Homeಮುಖಪುಟಯುದ್ಧ ಮತ್ತು ಅಧಿಕಾರದಾಹದ ತೀವ್ರತೆ ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

ಯುದ್ಧ ಮತ್ತು ಅಧಿಕಾರದಾಹದ ತೀವ್ರತೆ ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

- Advertisement -
- Advertisement -

ನಮ್ಮ ಇತಿಹಾಸದ ಪುಟಗಳಲ್ಲಿ ನೂರಾರು ಯುದ್ದಗಳ ರಕ್ತಸಿಕ್ತ ಕಲೆ ಎದ್ದು ಕಾಣುತ್ತದೆ. ಈ ಯುದ್ಧಗಳ ಭೀಕರತೆ, ಕೋಟ್ಯಾಂತರ ಸಾವು-ನೋವುಗಳು ಅಚ್ಚಳಿಯದೆ ಉಳಿದಿವೆ. ಯುದ್ಧ ಬೇಡ ಬುದ್ಧ ಬೇಕು ಎಂದು ಸಾರಿ ಸಾರಿ ಹೇಳಿದರು ಸಹ ಜಾಗತಿಕ ಬಂಡವಾಳಶಾಹಿಗಳು, ಶಸ್ತ್ರಾಸ್ತ್ರ ಮಾರಾಟಗಾರರು, ಯಾಜಮಾನ್ಯ ಬಯಸುವ ಬಲಾಢ್ಯ ದೇಶಗಳು ಇಂದಿಗೂ ಯುದ್ದಗಳಿಗೆ ಕಾರಣರಾಗುತ್ತಿದ್ದಾರೆ ಎಂಬ ಆರೋಪವಿದೆ. ಪ್ರಸ್ತುತ ಸಮಾಜದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಹೊಡೆದಾಟ, ಬಡಿದಾಟಕ್ಕೆ ಅಚ್ಚಿ ರಾಜಕೀಯ ಅಧಿಕಾರವಿಡಿಯುವ ಹುನ್ನಾರ ನಡೆಯುತ್ತಿದೆ. ಯುದ್ಧೋನ್ಮಾದವನ್ನು ಎಲ್ಲರ ಮನದಲ್ಲಿ ಬಿತ್ತಲಾಗುತ್ತಿದೆ. ಹೀಗಾಗಿ ಯುದ್ದ ಮುಗಿದ ಮೇಲೆ ಶಾಂತಿಯ ಬಗ್ಗೆ ಮಾತನಾಡುವ ಬದಲು ಯುದ್ದದ ವಾತಾವರಣವೇ ಸೃಷ್ಟಿಯಾಗದಂತೆ ತಡೆಯುವ ಜವಾಬ್ದಾರಿ ಕಲೆಯದು ಕೂಡ ಹಾಗಿದೆ. ಯುದ್ದದ ಕ್ರೌರ್ಯತೆ ಯಾವ ರೀತಿ ಸಹೋದರತ್ವನ್ನು ನಾಶ ಮಾಡುತ್ತದೆ, ಅಣ್ಣ ತಮ್ಮಂದಿರೆ ಕಾದಾಡುವಂತೆ ಮಾಡುತ್ತದೆ ಎಂಬುದನ್ನು ವಿವರವಾಗಿ ಬಿಚ್ಚಿಡುವ ನಾಟಕವೇ ’ಬಾಹುಬಲಿ ವಿಜಯಂ’.  

ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಲ್ಲಿ ಹಮ್ಮಿಕೊಂಡಿದ್ದ ’ರಂಗಸಂಗಮ ಮತ್ತು ಗುರುವಂದನೆ’  ಎಲ್ಲಾ ಹಿಂದಿನ ಮತ್ತು ಇಂದಿನ ವಿದ್ಯಾರ್ಥಿಗಳ ಸಮಾಗಮದಲ್ಲಿ ಬಾಹುಬಲಿ ವಿಜಯಂ ನಾಟಕವನ್ನು ಧಾತ್ರಿ ಸಂಸ್ಥೆಯಿಂದ ಪ್ರದರ್ಶಿಸಲಾಯಿತು. ಭರತ ಮತ್ತು ಬಾಹುಬಲಿಯ ಕಥೆ ಮೊದಲಿನಿಂದಲೂ ಸಹ ಜನಜನಿತವಾಗಿರುವ ಕಥೆ. ಅಧಿಕಾರದ ಅಮಲು ಪ್ರೀತಿಯನ್ನು ಅಳಿಸಿ ಬರೀ ದ್ವೇಷವನ್ನು ಮಾತ್ರ ಉಳಿಸುತ್ತದೆ ಎಂಬುದನ್ನು ಬಾಹುಬಲಿಯು ಗೆದ್ದನಂತರ ತಾಳುವ ವೈರಾಗ್ಯ ಜಗಜ್ಜಾಹಿರು ಮಾಡುತ್ತದೆ. ಇಂದು ತಮ್ಮ ರಾಜಕೀಯ ಲಾಭಕ್ಕಾಗಿ ರಾಜಕಾರಣಿಗಳು ಮಾತ್ರ ಅಲ್ಲದೇ , ಮಾಧ್ಯಮಗಳು ಸಹ ಇನ್ನೊಂದು ದೇಶದ ಮೇಲಿನ ದ್ವೇಷವೇ ಪ್ರಧಾನವಾಗಿ ಕೊಚ್ಚಿ ಕೊಲ್ಲಿ ಎನ್ನುವ ಭಾಷೆ ಬಳಸುತ್ತಾ ಮಾಧ್ಯಮಗಳ ನಿರ್ವಹಿಸಬೇಕಾದ ಮೌಲ್ಯವನ್ನು ಮರೆತಿರುವುದು ದುರಂತ.

