Homeಅಂಕಣಗಳುಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್

ಬಹುಜನ ಭಾರತ: ಕೋಮುವಾದದ ಇರುಳ ಸೀಳುವ ಬೆಳಕು ಭಗತ್

ಒಂದು ಕಾಲಕ್ಕೆ ಬಹುಗಣ್ಯ ಕಸುಬು ಎಂದು ಪರಿಗಣಿಸಲಾಗಿದ್ದ ಪತ್ರಿಕೋದ್ಯಮ ಈಗ ತಿಪ್ಪೆಯಾಗಿ ಬದಲಾಗಿದೆ. ಪತ್ರಿಕೆಗಳು ತೀವ್ರತರದ ಆಸ್ಫೋಟಕ ಮತ್ತು ಅತೀವ ಪ್ರಚೋದಕ ಲೇಖನಗಳನ್ನು ಪ್ರಕಟಿಸಿ ಕೋಮುವಾದೀ ಜ್ವಾಲೆಯನ್ನು ಹತ್ತು ಹಲವು ಸ್ಥಳಗಳಲ್ಲಿ ಭುಗಿಲೆಬ್ಬಿಸುತ್ತಿವೆ.

- Advertisement -
- Advertisement -

ಬ್ರಿಟಿಷ್ ವಸಾಹತುಶಾಹಿಯ ನೇಣಿಗೆ ನಗು ನಗುತ್ತಲೇ ಕೊರಳೊಡ್ಡಿ ಸ್ವಾತಂತ್ರ್ಯ ಕ್ರಾಂತಿಯ ಕಿಡಿಯನ್ನು ಲಕ್ಷಾಂತರ ಎದೆಗಳಲ್ಲಿ ಹೊತ್ತಿಸಿದ ಆತ ಬದುಕಿದ್ದು ಇಪ್ಪತ್ಮೂರೇ ವರ್ಷ. ಆತ ಹುಟ್ಟಿದ ದಿನ (ಸೆ.28) ಮತ್ತೊಮ್ಮೆ ಸಮೀಪಿಸಿದೆ. ಈ ಹೊತ್ತಿನಲ್ಲಿ ಆತನ ವಿಚಾರಗಳ ನೆನೆಯಬೇಕಿದೆ.

ಪಂಜಾಬಿ, ಹಿಂದಿ, ಉರ್ದು ಹಾಗೂ ಇಂಗ್ಲಿಷ್ ಭಾಷೆಗಳ ಮೇಲೆ ಹಿಡಿತವಿದ್ದ ಭಗತ್ ಬರೆಹಗಳನ್ನು ಅಂದಿನ ಹಲವು ಸಮಕಾಲೀನ ಪತ್ರಿಕೆಗಳು ಪ್ರಕಟಿಸುತ್ತಿದ್ದವು. ಪಿಸ್ತೂಲಿನಿಂದ ಕಾಡತೂಸು ಸಿಡಿಸಿ ಬಾಂಬುಗಳ ಎಸೆದವನಾದರೂ ಭಗತನ ಬಕ್ಕಣದಲ್ಲಿ ಪುಸ್ತಕವೊಂದು ಇಲ್ಲದಿದ್ದ ಕ್ಷಣವೇ ಇರುತ್ತಿರಲಿಲ್ಲವಂತೆ. ವಯಸ್ಸಿಗೆ ಮೀರಿದ ಪ್ರಬುದ್ಧತೆ, ನಿಸ್ವಾರ್ಥ ಸಮರ್ಪಣಾ ಭಾವ, ವಿನಮ್ರತೆ, ಸ್ವವಿಮರ್ಶೆ, ಸೂಕ್ಷ್ಮತೆಗೆ ಬದ್ಧನಾಗಿದ್ದ ಈ ತರುಣನನ್ನು ಪ್ರತಿಗಾಮಿ ಶಕ್ತಿಗಳು ತಮ್ಮ ತೆಕ್ಕೆಗೆ ಸೆಳೆದುಕೊಂಡು ಯಥಾಸ್ಥಿತಿವಾದದ ರಂಗು ಮೆತ್ತಿ ನಿಲ್ಲಿಸುವ ಹುಸಿಪ್ರಚಾರದ ಪ್ರಯತ್ನಗಳನ್ನು ಎಡೆಬಿಡದೆ ನಡೆಸಿವೆ.

