದೇ ನಿಧನರಾಗಿದ್ದು ಕಾಕತಾಳೀಯವೇ ಇರಬಹುದು. ಆದರೆ, ಗದಗಿನಲ್ಲಿ ಅವರೆಂದೂ ಮರೆಯದ ‘ಶಿಕ್ಷಣ ಸಂತ’ ಎಂಬ ಹೆಸರಿನಿಂದ ಸದಾ ಜೀವಂತವಾಗಿರಲಿದ್ದಾರೆ.

ಅವರು ಇಲ್ಲಿ ಸರ್ಕಾರಿ ಶಾಲೆಯ ಮಾಸ್ಟರ್ ಆಗಿದ್ದಾಗ ಆರಂಭಿಸಿದ ಉಚಿತ ಟ್ಯೂಷನ್ ತರಗತಿಗಳನ್ನು ತಮ್ಮ ಕೊನೆಯ ದಿನದವರೆಗೂ ನಡೆಸಿಕೊಂಡು ಬಂದರು. ಅವರ ವಿಶೇಷಾಸಕ್ತಿಯಿಂದ ಪಠ್ಯ ಮತ್ತು ಬದುಕಿನ ಅರಿವು ಪಡೆದ ಸಾವಿರಾರು ಶಿಷ್ಯರು ಇವತ್ತು ದೇಶ-ವಿದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಗದಗ ಜಿಲ್ಲೆ ರೋಣ ತಾಲೂಕಿನ ಮುದೇನಗುಡಿ ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿದ ಮಾಸ್ತರರು ಬಡತನದಲ್ಲೇ ಶಿಕ್ಷಣ ಪಡೆದು, ನಂತರ ಧಾರವಾಡದ ಮುರುಘಾಮಠದ ಹಾಸ್ಟೇಲ್ ಸೌಲಭ್ಯದ ಕಾರಣಕ್ಕಾಗಿ ಬಿ.ಎ ಪದವಿ ಮತ್ತು ಶಿಕ್ಷಕ ತರಬೇತಿ ವಿಷಯದಲ್ಲಿ ಪಾಸಾಗುತ್ತಾರೆ. ಗದಗಿನ ಮಾಡೆಲ್ ಹೈಸ್ಕೂಲ್‍ನಲ್ಲಿ ಶಿಕ್ಷಕರಾಗಿ ಸೇವೆ ಆರಂಭಿಸಿದ ಅವರು, ತಮ್ಮ ಸಂಬಳದ ಹಣ ಉಳಿಸಿ ಮುಂಜಾನೆ ಮತ್ತು ಸಂಜೆ ಬಡ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುತ್ತ ಬಂದರು. ಸಾಯುವವರೆಗೂ ಈ ಕಾಯಕ ಮುಂದುವರೆದೇ ಇತ್ತು.

‘ಅವ್ರ ಬಗ್ಗೆ ಏನ್ ಹೇಳೋದ್ ಬಿಡಿ. ಒಂಥರಾ ನಮಗೆಲ್ಲ ಅವ್ರು ದೇವರೇ’ ಎನ್ನುತ್ತಾರೆ ಅವರ ಬಳಿ ಗಣಿತ, ಇಂಗ್ಲಿಷ್ ಪಾಠಗಳನ್ನು ಕಲಿತ ಪಾಲಿಟೆಕ್ನಿಕ್ ಉಪನ್ಯಾಸಕ ವಕ್ಕಲದ. ಮಂಡ್ಯದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಫೀಕ್ ಕೆರೂರ್ ಹೇಳುತ್ತಾರೆ: ‘ಅವರು ಟ್ಯೂಷನ್ ಹೇಳ್ತಿದ್ದ ವಕಾರ ಜಾಗ ನಮ್ಮ ಮನೆಗೆ ದೂರ ಇದ್ದುದರಿಂದ ನಾನು ಕೇವಲ ಒಂದು ತಿಂಗಳು ಮಾತ್ರ ಅವರ ಹತ್ತಿರ ಮ್ಯಾಥ್ಸ್ ಕಲಿಯಲು ಸಾಧ್ಯವಾಯಿತು. ಆದರೆ, ಗದಗಿನ ಎರಡು-ಮೂರು ತಲೆಮಾರುಗಳ ಶಾಲಾ ವಿದ್ಯಾರ್ಥಿಗಳಲ್ಲಿ ಗಣಿತ ಮತ್ತು ಇಂಗ್ಲಿಷ್ ಜ್ಞಾನ ನೀಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ….’

