Homeಮುಖಪುಟಯುದ್ಧ ಮತ್ತು ಅಧಿಕಾರದಾಹದ ತೀವ್ರತೆ ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

ಯುದ್ಧ ಮತ್ತು ಅಧಿಕಾರದಾಹದ ತೀವ್ರತೆ ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

- Advertisement -
- Advertisement -

ನಮ್ಮ ಇತಿಹಾಸದ ಪುಟಗಳಲ್ಲಿ ನೂರಾರು ಯುದ್ದಗಳ ರಕ್ತಸಿಕ್ತ ಕಲೆ ಎದ್ದು ಕಾಣುತ್ತದೆ. ಈ ಯುದ್ಧಗಳ ಭೀಕರತೆ, ಕೋಟ್ಯಾಂತರ ಸಾವು-ನೋವುಗಳು ಅಚ್ಚಳಿಯದೆ ಉಳಿದಿವೆ. ಯುದ್ಧ ಬೇಡ ಬುದ್ಧ ಬೇಕು ಎಂದು ಸಾರಿ ಸಾರಿ ಹೇಳಿದರು ಸಹ ಜಾಗತಿಕ ಬಂಡವಾಳಶಾಹಿಗಳು, ಶಸ್ತ್ರಾಸ್ತ್ರ ಮಾರಾಟಗಾರರು, ಯಾಜಮಾನ್ಯ ಬಯಸುವ ಬಲಾಢ್ಯ ದೇಶಗಳು ಇಂದಿಗೂ ಯುದ್ದಗಳಿಗೆ ಕಾರಣರಾಗುತ್ತಿದ್ದಾರೆ ಎಂಬ ಆರೋಪವಿದೆ. ಪ್ರಸ್ತುತ ಸಮಾಜದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಹೊಡೆದಾಟ, ಬಡಿದಾಟಕ್ಕೆ ಅಚ್ಚಿ ರಾಜಕೀಯ ಅಧಿಕಾರವಿಡಿಯುವ ಹುನ್ನಾರ ನಡೆಯುತ್ತಿದೆ. ಯುದ್ಧೋನ್ಮಾದವನ್ನು ಎಲ್ಲರ ಮನದಲ್ಲಿ ಬಿತ್ತಲಾಗುತ್ತಿದೆ. ಹೀಗಾಗಿ ಯುದ್ದ ಮುಗಿದ ಮೇಲೆ ಶಾಂತಿಯ ಬಗ್ಗೆ ಮಾತನಾಡುವ ಬದಲು ಯುದ್ದದ ವಾತಾವರಣವೇ ಸೃಷ್ಟಿಯಾಗದಂತೆ ತಡೆಯುವ ಜವಾಬ್ದಾರಿ ಕಲೆಯದು ಕೂಡ ಹಾಗಿದೆ. ಯುದ್ದದ ಕ್ರೌರ್ಯತೆ ಯಾವ ರೀತಿ ಸಹೋದರತ್ವನ್ನು ನಾಶ ಮಾಡುತ್ತದೆ, ಅಣ್ಣ ತಮ್ಮಂದಿರೆ ಕಾದಾಡುವಂತೆ ಮಾಡುತ್ತದೆ ಎಂಬುದನ್ನು ವಿವರವಾಗಿ ಬಿಚ್ಚಿಡುವ ನಾಟಕವೇ ’ಬಾಹುಬಲಿ ವಿಜಯಂ’.  

ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಲ್ಲಿ ಹಮ್ಮಿಕೊಂಡಿದ್ದ ’ರಂಗಸಂಗಮ ಮತ್ತು ಗುರುವಂದನೆ’  ಎಲ್ಲಾ ಹಿಂದಿನ ಮತ್ತು ಇಂದಿನ ವಿದ್ಯಾರ್ಥಿಗಳ ಸಮಾಗಮದಲ್ಲಿ ಬಾಹುಬಲಿ ವಿಜಯಂ ನಾಟಕವನ್ನು ಧಾತ್ರಿ ಸಂಸ್ಥೆಯಿಂದ ಪ್ರದರ್ಶಿಸಲಾಯಿತು. ಭರತ ಮತ್ತು ಬಾಹುಬಲಿಯ ಕಥೆ ಮೊದಲಿನಿಂದಲೂ ಸಹ ಜನಜನಿತವಾಗಿರುವ ಕಥೆ. ಅಧಿಕಾರದ ಅಮಲು ಪ್ರೀತಿಯನ್ನು ಅಳಿಸಿ ಬರೀ ದ್ವೇಷವನ್ನು ಮಾತ್ರ ಉಳಿಸುತ್ತದೆ ಎಂಬುದನ್ನು ಬಾಹುಬಲಿಯು ಗೆದ್ದನಂತರ ತಾಳುವ ವೈರಾಗ್ಯ ಜಗಜ್ಜಾಹಿರು ಮಾಡುತ್ತದೆ. ಇಂದು ತಮ್ಮ ರಾಜಕೀಯ ಲಾಭಕ್ಕಾಗಿ ರಾಜಕಾರಣಿಗಳು ಮಾತ್ರ ಅಲ್ಲದೇ , ಮಾಧ್ಯಮಗಳು ಸಹ ಇನ್ನೊಂದು ದೇಶದ ಮೇಲಿನ ದ್ವೇಷವೇ ಪ್ರಧಾನವಾಗಿ ಕೊಚ್ಚಿ ಕೊಲ್ಲಿ ಎನ್ನುವ ಭಾಷೆ ಬಳಸುತ್ತಾ ಮಾಧ್ಯಮಗಳ ನಿರ್ವಹಿಸಬೇಕಾದ ಮೌಲ್ಯವನ್ನು ಮರೆತಿರುವುದು ದುರಂತ.

