Homeಮುಖಪುಟಯುದ್ಧ ಮತ್ತು ಅಧಿಕಾರದಾಹದ ತೀವ್ರತೆ ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

ಯುದ್ಧ ಮತ್ತು ಅಧಿಕಾರದಾಹದ ತೀವ್ರತೆ ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

- Advertisement -
- Advertisement -

ನಮ್ಮ ಇತಿಹಾಸದ ಪುಟಗಳಲ್ಲಿ ನೂರಾರು ಯುದ್ದಗಳ ರಕ್ತಸಿಕ್ತ ಕಲೆ ಎದ್ದು ಕಾಣುತ್ತದೆ. ಈ ಯುದ್ಧಗಳ ಭೀಕರತೆ, ಕೋಟ್ಯಾಂತರ ಸಾವು-ನೋವುಗಳು ಅಚ್ಚಳಿಯದೆ ಉಳಿದಿವೆ. ಯುದ್ಧ ಬೇಡ ಬುದ್ಧ ಬೇಕು ಎಂದು ಸಾರಿ ಸಾರಿ ಹೇಳಿದರು ಸಹ ಜಾಗತಿಕ ಬಂಡವಾಳಶಾಹಿಗಳು, ಶಸ್ತ್ರಾಸ್ತ್ರ ಮಾರಾಟಗಾರರು, ಯಾಜಮಾನ್ಯ ಬಯಸುವ ಬಲಾಢ್ಯ ದೇಶಗಳು ಇಂದಿಗೂ ಯುದ್ದಗಳಿಗೆ ಕಾರಣರಾಗುತ್ತಿದ್ದಾರೆ ಎಂಬ ಆರೋಪವಿದೆ. ಪ್ರಸ್ತುತ ಸಮಾಜದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಹೊಡೆದಾಟ, ಬಡಿದಾಟಕ್ಕೆ ಅಚ್ಚಿ ರಾಜಕೀಯ ಅಧಿಕಾರವಿಡಿಯುವ ಹುನ್ನಾರ ನಡೆಯುತ್ತಿದೆ. ಯುದ್ಧೋನ್ಮಾದವನ್ನು ಎಲ್ಲರ ಮನದಲ್ಲಿ ಬಿತ್ತಲಾಗುತ್ತಿದೆ. ಹೀಗಾಗಿ ಯುದ್ದ ಮುಗಿದ ಮೇಲೆ ಶಾಂತಿಯ ಬಗ್ಗೆ ಮಾತನಾಡುವ ಬದಲು ಯುದ್ದದ ವಾತಾವರಣವೇ ಸೃಷ್ಟಿಯಾಗದಂತೆ ತಡೆಯುವ ಜವಾಬ್ದಾರಿ ಕಲೆಯದು ಕೂಡ ಹಾಗಿದೆ. ಯುದ್ದದ ಕ್ರೌರ್ಯತೆ ಯಾವ ರೀತಿ ಸಹೋದರತ್ವನ್ನು ನಾಶ ಮಾಡುತ್ತದೆ, ಅಣ್ಣ ತಮ್ಮಂದಿರೆ ಕಾದಾಡುವಂತೆ ಮಾಡುತ್ತದೆ ಎಂಬುದನ್ನು ವಿವರವಾಗಿ ಬಿಚ್ಚಿಡುವ ನಾಟಕವೇ ’ಬಾಹುಬಲಿ ವಿಜಯಂ’.  

ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಲ್ಲಿ ಹಮ್ಮಿಕೊಂಡಿದ್ದ ’ರಂಗಸಂಗಮ ಮತ್ತು ಗುರುವಂದನೆ’  ಎಲ್ಲಾ ಹಿಂದಿನ ಮತ್ತು ಇಂದಿನ ವಿದ್ಯಾರ್ಥಿಗಳ ಸಮಾಗಮದಲ್ಲಿ ಬಾಹುಬಲಿ ವಿಜಯಂ ನಾಟಕವನ್ನು ಧಾತ್ರಿ ಸಂಸ್ಥೆಯಿಂದ ಪ್ರದರ್ಶಿಸಲಾಯಿತು. ಭರತ ಮತ್ತು ಬಾಹುಬಲಿಯ ಕಥೆ ಮೊದಲಿನಿಂದಲೂ ಸಹ ಜನಜನಿತವಾಗಿರುವ ಕಥೆ. ಅಧಿಕಾರದ ಅಮಲು ಪ್ರೀತಿಯನ್ನು ಅಳಿಸಿ ಬರೀ ದ್ವೇಷವನ್ನು ಮಾತ್ರ ಉಳಿಸುತ್ತದೆ ಎಂಬುದನ್ನು ಬಾಹುಬಲಿಯು ಗೆದ್ದನಂತರ ತಾಳುವ ವೈರಾಗ್ಯ ಜಗಜ್ಜಾಹಿರು ಮಾಡುತ್ತದೆ. ಇಂದು ತಮ್ಮ ರಾಜಕೀಯ ಲಾಭಕ್ಕಾಗಿ ರಾಜಕಾರಣಿಗಳು ಮಾತ್ರ ಅಲ್ಲದೇ , ಮಾಧ್ಯಮಗಳು ಸಹ ಇನ್ನೊಂದು ದೇಶದ ಮೇಲಿನ ದ್ವೇಷವೇ ಪ್ರಧಾನವಾಗಿ ಕೊಚ್ಚಿ ಕೊಲ್ಲಿ ಎನ್ನುವ ಭಾಷೆ ಬಳಸುತ್ತಾ ಮಾಧ್ಯಮಗಳ ನಿರ್ವಹಿಸಬೇಕಾದ ಮೌಲ್ಯವನ್ನು ಮರೆತಿರುವುದು ದುರಂತ.

