Homeಕರ್ನಾಟಕಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೋಟಿಗೊಬ್ಬ ಶಿಕ್ಷಕ ಅಣ್ಣಿಗೇರಿ ಮಾಸ್ತರರ ಸಾವು: ನಿವೃತ್ತರಾಗದೇ ಅಕ್ಷರ ಕಲಿಸಿದ...

ಸಾವಿರಾರು ಮಕ್ಕಳಿಗೆ ವಿದ್ಯಾದಾನ ಮಾಡಿದ ಕೋಟಿಗೊಬ್ಬ ಶಿಕ್ಷಕ ಅಣ್ಣಿಗೇರಿ ಮಾಸ್ತರರ ಸಾವು: ನಿವೃತ್ತರಾಗದೇ ಅಕ್ಷರ ಕಲಿಸಿದ ಗುರು!

- Advertisement -
- Advertisement -

ಸೆಪ್ಟೆಂಬರ್ 6ರಂದು ಗದಗ ನಗರದ ಎಲ್ಲ ಶಾಲಾ-ಕಾಲೇಜುಗಳಿಗೂ ರಜೆ ನೀಡಲಾಗಿತ್ತು. ಅದು ನಿವೃತ್ತ ಶಾಲಾ ಶಿಕ್ಷಕರೊಬ್ಬರ ಸಾವಿಗೆ ಗೌರವ ಸಲ್ಲಿಸಲು ಜಿಲ್ಲಾಡಳಿತ ತೆಗೆದುಕೊಂಡ ಸಜ್ಜನಿಕೆಯ ಕ್ರಮವಾಗಿತ್ತು.

‘ಅಣ್ಣಿಗೇರಿ ಮಾಸ್ತರು’ ಎಂದೇ ಗದಗಿನಲ್ಲಿ ಜನಪ್ರಿಯರಾಗಿದ್ದ ಮತ್ತು ಗೌರವಯುತರಾಗಿದ್ದ ಬಸಪ್ಪ ಗುರಪ್ಪ ಅಣ್ಣಿಗೇರಿಯವರು ಸೆಪ್ಟೆಂಬರ್ 5ರಂದು ಶಿಕ್ಷಕ ದಿನಾಚರಣೆಯಂದೇ ನಿಧನರಾಗಿದ್ದು ಕಾಕತಾಳೀಯವೇ ಇರಬಹುದು. ಆದರೆ, ಗದಗಿನಲ್ಲಿ ಅವರೆಂದೂ ಮರೆಯದ ‘ಶಿಕ್ಷಣ ಸಂತ’ ಎಂಬ ಹೆಸರಿನಿಂದ ಸದಾ ಜೀವಂತವಾಗಿರಲಿದ್ದಾರೆ.

ಅವರು ಇಲ್ಲಿ ಸರ್ಕಾರಿ ಶಾಲೆಯ ಮಾಸ್ಟರ್ ಆಗಿದ್ದಾಗ ಆರಂಭಿಸಿದ ಉಚಿತ ಟ್ಯೂಷನ್ ತರಗತಿಗಳನ್ನು ತಮ್ಮ ಕೊನೆಯ ದಿನದವರೆಗೂ ನಡೆಸಿಕೊಂಡು ಬಂದರು. ಅವರ ವಿಶೇಷಾಸಕ್ತಿಯಿಂದ ಪಠ್ಯ ಮತ್ತು ಬದುಕಿನ ಅರಿವು ಪಡೆದ ಸಾವಿರಾರು ಶಿಷ್ಯರು ಇವತ್ತು ದೇಶ-ವಿದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

