Homeಮುಖಪುಟಯುದ್ಧ ಮತ್ತು ಅಧಿಕಾರದಾಹದ ತೀವ್ರತೆ ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

ಯುದ್ಧ ಮತ್ತು ಅಧಿಕಾರದಾಹದ ತೀವ್ರತೆ ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

- Advertisement -
- Advertisement -

ನಮ್ಮ ಇತಿಹಾಸದ ಪುಟಗಳಲ್ಲಿ ನೂರಾರು ಯುದ್ದಗಳ ರಕ್ತಸಿಕ್ತ ಕಲೆ ಎದ್ದು ಕಾಣುತ್ತದೆ. ಈ ಯುದ್ಧಗಳ ಭೀಕರತೆ, ಕೋಟ್ಯಾಂತರ ಸಾವು-ನೋವುಗಳು ಅಚ್ಚಳಿಯದೆ ಉಳಿದಿವೆ. ಯುದ್ಧ ಬೇಡ ಬುದ್ಧ ಬೇಕು ಎಂದು ಸಾರಿ ಸಾರಿ ಹೇಳಿದರು ಸಹ ಜಾಗತಿಕ ಬಂಡವಾಳಶಾಹಿಗಳು, ಶಸ್ತ್ರಾಸ್ತ್ರ ಮಾರಾಟಗಾರರು, ಯಾಜಮಾನ್ಯ ಬಯಸುವ ಬಲಾಢ್ಯ ದೇಶಗಳು ಇಂದಿಗೂ ಯುದ್ದಗಳಿಗೆ ಕಾರಣರಾಗುತ್ತಿದ್ದಾರೆ ಎಂಬ ಆರೋಪವಿದೆ. ಪ್ರಸ್ತುತ ಸಮಾಜದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಹೊಡೆದಾಟ, ಬಡಿದಾಟಕ್ಕೆ ಅಚ್ಚಿ ರಾಜಕೀಯ ಅಧಿಕಾರವಿಡಿಯುವ ಹುನ್ನಾರ ನಡೆಯುತ್ತಿದೆ. ಯುದ್ಧೋನ್ಮಾದವನ್ನು ಎಲ್ಲರ ಮನದಲ್ಲಿ ಬಿತ್ತಲಾಗುತ್ತಿದೆ. ಹೀಗಾಗಿ ಯುದ್ದ ಮುಗಿದ ಮೇಲೆ ಶಾಂತಿಯ ಬಗ್ಗೆ ಮಾತನಾಡುವ ಬದಲು ಯುದ್ದದ ವಾತಾವರಣವೇ ಸೃಷ್ಟಿಯಾಗದಂತೆ ತಡೆಯುವ ಜವಾಬ್ದಾರಿ ಕಲೆಯದು ಕೂಡ ಹಾಗಿದೆ. ಯುದ್ದದ ಕ್ರೌರ್ಯತೆ ಯಾವ ರೀತಿ ಸಹೋದರತ್ವನ್ನು ನಾಶ ಮಾಡುತ್ತದೆ, ಅಣ್ಣ ತಮ್ಮಂದಿರೆ ಕಾದಾಡುವಂತೆ ಮಾಡುತ್ತದೆ ಎಂಬುದನ್ನು ವಿವರವಾಗಿ ಬಿಚ್ಚಿಡುವ ನಾಟಕವೇ ’ಬಾಹುಬಲಿ ವಿಜಯಂ’.  

ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಲ್ಲಿ ಹಮ್ಮಿಕೊಂಡಿದ್ದ ’ರಂಗಸಂಗಮ ಮತ್ತು ಗುರುವಂದನೆ’  ಎಲ್ಲಾ ಹಿಂದಿನ ಮತ್ತು ಇಂದಿನ ವಿದ್ಯಾರ್ಥಿಗಳ ಸಮಾಗಮದಲ್ಲಿ ಬಾಹುಬಲಿ ವಿಜಯಂ ನಾಟಕವನ್ನು ಧಾತ್ರಿ ಸಂಸ್ಥೆಯಿಂದ ಪ್ರದರ್ಶಿಸಲಾಯಿತು. ಭರತ ಮತ್ತು ಬಾಹುಬಲಿಯ ಕಥೆ ಮೊದಲಿನಿಂದಲೂ ಸಹ ಜನಜನಿತವಾಗಿರುವ ಕಥೆ. ಅಧಿಕಾರದ ಅಮಲು ಪ್ರೀತಿಯನ್ನು ಅಳಿಸಿ ಬರೀ ದ್ವೇಷವನ್ನು ಮಾತ್ರ ಉಳಿಸುತ್ತದೆ ಎಂಬುದನ್ನು ಬಾಹುಬಲಿಯು ಗೆದ್ದನಂತರ ತಾಳುವ ವೈರಾಗ್ಯ ಜಗಜ್ಜಾಹಿರು ಮಾಡುತ್ತದೆ. ಇಂದು ತಮ್ಮ ರಾಜಕೀಯ ಲಾಭಕ್ಕಾಗಿ ರಾಜಕಾರಣಿಗಳು ಮಾತ್ರ ಅಲ್ಲದೇ , ಮಾಧ್ಯಮಗಳು ಸಹ ಇನ್ನೊಂದು ದೇಶದ ಮೇಲಿನ ದ್ವೇಷವೇ ಪ್ರಧಾನವಾಗಿ ಕೊಚ್ಚಿ ಕೊಲ್ಲಿ ಎನ್ನುವ ಭಾಷೆ ಬಳಸುತ್ತಾ ಮಾಧ್ಯಮಗಳ ನಿರ್ವಹಿಸಬೇಕಾದ ಮೌಲ್ಯವನ್ನು ಮರೆತಿರುವುದು ದುರಂತ.

