Homeಮುಖಪುಟಯುದ್ಧ ಮತ್ತು ಅಧಿಕಾರದಾಹದ ತೀವ್ರತೆ ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

ಯುದ್ಧ ಮತ್ತು ಅಧಿಕಾರದಾಹದ ತೀವ್ರತೆ ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

- Advertisement -
- Advertisement -

ನಮ್ಮ ಇತಿಹಾಸದ ಪುಟಗಳಲ್ಲಿ ನೂರಾರು ಯುದ್ದಗಳ ರಕ್ತಸಿಕ್ತ ಕಲೆ ಎದ್ದು ಕಾಣುತ್ತದೆ. ಈ ಯುದ್ಧಗಳ ಭೀಕರತೆ, ಕೋಟ್ಯಾಂತರ ಸಾವು-ನೋವುಗಳು ಅಚ್ಚಳಿಯದೆ ಉಳಿದಿವೆ. ಯುದ್ಧ ಬೇಡ ಬುದ್ಧ ಬೇಕು ಎಂದು ಸಾರಿ ಸಾರಿ ಹೇಳಿದರು ಸಹ ಜಾಗತಿಕ ಬಂಡವಾಳಶಾಹಿಗಳು, ಶಸ್ತ್ರಾಸ್ತ್ರ ಮಾರಾಟಗಾರರು, ಯಾಜಮಾನ್ಯ ಬಯಸುವ ಬಲಾಢ್ಯ ದೇಶಗಳು ಇಂದಿಗೂ ಯುದ್ದಗಳಿಗೆ ಕಾರಣರಾಗುತ್ತಿದ್ದಾರೆ ಎಂಬ ಆರೋಪವಿದೆ. ಪ್ರಸ್ತುತ ಸಮಾಜದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಹೊಡೆದಾಟ, ಬಡಿದಾಟಕ್ಕೆ ಅಚ್ಚಿ ರಾಜಕೀಯ ಅಧಿಕಾರವಿಡಿಯುವ ಹುನ್ನಾರ ನಡೆಯುತ್ತಿದೆ. ಯುದ್ಧೋನ್ಮಾದವನ್ನು ಎಲ್ಲರ ಮನದಲ್ಲಿ ಬಿತ್ತಲಾಗುತ್ತಿದೆ. ಹೀಗಾಗಿ ಯುದ್ದ ಮುಗಿದ ಮೇಲೆ ಶಾಂತಿಯ ಬಗ್ಗೆ ಮಾತನಾಡುವ ಬದಲು ಯುದ್ದದ ವಾತಾವರಣವೇ ಸೃಷ್ಟಿಯಾಗದಂತೆ ತಡೆಯುವ ಜವಾಬ್ದಾರಿ ಕಲೆಯದು ಕೂಡ ಹಾಗಿದೆ. ಯುದ್ದದ ಕ್ರೌರ್ಯತೆ ಯಾವ ರೀತಿ ಸಹೋದರತ್ವನ್ನು ನಾಶ ಮಾಡುತ್ತದೆ, ಅಣ್ಣ ತಮ್ಮಂದಿರೆ ಕಾದಾಡುವಂತೆ ಮಾಡುತ್ತದೆ ಎಂಬುದನ್ನು ವಿವರವಾಗಿ ಬಿಚ್ಚಿಡುವ ನಾಟಕವೇ ’ಬಾಹುಬಲಿ ವಿಜಯಂ’.  

ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಲ್ಲಿ ಹಮ್ಮಿಕೊಂಡಿದ್ದ ’ರಂಗಸಂಗಮ ಮತ್ತು ಗುರುವಂದನೆ’  ಎಲ್ಲಾ ಹಿಂದಿನ ಮತ್ತು ಇಂದಿನ ವಿದ್ಯಾರ್ಥಿಗಳ ಸಮಾಗಮದಲ್ಲಿ ಬಾಹುಬಲಿ ವಿಜಯಂ ನಾಟಕವನ್ನು ಧಾತ್ರಿ ಸಂಸ್ಥೆಯಿಂದ ಪ್ರದರ್ಶಿಸಲಾಯಿತು. ಭರತ ಮತ್ತು ಬಾಹುಬಲಿಯ ಕಥೆ ಮೊದಲಿನಿಂದಲೂ ಸಹ ಜನಜನಿತವಾಗಿರುವ ಕಥೆ. ಅಧಿಕಾರದ ಅಮಲು ಪ್ರೀತಿಯನ್ನು ಅಳಿಸಿ ಬರೀ ದ್ವೇಷವನ್ನು ಮಾತ್ರ ಉಳಿಸುತ್ತದೆ ಎಂಬುದನ್ನು ಬಾಹುಬಲಿಯು ಗೆದ್ದನಂತರ ತಾಳುವ ವೈರಾಗ್ಯ ಜಗಜ್ಜಾಹಿರು ಮಾಡುತ್ತದೆ. ಇಂದು ತಮ್ಮ ರಾಜಕೀಯ ಲಾಭಕ್ಕಾಗಿ ರಾಜಕಾರಣಿಗಳು ಮಾತ್ರ ಅಲ್ಲದೇ , ಮಾಧ್ಯಮಗಳು ಸಹ ಇನ್ನೊಂದು ದೇಶದ ಮೇಲಿನ ದ್ವೇಷವೇ ಪ್ರಧಾನವಾಗಿ ಕೊಚ್ಚಿ ಕೊಲ್ಲಿ ಎನ್ನುವ ಭಾಷೆ ಬಳಸುತ್ತಾ ಮಾಧ್ಯಮಗಳ ನಿರ್ವಹಿಸಬೇಕಾದ ಮೌಲ್ಯವನ್ನು ಮರೆತಿರುವುದು ದುರಂತ.

