Homeಮುಖಪುಟಯುದ್ಧ ಮತ್ತು ಅಧಿಕಾರದಾಹದ ತೀವ್ರತೆ ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

ಯುದ್ಧ ಮತ್ತು ಅಧಿಕಾರದಾಹದ ತೀವ್ರತೆ ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

- Advertisement -
- Advertisement -

ನಮ್ಮ ಇತಿಹಾಸದ ಪುಟಗಳಲ್ಲಿ ನೂರಾರು ಯುದ್ದಗಳ ರಕ್ತಸಿಕ್ತ ಕಲೆ ಎದ್ದು ಕಾಣುತ್ತದೆ. ಈ ಯುದ್ಧಗಳ ಭೀಕರತೆ, ಕೋಟ್ಯಾಂತರ ಸಾವು-ನೋವುಗಳು ಅಚ್ಚಳಿಯದೆ ಉಳಿದಿವೆ. ಯುದ್ಧ ಬೇಡ ಬುದ್ಧ ಬೇಕು ಎಂದು ಸಾರಿ ಸಾರಿ ಹೇಳಿದರು ಸಹ ಜಾಗತಿಕ ಬಂಡವಾಳಶಾಹಿಗಳು, ಶಸ್ತ್ರಾಸ್ತ್ರ ಮಾರಾಟಗಾರರು, ಯಾಜಮಾನ್ಯ ಬಯಸುವ ಬಲಾಢ್ಯ ದೇಶಗಳು ಇಂದಿಗೂ ಯುದ್ದಗಳಿಗೆ ಕಾರಣರಾಗುತ್ತಿದ್ದಾರೆ ಎಂಬ ಆರೋಪವಿದೆ. ಪ್ರಸ್ತುತ ಸಮಾಜದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಹೊಡೆದಾಟ, ಬಡಿದಾಟಕ್ಕೆ ಅಚ್ಚಿ ರಾಜಕೀಯ ಅಧಿಕಾರವಿಡಿಯುವ ಹುನ್ನಾರ ನಡೆಯುತ್ತಿದೆ. ಯುದ್ಧೋನ್ಮಾದವನ್ನು ಎಲ್ಲರ ಮನದಲ್ಲಿ ಬಿತ್ತಲಾಗುತ್ತಿದೆ. ಹೀಗಾಗಿ ಯುದ್ದ ಮುಗಿದ ಮೇಲೆ ಶಾಂತಿಯ ಬಗ್ಗೆ ಮಾತನಾಡುವ ಬದಲು ಯುದ್ದದ ವಾತಾವರಣವೇ ಸೃಷ್ಟಿಯಾಗದಂತೆ ತಡೆಯುವ ಜವಾಬ್ದಾರಿ ಕಲೆಯದು ಕೂಡ ಹಾಗಿದೆ. ಯುದ್ದದ ಕ್ರೌರ್ಯತೆ ಯಾವ ರೀತಿ ಸಹೋದರತ್ವನ್ನು ನಾಶ ಮಾಡುತ್ತದೆ, ಅಣ್ಣ ತಮ್ಮಂದಿರೆ ಕಾದಾಡುವಂತೆ ಮಾಡುತ್ತದೆ ಎಂಬುದನ್ನು ವಿವರವಾಗಿ ಬಿಚ್ಚಿಡುವ ನಾಟಕವೇ ’ಬಾಹುಬಲಿ ವಿಜಯಂ’.  

ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಲ್ಲಿ ಹಮ್ಮಿಕೊಂಡಿದ್ದ ’ರಂಗಸಂಗಮ ಮತ್ತು ಗುರುವಂದನೆ’  ಎಲ್ಲಾ ಹಿಂದಿನ ಮತ್ತು ಇಂದಿನ ವಿದ್ಯಾರ್ಥಿಗಳ ಸಮಾಗಮದಲ್ಲಿ ಬಾಹುಬಲಿ ವಿಜಯಂ ನಾಟಕವನ್ನು ಧಾತ್ರಿ ಸಂಸ್ಥೆಯಿಂದ ಪ್ರದರ್ಶಿಸಲಾಯಿತು. ಭರತ ಮತ್ತು ಬಾಹುಬಲಿಯ ಕಥೆ ಮೊದಲಿನಿಂದಲೂ ಸಹ ಜನಜನಿತವಾಗಿರುವ ಕಥೆ. ಅಧಿಕಾರದ ಅಮಲು ಪ್ರೀತಿಯನ್ನು ಅಳಿಸಿ ಬರೀ ದ್ವೇಷವನ್ನು ಮಾತ್ರ ಉಳಿಸುತ್ತದೆ ಎಂಬುದನ್ನು ಬಾಹುಬಲಿಯು ಗೆದ್ದನಂತರ ತಾಳುವ ವೈರಾಗ್ಯ ಜಗಜ್ಜಾಹಿರು ಮಾಡುತ್ತದೆ. ಇಂದು ತಮ್ಮ ರಾಜಕೀಯ ಲಾಭಕ್ಕಾಗಿ ರಾಜಕಾರಣಿಗಳು ಮಾತ್ರ ಅಲ್ಲದೇ , ಮಾಧ್ಯಮಗಳು ಸಹ ಇನ್ನೊಂದು ದೇಶದ ಮೇಲಿನ ದ್ವೇಷವೇ ಪ್ರಧಾನವಾಗಿ ಕೊಚ್ಚಿ ಕೊಲ್ಲಿ ಎನ್ನುವ ಭಾಷೆ ಬಳಸುತ್ತಾ ಮಾಧ್ಯಮಗಳ ನಿರ್ವಹಿಸಬೇಕಾದ ಮೌಲ್ಯವನ್ನು ಮರೆತಿರುವುದು ದುರಂತ.