ಗದಗ ಜಿಲ್ಲೆ ರೋಣ ತಾಲೂಕಿನ ಮುದೇನಗುಡಿ ಎಂಬ ಪುಟ್ಟ ಗ್ರಾಮದಲ್ಲಿ ಜನಿಸಿದ ಮಾಸ್ತರರು ಬಡತನದಲ್ಲೇ ಶಿಕ್ಷಣ ಪಡೆದು, ನಂತರ ಧಾರವಾಡದ ಮುರುಘಾಮಠದ ಹಾಸ್ಟೇಲ್ ಸೌಲಭ್ಯದ ಕಾರಣಕ್ಕಾಗಿ ಬಿ.ಎ ಪದವಿ ಮತ್ತು ಶಿಕ್ಷಕ ತರಬೇತಿ ವಿಷಯದಲ್ಲಿ ಪಾಸಾಗುತ್ತಾರೆ. ಗದಗಿನ ಮಾಡೆಲ್ ಹೈಸ್ಕೂಲ್‍ನಲ್ಲಿ ಶಿಕ್ಷಕರಾಗಿ ಸೇವೆ ಆರಂಭಿಸಿದ ಅವರು, ತಮ್ಮ ಸಂಬಳದ ಹಣ ಉಳಿಸಿ ಮುಂಜಾನೆ ಮತ್ತು ಸಂಜೆ ಬಡ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡುತ್ತ ಬಂದರು. ಸಾಯುವವರೆಗೂ ಈ ಕಾಯಕ ಮುಂದುವರೆದೇ ಇತ್ತು.

‘ಅವ್ರ ಬಗ್ಗೆ ಏನ್ ಹೇಳೋದ್ ಬಿಡಿ. ಒಂಥರಾ ನಮಗೆಲ್ಲ ಅವ್ರು ದೇವರೇ’ ಎನ್ನುತ್ತಾರೆ ಅವರ ಬಳಿ ಗಣಿತ, ಇಂಗ್ಲಿಷ್ ಪಾಠಗಳನ್ನು ಕಲಿತ ಪಾಲಿಟೆಕ್ನಿಕ್ ಉಪನ್ಯಾಸಕ ವಕ್ಕಲದ. ಮಂಡ್ಯದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ರಫೀಕ್ ಕೆರೂರ್ ಹೇಳುತ್ತಾರೆ: ‘ಅವರು ಟ್ಯೂಷನ್ ಹೇಳ್ತಿದ್ದ ವಕಾರ ಜಾಗ ನಮ್ಮ ಮನೆಗೆ ದೂರ ಇದ್ದುದರಿಂದ ನಾನು ಕೇವಲ ಒಂದು ತಿಂಗಳು ಮಾತ್ರ ಅವರ ಹತ್ತಿರ ಮ್ಯಾಥ್ಸ್ ಕಲಿಯಲು ಸಾಧ್ಯವಾಯಿತು. ಆದರೆ, ಗದಗಿನ ಎರಡು-ಮೂರು ತಲೆಮಾರುಗಳ ಶಾಲಾ ವಿದ್ಯಾರ್ಥಿಗಳಲ್ಲಿ ಗಣಿತ ಮತ್ತು ಇಂಗ್ಲಿಷ್ ಜ್ಞಾನ ನೀಡಿದ ಶ್ರೇಯಸ್ಸು ಅವರಿಗೆ ಸಲ್ಲುತ್ತದೆ….’

ಬೆಂಗಳೂರಿನ ಸಾಫ್ಟ್ ವೇರ್ ಕಂಪನಿಯ ಹಿರಿಯ ಉದ್ಯೋಗಿ ಸತೀಶ್ ಕುರಿ, ಹುಬ್ಬಳ್ಳಿಯಲ್ಲಿ ವೈದ್ಯ ವೃತ್ತಿ ಮಾಡುವ ಪರಶುರಾಮ ಕಾಂಬಳೆ…. ಹೀಗೆ ಎಲ್ಲರೂ ಅವರು ಕಲಿಸಿದ ವಿಷಯ ಮತ್ತು ಅದಕ್ಕಿಂತ ಮುಖ್ಯವಾಗಿ ಬದುಕಿನ ಪಾಠಗಳನ್ನು ನೆನೆದು ಗದ್ಗದಿತರಾಗುತ್ತಾರೆ….