ಬಾಹುಬಲಿ ವಿಜಯಂ ಪಂಪನ ಆದಿಪುರಾಣ ಮಹಾಕಾವ್ಯದ ಆಯ್ದ ಭಾಗವಾದ ಭರತ ಮತ್ತು ಬಾಹುಬಲಿಯ ದಾಯಾದಿ ಕಲಹವಾಗಿದ್ದು, ಜೊತೆಗೆ ಜಿ.ಪಿ.ರಾಜರತ್ನಂ ರವರ ಬಾಹುಬಲಿ ವಿಜಯ ನಾಟಕದ ಕೆಲವು  ಆಯಾಮಗಳನ್ನು  ಬಳಸಿ ಶ್ರೀರಂಗ ಪಾರ್ವತೀಕರವರು ರಂಗ ಪಠ್ಯವಾಗಿಸಿದ್ದಾರೆ. ಯುವ ರಂಗಕರ್ಮಿ ಭೀಮೇಶ್.ಹೆಚ್.ಎನ್ ರವರು ಈ ನಾಟಕವನ್ನು ಪ್ರೇಕ್ಷಕರಿಗೆ ಆಪ್ತವಾಗುವಂತೆ ನಿರ್ದೇಶನ ಮಾಡಿದ್ದಾರೆ.  ಇದು ಹತ್ತನೇ ಶತಮಾನದ ಕಥೆಯಾದರೂ ಪ್ರಸ್ತುತ ರಾಜಕೀಯ, ಮನುಷ್ಯನ ದುರಾಸೆಯನ್ನು ಎತ್ತಿ ತೋರಿಸುತ್ತದೆ. 

ಈ ನಾಟಕವನ್ನು ಧಾತ್ರಿ ಸಂಸ್ಥೆಯ ಕಲಾವಿದರು ಅಭಿನಯಿಸಿದ್ದು, ಅರುಣ್‌ ಕುಮಾರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಿವರಾಜ್ ಬಳ್ಳಾರಿ, ಭರತ್ ಡಿಂಗ್ರಿ ಸಂಗೀತ ನಿರ್ವಹಣೆ ಮಾಡಿದ್ದು, ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನ ಸಿರಿಗೆರೆಯೆಂಬ ಗ್ರಾಮದಲ್ಲಿ ಯುವ ಗೆಳೆಯರು ಕಟ್ಟಿರುವ ಈ ಸಂಸ್ಥೆ ಹಲವು ವರ್ಷಗಳಿಂದ ರಾಜ್ಯದ್ಯಾಂತ ರಂಗಸಂಚಾರ  ಮಾಡುತ್ತಿದ್ದಾರೆ. ಯುವರಂಗಕರ್ಮಿಗಳೇ ಸೇರಿ ಹೊಸ ಹೊಸ ನಾಟಕಗಳನ್ನು ಕಟ್ಟಿ  ಬಾಹುಬಲಿ ವಿಜಯಂ ಜೊತೆಗೆ ’ಮುದ್ದಣ್ಣನ ಪ್ರಮೋಷನ್ ಪ್ರಸಂ” ಎಂಬ ನಾಟಕದ ಪ್ರದರ್ಶನವನ್ನು ನೀಡುತ್ತಾ ಬರುತ್ತಿದ್ದಾರೆ. ಇದರ ತಿರುಗಾಟ ಆರಂಭವಾಗಿದ್ದು ಈ ನಾಟಕ ಪ್ರದರ್ಶನಗಳನ್ನು ಆಯೋಜಿಸುವವರು 9902617950, 7899018729 ಈ ನಂಬರ್‌ಗಳನ್ನು ಸಂಪರ್ಕಿಸಬಹುದಾಗಿದೆ. 


ಇದನ್ನೂ ಓದಿ: ವೈರಮುತ್ತು ಅವರ ’ಕಳ್ಳಿಗಾಡಿನ ಇತಿಹಾಸ’ ಇದು ರಾಮಾಯಣವಲ್ಲ ಗ್ರಾಮಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...