Homeಮುಖಪುಟಯುದ್ಧ ಮತ್ತು ಅಧಿಕಾರದಾಹದ ತೀವ್ರತೆ ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

ಯುದ್ಧ ಮತ್ತು ಅಧಿಕಾರದಾಹದ ತೀವ್ರತೆ ಬಿಚ್ಚಿಡುವ ನಾಟಕ ’ಬಾಹುಬಲಿ ವಿಜಯಂ’

- Advertisement -
- Advertisement -

ನಮ್ಮ ಇತಿಹಾಸದ ಪುಟಗಳಲ್ಲಿ ನೂರಾರು ಯುದ್ದಗಳ ರಕ್ತಸಿಕ್ತ ಕಲೆ ಎದ್ದು ಕಾಣುತ್ತದೆ. ಈ ಯುದ್ಧಗಳ ಭೀಕರತೆ, ಕೋಟ್ಯಾಂತರ ಸಾವು-ನೋವುಗಳು ಅಚ್ಚಳಿಯದೆ ಉಳಿದಿವೆ. ಯುದ್ಧ ಬೇಡ ಬುದ್ಧ ಬೇಕು ಎಂದು ಸಾರಿ ಸಾರಿ ಹೇಳಿದರು ಸಹ ಜಾಗತಿಕ ಬಂಡವಾಳಶಾಹಿಗಳು, ಶಸ್ತ್ರಾಸ್ತ್ರ ಮಾರಾಟಗಾರರು, ಯಾಜಮಾನ್ಯ ಬಯಸುವ ಬಲಾಢ್ಯ ದೇಶಗಳು ಇಂದಿಗೂ ಯುದ್ದಗಳಿಗೆ ಕಾರಣರಾಗುತ್ತಿದ್ದಾರೆ ಎಂಬ ಆರೋಪವಿದೆ. ಪ್ರಸ್ತುತ ಸಮಾಜದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ಹೊಡೆದಾಟ, ಬಡಿದಾಟಕ್ಕೆ ಅಚ್ಚಿ ರಾಜಕೀಯ ಅಧಿಕಾರವಿಡಿಯುವ ಹುನ್ನಾರ ನಡೆಯುತ್ತಿದೆ. ಯುದ್ಧೋನ್ಮಾದವನ್ನು ಎಲ್ಲರ ಮನದಲ್ಲಿ ಬಿತ್ತಲಾಗುತ್ತಿದೆ. ಹೀಗಾಗಿ ಯುದ್ದ ಮುಗಿದ ಮೇಲೆ ಶಾಂತಿಯ ಬಗ್ಗೆ ಮಾತನಾಡುವ ಬದಲು ಯುದ್ದದ ವಾತಾವರಣವೇ ಸೃಷ್ಟಿಯಾಗದಂತೆ ತಡೆಯುವ ಜವಾಬ್ದಾರಿ ಕಲೆಯದು ಕೂಡ ಹಾಗಿದೆ. ಯುದ್ದದ ಕ್ರೌರ್ಯತೆ ಯಾವ ರೀತಿ ಸಹೋದರತ್ವನ್ನು ನಾಶ ಮಾಡುತ್ತದೆ, ಅಣ್ಣ ತಮ್ಮಂದಿರೆ ಕಾದಾಡುವಂತೆ ಮಾಡುತ್ತದೆ ಎಂಬುದನ್ನು ವಿವರವಾಗಿ ಬಿಚ್ಚಿಡುವ ನಾಟಕವೇ ’ಬಾಹುಬಲಿ ವಿಜಯಂ’.  

ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯಲ್ಲಿ ಹಮ್ಮಿಕೊಂಡಿದ್ದ ’ರಂಗಸಂಗಮ ಮತ್ತು ಗುರುವಂದನೆ’  ಎಲ್ಲಾ ಹಿಂದಿನ ಮತ್ತು ಇಂದಿನ ವಿದ್ಯಾರ್ಥಿಗಳ ಸಮಾಗಮದಲ್ಲಿ ಬಾಹುಬಲಿ ವಿಜಯಂ ನಾಟಕವನ್ನು ಧಾತ್ರಿ ಸಂಸ್ಥೆಯಿಂದ ಪ್ರದರ್ಶಿಸಲಾಯಿತು. ಭರತ ಮತ್ತು ಬಾಹುಬಲಿಯ ಕಥೆ ಮೊದಲಿನಿಂದಲೂ ಸಹ ಜನಜನಿತವಾಗಿರುವ ಕಥೆ. ಅಧಿಕಾರದ ಅಮಲು ಪ್ರೀತಿಯನ್ನು ಅಳಿಸಿ ಬರೀ ದ್ವೇಷವನ್ನು ಮಾತ್ರ ಉಳಿಸುತ್ತದೆ ಎಂಬುದನ್ನು ಬಾಹುಬಲಿಯು ಗೆದ್ದನಂತರ ತಾಳುವ ವೈರಾಗ್ಯ ಜಗಜ್ಜಾಹಿರು ಮಾಡುತ್ತದೆ. ಇಂದು ತಮ್ಮ ರಾಜಕೀಯ ಲಾಭಕ್ಕಾಗಿ ರಾಜಕಾರಣಿಗಳು ಮಾತ್ರ ಅಲ್ಲದೇ , ಮಾಧ್ಯಮಗಳು ಸಹ ಇನ್ನೊಂದು ದೇಶದ ಮೇಲಿನ ದ್ವೇಷವೇ ಪ್ರಧಾನವಾಗಿ ಕೊಚ್ಚಿ ಕೊಲ್ಲಿ ಎನ್ನುವ ಭಾಷೆ ಬಳಸುತ್ತಾ ಮಾಧ್ಯಮಗಳ ನಿರ್ವಹಿಸಬೇಕಾದ ಮೌಲ್ಯವನ್ನು ಮರೆತಿರುವುದು ದುರಂತ.

