Homeಚಳವಳಿಭಗತ್ ಸಿಂಗ್, ಗೌರಿ ಲಂಕೇಶ್ ವಿಚಾರಗಳು ಚಿರಂತನವಾಗಿರುತ್ತವೆ. : ಪ್ರೊ. ಜಗಮೋಹನ್ ಸಿಂಗ್

ಭಗತ್ ಸಿಂಗ್, ಗೌರಿ ಲಂಕೇಶ್ ವಿಚಾರಗಳು ಚಿರಂತನವಾಗಿರುತ್ತವೆ. : ಪ್ರೊ. ಜಗಮೋಹನ್ ಸಿಂಗ್

- Advertisement -
- Advertisement -

ಪಂಜಾಬ್ ಕೃಷಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ.ಜಗಮೋಹನ್ ಸಿಂಗ್, ಹುತಾತ್ಮ ಭಗತ್‍ಸಿಂಗ್‍ರ ಕುಟುಂಬಕ್ಕೆ ಸೇರಿದವರು. ಭಗತ್‍ಸಿಂಗರ ಚಿಂತನೆಗಳ ಪ್ರಸಾರಕ್ಕೆ ಬದ್ಧರಾಗಿದ್ದು, ಅವರ ಬಹುತೇಕ ಬರಹಗಳನ್ನು ಡಿಜಿಟೈಸ್ ಮಾಡಿದ್ದಾರೆ. ಪಂಜಾಬಿನ ಜಮೂರಿ ಅಧಿಕಾರಿ ಸಭಾ ಮತ್ತು ಪ್ರಜಾತಾಂತ್ರಿಕ ಹಕ್ಕುಗಳ ಸಂಘದ ಸ್ಥಾಪಕ ಸದಸ್ಯರಲ್ಲೊಬ್ಬರು. ಜನಪರ ಚಳವಳಿಗಳ ಸಕ್ರಿಯ ಸಂಗಾತಿ ಪ್ರೊ.ಜಗಮೋಹನ್ ಸಿಂಗ್. ಈ ಲೇಖನವನ್ನು ಕನ್ನಡಕ್ಕೆ ನಿಖಿಲ್ ಕೋಲ್ಪೆಯವರು ಅನುವಾದಿಸಿದ್ದಾರೆ.

ನಮಗಿಂದು ಅತ್ಯಂತ ಸವಾಲಿನ ಕಾಲ ಎದುರಾಗಿದೆ ಎಂಬುದರಲ್ಲಿ ಸಂಶಯವೇ ಇಲ್ಲ. ಬರ್ಬರ ಬಲಪ್ರಯೋಗವೇ ಅತ್ಯಂತ ಮುಖ್ಯ ಎನಿಸಿರುವ ಕಾಲವಿದು – ಸರಕಾರಿ ವ್ಯವಸ್ಥೆಯಲ್ಲಿ ಇರುವವರಿಗೂ, ಭಕ್ತರಿಗೂ. ಆದರೆ, ಇದು ಹೊಸದಾಗಿ ಚಿಂತಿಸಿ, ಹೊಸ ಚಿಂತನೆಗಳ ಜೊತೆಯಲ್ಲಿ ಧೈರ್ಯದಿಂದ ನಿಲ್ಲುವ ಅವಕಾಶ ಮತ್ತು ಶಕ್ತಿ ನೀಡುವಂತಹ ಸವಾಲು ಕೂಡಾ ಹೌದು. ಆದರೆ, ನಮಗೆ ರಾಷ್ಟ್ರವಾದ ಮತ್ತು ದೇಶಪ್ರೇಮದ ನಡುವಿನ ವ್ಯತ್ಯಾಸ ತಿಳಿಯುವ ಮೂಲಭೂತ ವಿಷಯದ ಬಗ್ಗೆ ಸ್ಪಷ್ಟತೆ ಬೇಕು.