ಬಾಹುಬಲಿ ವಿಜಯಂ ಪಂಪನ ಆದಿಪುರಾಣ ಮಹಾಕಾವ್ಯದ ಆಯ್ದ ಭಾಗವಾದ ಭರತ ಮತ್ತು ಬಾಹುಬಲಿಯ ದಾಯಾದಿ ಕಲಹವಾಗಿದ್ದು, ಜೊತೆಗೆ ಜಿ.ಪಿ.ರಾಜರತ್ನಂ ರವರ ಬಾಹುಬಲಿ ವಿಜಯ ನಾಟಕದ ಕೆಲವು  ಆಯಾಮಗಳನ್ನು  ಬಳಸಿ ಶ್ರೀರಂಗ ಪಾರ್ವತೀಕರವರು ರಂಗ ಪಠ್ಯವಾಗಿಸಿದ್ದಾರೆ. ಯುವ ರಂಗಕರ್ಮಿ ಭೀಮೇಶ್.ಹೆಚ್.ಎನ್ ರವರು ಈ ನಾಟಕವನ್ನು ಪ್ರೇಕ್ಷಕರಿಗೆ ಆಪ್ತವಾಗುವಂತೆ ನಿರ್ದೇಶನ ಮಾಡಿದ್ದಾರೆ.  ಇದು ಹತ್ತನೇ ಶತಮಾನದ ಕಥೆಯಾದರೂ ಪ್ರಸ್ತುತ ರಾಜಕೀಯ, ಮನುಷ್ಯನ ದುರಾಸೆಯನ್ನು ಎತ್ತಿ ತೋರಿಸುತ್ತದೆ. 

ಈ ನಾಟಕವನ್ನು ಧಾತ್ರಿ ಸಂಸ್ಥೆಯ ಕಲಾವಿದರು ಅಭಿನಯಿಸಿದ್ದು, ಅರುಣ್‌ ಕುಮಾರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಿವರಾಜ್ ಬಳ್ಳಾರಿ, ಭರತ್ ಡಿಂಗ್ರಿ ಸಂಗೀತ ನಿರ್ವಹಣೆ ಮಾಡಿದ್ದು, ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನ ಸಿರಿಗೆರೆಯೆಂಬ ಗ್ರಾಮದಲ್ಲಿ ಯುವ ಗೆಳೆಯರು ಕಟ್ಟಿರುವ ಈ ಸಂಸ್ಥೆ ಹಲವು ವರ್ಷಗಳಿಂದ ರಾಜ್ಯದ್ಯಾಂತ ರಂಗಸಂಚಾರ  ಮಾಡುತ್ತಿದ್ದಾರೆ. ಯುವರಂಗಕರ್ಮಿಗಳೇ ಸೇರಿ ಹೊಸ ಹೊಸ ನಾಟಕಗಳನ್ನು ಕಟ್ಟಿ  ಬಾಹುಬಲಿ ವಿಜಯಂ ಜೊತೆಗೆ ’ಮುದ್ದಣ್ಣನ ಪ್ರಮೋಷನ್ ಪ್ರಸಂ” ಎಂಬ ನಾಟಕದ ಪ್ರದರ್ಶನವನ್ನು ನೀಡುತ್ತಾ ಬರುತ್ತಿದ್ದಾರೆ. ಇದರ ತಿರುಗಾಟ ಆರಂಭವಾಗಿದ್ದು ಈ ನಾಟಕ ಪ್ರದರ್ಶನಗಳನ್ನು ಆಯೋಜಿಸುವವರು 9902617950, 7899018729 ಈ ನಂಬರ್‌ಗಳನ್ನು ಸಂಪರ್ಕಿಸಬಹುದಾಗಿದೆ. 


ಇದನ್ನೂ ಓದಿ: ವೈರಮುತ್ತು ಅವರ ’ಕಳ್ಳಿಗಾಡಿನ ಇತಿಹಾಸ’ ಇದು ರಾಮಾಯಣವಲ್ಲ ಗ್ರಾಮಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....