ಬಾಹುಬಲಿ ವಿಜಯಂ ಪಂಪನ ಆದಿಪುರಾಣ ಮಹಾಕಾವ್ಯದ ಆಯ್ದ ಭಾಗವಾದ ಭರತ ಮತ್ತು ಬಾಹುಬಲಿಯ ದಾಯಾದಿ ಕಲಹವಾಗಿದ್ದು, ಜೊತೆಗೆ ಜಿ.ಪಿ.ರಾಜರತ್ನಂ ರವರ ಬಾಹುಬಲಿ ವಿಜಯ ನಾಟಕದ ಕೆಲವು  ಆಯಾಮಗಳನ್ನು  ಬಳಸಿ ಶ್ರೀರಂಗ ಪಾರ್ವತೀಕರವರು ರಂಗ ಪಠ್ಯವಾಗಿಸಿದ್ದಾರೆ. ಯುವ ರಂಗಕರ್ಮಿ ಭೀಮೇಶ್.ಹೆಚ್.ಎನ್ ರವರು ಈ ನಾಟಕವನ್ನು ಪ್ರೇಕ್ಷಕರಿಗೆ ಆಪ್ತವಾಗುವಂತೆ ನಿರ್ದೇಶನ ಮಾಡಿದ್ದಾರೆ.  ಇದು ಹತ್ತನೇ ಶತಮಾನದ ಕಥೆಯಾದರೂ ಪ್ರಸ್ತುತ ರಾಜಕೀಯ, ಮನುಷ್ಯನ ದುರಾಸೆಯನ್ನು ಎತ್ತಿ ತೋರಿಸುತ್ತದೆ. 

ಈ ನಾಟಕವನ್ನು ಧಾತ್ರಿ ಸಂಸ್ಥೆಯ ಕಲಾವಿದರು ಅಭಿನಯಿಸಿದ್ದು, ಅರುಣ್‌ ಕುಮಾರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಿವರಾಜ್ ಬಳ್ಳಾರಿ, ಭರತ್ ಡಿಂಗ್ರಿ ಸಂಗೀತ ನಿರ್ವಹಣೆ ಮಾಡಿದ್ದು, ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನ ಸಿರಿಗೆರೆಯೆಂಬ ಗ್ರಾಮದಲ್ಲಿ ಯುವ ಗೆಳೆಯರು ಕಟ್ಟಿರುವ ಈ ಸಂಸ್ಥೆ ಹಲವು ವರ್ಷಗಳಿಂದ ರಾಜ್ಯದ್ಯಾಂತ ರಂಗಸಂಚಾರ  ಮಾಡುತ್ತಿದ್ದಾರೆ. ಯುವರಂಗಕರ್ಮಿಗಳೇ ಸೇರಿ ಹೊಸ ಹೊಸ ನಾಟಕಗಳನ್ನು ಕಟ್ಟಿ  ಬಾಹುಬಲಿ ವಿಜಯಂ ಜೊತೆಗೆ ’ಮುದ್ದಣ್ಣನ ಪ್ರಮೋಷನ್ ಪ್ರಸಂ” ಎಂಬ ನಾಟಕದ ಪ್ರದರ್ಶನವನ್ನು ನೀಡುತ್ತಾ ಬರುತ್ತಿದ್ದಾರೆ. ಇದರ ತಿರುಗಾಟ ಆರಂಭವಾಗಿದ್ದು ಈ ನಾಟಕ ಪ್ರದರ್ಶನಗಳನ್ನು ಆಯೋಜಿಸುವವರು 9902617950, 7899018729 ಈ ನಂಬರ್‌ಗಳನ್ನು ಸಂಪರ್ಕಿಸಬಹುದಾಗಿದೆ. 


ಇದನ್ನೂ ಓದಿ: ವೈರಮುತ್ತು ಅವರ ’ಕಳ್ಳಿಗಾಡಿನ ಇತಿಹಾಸ’ ಇದು ರಾಮಾಯಣವಲ್ಲ ಗ್ರಾಮಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...