ಈಗ ಬೋಧಿಸಲಾಗುತ್ತಿರುವ ರಾಷ್ಟ್ರವಾದವು ಆರ್ಥಿಕ ಬಿಕ್ಕಟ್ಟಿನ ಕಾಲದಲ್ಲಿ ಪಶ್ಚಿಮದಿಂದ ಎರವಲು ಪಡೆದದ್ದಾಗಿದೆ. ಈ ಪರಿಕಲ್ಪನೆಯನ್ನು ಜಪಾನ್, ಸ್ಪೇನ್, ಇಟಲಿ ಮತ್ತು ಜರ್ಮನಿಯಲ್ಲಿ ಅಧಿಕಾರ ಕಬಳಿಕೆಯ ಉದ್ದೇಶದಿಂದ ಹರಡಲಾಗಿತ್ತು. ಆದುದರಿಂದ, ಅಧಿಕಾರವೇ ಅದರ ಮೂಲ ಉದ್ದೇಶ. ಅದಕ್ಕೆ ತನ್ನೆಲ್ಲಾ ವೈಫಲ್ಯ ಮತ್ತು ಕೆಡುಕಿಗೆ ಹೊಣೆಮಾಡಲು ಒಂದು ಶತ್ರುವನ್ನು ಹುಟ್ಟುಹಾಕುವ ಅಗತ್ಯವಿರುತ್ತದೆ. ಅದೇ ಹೊತ್ತಿಗೆ ದೇಶಪ್ರೇಮ ಎಂಬುದು ಸಾಮಾನ್ಯವಾಗಿ ಪ್ರಜೆಗಳ ಸಮಸ್ಯೆಗಳನ್ನು ಪರಿಹರಿಸುವುದರ ಮೇಲೆ ಕೇಂದ್ರಿತವಾಗಿದೆ. ರಾಷ್ಟ್ರವಾದದ ಪ್ರೇರಕಶಕ್ತಿ ಎಂದರೆ ದ್ವೇಷ ಮತ್ತು ದೇಶಪ್ರೇಮದ ಪ್ರೇರಕಶಕ್ತಿ ಪ್ರೇಮ.

ಜಾರ್ಜ್ ಆರ್ವೆಲ್ ಗುರುತಿಸಿರುವಂತೆ, “ಋಣಾತ್ಮಕ ರಾಷ್ಟ್ರವಾದಿಯು ಇತಿಹಾಸವನ್ನು ಮಹಾನ್ ಶಕ್ತಿ ಘಟಕಗಳ ಕೊನೆಯಿಲ್ಲದ ಉನ್ನತಿ ಮತ್ತು ಅವನತಿಯನ್ನಾಗಿ ನೋಡುತ್ತಾನೆ ಮತ್ತು ಪ್ರತಿಯೊಂದು ಘಟನೆಯು ಅವನಿಗೆ ತನ್ನ ಪಕ್ಷವು ಉತ್ಕೃಷ್ಟ ಮತ್ತು ಎದುರಾಳಿಯು ನಿಕೃಷ್ಟ ಎಂದು ತೋರಿಸುತ್ತದೆ… ತನ್ನ ಪಕ್ಷವನ್ನು ಆಯ್ಕೆ ಮಾಡಿದ ಬಳಿಕ ಅವನು ಅದುವೇ ಬಲಶಾಲಿ ಎಂದು ತನಗೆ ತಾನೇ ಮನವರಿಕೆ ಮಾಡಿಕೊಳ್ಳುತ್ತಾನೆ. ರಾಷ್ಟ್ರವಾದವು ಆತ್ಮವಂಚನೆಯಿಂದ ಬಲಗೊಂಡಂತಹ ಅಧಿಕಾರದಾಹವಾಗಿರುತ್ತದೆ. ರಾಷ್ಟ್ರವಾದಿಯು ವಾಸ್ತವಕ್ಕೆ ಕುರುಡಾಗಿರುತ್ತಾನೆ. ಆತ ತನ್ನ ಪಕ್ಷವು ನಡೆಸಿದ ದೌರ್ಜನ್ಯವನ್ನು ನಿರಾಕರಿಸುತ್ತಾನೆ ಮತ್ತು ಅದರ ಕುರಿತು ಏನನ್ನೂ ಕೇಳಿಸಿಕೊಳ್ಳದೆ ಕಿವುಡಾಗಿರುವಂತಹ ಅಸಾಧಾರಣ ಸಾಮರ್ಥ್ಯವನ್ನೂ ಹೊಂದಿರುತ್ತಾನೆ. ಗತಕಾಲದಲ್ಲಿ ನಡೆದಿರುವುದನ್ನು ಬದಲಿಸಬಹುದು ಎಂಬ ನಂಬಿಕೆ ಅಥವಾ ಭ್ರಮೆಯಿಂದ ಆತ ಪೀಡಿತನಾಗಿರುತ್ತಾನೆ. ಘಟನೆಗಳು ಅವು ನಡೆಯಬೇಕಾದ ರೀತಿಯಲ್ಲಿಯೇ ನಡೆಯುವ ಭ್ರಮಾಲೋಕದಲ್ಲಿ ಆತ ಬದುಕುತ್ತಿರುತ್ತಾನೆ.” ಇಂದಿನ ಇಂಥಾ ಪರಿಸ್ಥಿತಿಯು ಎಂತಹ ಸವಾಲುಗಳನ್ನು ನಮ್ಮ ಮುಂದೆ ಒಡ್ಡುತ್ತಿದೆ ಎಂಬುದನ್ನು ನಮಗೆ ಸ್ಪಷ್ಟಪಡಿಸುವಂತಹ ಕೆಲವು ರೋಗಲಕ್ಷಣಗಳಿವು.