ಬಾಹುಬಲಿ ವಿಜಯಂ ಪಂಪನ ಆದಿಪುರಾಣ ಮಹಾಕಾವ್ಯದ ಆಯ್ದ ಭಾಗವಾದ ಭರತ ಮತ್ತು ಬಾಹುಬಲಿಯ ದಾಯಾದಿ ಕಲಹವಾಗಿದ್ದು, ಜೊತೆಗೆ ಜಿ.ಪಿ.ರಾಜರತ್ನಂ ರವರ ಬಾಹುಬಲಿ ವಿಜಯ ನಾಟಕದ ಕೆಲವು  ಆಯಾಮಗಳನ್ನು  ಬಳಸಿ ಶ್ರೀರಂಗ ಪಾರ್ವತೀಕರವರು ರಂಗ ಪಠ್ಯವಾಗಿಸಿದ್ದಾರೆ. ಯುವ ರಂಗಕರ್ಮಿ ಭೀಮೇಶ್.ಹೆಚ್.ಎನ್ ರವರು ಈ ನಾಟಕವನ್ನು ಪ್ರೇಕ್ಷಕರಿಗೆ ಆಪ್ತವಾಗುವಂತೆ ನಿರ್ದೇಶನ ಮಾಡಿದ್ದಾರೆ.  ಇದು ಹತ್ತನೇ ಶತಮಾನದ ಕಥೆಯಾದರೂ ಪ್ರಸ್ತುತ ರಾಜಕೀಯ, ಮನುಷ್ಯನ ದುರಾಸೆಯನ್ನು ಎತ್ತಿ ತೋರಿಸುತ್ತದೆ. 

ಈ ನಾಟಕವನ್ನು ಧಾತ್ರಿ ಸಂಸ್ಥೆಯ ಕಲಾವಿದರು ಅಭಿನಯಿಸಿದ್ದು, ಅರುಣ್‌ ಕುಮಾರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಿವರಾಜ್ ಬಳ್ಳಾರಿ, ಭರತ್ ಡಿಂಗ್ರಿ ಸಂಗೀತ ನಿರ್ವಹಣೆ ಮಾಡಿದ್ದು, ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನ ಸಿರಿಗೆರೆಯೆಂಬ ಗ್ರಾಮದಲ್ಲಿ ಯುವ ಗೆಳೆಯರು ಕಟ್ಟಿರುವ ಈ ಸಂಸ್ಥೆ ಹಲವು ವರ್ಷಗಳಿಂದ ರಾಜ್ಯದ್ಯಾಂತ ರಂಗಸಂಚಾರ  ಮಾಡುತ್ತಿದ್ದಾರೆ. ಯುವರಂಗಕರ್ಮಿಗಳೇ ಸೇರಿ ಹೊಸ ಹೊಸ ನಾಟಕಗಳನ್ನು ಕಟ್ಟಿ  ಬಾಹುಬಲಿ ವಿಜಯಂ ಜೊತೆಗೆ ’ಮುದ್ದಣ್ಣನ ಪ್ರಮೋಷನ್ ಪ್ರಸಂ” ಎಂಬ ನಾಟಕದ ಪ್ರದರ್ಶನವನ್ನು ನೀಡುತ್ತಾ ಬರುತ್ತಿದ್ದಾರೆ. ಇದರ ತಿರುಗಾಟ ಆರಂಭವಾಗಿದ್ದು ಈ ನಾಟಕ ಪ್ರದರ್ಶನಗಳನ್ನು ಆಯೋಜಿಸುವವರು 9902617950, 7899018729 ಈ ನಂಬರ್‌ಗಳನ್ನು ಸಂಪರ್ಕಿಸಬಹುದಾಗಿದೆ. 


ಇದನ್ನೂ ಓದಿ: ವೈರಮುತ್ತು ಅವರ ’ಕಳ್ಳಿಗಾಡಿನ ಇತಿಹಾಸ’ ಇದು ರಾಮಾಯಣವಲ್ಲ ಗ್ರಾಮಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...