ಬಾಹುಬಲಿ ವಿಜಯಂ ಪಂಪನ ಆದಿಪುರಾಣ ಮಹಾಕಾವ್ಯದ ಆಯ್ದ ಭಾಗವಾದ ಭರತ ಮತ್ತು ಬಾಹುಬಲಿಯ ದಾಯಾದಿ ಕಲಹವಾಗಿದ್ದು, ಜೊತೆಗೆ ಜಿ.ಪಿ.ರಾಜರತ್ನಂ ರವರ ಬಾಹುಬಲಿ ವಿಜಯ ನಾಟಕದ ಕೆಲವು  ಆಯಾಮಗಳನ್ನು  ಬಳಸಿ ಶ್ರೀರಂಗ ಪಾರ್ವತೀಕರವರು ರಂಗ ಪಠ್ಯವಾಗಿಸಿದ್ದಾರೆ. ಯುವ ರಂಗಕರ್ಮಿ ಭೀಮೇಶ್.ಹೆಚ್.ಎನ್ ರವರು ಈ ನಾಟಕವನ್ನು ಪ್ರೇಕ್ಷಕರಿಗೆ ಆಪ್ತವಾಗುವಂತೆ ನಿರ್ದೇಶನ ಮಾಡಿದ್ದಾರೆ.  ಇದು ಹತ್ತನೇ ಶತಮಾನದ ಕಥೆಯಾದರೂ ಪ್ರಸ್ತುತ ರಾಜಕೀಯ, ಮನುಷ್ಯನ ದುರಾಸೆಯನ್ನು ಎತ್ತಿ ತೋರಿಸುತ್ತದೆ. 

ಈ ನಾಟಕವನ್ನು ಧಾತ್ರಿ ಸಂಸ್ಥೆಯ ಕಲಾವಿದರು ಅಭಿನಯಿಸಿದ್ದು, ಅರುಣ್‌ ಕುಮಾರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಿವರಾಜ್ ಬಳ್ಳಾರಿ, ಭರತ್ ಡಿಂಗ್ರಿ ಸಂಗೀತ ನಿರ್ವಹಣೆ ಮಾಡಿದ್ದು, ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನ ಸಿರಿಗೆರೆಯೆಂಬ ಗ್ರಾಮದಲ್ಲಿ ಯುವ ಗೆಳೆಯರು ಕಟ್ಟಿರುವ ಈ ಸಂಸ್ಥೆ ಹಲವು ವರ್ಷಗಳಿಂದ ರಾಜ್ಯದ್ಯಾಂತ ರಂಗಸಂಚಾರ  ಮಾಡುತ್ತಿದ್ದಾರೆ. ಯುವರಂಗಕರ್ಮಿಗಳೇ ಸೇರಿ ಹೊಸ ಹೊಸ ನಾಟಕಗಳನ್ನು ಕಟ್ಟಿ  ಬಾಹುಬಲಿ ವಿಜಯಂ ಜೊತೆಗೆ ’ಮುದ್ದಣ್ಣನ ಪ್ರಮೋಷನ್ ಪ್ರಸಂ” ಎಂಬ ನಾಟಕದ ಪ್ರದರ್ಶನವನ್ನು ನೀಡುತ್ತಾ ಬರುತ್ತಿದ್ದಾರೆ. ಇದರ ತಿರುಗಾಟ ಆರಂಭವಾಗಿದ್ದು ಈ ನಾಟಕ ಪ್ರದರ್ಶನಗಳನ್ನು ಆಯೋಜಿಸುವವರು 9902617950, 7899018729 ಈ ನಂಬರ್‌ಗಳನ್ನು ಸಂಪರ್ಕಿಸಬಹುದಾಗಿದೆ. 


ಇದನ್ನೂ ಓದಿ: ವೈರಮುತ್ತು ಅವರ ’ಕಳ್ಳಿಗಾಡಿನ ಇತಿಹಾಸ’ ಇದು ರಾಮಾಯಣವಲ್ಲ ಗ್ರಾಮಾಯಣ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...