ಜಲಿಯನ್‍ವಾಲಾಬಾಗ್ ಹತ್ಯಾಕಾಂಡದ ನೂರನೆಯ ವರ್ಷದಲ್ಲಿ ನಾವು ಕೆಲವು ವಿಷಯಗಳನ್ನು ಮರೆಯದಿರೋಣ. ಅವೆಂದರೆ, ಮೈಕೆಲ್ ಓ’ಡ್ವಾಯರ್ ಮತ್ತು ಜನರಲ್ ಡಯರ್ ಬ್ರಿಟಿಷ್ ರಾಷ್ಟ್ರವಾದಿಗಳಾಗಿ ಕಾರ್ಯಾಚರಿಸಿದ್ದರೆ, ಭಾರತೀಯ ದೇಶಪ್ರೇಮಿಗಳು ಎಲ್ಲಾ ಜಾತಿ, ಧರ್ಮಗಳವರಿಗೆ ತೆರೆದಿರುವಂತಹ ಸಾರ್ವಜನಿಕ ಅಡುಗೆಮನೆ (ಲಂಗರ್)ಯನ್ನು ನಡೆಸಿ, ಆಹಾರ ವಸ್ತುಗಳ ಬೆಲೆ ಏರಿಕೆಯ ಸಮಸ್ಯೆಯನ್ನು ನಿವಾರಿಸುವ ಮೂಲಕ ದೇಶಪ್ರೇಮವನ್ನು ಗಟ್ಟಿಗೊಳಿಸಲು ಯತ್ನಿಸಿದ್ದರು. ಆ ಮೂಲಕ ಹಿಂದೂ ಮುಸ್ಲಿಂ ಏಕತೆಯನ್ನು ಸಾಧಿಸಿದ್ದರು – ಎಲ್ಲಿಯತನಕ ಎಂದರೆ, ಏಪ್ರಿಲ್ 9ರಂದು ಬಂದಿದ್ದ ರಾಮನವಮಿಯನ್ನು ಹಿಂದೂ-ಮುಸ್ಲಿಮರು ಜೊತೆಯಲ್ಲಿ ಆಚರಿಸಿದ್ದರು. ರಾಮನವಮಿ ಮೆರವಣಿಗೆಯ ನೇತೃತ್ವ ವಹಿಸಿದ್ದವರು ಡಾ. ಬಶೀರ್. ಈ ರೀತಿಯ ಒಗ್ಗಟ್ಟು ಬ್ರಿಟಿಷ್ ಆಡಳಿತಗಾರರಿಗೆ 1857ನ್ನು ನೆನಪಿಸಿತ್ತು ಮತ್ತು ಅದಕ್ಕಾಗಿಯೇ ಅವರು ಅಷ್ಟೊಂದು ಕ್ರೂರವಾಗಿ ವರ್ತಿಸಿದರು.