ಇದನ್ನೂ ಓದಿ: ಭಾರತದ ಸ್ವಾತಂತ್ರ್ಯ ಸಂಗ್ರಾಮ: ಹಿಂದೂ ಮುಸ್ಲಿಂ ಐಕ್ಯತೆಯ ಅಪೂರ್ವ ಕಥನ

‘ಸಾಂಪ್ರದಾಯಿಕ ದಂಗೆಗಳು ಮತ್ತು ಅವುಗಳ ಇಲಾಜು’ ಎಂಬುದಾಗಿ ‘ಕೀರ್ತಿ’ (ರೈತರು ಮತ್ತು ಕೂಲಿಕಾರರ ಪಂಜಾಬೀ ಮಾಸಪತ್ರಿಕೆ) ಮತ್ತು ‘ಉತ್ತರಾರ್ಧ’ ಎಂಬ ನಿಯತಕಾಲಿಕಗಳಿಗೆ 1927ರಲ್ಲಿ ಭಗತ್ ಬರೆದ ಲೇಖನ ಇಂದಿನ ಭಾರತದ ಸ್ಥಿತಿಗತಿಗೂ ಹಿಡಿದ ಕನ್ನಡಿ. ಕೋಮುವಾದದ ಬಾಬತ್ತಿನಲ್ಲಿ ತೊಂಬತ್ತು ವರ್ಷಗಳಿಂದ ನಾವು ಮುಂದೆ ಬಂದೇ ಇಲ್ಲ. ನಮ್ಮನ್ನು ಮತ್ತಷ್ಟು ಹಿಂದ ಹಿಂದಕ್ಕೆ ಕೊಂಡೊಯ್ಯುವ ಹುನ್ನಾರಗಳಿಗೆ ಯಶಸ್ಸು ದೊರೆಯತೊಡಗಿದೆ. ಕೋಮುವಾದಿ ನಂಜಿನ ಬಗ್ಗಡವನ್ನು ಬಡಿದೆಬ್ಬಿಸುತ್ತಿರುವ ವಿಷಮತೆ-ಅಸಹನೆಗಳ ಸಮಕಾಲೀನ ಸಂದರ್ಭಕ್ಕೆ ಅಚ್ಚರಿಯೆನಿಸುವಷ್ಟು ಪ್ರಸ್ತುತ ಭಗತ್ ವಿಚಾರಗಳು. ‘…ಇಂಡಿಯಾದ ಇಂದಿನ ಪರಿಸ್ಥಿತಿ ಅತೀವವಾಗಿ ಉಲ್ಬಣಿಸಿದೆ. ಒಂದು ಧರ್ಮದ ಅನುಯಾಯಿಗಳು ಹಠಾತ್ತನೆ ಇತರೆ ಧರ್ಮಗಳ ವಿರುದ್ಧ ಕಡು ಹಗೆತನದ ಕತ್ತಿ ಹಿರಿದಿದ್ದಾರೆ. ಹಿಂದು ಸಿಖ್ಖರೆಂಬ ಏಕೈಕ ಕಾರಣಕ್ಕೆ ಮುಸ್ಲಿಮರು ಹಿಂದು ಮತ್ತು ಸಿಖ್ಖರನ್ನೂ, ಮುಸಲ್ಮಾನರೆಂಬ ಕಾರಣಕ್ಕಾಗಿ ಮುಸಲ್ಮಾನರನ್ನೂ ಕ್ರೂರವಾಗಿ ಕೊಲ್ಲಲಾಗುತ್ತಿದೆ… ರಾಜಕೀಯ ನಾಯಕರು ನಿರ್ಲಜ್ಜರಾಗಿ ವರ್ತಿಸುತ್ತಿದ್ದಾರೆ. ದೇಶವನ್ನು ದಾಸ್ಯದಿಂದ ವಿಮೋಚನೆಗೊಳಿಸುವ ಶಪಥ ತೊಟ್ಟಿರುವ ಮತ್ತು ಸಮಾನ ರಾಷ್ಟ್ರೀಯತೆ ಕುರಿತು ಕೊನೆಯಿಲ್ಲದಷ್ಟು ಭಾಷಣಬಾಜಿ ಮಾಡುವ ತಲೆಯಾಳುಗಳು ಒಂದೋ ಲಜ್ಜೆಯಿಂದ ತಲೆತಗ್ಗಿಸಿ ಬಾಯಿ ಹೊಲಿದುಕೊಂಡಿದ್ದಾರೆ ಇಲ್ಲವೇ ಧಮಾರ್ಂಧತೆಯ ದುಷ್ಟ ಗಾಳಿಯ ದಿಕ್ಕಿನತ್ತ ಓಲಾಡುತ್ತಿದ್ದಾರೆ…. ತುಟಿ ಬಿಚ್ಚದೆ ಬೇಲಿಯ ಮೇಲೆ ಮುಖ ಮುಚ್ಚಿ ಕುಳಿತಿರುವ ಇಂತಹವರ ಸಂಖ್ಯೆ ಸಣ್ಣದೇನೂ ಅಲ್ಲ.’