ಬಾಹುಬಲಿ ವಿಜಯಂ ಪಂಪನ ಆದಿಪುರಾಣ ಮಹಾಕಾವ್ಯದ ಆಯ್ದ ಭಾಗವಾದ ಭರತ ಮತ್ತು ಬಾಹುಬಲಿಯ ದಾಯಾದಿ ಕಲಹವಾಗಿದ್ದು, ಜೊತೆಗೆ ಜಿ.ಪಿ.ರಾಜರತ್ನಂ ರವರ ಬಾಹುಬಲಿ ವಿಜಯ ನಾಟಕದ ಕೆಲವು  ಆಯಾಮಗಳನ್ನು  ಬಳಸಿ ಶ್ರೀರಂಗ ಪಾರ್ವತೀಕರವರು ರಂಗ ಪಠ್ಯವಾಗಿಸಿದ್ದಾರೆ. ಯುವ ರಂಗಕರ್ಮಿ ಭೀಮೇಶ್.ಹೆಚ್.ಎನ್ ರವರು ಈ ನಾಟಕವನ್ನು ಪ್ರೇಕ್ಷಕರಿಗೆ ಆಪ್ತವಾಗುವಂತೆ ನಿರ್ದೇಶನ ಮಾಡಿದ್ದಾರೆ.  ಇದು ಹತ್ತನೇ ಶತಮಾನದ ಕಥೆಯಾದರೂ ಪ್ರಸ್ತುತ ರಾಜಕೀಯ, ಮನುಷ್ಯನ ದುರಾಸೆಯನ್ನು ಎತ್ತಿ ತೋರಿಸುತ್ತದೆ. 

ಈ ನಾಟಕವನ್ನು ಧಾತ್ರಿ ಸಂಸ್ಥೆಯ ಕಲಾವಿದರು ಅಭಿನಯಿಸಿದ್ದು, ಅರುಣ್‌ ಕುಮಾರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಿವರಾಜ್ ಬಳ್ಳಾರಿ, ಭರತ್ ಡಿಂಗ್ರಿ ಸಂಗೀತ ನಿರ್ವಹಣೆ ಮಾಡಿದ್ದು, ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನ ಸಿರಿಗೆರೆಯೆಂಬ ಗ್ರಾಮದಲ್ಲಿ ಯುವ ಗೆಳೆಯರು ಕಟ್ಟಿರುವ ಈ ಸಂಸ್ಥೆ ಹಲವು ವರ್ಷಗಳಿಂದ ರಾಜ್ಯದ್ಯಾಂತ ರಂಗಸಂಚಾರ  ಮಾಡುತ್ತಿದ್ದಾರೆ. ಯುವರಂಗಕರ್ಮಿಗಳೇ ಸೇರಿ ಹೊಸ ಹೊಸ ನಾಟಕಗಳನ್ನು ಕಟ್ಟಿ  ಬಾಹುಬಲಿ ವಿಜಯಂ ಜೊತೆಗೆ ’ಮುದ್ದಣ್ಣನ ಪ್ರಮೋಷನ್ ಪ್ರಸಂ” ಎಂಬ ನಾಟಕದ ಪ್ರದರ್ಶನವನ್ನು ನೀಡುತ್ತಾ ಬರುತ್ತಿದ್ದಾರೆ. ಇದರ ತಿರುಗಾಟ ಆರಂಭವಾಗಿದ್ದು ಈ ನಾಟಕ ಪ್ರದರ್ಶನಗಳನ್ನು ಆಯೋಜಿಸುವವರು 9902617950, 7899018729 ಈ ನಂಬರ್‌ಗಳನ್ನು ಸಂಪರ್ಕಿಸಬಹುದಾಗಿದೆ. 


ಇದನ್ನೂ ಓದಿ: ವೈರಮುತ್ತು ಅವರ ’ಕಳ್ಳಿಗಾಡಿನ ಇತಿಹಾಸ’ ಇದು ರಾಮಾಯಣವಲ್ಲ ಗ್ರಾಮಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...