ಶಹೀದ್ ಭಗತ್ ಸಿಂಗ್ ಮತ್ತು ಬಟುಕೇಶ್ವರ ದತ್ತರು 1929ರ ಡಿಸೆಂಬರ್‍ನಲ್ಲಿ ‘ಮಾಡರ್ನ್ ರಿವ್ಯೂ’ ಪತ್ರಿಕಾ ಸಂಪಾದಕರಿಗೆ ಬರೆದ ಪತ್ರದಲ್ಲಿ ಏನು ಹೇಳಿದ್ದರೆಂದು ನೆನಪಿಸಿಕೊಳ್ಳೋಣ.

“ಕ್ರಾಂತಿ…ಒಂದು ಚೈತನ್ಯ, ಒಳ್ಳೆಯದರತ್ತ ಬದಲಾವಣೆಯ ತುಡಿತ. ಜನರು ಸಾಮಾನ್ಯವಾಗಿ ಸ್ಥಾಪಿತ ವ್ಯವಸ್ಥೆಗೆ ಒಗ್ಗಿಕೊಂಡುಬಿಡುತ್ತಾರೆ ಮತ್ತು ಬದಲಾವಣೆಯ ಕಲ್ಪನೆ ಮಾತ್ರಕ್ಕೇ ನಡುಗಲಾರಂಭಿಸುತ್ತಾರೆ. ಈ ಜಡಚೇತನವನ್ನೇ ಕ್ರಾಂತಿಕಾರಿ ಚೈತನ್ಯದಿಂದ ಬದಲಿಸಬೇಕಾಗಿರುವುದು. ಇಲ್ಲವಾದಲ್ಲಿ ಈ ಅವನತಿಯು ಮೇಲುಗೈ ಪಡೆಯುತ್ತದೆ ಮತ್ತು ಇಡೀ ಮಾನವೀಯತೆಯನ್ನೇ ಪ್ರತಿಗಾಮಿ ಶಕ್ತಿಗಳು ಅಡ್ಡದಾರಿಗೆಳೆಯುತ್ತವೆ. ಇಂತಹ ಪರಿಸ್ಥಿತಿಯು ಸ್ಥಗಿತತೆಗೆ ದಾರಿಮಾಡಿಕೊಟ್ಟು, ಮಾನವ ಪ್ರಗತಿಗೇ ಲಕ್ವಾ ಹೊಡೆದಂತಾಗುತ್ತದೆ. ಕ್ರಾಂತಿಕಾರಿ ಚೈತನ್ಯವು ಯಾವತ್ತೂ ಮಾನವೀಯ ಆತ್ಮವನ್ನು ಉನ್ನತಿಗೊಳಿಸಬೇಕು. ಈ ನಿರಂತರ ಚೈತನ್ಯ ಯಾತ್ರೆಯನ್ನು ತಡೆಯಲಿಕ್ಕಾಗಿ ಪ್ರತಿಗಾಮಿ ಶಕ್ತಿಗಳು ತಮ್ಮ ಶಕ್ತಿ ಸಂಚಯ ಮಾಡುವುದನ್ನು ತಡೆಯಲು ಸಾಧ್ಯವಾಗುತ್ತದೆ. ಹಳೆಯ ವ್ಯವಸ್ಥೆ ಯಾವತ್ತೂ ನಿರಂತರವಾಗಿ ಬದಲಾಗುತ್ತಾ ಹೊಸದಕ್ಕೆ ಜಾಗಮಾಡಿಕೊಡಬೇಕು. ಒಂದು ‘ಒಳ್ಳೆಯ’ ವ್ಯವಸ್ಥೆ ಪ್ರಪಂಚವನ್ನು ಭ್ರಷ್ಟಗೊಳಿಸದಂತೆ ತಡೆಯಲು ಈ ಚೈತನ್ಯ ಅತ್ಯಗತ್ಯ. ಈ ದೃಷ್ಟಿಯಿಂದಲೇ ನಾವು “ಕ್ರಾಂತಿ ಚಿರಾಯುವಾಗಲಿ” ಎಂಬ ಘೋಷಣೆ ಹಾಕುತ್ತೇವೆ.