Photo Courtesy: DNA India

ಹಾಗೆಯೇ ಕೋಮುವಾದದ ದಳ್ಳುರಿಗೆ ಎಣ್ಣೆ ಎರೆವ ಅಂದಿನ ಪತ್ರಿಕೆಗಳ ಕುರಿತು ಭಗತ್ ಹೇಳಿದ್ದ ಮಾತುಗಳ ಗಮನಿಸಿ ‘…ಕೋಮು ದಂಗೆಗಳಿಗೆ ಪ್ರಚೋದನೆ ನೀಡುವ ಇತರೆ ಪ್ರಮುಖ ಪಾತ್ರಧಾರಿಗಳ ಸಾಲಿಗೆ ಪತ್ರಕರ್ತರೂ ಸೇರುತ್ತಾರೆ. ಒಂದು ಕಾಲಕ್ಕೆ ಬಹುಗಣ್ಯ ಕಸುಬು ಎಂದು ಪರಿಗಣಿಸಲಾಗಿದ್ದ ಪತ್ರಿಕೋದ್ಯಮ ಈಗ ತಿಪ್ಪೆಯಾಗಿ ಬದಲಾಗಿದೆ. ಒಬ್ಬರ ವಿರುದ್ಧ ಮತ್ತೊಬ್ಬರು ತಲೆಬರೆಹಗಳಲ್ಲಿ ಕೂಗಿ ಕಿರುಚುತ್ತಾರೆ, ಪರಸ್ಪರರನ್ನು ಕೊಲ್ಲುವ ಉನ್ಮಾದಗಳನ್ನು ಜನರಲ್ಲಿ ಪ್ರಚೋದಿಸುತ್ತಿದ್ದಾರೆ… ಪತ್ರಿಕೆಗಳು ತೀವ್ರತರದ ಆಸ್ಫೋಟಕ ಮತ್ತು ಅತೀವ ಪ್ರಚೋದಕ ಲೇಖನಗಳನ್ನು ಪ್ರಕಟಿಸಿ ಕೋಮುವಾದೀ ಜ್ವಾಲೆಯನ್ನು ಹತ್ತು ಹಲವು ಸ್ಥಳಗಳಲ್ಲಿ ಭುಗಿಲೆಬ್ಬಿಸುತ್ತಿವೆ… ತಳಮಳ ತಳ್ಳಂಕಗಳ ಈ ಸ್ಥಿತಿಯಲ್ಲಿ ಸಮಚಿತ್ತವನ್ನು, ಸಮತೂಕವನ್ನು ಪ್ರದರ್ಶಿಸಿದ ಪತ್ರಕರ್ತರು ಕೆಲವೇ ಕೆಲವರು… ಜನತೆಯಲ್ಲಿ ಅರಿವು ಮೂಡಿಸಿ ಅವರ ಮೆದುಳುಗಳನ್ನು ನಿರ್ಮಲವಾಗಿ ಇರಿಸುವುದು, ಸಂಕುಚಿತವಾದದ ಬಿಲಗಳಿಂದ ಹೊರಗೆಳೆದು ತರುವುದು, ಕೋಮುವಾದೀ ಭಾವನೆಗಳನ್ನು ಕೆರೆದು ತೆಗೆದು ತೊಳೆದು ಪರಸ್ಪರ ಸಾಮರಸ್ಯ ಮೂಡಿಸುವುದು ಪತ್ರಿಕೆಗೆಳ ಅಸಲು ಕರ್ತವ್ಯ….. ಬದಲಾಗಿ ಅರಿವುಗೇಡಿತನ, ಸಂಕುಚಿತ ಪಂಥವಾದ – ಕೋಮುವಾದಗಳನ್ನು ಜನರ ಮನಸುಗಳಲ್ಲಿ ಬಿತ್ತಿ ಗಲಭೆಗಳನ್ನು ಎಬ್ಬಿಸುವುದೇ ಅವರ ಮುಖ್ಯ ಗುರಿ ಎನ್ನಿಸುತ್ತಿದೆ. ಈಗಿನ ಇಂಡಿಯಾದ ಪರಿಸ್ಥಿತಿಯನ್ನು ನೋಡಿದರೆ ರಕ್ತಕಣ್ಣೀರು ಕಪಾಳಕ್ಕೆ ಇಳಿವುದಲ್ಲದೆ, ಕಟ್ಟಕಡೆಗೆ ಈ ದೇಶದ ಪರಿಸ್ಥಿತಿ ಏನಾದೀತು ಎಂಬ ಪ್ರಶ್ನೆ ಏಳುತ್ತದೆ. ಜನ ಪರಸ್ಪರ ಕಚ್ಚಾಡುವುದನ್ನು ನಿಲ್ಲಿಸಬೇಕಿದ್ದರೆ, ದೀನ ದರಿದ್ರರು ಮತ್ತು ರೈತರು ಹಾಗೂ ದುಡಿಯುವ ವರ್ಗಗಳಿಗೆ ಬಂಡವಾಳಶಾಹಿಯೇ ಅವರ ಅಸಲು ಶತ್ರು ಎಂಬ ವಾಸ್ತವವನ್ನು ತಿಳಿಸಿ ಹೇಳಬೇಕಿದೆ. ಅವರ ಕೈಯಲ್ಲಿನ ದಾಳ ಆಗದಂತೆ, ಅವರ ಮೋಸ ಮರೆಗಳ ಹುನ್ನಾರಗಳಿಗೆ ಬಲಿಯಾಗದಂತೆ ಎಚ್ಚರಗೊಳಿಸಬೇಕಿದೆ. ಎಲ್ಲ ಜಾತಿ, ವರ್ಣ, ಜನಾಂಗ, ರಾಷ್ಟ್ರೀಯತೆಯ ಭೇದ ಭಾವವಿಲ್ಲದೆ ಒಗ್ಗಟ್ಟಿನಿಂದ ತಮ್ಮ ಹಕ್ಕುಗಳಿಗೆ ಹೋರಾಡಬೇಕೆಂಬ ಅರಿವನ್ನು ಎಲ್ಲ ಬಡವರಲ್ಲಿ ಮೂಡಿಸಬೇಕಿದೆ’.