ಸಾಮಾನ್ಯ ಶಿಕ್ಷಕರೊಬ್ಬರು ಸಹಜ ಪಾಠ ಮತ್ತು ಜೀವನದ ಮೌಲ್ಯಗಳನ್ನು ನಿರಂತರವಾಗಿ ಕಲಿಸುವ ಮೂಲಕ ಅಸಾಮಾನ್ಯ ಬದುಕನ್ನು ಇಲ್ಲಿ ಸವೆಸಿ ಹೋಗಿದ್ದಾರೆ. ಹಿಂದಿನ ಸಿದ್ದಲಿಂಗ ತೋಂಟದಾರ್ಯ ಸ್ವಾಮೀಜಿ ಅವರಂತೂ ಬಿ.ಜಿ. ಅಣ್ಣಿಗೇರಿಯವರನ್ನು ‘ಶಿಕ್ಷಣ ಸಂತ’ ಎಂದೇ ಕರೆಯುತ್ತಿದ್ದರು. ಮುಂದೆ ಅದೇ ಟೈಟಲ್ಲಿನಲ್ಲಿ ಅಣ್ಣಿಗೇರಿ ಅವರ ಶಿಷ್ಯವೃಂದ ಒಂದು ಅಭಿನಂದನಾ ಗ್ರಂಥವನ್ನು ಪ್ರಕಟಿಸಿತ್ತು. ಅಣ್ಣಿಗೇರಿ ಮಾಸ್ತರು ಹೆಸರಲ್ಲೇ ಅವರ ಕುರಿತಾಗಿಯೇ ಇನ್ನೂ ಮೂರು ಕೃತಿಗಳು ಬಂದಿವೆ ಎಂಬುದನ್ನು ನಾವಿಲ್ಲಿ ಗಮನಿಸಬೇಕು.

ಸಮಾಜ ಕಲಿಸುತ್ತಿದ್ದ ಅಣ್ಣಿಗೇರಿ ಮಾಸ್ತರು ಕ್ರಮೇಣ ಗಣಿತ ವಿಷಯ ಬೋಧನೆಗಾಗಿಯೇ ಗದಗಿನಲ್ಲಿ ಪ್ರಸಿದ್ಧರಾದುದದರ ಹಿಂದೆ ಒಂದು ರೋಚಕ ಅಂಶ ಇದೆ. ಅವರ ಶಿಷ್ಯನೊಬ್ಬ ಗಣಿತದಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ಆತನಿಂದ ಹಲವು ತಿಂಗಳು ಕಾಲ ಸರಳ ಗಣಿತ ಕಲಿಕೆಯ ಬಗ್ಗೆ ಪಾಠ ಕಲಿತ ಅವರು, ಕ್ರಮೇಣ ಗದಿನಲ್ಲಿ ಜನಪ್ರಿಯ ಗಣಿತ ಶಿಕ್ಷಕರೆನಿಸಿದರು.
ವಕಾರು ಸಾಲಿನಲ್ಲಿ ಅವರು ಮೂರು ದಶಕಗಳಿಂದ ನಡೆಸುತ್ತ ಬಂದಿರುವ ಶಿಕ್ಷಣ ಆಶ್ರಮಕ್ಕೆ ‘ಗದಗಿನ ಶಾಂತಿನಿಕೇತನ’ ಎಂದೂ ಅವರ ಶಿಷ್ಯರು ಕರೆಯುತ್ತಾರೆ.

ಅವರ ಆಶ್ರಮ ಶಾಲೆಯ ಗೋಡೆಗಳ ಮೇಲಿರುವ ಕೆಲವು ಸಾಲುಗಳು:
‘ಸ್ವಾರ್ಥದಿಂದ ಕೂಡಿದುದು ಅನೈತಿಕ, ಸ್ವಾರ್ಥಶೂನ್ಯವಾದುದು ನೈತಿಕ…’
‘ಪೂರ್ಣತ್ಯಾಗವೇ ಪರಮಾದರ್ಶ, ನಿಸ್ವಾರ್ಥತೆಯೇ ದೇವರು….’
‘ಶಕ್ತಿಯೇ ಜೀವನ, ದುರ್ಬಲತೆಯೇ ಮರಣ…’

ಸಾವೇ ಇಲ್ಲದ ಇಂತಹ ‘ಮಾಸ್ತರು’ಗಳಿಗೆ ನಮ್ಮ ಕಡೆಯಿಂದ ಇದೊಂದು ಶ್ರದ್ಧಾಂಜಲಿ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...