ಈ ಚೈತನ್ಯವನ್ನೇ ನಮ್ಮ ಪ್ರೀತಿಯ ಗೌರಿ ಲಂಕೇಶ್ ಪ್ರೇರೇಪಿಸುತ್ತಿದ್ದುದು. ಭಗತ್ ಸಿಂಗ್ ಹೇಳಿದಂತೆ, ಅವರು ವ್ಯಕ್ತಿಯನ್ನು ಕೊಲ್ಲಬಹುದು; ಆದರೆ ವಿಚಾರಗಳು ಚಿರಂತನವಾಗಿರುತ್ತವೆ.

ಕ್ರಾಂತಿಕಾರಿ ವಿಚಾರಗಳ ಮೂಲಕ ಯುವಜನರು ಮತ್ತು ಜನಸಾಮಾನ್ಯರನ್ನು ಸಶಕ್ತಗೊಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಭಗತ್ ಸಿಂಗ್ ಅವರ ಈ ಮಾತುಗಳು ನಮಗೆ ದಾರಿ ತೋರಿಸಲಿ.

“ನಾಯಕರು ಲೋಕೋಪಕಾರಿ ಕಾರ್ಯಗಳನ್ನು ಮಾಡಬಹುದು. ಆದರೆ, ಅದು ಸಾಮಾಜಿಕ ಬದಲಾವಣೆಯನ್ನು ತರುವುದಿಲ್ಲ. ಸಾಮಾಜಿಕ ಬದಲಾವಣೆಗೆ ವೈಜ್ಞಾನಿಕತೆ ಕೇಂದ್ರಿತವಾದ, ಸಾಮಾಜಿಕವಾಗಿ ಚಲನಶೀಲವಾದ ಶಕ್ತಿಯನ್ನು ಹುಟ್ಟುಹಾಕುವ ಅಗತ್ಯವಿದೆ”. ಇದು ನಮ್ಮ ಮುಂದಿರುವ ಹಾದಿ. ಒಂದು ಚಾರಿತ್ರಿಕ ಕಾಲಘಟ್ಟದ ಜನರ ಅಗತ್ಯಗಳಿಗೆ ಪೂರಕವಾದ ಮಾನವ ಪ್ರಗತಿಯನ್ನು ವಿಚ್ಛಿದ್ರಕಾರಿ ಶಕ್ತಿಗಳು ವಿಳಂಬಿಸಬಹುದು; ಆದರೆ, ಮಾನವ ಪ್ರಗತಿಯನ್ನು ತಡೆಯಲು ಸಾಧ್ಯವಿಲ್ಲ ಎಂಬುದಕ್ಕೆ ಇತಿಹಾಸ ಸಾಕ್ಷಿಯಾಗಿದೆ. ಆದುದರಿಂದ ನಾವು ದೃಢವಾಗಿ ಮುಂದುವರಿಯೋಣ ಮತ್ತು ನಮ್ಮ ವಿಚಾರಗಳಲ್ಲಿ ಸ್ಪಷ್ಟತೆ ತಂದುಕೊಳ್ಳೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...