ಕೋಮುವಾದ, ಅಮಾನವೀಯ ಅಸ್ಪೃಶ್ಯತೆ, ಧರ್ಮ-ಜಾತಿಗಳು, ಮೇಲು-ಕೀಳುಗಳ ನೆವದಲಿ ನಡೆವ ಕ್ರೌರ್ಯ-ಶೋಷಣೆಗಳ ವಿರುದ್ಧ ಭಗತ್ ಎತ್ತಿದ ದನಿ ಇಂದಿಗೂ ಧಗ ಧಗ. ಯಾಕೆಂದರೆ ಸ್ವಾತಂತ್ರ್ಯ ಗಳಿಕೆಯ ನಂತರ ಕಟ್ಟಬೇಕಿದ್ದ ಸಮ ಸಮಾಜದಲ್ಲಿ ನೆಟ್ಟಿತ್ತು ಆತನ ಮನ. ಹೀಗಾಗಿಯೇ ಹಿಂದೆಂದಿಗಿಂತಲೂ ಪ್ರಸ್ತುತ ಈತ.


ಇದನ್ನೂ ಓದಿ: ಭಗತ್ ಸಿಂಗ್‌ ಮತ್ತು ಆತನ ಸಂಗಾತಿಗಳ ಚಿಂತನೆಗಳ ನೆನಪು
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...