ಬೆಂಗಳೂರಿನ ಸಾಫ್ಟ್ ವೇರ್ ಕಂಪನಿಯ ಹಿರಿಯ ಉದ್ಯೋಗಿ ಸತೀಶ್ ಕುರಿ, ಹುಬ್ಬಳ್ಳಿಯಲ್ಲಿ ವೈದ್ಯ ವೃತ್ತಿ ಮಾಡುವ ಪರಶುರಾಮ ಕಾಂಬಳೆ…. ಹೀಗೆ ಎಲ್ಲರೂ ಅವರು ಕಲಿಸಿದ ವಿಷಯ ಮತ್ತು ಅದಕ್ಕಿಂತ ಮುಖ್ಯವಾಗಿ ಬದುಕಿನ ಪಾಠಗಳನ್ನು ನೆನೆದು ಗದ್ಗದಿತರಾಗುತ್ತಾರೆ….

ಸಾಮಾನ್ಯ ಶಿಕ್ಷಕರೊಬ್ಬರು ಸಹಜ ಪಾಠ ಮತ್ತು ಜೀವನದ ಮೌಲ್ಯಗಳನ್ನು ನಿರಂತರವಾಗಿ ಕಲಿಸುವ ಮೂಲಕ ಅಸಾಮಾನ್ಯ ಬದುಕನ್ನು ಇಲ್ಲಿ ಸವೆಸಿ ಹೋಗಿದ್ದಾರೆ. ಹಿಂದಿನ ಸಿದ್ದಲಿಂಗ ತೋಂಟದಾರ್ಯ ಸ್ವಾಮೀಜಿ ಅವರಂತೂ ಬಿ.ಜಿ. ಅಣ್ಣಿಗೇರಿಯವರನ್ನು ‘ಶಿಕ್ಷಣ ಸಂತ’ ಎಂದೇ ಕರೆಯುತ್ತಿದ್ದರು. ಮುಂದೆ ಅದೇ ಟೈಟಲ್ಲಿನಲ್ಲಿ ಅಣ್ಣಿಗೇರಿ ಅವರ ಶಿಷ್ಯವೃಂದ ಒಂದು ಅಭಿನಂದನಾ ಗ್ರಂಥವನ್ನು ಪ್ರಕಟಿಸಿತ್ತು. ಅಣ್ಣಿಗೇರಿ ಮಾಸ್ತರು ಹೆಸರಲ್ಲೇ ಅವರ ಕುರಿತಾಗಿಯೇ ಇನ್ನೂ ಮೂರು ಕೃತಿಗಳು ಬಂದಿವೆ ಎಂಬುದನ್ನು ನಾವಿಲ್ಲಿ ಗಮನಿಸಬೇಕು.

ಸಮಾಜ ಕಲಿಸುತ್ತಿದ್ದ ಅಣ್ಣಿಗೇರಿ ಮಾಸ್ತರು ಕ್ರಮೇಣ ಗಣಿತ ವಿಷಯ ಬೋಧನೆಗಾಗಿಯೇ ಗದಗಿನಲ್ಲಿ ಪ್ರಸಿದ್ಧರಾದುದದರ ಹಿಂದೆ ಒಂದು ರೋಚಕ ಅಂಶ ಇದೆ. ಅವರ ಶಿಷ್ಯನೊಬ್ಬ ಗಣಿತದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ಆತನಿಂದ ಹಲವು ತಿಂಗಳು ಕಾಲ ಸರಳ ಗಣಿತ ಕಲಿಕೆಯ ಬಗ್ಗೆ ಪಾಠ ಕಲಿತ ಅವರು, ಕ್ರಮೇಣ ಗದಿನಲ್ಲಿ ಜನಪ್ರಿಯ ಗಣಿತ ಶಿಕ್ಷಕರೆನಿಸಿದರು.
ವಕಾರು ಸಾಲಿನಲ್ಲಿ ಅವರು ಮೂರು ದಶಕಗಳಿಂದ ನಡೆಸುತ್ತ ಬಂದಿರುವ ಶಿಕ್ಷಣ ಆಶ್ರಮಕ್ಕೆ ‘ಗದಗಿನ ಶಾಂತಿನಿಕೇತನ’ ಎಂದೂ ಅವರ ಶಿಷ್ಯರು ಕರೆಯುತ್ತಾರೆ.

ಅವರ ಆಶ್ರಮ ಶಾಲೆಯ ಗೋಡೆಗಳ ಮೇಲಿರುವ ಕೆಲವು ಸಾಲುಗಳು:
‘ಸ್ವಾರ್ಥದಿಂದ ಕೂಡಿದುದು ಅನೈತಿಕ, ಸ್ವಾರ್ಥಶೂನ್ಯವಾದುದು ನೈತಿಕ…’
‘ಪೂರ್ಣತ್ಯಾಗವೇ ಪರಮಾದರ್ಶ, ನಿಸ್ವಾರ್ಥತೆಯೇ ದೇವರು….’
‘ಶಕ್ತಿಯೇ ಜೀವನ, ದುರ್ಬಲತೆಯೇ ಮರಣ…’

ಸಾವೇ ಇಲ್ಲದ ಇಂತಹ ‘ಮಾಸ್ತರು’ಗಳಿಗೆ ನಮ್ಮ ಕಡೆಯಿಂದ ಇದೊಂದು ಶ್ರದ್ಧಾಂಜಲಿ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...