ಬಾಹುಬಲಿ ವಿಜಯಂ ಪಂಪನ ಆದಿಪುರಾಣ ಮಹಾಕಾವ್ಯದ ಆಯ್ದ ಭಾಗವಾದ ಭರತ ಮತ್ತು ಬಾಹುಬಲಿಯ ದಾಯಾದಿ ಕಲಹವಾಗಿದ್ದು, ಜೊತೆಗೆ ಜಿ.ಪಿ.ರಾಜರತ್ನಂ ರವರ ಬಾಹುಬಲಿ ವಿಜಯ ನಾಟಕದ ಕೆಲವು  ಆಯಾಮಗಳನ್ನು  ಬಳಸಿ ಶ್ರೀರಂಗ ಪಾರ್ವತೀಕರವರು ರಂಗ ಪಠ್ಯವಾಗಿಸಿದ್ದಾರೆ. ಯುವ ರಂಗಕರ್ಮಿ ಭೀಮೇಶ್.ಹೆಚ್.ಎನ್ ರವರು ಈ ನಾಟಕವನ್ನು ಪ್ರೇಕ್ಷಕರಿಗೆ ಆಪ್ತವಾಗುವಂತೆ ನಿರ್ದೇಶನ ಮಾಡಿದ್ದಾರೆ.  ಇದು ಹತ್ತನೇ ಶತಮಾನದ ಕಥೆಯಾದರೂ ಪ್ರಸ್ತುತ ರಾಜಕೀಯ, ಮನುಷ್ಯನ ದುರಾಸೆಯನ್ನು ಎತ್ತಿ ತೋರಿಸುತ್ತದೆ. 

ಈ ನಾಟಕವನ್ನು ಧಾತ್ರಿ ಸಂಸ್ಥೆಯ ಕಲಾವಿದರು ಅಭಿನಯಿಸಿದ್ದು, ಅರುಣ್‌ ಕುಮಾರ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಶಿವರಾಜ್ ಬಳ್ಳಾರಿ, ಭರತ್ ಡಿಂಗ್ರಿ ಸಂಗೀತ ನಿರ್ವಹಣೆ ಮಾಡಿದ್ದು, ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲ್ಲೂಕಿನ ಸಿರಿಗೆರೆಯೆಂಬ ಗ್ರಾಮದಲ್ಲಿ ಯುವ ಗೆಳೆಯರು ಕಟ್ಟಿರುವ ಈ ಸಂಸ್ಥೆ ಹಲವು ವರ್ಷಗಳಿಂದ ರಾಜ್ಯದ್ಯಾಂತ ರಂಗಸಂಚಾರ  ಮಾಡುತ್ತಿದ್ದಾರೆ. ಯುವರಂಗಕರ್ಮಿಗಳೇ ಸೇರಿ ಹೊಸ ಹೊಸ ನಾಟಕಗಳನ್ನು ಕಟ್ಟಿ  ಬಾಹುಬಲಿ ವಿಜಯಂ ಜೊತೆಗೆ ’ಮುದ್ದಣ್ಣನ ಪ್ರಮೋಷನ್ ಪ್ರಸಂ” ಎಂಬ ನಾಟಕದ ಪ್ರದರ್ಶನವನ್ನು ನೀಡುತ್ತಾ ಬರುತ್ತಿದ್ದಾರೆ. ಇದರ ತಿರುಗಾಟ ಆರಂಭವಾಗಿದ್ದು ಈ ನಾಟಕ ಪ್ರದರ್ಶನಗಳನ್ನು ಆಯೋಜಿಸುವವರು 9902617950, 7899018729 ಈ ನಂಬರ್‌ಗಳನ್ನು ಸಂಪರ್ಕಿಸಬಹುದಾಗಿದೆ. 


ಇದನ್ನೂ ಓದಿ: ವೈರಮುತ್ತು ಅವರ ’ಕಳ್ಳಿಗಾಡಿನ ಇತಿಹಾಸ’ ಇದು ರಾಮಾಯಣವಲ್ಲ ಗ್ರಾಮಾಯಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...